Homeಮುಖಪುಟಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ.

- Advertisement -
- Advertisement -

ಇತಿಹಾಸದಲ್ಲಿ ಯಾವುದೇ ಜನಾಂಗ, ಯಾವುದೇ ಧರ್ಮವನ್ನು ನಿರಾಕರಿಸಿ ಅಭಿವೃದ್ದಿಹೊಂದಿದ ದೇಶಗಳು ಕಾಣುವುದಿಲ್ಲ. ಅದೇ ರೀತಿ ಭಾರತವು ಸಹ ಯಾವುದೇ ಧರ್ಮ ನಿರಾಕರಿಸಿ ಮುನ್ನಡೆಯಲು ಸಾಧ್ಯವಿಲ್ಲ ಎಂದು ಕೇರಳದ ಶಾಸಕ ಕೆ.ಟಿ. ಜಲೀಲ್ ಅಭಿಪ್ರಾಯಪಟ್ಟರು.

ಮಂಗಳೂರಿನಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿರುವ ಮುಸ್ಲಿಂ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಯಾವುದನ್ನೂ ಭಾರತ ನಿರಾಕರಿಸುವುದಿಲ್ಲ ಎಂಬ ನಿಟ್ಟಿನಲ್ಲಿ ವಿಶ್ವದಾದ್ಯಂತ ಹೆಸರು ಹೊಂದಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯಾತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು. ನಮ್ಮ ದೇಶವು ಯಾವುದೇ ಧರ್ಮವನ್ನು ಯಾವುದೇ ಕಾಲದಲ್ಲಿ ನಿರಾಕರಿಸಿಲ್ಲ” ಎಂದರು.

“ಹಿಂದೂ ಧರ್ಮದ ಅಶೋಕ ಚಕ್ರವರ್ತಿ ಕಳಿಂಗ ಯುದ್ದದ ನಂತರ ಬೌಧ್ಧ ಧರ್ಮ ಪಾಲಿಸಿದರು. ಅವರು ಬೌದ್ಧ ಧರ್ಮ ಸ್ವೀಕರಿಸಿದ ನಂತರ ಅವರನ್ನು ಯಾರೂ ಪ್ರಶ್ನಿಸಿಲ್ಲ. ಅದೇ ರೀತಿ ಮುಸ್ಲಿಂ ರಾಜರು 900 ವರ್ಷಗಳ ಕಾಲ ಆಡಳಿತ ನಡೆಸಿದರು. ಒಂದು ವೇಳೆ ಅವರು ಧರ್ಮವನ್ನು ಆಡಳಿತದಲ್ಲಿ ಜೊತೆಯಾಗಿಸಿದ್ದರೆ ಇಷ್ಟೊಂದು ಧೀರ್ಘ ಕಾಲ ಆಡಳಿತ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭಯಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಬಹದ್ದೂರೂ ಶಾ ಜಫಾರ್‌ರನ್ನು ದೇಶದ ಬಹಸಂಖ್ಯಾತ ಹಿಂದೂಗಳು ತಮ್ಮ ನಾಯಕರಾಗಿ ಆಯ್ಕೆ ಮಾಡಿದ್ದರು” ಎಂಬದನ್ನು ಅವರು ಸ್ಮರಿಸಿದರು.

ಮೊಘಲರ ಆಡಳಿತ ಕೊನೆಗೊಂಡಿದ್ದು ಧರ್ಮದ ಕಾರಣಕ್ಕೆ ಅಲ್ಲ. ಬದಲಾಗಿ ಬ್ರಿಟೀಷರ ಕಾರಣದಿಂದಾಗಿದೆ. ಯಾವುದೇ ಧರ್ಮ ಆಚರಿಸದ ಜವಾಹರಲಾಲ್ ನೆಹರೂ ದೇಶವನ್ನು 16 ವರ್ಷ ಆಡಳಿತ ನಡೆಸಿದ್ದಾರೆ. ಅವರನ್ನು ಯಾರೂ ಪ್ರಶ್ನಿಸಲಿಲ್ಲ. ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ ಎಂದರು.

ಅಟಲ್ ಬಿಹಾರಿ ವಾಜಪೇಯಿಯವರು ಆಡಳಿತ ಮಾಡಬೇಕಾದರೆ ಭಾರತ ಇಷ್ಟು ಕೋಮು ದ್ರುವೀಕರಣಗೊಂಡಿರಲಿಲ್ಲ. ವಾಜಪೇಯಿ ನಂತರ ಬಂದ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಒಂದು ಸಮುದಾಯವನ್ನು ತಿರಸ್ಕಾರ ಮಾಡುತ್ತಾ ಬಂದಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

