Homeಕರ್ನಾಟಕಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದ್ದ ಸಮಾಜ ಸುಧಾರಕ ನಾರಾಯಣಗುರು ಹಾಗೂ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಅವರ ಕುರಿತ ಪಾಠವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕೈಬಿಟ್ಟಿರುವುದು ಸ್ಪಷ್ಟವಾಗಿದೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು, “ನಾರಾಯಣಗುರು ಪಾಠವನ್ನು ಕೈಬಿಟ್ಟಿಲ್ಲ. ಏಳು ಮತ್ತು ಎಂಟನೇ ತರಗತಿ ಎರಡೂ ಕಡೆಯೂ ಉಳಿಸಿಕೊಳ್ಳಲಾಗಿದೆ” ಎಂದು ಹೇಳುತ್ತಾ ಬಂದಿದ್ದರು. ಆದರೆ ಹತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಾಠ ಇಲ್ಲ ಎಂಬುದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವೆಬ್‌ಸೈಟ್‌ನಲ್ಲಿರುವ ಪಿಡಿಎಫ್‌ಗಳಿಂದ ಸ್ಪಷ್ಟವಾಗುತ್ತದೆ.

7ನೇ ತರಗತಿಯಲ್ಲಿ ಅಳವಡಿಸಲಾಗಿರುವ ‘ಸಮಾಜ ಸುಧಾರಕರ ಕುರಿತ ಪಾಠ’ವನ್ನು 10ನೇ ತರಗತಿಯಲ್ಲಿ ವಿಸ್ತರಿಸಲಾಗಿದೆ. 7ನೇ ತರಗತಿಯಲ್ಲಿ ಇದ್ದ ಅನೇಕ ಮಹನೀಯರ ವಿವರಗಳನ್ನು ಹತ್ತನೇ ತರಗತಿಯಲ್ಲಿ ಮುಂದುವರಿಸಲಾಗಿದ್ದರೂ ಮಹಾನ್‌ ಮಾನವತಾವಾದಿ ನಾರಾಯಣಗುರುಗಳ ವಿವರಗಳನ್ನು ಸಮಿತಿ ಕೈಬಿಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಪರಿಚಯ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂಧೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ವಿವರಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಪ್ರಯೋಗ ಮಾಡಿದೆ. ಏಳನೇ ತರಗತಿಯಲ್ಲಿ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಪಾಠ ಈ ಹಿಂದಿನ ಪಠ್ಯದಲ್ಲೂ ಇರಲಿಲ್ಲ. ಈಗಿನ ಪಠ್ಯದಲ್ಲೂ ಏಳನೇ ತರಗತಿಯಲ್ಲಿ ಇರಲಿಲ್ಲ. ಆದರೆ ಹತ್ತನೇ ತರಗತಿ ಪಠ್ಯದಲ್ಲಿ ‘ಪೆರಿಯಾರ್‌’ ಪಾಠವನ್ನು ಈ ಹಿಂದೆ ಸೇರಿಸಲಾಗಿತ್ತು.

ಹತ್ತನೇ ತರಗತಿಯಲ್ಲಿ ನಾರಾಯಣಗುರುಗಳ ಪಾಠಕ್ಕೆ ಕೋಕ್‌

ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ -1ರಲ್ಲಿ ಐದನೆಯ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣ ಚಳುವಳಿಗಳು’ ಭಾಗವನ್ನು ಇರಿಸಿದೆ. ಏಳನೇ ತರಗತಿಯಲ್ಲಿದ್ದ ಪಠ್ಯವನ್ನು ಹತ್ತನೇ ತರಗತಿಯಲ್ಲಿ ವಿಸ್ತರಿಸಲಾಗಿದೆ ಎನ್ನುವ ಚಕ್ರತೀರ್ಥ ಅವರು, ಏಳನೇ ತರಗತಿಯಲ್ಲಿ ನೀಡಲಾಗಿದ್ದ ಅನೇಕ ಸಮಾಜ ಸುಧಾರಕರ ವಿವರಗಳನ್ನು ಉಳಿಸಿಕೊಂಡು ನಾರಾಯಣಗುರುಗಳ ಪಾಠವನ್ನು ತೆಗೆದುಹಾಕಿದೆ.

