Homeಕರ್ನಾಟಕನಾಡಗೀತೆ, ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಗ್ರಹ

ನಾಡಗೀತೆ, ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಗ್ರಹ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಆಗ್ರಹಿಸಿದೆ.

ಕಸಾಪ ಅಧ್ಯಕ್ಷರಾದ ಡಾ.ಮಹೇಶ ಜೋಶಿ ಅವರು ಪತ್ರ ಬರೆದಿದ್ದು, “ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳ ಬಗ್ಗೆ ಹಾಗೂ ನಾಡಗೀತೆಯನ್ನು ತಿರುಚಿ ಬರೆದಿರುವ ಕುರಿತು ದಿನಪತ್ರಿಕೆಗಳಲ್ಲಿ ಓದುವ, ಹೀನಾಯ ಸ್ಥಿತಿ ತಲುಪಿರುವುದಕ್ಕೆ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅತ್ಯಂತ ಖೇದ ಹಾಗೂ ಬೇಸರದ ಸಂಗತಿಯಾಗಿದೆ” ಎಂದು ವಿಷಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಕಸಾಪ ಅಧ್ಯಕ್ಷರಾದ ಮಹೇಶ ಜೋಶಿ ಅವರ ಪತ್ರದ ಪೂರ್ಣ ಪಠ್ಯ ಇಲ್ಲಿದೆ:

ಜಗದ ಕವಿ, ಯುಗದ ಕವಿ, ನಾಡು ಕಂಡ ಅಪ್ರತಿಮ ಮಹಾಕವಿ, ದಾರ್ಶನಿಕ, ರಸಋಷಿ ಕುವೆಂಪು ಅವರಿಗೆ ಅತ್ಯಂತ ಗೌರವ ಸಲ್ಲಿಸುವ ಸಂಸ್ಥೆ ಕರ್ನಾಟಕದಲ್ಲಿ ಯಾವುದಾದರೂ ಇದೇ ಅಂದರೆ, ಅದು ಕನ್ನಡ ಸಾಹಿತ್ಯ ಪರಿಷತ್ತು. ಕುವೆಂಪು ವಿರಚಿತ “ಜಯಭಾರತ ಜನನಿಯ ತನುಜಾತೆ” ಗೀತೆಯನ್ನು “ನಾಡಗೀತೆ” ಮಾಡಬೇಕೆಂದು ಮೊದಲ ಅಳವಡಿಸಿಕೊಂಡಿದ್ದು ಸಾಹಿತ್ಯ ಪರಿಷತ್ತು. 1971ರಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಮ್ಮತಿ ಪಡೆದು ಪರಿಷತ್ತು ನಾಡಗೀತೆಯನ್ನು ತನ್ನ ಎಲ್ಲ ಕಾರ್ಯಕ್ರಮಗಳಲ್ಲೂ ಹಾಡಿಸಲಾಗುತ್ತಿತ್ತು.

ಇದನ್ನೂ ಓದಿರಿ: ಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

ಈ ಮೂಲಗೀತೆ 1924ರಲ್ಲಿ ರಚನೆಯಾಗಿ, ಇಂದಿಗೆ 98 ವರ್ಷವಾಯಿತು. ಎರಡು ಸಲ ಪರಿಷ್ಕರಣೆಗೊಂಡು ಮೈಸೂರಿನ ಸಂಪದಭ್ಯುದಯ ಪತ್ರಿಕೆಯಲ್ಲಿ ಪ್ರಕಟವಾಯಿತು. ಅನಂತರ ಮತ್ತೆ ಪರಿಷ್ಕರಣೆಗೊಂಡು ಕುವೆಂಪು ಅವರ ಕೊಳಲು ಕವನ ಸಂಕಲನದಲ್ಲಿ ಪ್ರಕಟವಾಯಿತು. ಇದು ಭಾರತದ ಅಖಂಡತೆಯನ್ನೂ, ಭಾವೈಕ್ಯತೆಯನ್ನೂ ಎತ್ತಿ ಹಿಡಿಯುವ ಗೀತೆ. ಭಾರತಾಂತರ್ಗತ ಕರ್ನಾಟಕ, ಕರ್ನಾಟಕಾಂತರ್ಗತ ಭಾರತ ಎಂಬುದನ್ನು ಆವೇಶವಿಲ್ಲದೆ, ಘೋಷಣೆಗಳಿಲ್ಲದೆ ಸಾರುವ ಭಾವನಾತ್ಮಕ ಗೀತೆಯಿದು. ಇಂತಹ ಅಪರೂಪದ ಗೀತೆಯನ್ನು ಪರಿಷತ್ತು ನಾಡಗೀತೆಯಾಗಿ ಆರಿಸಿತು. ಅದರ ಅನಂತರ ಸರ್ಕಾರವೂ ಇದನ್ನೇ ನಾಡಗೀತೆ ಎಂದು ಅಂಗೀಕರಿಸಿ, ಪರಿಷತ್ತಿನ ಆಯ್ಕೆಯನ್ನು ದೃಢಗೊಳಿಸಿ, 6-1-2004ರಂದು ಕರ್ನಾಟಕದ ನಾಡಗೀತೆಯನ್ನಾಗಿ ನಿಗದಿಪಡಿಸಿ ಆದೇಶ ಹೊರಡಿಸಿತು.

ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳ ಬಗ್ಗೆ ಹಾಗೂ ನಾಡಗೀತೆಯನ್ನು ತಿರುಚಿ ಬರೆದಿರುವ ಕುರಿತು ದಿನಪತ್ರಿಕೆಗಳಲ್ಲಿ ಓದುವ, ಹೀನಾಯ ಸ್ಥಿತಿ ತಲುಪಿರುವುದಕ್ಕೆ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅತ್ಯಂತ ಖೇದ ಹಾಗೂ ಬೇಸರದ ಸಂಗತಿಯಾಗಿದೆ.

“ಮನುಜ ಮತ ವಿಶ್ವಪಥ” ಎಂಬ ಸಂದೇಶದ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ, ಪ್ರಕೃತಿಯಲ್ಲಿ ದೇವರನ್ನು ಕಾಣುವ, ದೇವರಲ್ಲಿ ಪ್ರಕೃತಿಯನ್ನು ಕಾಣುವ ದೈವಿಕ ಸಂಬಂಧಗಳನ್ನು ಪ್ರತಿಪಾದಿಸಿದ ಸರ್ವೋದಯ ತತ್ವಪ್ರತಿಪಾದಕರು ಕುವೆಂಪು ಅವರು. ಸಾಮಾಜಿಕ, ಧಾರ್ಮಿಕ, ಆರ್ಥಿಕ ಅಸಮಾನತೆಯನ್ನು ಮತ್ತು ಲಿಂಗಭೇದವನ್ನು ನಿವಾರಿಸಿಕೊಂಡು ಈ ಜಗತ್ತು “ಸರ್ವಜನಾಂಗದ ಶಾಂತಿಯ ತೋಟ”ವಾಗಬೇಕೆಂದು ಕನಸು ಕಂಡ ಶ್ರೇಷ್ಠ ದಾರ್ಶನಿಕರು. ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಸಾಹಿತ್ಯದ ಮೂಲಕ ಅರ್ಥಗರ್ಭಿತ ಪ್ರಯತ್ನ ಮಾಡಿದ ಮೇರು ಸಾಹಿತಿಗಳು. ಅವರ ಸಾಹಿತ್ಯವನ್ನು ಓದಿದವರ್ಯಾರೂ ಸಹ ಕುವೆಂಪು ಅವರ ಕುರಿತು ಚಕಾರ ಎತ್ತುವ ಧೈರ್ಯವನ್ನು ಮಾಡುವುದಿಲ್ಲ. ಯಾರು ಈ ಮಹಾದಾರ್ಶನಿಕರನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲವೋ, ಅಂಥವರು ಮಾತ್ರ ಅಡ್ಡದಾರಿಯನ್ನು ಹಿಡಿದು, ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡುತ್ತಾರೆ.

