Homeಚಳವಳಿಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿ ಪಠ್ಯ ಕೋಮುವಾದೀಕರಣ ಮಾಡಿರುವುದನ್ನು ವಿರೋಧಿಸಿ ಪಠ್ಯ ಅನುಮತಿ ನಿರಾಕರಣೆ ಪರ್ವ ಮುಂದುವರೆದಿದೆ. ಹಿರಿಯ ಸಾಹಿತಿ ದೇವನೂರ ಮಹಾದೇವರಿಂದ ಆರಂಭಗೊಂಡ ನನ್ನ ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನರವರು ಸಹ ಕೈ ಜೋಡಿಸಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರಿಗೆ ಪತ್ರ ಬರೆದಿರುವ ಪ್ರೊ. ಕೆ.ಎಸ್ ಮಧುಸೂದನರವರು, “ಕರ್ನಾಟಕ ರಾಜ್ಯದ 9ನೇ ತರಗತಿಯ ದ್ವೀತಿಯ ಭಾಷಾ ಕನ್ನಡ ಪುಸ್ತಕ “ತಿಳಿಗನ್ನಡ” ಪಠ್ಯ ಪುಸ್ತಕ ರಚನಾ ಸಮಿತಿ ಅಧ್ಯಕ್ಷನಾಗಿ ನಾನು ಕಾರ್ಯ ನಿರ್ವಹಿಸಿದ್ದೆನು. ಈಗಲೂ ನನ್ನ ಅಧ್ಯಕ್ಷತೆಯಲ್ಲಿ ಅದೇ ಪಠ್ಯ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಕರ್ನಾಟಕದ ನಾಡು ನುಡು ಸಂಸ್ಕೃತಿಯ ಅಂತಃಸಾಕ್ಷಿಯಂತಿರುವ ಮಾನ್ಯ ಕುವೆಂಪುರವರನ್ನು ಈಗನ ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರು ಲಘುವಾಗಿ ಗೇಲಿ ಮಾಡಿದ್ದಕ್ಕೆ ಮನನೊಂದು ಹಾಗೂ ಪ್ರತಿಭಟಿಸುತ್ತಾ ಭಾಷಾ ಪಠ್ಯಪುಸ್ತಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ಪಠ್ಯದಲ್ಲಿ ನನ್ನ ಹೆಸರು ಮತ್ತು ನಾನು ಬರೆದ ಪಾಠ ಮುನ್ನ ಪ್ರಸ್ತಾವನೆಯನ್ನು ಸೇರಿಸಬಾರದು” ಎಂದು ಮನವಿ ಮಾಡಿದ್ದಾರೆ.

ಅದೇ ರೀತಿಯಾಗಿ ನಿವೃತ್ತ ತರ್ಕ ಶಾಸ್ತ್ರ ಉಪನ್ಯಾಸಕರಾದ ಚಂದ್ರಶೇಖರ ತಾಳ್ಯರವರು 6ನೇ ತರಗತಿಯ ದ್ವಿತೀಯ ಭಾಷಾ ಪಠ್ಯದಲ್ಲಿ ನನ್ನ ಒಂದು ಸೋಜಿಗದ ಪದ್ಯ ಎಂಬ ಕವಿತೆ ಸೇರ್ಪಡೆಯಾಗಿದೆ. ಅದನ್ನು ಪಠ್ಯವಾಗಿ ಬೋಧಿಸಲು ನನ್ನ ಅನುಮತಿಯನ್ನು ವಾಪಸ್ ಪಡೆಯುತ್ತಿರುವೆ ಎಂದು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ತಮ್ಮ ಪತ್ರದಲ್ಲಿ “ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಶಿಕ್ಷಣ ಕ್ಷೇತ್ರದ ಮೇಲಿನ ಸಾಂಸ್ಕೃತಿಕ ಹಲ್ಲೆ ಮಿತಿ ಮೀರುತ್ತಿದೆ. ಅದೀಗ ಪಠ್ಯಕ್ರಮದ ಮೇಲೂ ತನ್ನ ಕರಿನೆರಳು ಚಾಚುತ್ತಿದೆ. ಅಸಾಂವಿಧಾನಿಕ ನಿರ್ಧಾರಗಳಿಂದ ಇಡೀ ಶೈಕ್ಷಣಿಕ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಅನೈತಿಕ ನಡೆ ನನ್ನಂಥ ಲೇಖಕನನ್ನು ಅಧೀರನನ್ನಾಗಿ ಮಾಡುತ್ತದೆ. ಇದು ಕನ್ನಡ ಪರಂಪರೆಯನ್ನು ಕುಬ್ಜಗೊಳಿಸುವ ಅಕ್ರಮ ನಡೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪಠ್ಯ ಪರಿಷ್ಕರಣೆಯ ನೆಪದಲ್ಲಿ ನಡೆಯುತ್ತಿರುವ ಈ ಸಂಸ್ಕ್ರತಿ ತಿರುಚೀಕರಣ ನಮ್ಮ ಪರಂಪರಾಗತ ಸಂಸ್ಕೃತಿಯನ್ನೇ ವಿರೂಪಗೊಳಿಸವಂತಿಹುದು. ಇದನ್ನು ತಾವು ಗಮನಿಸಬೇಕು ಎನ್ನುವುದು ನನ್ನ ಆಗ್ರಹ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನೂ ನಾಡಿನ ಸಾಹಿತಿಗಳು ಈ ಮರುಪರೀಕ್ಷೆಗೆ ಅಭಿಪ್ರಾಯ ಮಂಡಿಸಬೇಕು… ಮುಖ್ಯವಾಗಿ ನಮ್ಮ ಚೆಡ್ಡಿ ಸಾಹಿತಿ ಎಸ್. ಎಲ್ ಭೈರಪ್ಪ ಅವರ ಅಭಿಪ್ರಾಯ ಏನು ಅಂತಾ ತಿಳಿಯಬೇಕಾಗಿದೆ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...