Homeಕರ್ನಾಟಕಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದ್ದ ಸಮಾಜ ಸುಧಾರಕ ನಾರಾಯಣಗುರು ಹಾಗೂ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಅವರ ಕುರಿತ ಪಾಠವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕೈಬಿಟ್ಟಿರುವುದು ಸ್ಪಷ್ಟವಾಗಿದೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು, “ನಾರಾಯಣಗುರು ಪಾಠವನ್ನು ಕೈಬಿಟ್ಟಿಲ್ಲ. ಏಳು ಮತ್ತು ಎಂಟನೇ ತರಗತಿ ಎರಡೂ ಕಡೆಯೂ ಉಳಿಸಿಕೊಳ್ಳಲಾಗಿದೆ” ಎಂದು ಹೇಳುತ್ತಾ ಬಂದಿದ್ದರು. ಆದರೆ ಹತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಾಠ ಇಲ್ಲ ಎಂಬುದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವೆಬ್‌ಸೈಟ್‌ನಲ್ಲಿರುವ ಪಿಡಿಎಫ್‌ಗಳಿಂದ ಸ್ಪಷ್ಟವಾಗುತ್ತದೆ.

7ನೇ ತರಗತಿಯಲ್ಲಿ ಅಳವಡಿಸಲಾಗಿರುವ ‘ಸಮಾಜ ಸುಧಾರಕರ ಕುರಿತ ಪಾಠ’ವನ್ನು 10ನೇ ತರಗತಿಯಲ್ಲಿ ವಿಸ್ತರಿಸಲಾಗಿದೆ. 7ನೇ ತರಗತಿಯಲ್ಲಿ ಇದ್ದ ಅನೇಕ ಮಹನೀಯರ ವಿವರಗಳನ್ನು ಹತ್ತನೇ ತರಗತಿಯಲ್ಲಿ ಮುಂದುವರಿಸಲಾಗಿದ್ದರೂ ಮಹಾನ್‌ ಮಾನವತಾವಾದಿ ನಾರಾಯಣಗುರುಗಳ ವಿವರಗಳನ್ನು ಸಮಿತಿ ಕೈಬಿಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಪರಿಚಯ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂಧೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ವಿವರಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಪ್ರಯೋಗ ಮಾಡಿದೆ. ಏಳನೇ ತರಗತಿಯಲ್ಲಿ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಪಾಠ ಈ ಹಿಂದಿನ ಪಠ್ಯದಲ್ಲೂ ಇರಲಿಲ್ಲ. ಈಗಿನ ಪಠ್ಯದಲ್ಲೂ ಏಳನೇ ತರಗತಿಯಲ್ಲಿ ಇರಲಿಲ್ಲ. ಆದರೆ ಹತ್ತನೇ ತರಗತಿ ಪಠ್ಯದಲ್ಲಿ ‘ಪೆರಿಯಾರ್‌’ ಪಾಠವನ್ನು ಈ ಹಿಂದೆ ಸೇರಿಸಲಾಗಿತ್ತು.

ಹತ್ತನೇ ತರಗತಿಯಲ್ಲಿ ನಾರಾಯಣಗುರುಗಳ ಪಾಠಕ್ಕೆ ಕೋಕ್‌

ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ -1ರಲ್ಲಿ ಐದನೆಯ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣ ಚಳುವಳಿಗಳು’ ಭಾಗವನ್ನು ಇರಿಸಿದೆ. ಏಳನೇ ತರಗತಿಯಲ್ಲಿದ್ದ ಪಠ್ಯವನ್ನು ಹತ್ತನೇ ತರಗತಿಯಲ್ಲಿ ವಿಸ್ತರಿಸಲಾಗಿದೆ ಎನ್ನುವ ಚಕ್ರತೀರ್ಥ ಅವರು, ಏಳನೇ ತರಗತಿಯಲ್ಲಿ ನೀಡಲಾಗಿದ್ದ ಅನೇಕ ಸಮಾಜ ಸುಧಾರಕರ ವಿವರಗಳನ್ನು ಉಳಿಸಿಕೊಂಡು ನಾರಾಯಣಗುರುಗಳ ಪಾಠವನ್ನು ತೆಗೆದುಹಾಕಿದೆ.