ಶ್ರೀರಾಮಕೃಷ್ಣ ಪರಮಹಂಸರ, ಶ್ರೀ ವಿವೇಕಾನಂದರ ಚಿಂತನೆಗಳನ್ನು ಆದರ್ಶವನ್ನಾಗಿಸಿಕೊಂಡು, ಸಾಹಿತ್ಯದಲ್ಲಿ ಆಧ್ಯಾತ್ಮೀಕತೆಯನ್ನು ಸರಳವಾಗಿ, ಎಲ್ಲರೂ ಅರ್ಥ ಮಾಡಿಕೊಳ್ಳುವ ಹಾಗೆ ರಚಿಸಿದ ಮಹಾಕವಿಯ ಕುರಿತು ನಿಂದನೆಯನ್ನು ಮಾಡಿರುವುದು ವೈಯಕ್ತಿಕವಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಖಂಡಿಸುವುದರ ಜೊತೆಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದವರ ವಿರುದ್ಧ ಸರ್ಕಾರ ತಡಮಾಡದೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ.

ಕುವೆಂಪು ಅವರ ಪುಸ್ತಕಗಳನ್ನು ಬಹಳ ಗೌರವದಿಂದ, ಭಕ್ತಿಯಿಂದ ಓದುವ ನಾನು, ಅವರ ಪ್ರಕೃತಿ ವರ್ಣನೆಗೆ ಮಾರುಹೋಗುವುದರ ಜೊತೆಗೆ, ಅವರ ಶ್ರೇಷ್ಠ ಚಿಂತನೆಗಳಿಂದ ಪ್ರೇರಿತನಾಗಿ “ಮನುಜ ಮತದಲ್ಲಿ” ನಂಬಿಕೆ ಇಟ್ಟಂಥವನು. ಕುವೆಂಪು ಅವರ ಚಿಂತನೆಯ ಮಾರ್ಗದಲ್ಲಿಯೇ, ಕನ್ನಡ ಸಾಹಿತ್ಯ ಪರಿಷತ್ತು ಜಾತಿ, ಮತ, ಧರ್ಮ, ಲಿಂಗ ತಾರತಮ್ಯವಿಲ್ಲದೆ ನನ್ನ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಸಾಧಾರಣವಾಗಿ ನನ್ನ ಎಲ್ಲ ಭಾಷಣಗಳಲ್ಲೂ ಕುವೆಂಪು ಅವರ ಚಿಂತನೆಗಳನ್ನು ಉಲ್ಲೇಖಿಸುತ್ತೇನೆ. ಯಾವುದೇ ಸಾಹಿತಿಯನ್ನು ಟೀಕಿಸುವ ಮೊದಲು ಅವರ ಸಾಹಿತ್ಯದ ಸಾರ-ಸರ್ವವನ್ನು ಅರಿತುಕೊಳ್ಳಬೇಕು. ತಿಳಿದುಕೊಳ್ಳದೇ ಮಾತನಾಡುವುದು ಶೋಭೆಯಲ್ಲ. ಹಿನ್ನೆಲೆ ತಿಳಿದುಕೊಳ್ಳದೇ ಮಾತನಾಡುವುದು, ಅವರ ಬೇಜವಾಬ್ದಾರಿತನವನ್ನು ಹಾಗೂ ಅಪ್ರಬುದ್ಧತೆಯನ್ನು ತೋರಿಸುತ್ತದೆ.

ಇದನ್ನೂ ಓದಿರಿ: ‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

ಕುವೆಂಪು ಅವರನ್ನು ನಿಂದಿಸಿದವರ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಕ್ರಮಕೈಗೊಳ್ಳುವಂತೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಮಹಾಸ್ವಾಮೀಜಿಗಳ ಒತ್ತಾಯವನ್ನು ಮುಖ್ಯಮಂತ್ರಿಗಳು ಕ್ರಮ ತೆಗೆದುಕೊಳ್ಳುವ ಬಗ್ಗೆ ತೀರ್ಮಾನ ಕೈಗೊಂಡಿರುವುದನ್ನು, ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲಿಸುತ್ತಾ, ತಡಮಾಡದೇ ಅಂಥವರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತದೆ.

