Homeಕರ್ನಾಟಕಪಠ್ಯ ವಾಪಸಾತಿ: ಕೇಸರೀಕರಣ ವಿರುದ್ಧದ ಸಮರಕ್ಕೆ ಮೂಡ್ನಾಕೂಡು, ಈರಪ್ಪ ಕಂಬಳಿ ಸೇರ್ಪಡೆ

ಪಠ್ಯ ವಾಪಸಾತಿ: ಕೇಸರೀಕರಣ ವಿರುದ್ಧದ ಸಮರಕ್ಕೆ ಮೂಡ್ನಾಕೂಡು, ಈರಪ್ಪ ಕಂಬಳಿ ಸೇರ್ಪಡೆ

- Advertisement -
- Advertisement -

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯಪುಸ್ತಕಗಳನ್ನು ಕೇಸರೀಕರಣ ಮಾಡಿರುವ ವಿರುದ್ಧ ರಾಜ್ಯದಲ್ಲಿ ಎದ್ದಿರುವ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ ಐಐಟಿ, ಸಿಇಟಿ ಪ್ರೊಫೆಸರ್‌ ಆಗಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟುಗಳಿಗೆ ಎಲ್ಲ ವಲಯಗಳಿಂದ ವಿರೋಧ ವ್ಯಕ್ತವಾಗುತ್ತಿದ್ದು, ಪಠ್ಯಪುಸ್ತಕದಿಂದ ತಮ್ಮ ಪಾಠಗಳನ್ನು ಲೇಖಕರು ವಾಪಸ್‌ ಪಡೆಯುತ್ತಿರುವುದು ಮುಂದುವರಿದಿದೆ. ಈ ಸಾಲಿಗೆ ಈಗ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿ, ಲೇಖಕ ಈರಪ್ಪ ಎಂ.ಕಂಬಳಿ ಸೇರ್ಪಡೆಯಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿರುವ ಮೂಡ್ನಾಕೂಡು ಅವರು ತಮ್ಮ ಕಾರಣವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಪಠ್ಯಪುಸ್ತಕಗಳ ಕೇಸರೀಕರಣ ವಿರೋಧಿಸಿ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಮೂಡ್ನಾಕೂಡು ಪತ್ರದಲ್ಲೇನಿದೆ?

ಕರ್ನಾಟಕ ಘನ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಮಿತಿಯನ್ನು ನೇಮಿಸಿ ಶಾಲಾ ಪಠ್ಯಗಳನ್ನು ಕೇಸರೀಕರಣಗೊಳಿಸುತ್ತಿರುವ ಬಗ್ಗೆ ಕನ್ನಡ ಸಾರಸ್ವತ ಲೋಕ ವಿಚಲಿತಗೊಂಡಿದೆ. ಬಸವಣ್ಣನವರ ಕುರಿತು ತಪ್ಪು ಮಾಹಿತಿ ನೀಡುವುದು, ಮಹಾನ್ ದಾರ್ಶನಿಕ ಕವಿ ಕುವೆಂಪು ಅವರನ್ನು ಅವಮಾನಿಸುವುದು ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಮಾಡುವ ಅಪಚಾರ.

ಜಾತಿ ವ್ಯವಸ್ಥೆಯಿಂದ ಕಲುಷಿತಗೊಂಡಿರುವ ನಮ್ಮ ಸಮಾಜವನ್ನು ಜಾತ್ಯತೀತತೆಯಿಂದ ಮಾತ್ರ ಸರಿಪಡಿಸಲು ಸಾಧ್ಯ. ಸ್ವಸ್ಥ ಸಮಾಜಕ್ಕಾಗಿ ಮುಂದಿನ ಪೀಳಿಗೆಯನ್ನು ತಯಾರು ಮಾಡುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಕ್ಷೇತ್ರ ಅನವಶ್ಯಕ ವಿದ್ಯಮಾನಗಳಿಂದ ದಾಳಿಗೊಳಗಾಗಿರುವುದು ವಿಷಾದನೀಯ. ಪ್ರಗತಿಪರತೆಯನ್ನು ಪ್ರತಿಪಾದಿಸುವವರನ್ನು ಎಡಪಂಥೀಯರು ಎಂದು ದೂರುವುದು, ದೂರ ಮಾಡುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ.

ಈ ಹಿನ್ನೆಲೆಯಲ್ಲಿ ಐದನೇ ತರಗತಿಗೆ ಪಠ್ಯವಾಗಿರುವ “ನನ್ನ ಕವಿತೆಗೆ” ಎಂಬ ಕವಿತೆಗೆ ನೀಡಿರುವ ನನ್ನ ಅನುಮತಿಯನ್ನು ಈ ಮೂಲಕ ಹಿಂಪಡೆಯುತ್ತಿದ್ದೇನೆ.

