Homeಕರ್ನಾಟಕ‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಮತ್ತು ರಾಷ್ಟ್ರಗೀತೆಯನ್ನು ನಿಂದಿಸಿದವರ ಮೇಲೆ ಕಾನೂನು ಕ್ರಮಕೈಗೊಳ್ಳದೆ, ಅವರಿಗೆ ಜವಬ್ದಾರಿಯುತ ಸ್ಥಾನಗಳನ್ನು ನೀಡಿದ ಸರ್ಕಾರದ ನಡೆಯನ್ನು ಪ್ರತಿಭಟಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಸೋಮವಾರ ರಾಜೀನಾಮೆ ಘೋಷಿಸಿದ್ದಾರೆ.

ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಹಂಪನಾ, “ರಾಷ್ಟ್ರಕವಿ ಕುವೆಂಪುರವರನ್ನೂ, ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ” ಎಂದು ಹೇಳಿದ್ದು, ಮುಖ್ಯಮಂತ್ರಿ ತನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕುವೆಂಪುರವರನ್ನೂ ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾಷ್ಟ್ರಗೀತಿಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ‘ಚಕ್ರತೀರ್ಥ’ದಲ್ಲಿ ಒದ್ದಾಡುತ್ತಾ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ: ನಾಡೋಜ ಹಂಪನಾ

ಇದು, ‘ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ’ ಎಂಬ ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ ಎಂದು ಅವರು ಮುಖ್ಯಮಂತ್ರಿಗೆ ತನ್ನ ಪತ್ರದಲ್ಲಿ ಬರೆದಿದ್ದಾರೆ.

“ಮಹಾಕವಿ ಕುವೆಂಪು ಅವರು ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು” ಎಂದು ಅವರು ತಮ್ಮ ಪತ್ರದಲ್ಲಿ ಸರ್ಕಾರವನ್ನು ನೆನಪಿಸಿದ್ದಾರೆ.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ಅವರು ಮುಖ್ಯಮಂತ್ರಿಗೆ ಬರೆದ ಪತ್ರದ ಪೂರ್ಣ ಪಠ್ಯ ಹೀಗಿದೆ

ಶ್ರೀ. ಬಸವರಾಜ ಬೊಮ್ಮಾಯಿ ಅವರು
ಸನ್ಮಾನ್ಯ ಮುಖ್ಯಮಂತ್ರಿಗಳು,
ವಿಧಾನಸೌಧ, ಬೆಂಗಳೂರು.

ಮಾನ್ಯರೇ,

ವಿಷಯ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಮಹಾಕವಿ ಕುವೆಂಪುರವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು.

ಆದರೆ ಇಂದು ಕುವೆಂಪುರವರನ್ನೂ, ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ.

ಇದರಿಂದ “ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ” ಎಂಬ ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ಜತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ.

ರಾಷ್ಟ್ರಕವಿ ಕುವೆಂಪುರವರನ್ನೂ, ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸರ್ಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರಿಸಬೇಕೆಂದು ಪ್ರಾರ್ಥಿಸುತ್ತೇನೆ.

ತಮ್ಮ ವಿಶ್ವಾಸಿ
ಹಂಪನಾ
ಹಂಪನಾ. ನಾಗರಾಜಯ್ಯ

30.05.2022
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...