ರಾಷ್ಟ್ರಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿರುವ ಹಾಗೂ ನಾಡಗೀತೆಯನ್ನು ತಿರುಚಿ ಬರೆದವರ ಮೇಲೆ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ ಹಾಗೂ ಪರಿಷತ್ತಿನ ಎಲ್ಲಾ ಜಿಲ್ಲಾ ಘಟಕಗಳ, ಗಡಿನಾಡ ಘಟಕಗಳ, ತಾಲ್ಲೂಕು ಹಾಗೂ ಹೋಬಳಿ ಘಟಕಗಳ ಅಧ್ಯಕ್ಷರುಗಳು, ಈ ಖಂಡನೆಗೆ ಒಮ್ಮತದಿಂದ ಕೇಂದ್ರ ಪರಿಷತ್ತಿಗೆ ಬೆಂಬಲವನ್ನು ಸೂಚಿಸಿದ್ದಾರೆ.

– ಡಾ. ಮಹೇಶ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಜೋಷಿಯ ಆಗ್ರಹ ಅನುಮಾನಾಸ್ಪದ, ಅಪ್ರಾಮಾಣಿಕ! ತನ್ನ ಹೇಳಿಕೆಯಲ್ಲಿ ಎಲ್ಲೂ ಅವಹೇಳನ ಮಾಡಿರುವವರ ಹೆಸರನ್ನು ಹೇಳದೆ ಜಾಣತನ! ಏಕೆ ಅವರಿಗೆ ಚಕ್ರತೀರ್ಥನ ಹೆಸರು ಗೊತ್ತಿಲ್ಲವೇ? ಅಲ್ಲದೆ, ಈ ಕೆಲಸವನ್ನು ಈತ ಪರಿಷತ್ತಿನ ಅಧ್ಯಕ್ಷನಾಗಿ ಈ ಹಿಂದೆಯೇ ಮಾಡಬೇಕಿತ್ತಲ್ಲವೇ? ಬೇರೆ ಮೂಲಗಳಿಂದ ಪ್ರತಿಭಟನೆ, ಕ್ರಮಕ್ಕೆ ಆಗ್ರಹ ಹೆಚ್ಚಾಗುತ್ತಿರುವಾಗ ಇನ್ನೂ ಸುಮ್ಮನೇ ಇರುವುದು ಸರಿಯಲ್ಲ ಎಂದು ಮಾಡುತ್ತಿರುವ ಕಾಟಾಚಾರದ ಪ್ರತಿಭಟನೆಯಾಗಿದೆ ಇದು. ವಾಸ್ತವವಾಗಿ ಕನ್ನಡ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪಠ್ಯ ಪುಸ್ತಕ ಪರಿಷ್ಕರಣೆ ವಾಸ್ತವದಲ್ಲಿ ಅದು ‘ಕರಚಳಕ’ ಆದ ತಕ್ಷಣ ಪರಿಷತ್ತು ಅದರ ಅಪಸವ್ಯಗಳ ಕುರಿತು ಧ್ವನಿ ಎತ್ತಬೇಕಿತ್ತು! ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿ, ಚಕ್ರತೀರ್ಥ ಕನ್ನಡ ಧ್ವಜವನ್ನು- ಅದು ಪರಿಷತ್ತಿನ ದಲ್ಲದಿದ್ದರೂ – ತನ್ನ ಒಳ ಉಡುಪಿಗೆ ಹೋಲಿಸಿ ಅವಮಾನಿಸಿದಾಗಲೇ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಬೇಕಿತ್ತು. ಜಾತಿ ಬಾಂಧವನೆಂಬ ಕಾರಣಕ್ಕೆ ಮೇಲಾಗಿ ಚಕ್ರತೀರ್ಥನ ಉಪಾದ್ವ್ಯಾಪಗಳಿಗೆ ಆಂತರಿಕ ಸಹಮತಿ ಇದ್ದುದರಿಂದಲೆ ಪರಿಷತ್ತಿನ ಅಧ್ಯಕ್ಷರು ಮೌನವಾಗಿದ್ದು, ಈಗ ಅನಿವಾರ್ಯವೆಂದಾಗ ಮಾತನಾಡುತ್ತಿರುವುದು ಖಂಡನೀಯ. ಇದು ಎಲ್ಲಾ ಜಿಲ್ಲಾಧ್ಯಕ್ಷರುಗಳ ತಪ್ಪೂ ಆಗಿದೆ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...