Homeಕರ್ನಾಟಕ‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಮತ್ತು ರಾಷ್ಟ್ರಗೀತೆಯನ್ನು ನಿಂದಿಸಿದವರ ಮೇಲೆ ಕಾನೂನು ಕ್ರಮಕೈಗೊಳ್ಳದೆ, ಅವರಿಗೆ ಜವಬ್ದಾರಿಯುತ ಸ್ಥಾನಗಳನ್ನು ನೀಡಿದ ಸರ್ಕಾರದ ನಡೆಯನ್ನು ಪ್ರತಿಭಟಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಸೋಮವಾರ ರಾಜೀನಾಮೆ ಘೋಷಿಸಿದ್ದಾರೆ.

ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಹಂಪನಾ, “ರಾಷ್ಟ್ರಕವಿ ಕುವೆಂಪುರವರನ್ನೂ, ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ” ಎಂದು ಹೇಳಿದ್ದು, ಮುಖ್ಯಮಂತ್ರಿ ತನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕುವೆಂಪುರವರನ್ನೂ ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾಷ್ಟ್ರಗೀತಿಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ‘ಚಕ್ರತೀರ್ಥ’ದಲ್ಲಿ ಒದ್ದಾಡುತ್ತಾ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ: ನಾಡೋಜ ಹಂಪನಾ

ಇದು, ‘ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ’ ಎಂಬ ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ ಎಂದು ಅವರು ಮುಖ್ಯಮಂತ್ರಿಗೆ ತನ್ನ ಪತ್ರದಲ್ಲಿ ಬರೆದಿದ್ದಾರೆ.

“ಮಹಾಕವಿ ಕುವೆಂಪು ಅವರು ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು” ಎಂದು ಅವರು ತಮ್ಮ ಪತ್ರದಲ್ಲಿ ಸರ್ಕಾರವನ್ನು ನೆನಪಿಸಿದ್ದಾರೆ.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ಅವರು ಮುಖ್ಯಮಂತ್ರಿಗೆ ಬರೆದ ಪತ್ರದ ಪೂರ್ಣ ಪಠ್ಯ ಹೀಗಿದೆ

ಶ್ರೀ. ಬಸವರಾಜ ಬೊಮ್ಮಾಯಿ ಅವರು
ಸನ್ಮಾನ್ಯ ಮುಖ್ಯಮಂತ್ರಿಗಳು,
ವಿಧಾನಸೌಧ, ಬೆಂಗಳೂರು.

ಮಾನ್ಯರೇ,

ವಿಷಯ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಮಹಾಕವಿ ಕುವೆಂಪುರವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು.

ಆದರೆ ಇಂದು ಕುವೆಂಪುರವರನ್ನೂ, ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ.

ಇದರಿಂದ “ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ” ಎಂಬ ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ಜತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ.

ರಾಷ್ಟ್ರಕವಿ ಕುವೆಂಪುರವರನ್ನೂ, ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸರ್ಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರಿಸಬೇಕೆಂದು ಪ್ರಾರ್ಥಿಸುತ್ತೇನೆ.

ತಮ್ಮ ವಿಶ್ವಾಸಿ
ಹಂಪನಾ
ಹಂಪನಾ. ನಾಗರಾಜಯ್ಯ

30.05.2022
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...