  • ಮೂಡ್ನಾಕೂಡು ಚಿನ್ನಸ್ವಾಮಿ

***

ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಈರಪ್ಪ ಎಂ.ಕಂಬಳಿ ಅವರ ಪತ್ರದಲ್ಲೇನಿದೆ?

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅನಾರೋಗ್ಯಕರ ಬೆಳವಣಿಗೆಯನ್ನು ಕಂಡ ನನಗೆ ತೀವ್ರ ಅಸಮಾಧಾನವಾಗಿದೆ. ಈ ಕಾರಣಕ್ಕೆ ಕಳೆದ ಸಾಲಿನಲ್ಲಿ ಹತ್ತನೆಯ ತರಗತಿಯ ನುಡಿ ಕನ್ನಡ ತೃತೀಯ ಭಾಷಾ ಕನ್ನಡ ಪಠ್ಯಪುಸ್ತಕದಲ್ಲಿ ‘ಹೀಗೊಂದು ಟಾಪ್ ಪ್ರಯಾಣ’ ಶೀರ್ಷಿಕೆಯ ನನ್ನ ಲಲಿತ ಪ್ರಬಂಧವನ್ನು ಮುಂದುವರಿಸಬಾರದೆಂದೂ, ಈ ಹಿಂದೆ ನೀಡಿದ್ದ ನನ್ನ ಅನುಮತಿಯನ್ನು ಈ ಮೂಲಕ ವಾಪಸ್‌ ಪಡೆದಿರುವುದನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ.

  • ಈರಪ್ಪ ಎಂ.ಕಂಬಳಿ

ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೇವನೂರ ಮಹಾದೇವ ಅವರು ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಹತ್ತನೇ ತರಗತಿ ಕನ್ನಡ ಪಠ್ಯದಿಂದ ವಾಪಸ್ ಪಡೆಯುವ ಮೂಲಕ ಮೊದಲಿಗೆ ಪ್ರತಿರೋಧವನ್ನು ದಾಖಲಿಸಿದರು. ನಂತರ ವಿದ್ವಾಂಸರಾದ ಜಿ.ರಾಮಕೃಷ್ಣ ಅವರು ‘ಭಗತ್‌ಸಿಂಗ್‌’ ಪಾಠವನ್ನು ವಾಪಸ್ ಪಡೆದರು. 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿದ್ದ “ಮನೆಗೆಲಸದ ಹೆಣ್ಣು ಮಗಳು” ಪದ್ಯವನ್ನು ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಾಪಸ್ ಪಡೆದರು. ಇದೇ ರೀತಿಯಲ್ಲಿ ಪ್ರತಿರೋಧವನ್ನು ವ್ಯಕ್ತಪಡಿಸಿರುವ ಮೂಡ್ನಾಕೂಡು ಚಿನ್ನಾಸ್ವಾಮಿ ಹಾಗೂ ಮೂಡ್ನಾಕೂಡು ಚಿನ್ನಸ್ವಾಮಿ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

ರಾಜೀನಾಮೆ ಮೂಲಕ ಪ್ರತಿರೋಧ

ರಾಷ್ಟ್ರಕವಿ ಕುವೆಂಪು ಮತ್ತು ರಾಷ್ಟ್ರಗೀತೆಯನ್ನು ನಿಂದಿಸಿದವರ ಮೇಲೆ ಕಾನೂನು ಕ್ರಮಕೈಗೊಳ್ಳದೆ, ಅವರಿಗೆ ಜವಬ್ದಾರಿಯುತ ಸ್ಥಾನಗಳನ್ನು ನೀಡಿದ ಸರ್ಕಾರದ ನಡೆಯನ್ನು ಪ್ರತಿಭಟಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಸೋಮವಾರ ರಾಜೀನಾಮೆ ಘೋಷಿಸಿದರು.

ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಗಳನ್ನು ಪ್ರತಿಭಟಿಸಿ ‘ರಾಷ್ಟ್ರಕವಿ ಡಾ. ಜಿಎಸ್‌ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು ಮೂವರು ಸದಸ್ಯರು ಸೋಮವಾರ ರಾಜೀನಾಮೆ ನೀಡಿದರು. ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಪ್ರೊಫೆಸರ್‌ ಎಸ್‌.ಜಿ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪ್ರತಿಷ್ಠಾನದ ಸದಸ್ಯರುಗಳಾದ ಡಾ. ಎಚ್‌.ಎಸ್‌. ರಾಘವೇಂದ್ರ ರಾವ್‌, ಡಾ. ಚಂದ್ರ ಶೇಖರ ನಂಗಲಿ, ಡಾ. ನಟರಾಜ ಬೂದಾಳು ಅವರು ಕೂಡಾ ರಾಜೀನಾಮೆಗೆ ನೀಡುವುದಾಗಿ ಪತ್ರದಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...