Homeಕರ್ನಾಟಕಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

ಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮವನ್ನು ಯಾಕೆ ಸ್ವೀಕರಿಸಿದರು ಎಂಬುದು ವಿಚಾರವಂತರೆಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಹತ್ತನೇ ತರಗತಿಯ ನೂತನ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬೌದ್ಧಧರ್ಮವನ್ನು ಸ್ವೀಕರಿಸಿದ್ದು ಏಕೆಂಬುದೇ ನಾಪತ್ತೆಯಾಗಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿತವಾದ ಸಮಾಜ ವಿಜ್ಞಾನ ಭಾಗ 2ರ ಪಠ್ಯಪುಸ್ತಕದಲ್ಲಿನ ‘ಗಾಂಧಿಯುಗ ಮತ್ತು ರಾಷ್ಟ್ರೀಯ ಹೋರಾಟ’ ಪಾಠದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ‌ಉಪಶೀರ್ಷಿಕೆಯಲ್ಲಿ ಪಠ್ಯವನ್ನು ನೀಡಲಾಗಿತ್ತು. ಈ ಭಾಗವನ್ನು ನೂತನ ಸಮಿತಿ ಉಳಿಸಿಕೊಳ್ಳಲಾಗಿದ್ದರೂ, ಕೆಲವು ಕಹಿಸತ್ಯಗಳು ಮಕ್ಕಳಿಗೆ ತಿಳಿಯದಂತೆ ಮರೆಮಾಚಿರುವುದು ಸ್ಪಷ್ಟವಾಗುತ್ತಿದೆ. ‘ಸ್ವಾತಂತ್ರ್ಯ ಹೋರಾಟ’ ಎಂದು ಪರಿಷ್ಕರಿಸಲಾಗಿರುವ ಪಾಠದಲ್ಲಿ ಅಂಬೇಡ್ಕರ್‌ ಅವರ ಕುರಿತು ವಿವರಣೆಗಳನ್ನು ಉಳಿಸಿಕೊಂಡಿದ್ದರೂ ಕೆಲವೆಡೆ ಕತ್ತರಿ ಪ್ರಯೋಗ ಮಾಡಿರುವುದು ನೂತನ ಪಠ್ಯದ ಹಾಳೆಗಳಿಂದ ಸ್ಪಷ್ಟವಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಹಿಂದಿನ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ಜಾತಿ ವ್ಯವಸ್ಥೆಯಿಂದ ಬೇಸತ್ತ ಇವರು (ಅಂಬೇಡ್ಕರ್‌) ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”- ಹೀಗೆ ಹಿಂದಿನ ಪಠ್ಯದಲ್ಲಿ ಸಾಲುಗಳಿವೆ.

ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ತಮ್ಮ ಇಳಿ ವಯಸ್ಸಿನಲ್ಲಿ ಇವರು ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”

ಹೀಗೆ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದ್ದು, “ಅಂಬೇಡ್ಕರ್‌ ಅವರು ಜಾತಿ ವ್ಯವಸ್ಥೆಯಿಂದ ಬೇಸತ್ತಿದ್ದು, ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದ್ದು” ಎಂಬ ಅಂಶಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಹಾಕಿದೆ.

ಇದನ್ನೂ ಓದಿರಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

“ನಾನು ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯುವುದಿಲ್ಲ” ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿ ಸೇರುವ ಮುನ್ನ ದಶಕದ ಮುಂಚೆಯೇ ಘೋಷಣೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕನ್ನಡಿಗರೇ ಆಗ್ಲಿ, ಕರ್ನಾಟಕ ಸರ್ಕಾರವೇ ಆಗ್ಲಿ ಈಗಲೇ ಇಚ್ಛೆತ್ತು ಕೊಳ್ಳದಿದ್ದರೆ ಇನ್ನು ಸಾವಿರಾರು ಸತ್ಯಗಳು ಸುಳ್ಳಾಗಿ, ಸುಳ್ಳುಗಲ್ಲೆಲ್ಲ ಸತ್ಯವಾಗುತ್ತವೆ

  2. ಸತ್ಯವನ್ನು ಎಂದು ಮರೆಮಾಚಲಗದು… ಚಕ್ರತೀರ್ಥ ಎಂಬ ವೆಕ್ತಿಯನ್ನು ಕೂಡಲೇ ಸಮಿತಿಯಿಂದ ತೆಗೆದು ಹಾಕಿ..

  3. ಅತೀ ಬುದ್ಧಿವಂತಿಕೆ ಧೂರ್ತ ಲಕ್ಷಣಂ

    ಎನ್ನುವ ಮಾತು ಅಕ್ಷರಶಃ ನಿಜ ಎನ್ನುವುದನ್ನು ಈಚಿನ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ವೈಖರಿ ನಿಜವಾಗಿಸಿದೆ.

    ರಾಜ್ಯ ಸರಕಾರವು ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ತೆಗೆದು ಕೊಳ್ಳಬಾರದು ಮತ್ತು ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು

  4. ಚಕ್ರತೀರ್ಥರ ಈ ಪರಿ ಪಠ್ಯ ವಿರೋಧಿ ದೋರಣೆ ಸಲ್ಲದು.ಮೂಲ ಪಠ್ಯ ಕಾಯ್ದು ಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...