“ಅಲ್ಪಸಂಖ್ಯಾತರನ್ನು ತಮ್ಮ ದೇಶದಿಂದ ದೂರ ಮಾಡಿದ ಎಲ್ಲಾ ದೇಶಗಳು ಕೂಡಾ ನಾಶವಾಗಿದೆ. ಇದಕ್ಕೆ ಜರ್ಮನ್ ಒಂದು ಉದಾಹರಣೆ. ಜರ್ಮನ್‌ನಲ್ಲಿ ಯಹೂದಿಗಳನ್ನು ಓಡಿಸದಿದ್ದರೆ ಜರ್ಮನ್ ಇಂದು ವಿಶ್ವದ ಶಕ್ತಿಶಾಲಿ ದೇಶವಾಗಿರುತ್ತಿತ್ತು. ಪ್ರಾನ್ಸ್, ಸ್ಪೇನ್‌ನಲ್ಲಿ ಕೂಡಾ ಇದೆ ನಡೆದಿದೆ. ಈ ದೇಶ ತೊರೆದುಹೋದ ಜನರು ತಾವು ನೆಲೆ ನಿಂತ ದೇಶಗಳನ್ನು ಅಭಿವೃದ್ಧಿ ಮಾಡಿದರು. ಹಾಗೆಯೇ ಭಾರತವು ಯಾವುದೇ ಜನಾಂಗ, ಧರ್ಮವನ್ನು ನಿರಾಕರಿಸಿ ದೇಶ ಮುನ್ನಡೆಸಲು ಸಾಧ್ಯವಿಲ್ಲ. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಉದ್ಯಾನದಲ್ಲಿ ಹಲವು ಬಗೆಯ ಹೂವುಗಳಿದ್ದರೆ ಅದು ನೋಡಲು ಸುಂದರ. ಹಾಗೆಯೇ ಭಾರತದಲ್ಲಿ ಹಲವಾರು ಸಂಸ್ಕೃತಿ ಇದ್ದರೆ ಅದು ನೋಡಲು ಸುಂದರ” ಎಂದು ಜಲೀಲ್ ಅಭಿಪ್ರಾಯಪಟ್ಟರು.

ವಿಭಜನೆ ನಂತರ ಧರ್ಮದ ಆಧಾರದಲ್ಲಿ ನಿರ್ಮಾಣವಾದ ಪಾಕಿಸ್ತಾನ ರಾಷ್ಟ್ರವು ಎಂದಿಗೂ ನೆಮ್ಮದಿಯಿಂದ ಇರುವ ದೇಶವಾಗಿಲ್ಲ. ಅಲ್ಲಿ ಹಿಂಸೆ, ದಾಳಿ ತೀವ್ರ ಮಟ್ಟಕ್ಕೆ ಏರಿದೆ. ಇದನ್ನು ಭಾರತ ಪಾಠವನ್ನಾಗಿ ತೆಗೆದುಕೊಳ್ಳಬೇಕು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು. ಜಾತ್ಯಾತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ. ಆದರೆ ಜಾತ್ಯಾತೀತತೆ ಮೇಲೆ ದಾಳಿ ನಡೆಯುತ್ತಿದೆ. ಆ ದಾಳಿಯನ್ನು ಹಿಮ್ಮೆಟ್ಟಿಸುವ ಮೂಲಕ ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು ಎಂದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಯವರ “ನೇತ್ರಾವತಿಯಲ್ಲಿ ನೆತ್ತರು” ಕರಾವಳಿಯ ಕೋಮು ಹಿಂಸೆಯ ನೈಜ ಪ್ರಕರಣಗಳು ಪುಸ್ತಕವನ್ನು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಬಿಡುಗಡೆ ಮಾಡಿದರು. ಬಿ.ಎಂ.ಹನೀಫ್ ರವರ ಸೆಕ್ಯುಲರ್ ಸೇನಾನಿ ಸುಭಾಷ್ ಚಂದ್ರ ಬೋಸ್ ಪುಸ್ತಕವನ್ನು ಸಾಹಿತಿಗಳಾದ ಕೆ.ಶರೀಫಾರವರು ಬಿಡುಗಡೆ ಮಾಡಿದರು.

ಸಿಪಿಐಎಂ ಪಕ್ಷವು `ಜಾತ್ಯಾತೀತತೆ, ಸಬಲೀಕರಣ ಮತ್ತು ಮುನ್ನಡೆ’ ಎಂಬ ಘೋಷಣೆಯಡಿ ಕರ್ನಾಟಕದ ಮುಸ್ಲಿಮರ ನೋವು ನಲಿವುಗಳ ಅನಾವರಣ ಎಂಬ ವಿಷಯದ ಕುರಿತು ಎರಡು ದಿನಗಳ ರಾಜ್ಯ ಮಟ್ಟದ ಎರಡು ದಿನಗಳ ಸಮಾವೇಶದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಡಾ.ಚಂದ್ರಪೂಜಾರಿ, ಡಾ.ಕೆ.ಪ್ರಕಾಶ್, ಮುನೀರ್ ಕಾಟಿಪಳ್ಳ, ಸುನೀಲ್ ಕುಮಾರ್ ಬಜಾಲ್ ಮುಂತಾದವರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...