ಬ್ರಹ್ಮ ಸಮಾಜ, ಆರ್ಯ ಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಚಳವಳಿ, ರಾಮಕೃಷ್ಣ ಮಿಷನ್‌, ಥಿಯಾಸಾಫಿಕಲ್ ಸೊಸೈಟಿ (ಬ್ರಹ್ಮವಿದ್ಯಾ ಸಮಾಜ)- ಇಷ್ಟನ್ನು ಪರಿಚಯ ಮಾಡಿಕೊಡಲಾಗಿದೆ. ನಾರಾಯಣಗುರುಗಳ ವಿವರ ಇಲ್ಲವಾಗಿದೆ. (ಪಿಡಿಎಫ್‌ ಪ್ರತಿ ನೋಡಿರಿ)

ಇದನ್ನೂ ಓದಿರಿ: Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಬಸವಣ್ಣನವರ ಪಾಠ ವೈದೀಕರಣ; ಲಿಂಗಾಯತ ಮಠಾಧೀಶರ ಒಕ್ಕೂಟ ಆಕ್ರೋಶ

ಹಳೆಯ ಪಠ್ಯದಲ್ಲಿತ್ತೇ ನಾರಾಯಣಗುರುಗಳ ಪಾಠ?

ಬರಗೂರರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಪಠ್ಯದಲ್ಲಿ ನಾರಾಯಣಗುರುಗಳ ಪಾಠವನ್ನು ವಿಸ್ತರಿಸುವುದನ್ನು ಕಾಣಬಹುದಿತ್ತು. ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿನ ಭಾಗ -1ರಲ್ಲಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಗಳು’ ಇದ್ದು, ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಸುಧಾರಣಾ ಚಳವಳಿ, ರಾಮಕೃಷ್ಣ ಮಿಷನ್‌, ಥಿಯೋಸಾಫಿಕಲ್ ಸೊಸೈಟಿ, ಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಯೋಗಂ ಜೊತೆಗೆ ಪೆರಿಯಾರ್ ಕುರಿತು ವಿವರಿಸಲಾಗಿತ್ತು. ಈಗ ಹೊಸ ಪಠ್ಯದಲ್ಲಿ ನಾರಾಯಣಗುರುಗಳೂ ಇಲ್ಲ, ಪೆರಿಯಾರ್‌ ಕೂಡ ಇಲ್ಲ.

ಪಠ್ಯ ಪುಸ್ತಕ ವಿವಾದದ ಆರಂಭದಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ರೋಹಿತ್ ಚಕ್ರತೀರ್ಥ, “ಅರ್ಧ ಪಠ್ಯಪುಸ್ತಕವನ್ನು ತಿಳಿದುಕೊಂಡಿರುವವರು ಈ ಆರೋಪ ಮಾಡುತ್ತಿದ್ದಾರೆ. ಸುರಳಿಯಾಕಾರದ ಕಲಿಕೆ ಪ್ರಕಾರ ವಿಷಯವೊಂದರ ಕುರಿತು ಒಂದು ತರಗತಿಯಲ್ಲಿ ಕಲಿತರೆ, ಮುಂದುವರಿದಿದ್ದನ್ನು ಮುಂದಿನ ತರಗತಿಯಲ್ಲಿ ಕಲಿಯುತ್ತಾರೆ. ಏಳನೇ ತರಗತಿಯಲ್ಲಿ ಎಲ್ಲ ಸುಧಾರಕರ ಕುರಿತು ತಿಳಿಸಲಾಗಿದೆ. ಅಲ್ಲಿ ನಾರಾಯಣಗುರುಗಳು ಹಾಗೂ ಪೆರಿಯಾರ್‌ ಅವರ ವಿಷಯ ಬಂದಿದೆ. ಹತ್ತನೇ ತರಗತಿಯಲ್ಲಿ ಇದರ ವಿಸ್ತೃತ ರೂಪವಾಗಿ ಸಾಮಾಜಿಕ ಧಾರ್ಮಿಕ ಸಂಸ್ಥೆಗಳ ಪಾಠವನ್ನು ನೀಡಲಾಗಿದೆ” ಎಂದಿದ್ದರು. (ಸಂದರ್ಶನ ‘ಇಲ್ಲಿ’ ಓದಬಹುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....