Homeಕರ್ನಾಟಕಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

ಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

- Advertisement -
- Advertisement -

“ಸುಮ್ಮನೇ ಬಿಟ್ಟರೆ ಮುಂದೆ ಯಾರಾದರೂ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು” ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ರೋಹಿತ್ ಚಕ್ರತೀರ್ಥ ಅವರ ಹಳೆಯ ಪೋಸ್ಟ್‌ ವೈರಲ್ ಆಗಿದೆ. ಲಕ್ಷ್ಮಣ ಆಕಾಶೆ ಕಾರ್ಕಳ ಎಂಬಾತ ಕುವೆಂಪು ಅವರ ಬಗ್ಗೆ ಬರೆದಿರುವ ಬರಹ ಅವಹೇಳನಕಾರಿಯಾಗಿದೆ ಎಂದು ಕನ್ನಡಿಗರು ಸಿಟ್ಟಿಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ ಬಳಿಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿದ್ದಾರೆ. ತಮ್ಮ ಪಟ್ಟು ಬದಲಿಸದ ಶ್ರೀಗಳು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾಜಿಕ ಜಾಲತಾಣದ ಮೂಲಕ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್‌ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕು” ಎಂದು ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.

ಸ್ವಾಮೀಜಿಯವರು ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

‘ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ವಾಮೀಜಿ ತಿಳಿಸಿದರೆಂದು ಮೂಲಗಳು ಹೇಳಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಬೇಸರ ವ್ಯಕ್ತಪಡಿಸಿದ್ದ ಶ್ರೀಗಳು

ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು. ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದರು.

ಇದನ್ನೂ ಓದಿರಿ: ನಾಡಗೀತೆ, ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಗ್ರಹ

ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಪ್ರಯುಕ್ತ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ ಎಂದಿದ್ದರು.

ಸ್ವಾಮೀಜಿಯವರ ಹೇಳಿಕೆ ಹೊರಬಿದ್ದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿ, “ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಶಿಕ್ಷಣ ಸಚಿವರು ಸ್ವಾಮೀಜಿಯವರನ್ನು ಭೇಟಿಯಾಗಲಿದ್ದಾರೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Wish and hope we will all be equally outraged on all polarization and anti national issues irrespective which party or who the culprit is ? Yes in this case it is anti national ( in my book)to belittle Kannada Culture and Language

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...