Homeಕರ್ನಾಟಕಕುವೆಂಪುಗೆ ಅವಮಾನಿಸಿದ ರೋಹಿತ್‌ ಚಕ್ರತೀರ್ಥ ವಿರುದ್ಧ ಸೂಕ್ತ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

ಕುವೆಂಪುಗೆ ಅವಮಾನಿಸಿದ ರೋಹಿತ್‌ ಚಕ್ರತೀರ್ಥ ವಿರುದ್ಧ ಸೂಕ್ತ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

- Advertisement -
- Advertisement -

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮಿ ಕುವೆಂಪು ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಪಠ್ಯಪುಸ್ತಕ ಮರು ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ರಾಜ್ಯ ಪಠ್ಯಪುಸ್ತಕ ಮರು ಪರಿಷ್ಕರಣೆ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರು ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ಹಳೆಯ ಪೋಸ್ಟ್‌ ವೈರಲ್ ಆಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಬಂಧಿಸಬೇಕು ಮತ್ತು ಅವರ ಸಮಿತಿಯನ್ನು ರದ್ದು ಮಾಡಬೇಕು ಎಂದು ಆಗ್ರಹಗಳು ಕೇಳಿಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದರಂತೆಯೆ ನಿರ್ಮಲಾನಂದನಾಥ ಸ್ವಾಮಿ ಅವರು ಕೂಡಾ ಮುಖ್ಯಮಂತ್ರಿಗೆ ಪತ್ರ ಬರೆದು, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿ

ನಿರ್ಮಲಾನಂದ ಸ್ವಾಮಿ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ನಿರ್ಮಲಾನಂದ ಶ್ರೀಗಳು ಕುವೆಂಪು ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಇವತ್ತೇ ನಮ್ಮ ಶಿಕ್ಷಣ ಮಂತ್ರಿಯನ್ನು ಕರೆಯುತ್ತಿದ್ದು, ಸೂಕ್ತವಾದ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ನಿರ್ಮಲಾನಂದ ಅವರು ತಮ್ಮ ಪತ್ರದಲ್ಲಿ, “ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು”

“ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ” ಎಂದು ನಿರ್ಮಲಾನಂದ ಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ: ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

“ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅವರು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದರು.

“ಹೀಗಾಗಿ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ” ಎಂದು ನಿರ್ಮಲಾನಂದ ಸ್ವಾಮಿ ಅವರು ಪತ್ರದಲ್ಲಿ ಹೇಳಿದ್ದಾರೆ.

ಈ ಮಧ್ಯೆ ನಾಡಗೀತೆಗೆ ಅವಹೇಳನ ಮಾಡಿರುವ ಆರೋಪ ಹೊತ್ತಿರುವ ರೋಹಿತ್‌ ಚಕ್ರತೀರ್ಥನನ್ನು ಈ ಕೂಡಲೇ ಪಠ್ಯ ಪರಿಶೀಲನಾ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದೆ.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರೋಹಿತ್ ಚಕ್ರತೀರ್ಥ ಮತ್ತು ಕುವೆಂಪು ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನ ಮಾಡಿದ ಲಕ್ಷಣ ಆಕಾಶೆ ಕಾರ್ಕಳ ಎಂಬುವವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈಗಾಗಲೇ ದೂರು ನೀಡಲಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎ.ಪಿ ರಂಗನಾಥ್, ವಕೀಲರಾದ ಕೆ.ಎನ್ ಜಗದೀಶ್ ಕುಮಾರ್, ಹರಿರಾಮ್ ಮತ್ತು ಸೂರ್ಯ ಮುಕುಂದರಾಜ್‌ರವರು ಇತ್ತೀಚೆಗೆ ಬೆಂಗಳೂರು ಪೊಲೀಸ್ ಆಯುಕ್ತರಾದ ಪ್ರತಾಪ ರೆಡ್ಡಿಯವರಿಗೆ ದೂರು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಖ್ಯ ಮಂತ್ರಿಗಳ ಈ ಬರವಸೆ ಕಾರ್ಯರೂಪಕ್ಕೆ ಬರಬೇಕು. ಆಗ ಮಾತ್ರ ಅವರ ಮಾತನ್ನು ನಂಬಬಹುದು.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...