ಬ್ರಹ್ಮ ಸಮಾಜ, ಆರ್ಯ ಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಚಳವಳಿ, ರಾಮಕೃಷ್ಣ ಮಿಷನ್‌, ಥಿಯಾಸಾಫಿಕಲ್ ಸೊಸೈಟಿ (ಬ್ರಹ್ಮವಿದ್ಯಾ ಸಮಾಜ)- ಇಷ್ಟನ್ನು ಪರಿಚಯ ಮಾಡಿಕೊಡಲಾಗಿದೆ. ನಾರಾಯಣಗುರುಗಳ ವಿವರ ಇಲ್ಲವಾಗಿದೆ. (ಪಿಡಿಎಫ್‌ ಪ್ರತಿ ನೋಡಿರಿ)

ಇದನ್ನೂ ಓದಿರಿ: Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಬಸವಣ್ಣನವರ ಪಾಠ ವೈದೀಕರಣ; ಲಿಂಗಾಯತ ಮಠಾಧೀಶರ ಒಕ್ಕೂಟ ಆಕ್ರೋಶ

ಹಳೆಯ ಪಠ್ಯದಲ್ಲಿತ್ತೇ ನಾರಾಯಣಗುರುಗಳ ಪಾಠ?

ಬರಗೂರರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಪಠ್ಯದಲ್ಲಿ ನಾರಾಯಣಗುರುಗಳ ಪಾಠವನ್ನು ವಿಸ್ತರಿಸುವುದನ್ನು ಕಾಣಬಹುದಿತ್ತು. ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿನ ಭಾಗ -1ರಲ್ಲಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಗಳು’ ಇದ್ದು, ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಸುಧಾರಣಾ ಚಳವಳಿ, ರಾಮಕೃಷ್ಣ ಮಿಷನ್‌, ಥಿಯೋಸಾಫಿಕಲ್ ಸೊಸೈಟಿ, ಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಯೋಗಂ ಜೊತೆಗೆ ಪೆರಿಯಾರ್ ಕುರಿತು ವಿವರಿಸಲಾಗಿತ್ತು. ಈಗ ಹೊಸ ಪಠ್ಯದಲ್ಲಿ ನಾರಾಯಣಗುರುಗಳೂ ಇಲ್ಲ, ಪೆರಿಯಾರ್‌ ಕೂಡ ಇಲ್ಲ.

ಪಠ್ಯ ಪುಸ್ತಕ ವಿವಾದದ ಆರಂಭದಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ರೋಹಿತ್ ಚಕ್ರತೀರ್ಥ, “ಅರ್ಧ ಪಠ್ಯಪುಸ್ತಕವನ್ನು ತಿಳಿದುಕೊಂಡಿರುವವರು ಈ ಆರೋಪ ಮಾಡುತ್ತಿದ್ದಾರೆ. ಸುರಳಿಯಾಕಾರದ ಕಲಿಕೆ ಪ್ರಕಾರ ವಿಷಯವೊಂದರ ಕುರಿತು ಒಂದು ತರಗತಿಯಲ್ಲಿ ಕಲಿತರೆ, ಮುಂದುವರಿದಿದ್ದನ್ನು ಮುಂದಿನ ತರಗತಿಯಲ್ಲಿ ಕಲಿಯುತ್ತಾರೆ. ಏಳನೇ ತರಗತಿಯಲ್ಲಿ ಎಲ್ಲ ಸುಧಾರಕರ ಕುರಿತು ತಿಳಿಸಲಾಗಿದೆ. ಅಲ್ಲಿ ನಾರಾಯಣಗುರುಗಳು ಹಾಗೂ ಪೆರಿಯಾರ್‌ ಅವರ ವಿಷಯ ಬಂದಿದೆ. ಹತ್ತನೇ ತರಗತಿಯಲ್ಲಿ ಇದರ ವಿಸ್ತೃತ ರೂಪವಾಗಿ ಸಾಮಾಜಿಕ ಧಾರ್ಮಿಕ ಸಂಸ್ಥೆಗಳ ಪಾಠವನ್ನು ನೀಡಲಾಗಿದೆ” ಎಂದಿದ್ದರು. (ಸಂದರ್ಶನ ‘ಇಲ್ಲಿ’ ಓದಬಹುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...