Homeಚಳವಳಿಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪನವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ.

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಬೆಳೆಯುತ್ತಲೆ ಇದೆ. ಹೆಚ್ಚುತ್ತಿರುವ ಜನಾಕ್ರೋಶದ ನಡುವೆಯೇ ಪಠ್ಯ ಬೋಧನೆ ಮಾಡಲು ಸರ್ಕಾರ ಪಟ್ಟು ಹಿಡಿದಿದೆ. ಸರ್ಕಾರದ ಈ ಕ್ರಮಕ್ಕೆ ಮಾಜಿ ಸ್ಪೀಕರ್, ಹಾಲಿ ಶಾಸಕರಾದ ಕೆ.ಆರ್ ರಮೇಶ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾವು ವಿಷ ಉಂಡು ಅದರ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಪಠ್ಯ ವಿವಾದದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತರಾತುರಿಯಲ್ಲಿ ತೆಗೆದುಕೊಂಡಿರುವ ನಿರ್ಣಯಗಳು ರಾಜ್ಯದ ನಾಗರೀಕರ ಪ್ರಜ್ಞೆಯನ್ನು ತೀವ್ರವಾಗಿ ನೋಯಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳ ವಿಷಯದಲ್ಲಿ ಅತ್ಯಂತ ಜವಾಬ್ದಾರಿ ಹಾಗೂ ಸಂವೈಧಾನಿಕ ಪ್ರಜ್ಞೆವುಳ್ಳವರಾಗಿ ಇಡೀ ನಾಡು ಹೆಮ್ಮೆಪಡತಕ್ಕಂಥ ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪ ಇವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ ಎಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

“ಬೌದ್ಧ ಧರ್ಮದ ಉದಯ ಜಡ್ಡುಗಟ್ಟಿದ ವೈದಿಕ ಸಂಪ್ರದಾಯಗಳ ವಿರುದ್ಧ ಸಹಜವಾಗಿಯೇ ಜನ್ಮತಾಳಿತು. ವಿಶ್ವದ ಅತಿದೊಡ್ಡ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್‌ರವರು ಇದರ ಇಡೀ ಇತಿಹಾಸವನ್ನು ತಮ್ಮ Triumph of Brahmanism ಎಂಬ ಪುಸ್ತಕದಲ್ಲಿ ವಿವರಿಸಿದ್ದಾರೆ. ಬರಗೂರು ರಾಮಚಂದ್ರಪ್ಪರವರಂಥ ಒಬ್ಬ ಸಂವೇದನಾಶೀಲ, ಸಂವಿಧಾನಾತ್ಮಕ ಬದ್ಧತೆಯುಳ್ಳ ಮನಸ್ಸಿನ ಮತ್ತು ಧಮನಿತರ ನೋವನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ಪರಿಚಯಿಸುವ ಭೌದ್ಧಿಕ ಮತ್ತು ನೈತಿಕ ಸಾಮರ್ಥ್ಯ ಇದ್ದವರು. ಇಂಥವರ ಅಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪುನರ್‌ಪರಿಷ್ಕರಣೆ ಮಾಡಬೇಕಾಗಿದ್ದಲ್ಲಿ ಒಂದು ಜವಾಬ್ದಾರಿಯುತ ಸರ್ಕಾರ ತನ್ನ ಕನಿಷ್ಟ ವಿವೇಚನೆಯನ್ನಾದರೂ ತೋರಿಸಬೇಕಾಗಿತ್ತು” ಎಂದು ಅವರು ತಿಳಿಸಿದ್ದಾರೆ.

ಪುನರ್‌ರಚಿತ ಸಮಿತಿಯಲ್ಲಿ ಇರುವ ಎಲ್ಲ ಸದಸ್ಯರು ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಬ್ರಾಹ್ಮಣರೇ ಆಗಿರುತ್ತಾರೆ. ಬುದ್ಧ, ಬಸವ, ಅಂಬೇಡ್ಕರ್‌ರವರ ಆಲೋಚನೆಗಳನ್ನು ವಿರೋಧಿಸುವವರೇ ಆಗಿರುತ್ತಾರೆ. ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ
ಹಿನ್ನೆಲೆಯಾಗಲಿ ಅಥವಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಾಗೂ ಸಾರಸ್ವತ ಲೋಕಗಳಲ್ಲಿ ಇವರ ಸ್ಥಾನಮಾನದ ಬಗ್ಗೆ ಎಲ್ಲವೂ ನಿಗೂಢವಾಗಿದೆ. ಮನುಕುಲದ ಪ್ರವಾದಿ, ಶೂದ್ರ ಪ್ರಪಂಚದ ಮೌಡ್ಯಕ್ಕೆ ತನ್ನ ಜ್ಞಾನ ಕಿರಣಗಳನ್ನು ಹರಿಸಿ ಮಲಗಿದ್ದವರನ್ನು ಎಬ್ಬಿಸಿದ ಮಹಾನ್‌ಚೇತನ ಕುವೆಂಪುರವರ ಬಗ್ಗೆಯೂ ಸಹ ಅಗೌರವ ತೋರಿಸುವ ಕುತ್ಸಿತ ಕ್ರಿಮಿಗಳು ವಿರಾಜಮಾನರಾಗುತ್ತಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದು ರಮೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಹುಶಃ ಇವರ ಪ್ರಯತ್ನಗಳು ಇತಿಹಾಸವನ್ನು ತಿರುಚಲು ಎಳೆ ಪ್ರಾಯದ ಮಕ್ಕಳೇ ಸೂಕ್ತ ವೇದಿಕೆ ಎಂದು ಮುಂದೆ ಹೊರಟಂತೆ ಕಾಣುತ್ತದೆ. ಗಾಂಧಿಯನ್ನು ಬಲಿತೆಗೆದುಕೊಂಡ ದೇಶ ಭಕ್ತರಿಗೆ ಸಹಜವಾಗಿಯೇ ಕೇಶವ್ ಬಲಿರಾಂ ಹಡವಾರ್‌ರವರು ಸ್ವಾತಂತ್ರ್ಯ ಹೋರಾಟಗಾರರಾಗಿ ಕಾಣುವುದು ಸಮಂಜಸವಾಗಿಯೇ ಇದೆ. ಆದ್ದರಿಂದಲೇ ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ 45 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಂಥ ಯಾವುದೇ ಸಂದಿಗ್ಧತೆ ಬಂದಾಗ ನಾನು ಯಾವುದೇ ಸ್ಥಾನದಲ್ಲಿದ್ದರೂ ಮುಕ್ತ ಮನಸ್ಸಿನಿಂದ ನಿರ್ಭಯವಾಗಿ ವಿಧಾನಸಭೆಯಲ್ಲಿ ನನ್ನ ನಿಲುವನ್ನು ವ್ಯಕ್ತಪಡಿಸುತ್ತಿದ್ದೆ. ಪ್ರಸ್ತುತ ಸನ್ನಿವೇಶದಲ್ಲಿ ವಿಧಾನಸಭೆಯ ಅಧಿವೇಶನ ಇಲ್ಲದ ಕಾರಣ ಈ ಪತ್ರಿಕಾ ಹೇಳಿಕೆ ನನ್ನ ನಿಲುವನ್ನು ಬಹಿರಂಗಪಡಿಸಲು ಅನಿವಾರ್ಯವಾಗಿದೆ. ಪುಜಾತಂತ್ರದ ಹಿತದೃಷ್ಟಿಯಿಂದ ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಗಳು ಈ ಗೊಂದಲಕ್ಕೆ ಇತಿಶ್ರೀ ಹಾಡಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿಸುತ್ತೇನೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...