Homeಚಳವಳಿಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿ ಪಠ್ಯ ಕೋಮುವಾದೀಕರಣ ಮಾಡಿರುವುದನ್ನು ವಿರೋಧಿಸಿ ಪಠ್ಯ ಅನುಮತಿ ನಿರಾಕರಣೆ ಪರ್ವ ಮುಂದುವರೆದಿದೆ. ಹಿರಿಯ ಸಾಹಿತಿ ದೇವನೂರ ಮಹಾದೇವರಿಂದ ಆರಂಭಗೊಂಡ ನನ್ನ ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನರವರು ಸಹ ಕೈ ಜೋಡಿಸಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರಿಗೆ ಪತ್ರ ಬರೆದಿರುವ ಪ್ರೊ. ಕೆ.ಎಸ್ ಮಧುಸೂದನರವರು, “ಕರ್ನಾಟಕ ರಾಜ್ಯದ 9ನೇ ತರಗತಿಯ ದ್ವೀತಿಯ ಭಾಷಾ ಕನ್ನಡ ಪುಸ್ತಕ “ತಿಳಿಗನ್ನಡ” ಪಠ್ಯ ಪುಸ್ತಕ ರಚನಾ ಸಮಿತಿ ಅಧ್ಯಕ್ಷನಾಗಿ ನಾನು ಕಾರ್ಯ ನಿರ್ವಹಿಸಿದ್ದೆನು. ಈಗಲೂ ನನ್ನ ಅಧ್ಯಕ್ಷತೆಯಲ್ಲಿ ಅದೇ ಪಠ್ಯ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಕರ್ನಾಟಕದ ನಾಡು ನುಡು ಸಂಸ್ಕೃತಿಯ ಅಂತಃಸಾಕ್ಷಿಯಂತಿರುವ ಮಾನ್ಯ ಕುವೆಂಪುರವರನ್ನು ಈಗನ ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರು ಲಘುವಾಗಿ ಗೇಲಿ ಮಾಡಿದ್ದಕ್ಕೆ ಮನನೊಂದು ಹಾಗೂ ಪ್ರತಿಭಟಿಸುತ್ತಾ ಭಾಷಾ ಪಠ್ಯಪುಸ್ತಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ಪಠ್ಯದಲ್ಲಿ ನನ್ನ ಹೆಸರು ಮತ್ತು ನಾನು ಬರೆದ ಪಾಠ ಮುನ್ನ ಪ್ರಸ್ತಾವನೆಯನ್ನು ಸೇರಿಸಬಾರದು” ಎಂದು ಮನವಿ ಮಾಡಿದ್ದಾರೆ.

ಅದೇ ರೀತಿಯಾಗಿ ನಿವೃತ್ತ ತರ್ಕ ಶಾಸ್ತ್ರ ಉಪನ್ಯಾಸಕರಾದ ಚಂದ್ರಶೇಖರ ತಾಳ್ಯರವರು 6ನೇ ತರಗತಿಯ ದ್ವಿತೀಯ ಭಾಷಾ ಪಠ್ಯದಲ್ಲಿ ನನ್ನ ಒಂದು ಸೋಜಿಗದ ಪದ್ಯ ಎಂಬ ಕವಿತೆ ಸೇರ್ಪಡೆಯಾಗಿದೆ. ಅದನ್ನು ಪಠ್ಯವಾಗಿ ಬೋಧಿಸಲು ನನ್ನ ಅನುಮತಿಯನ್ನು ವಾಪಸ್ ಪಡೆಯುತ್ತಿರುವೆ ಎಂದು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ತಮ್ಮ ಪತ್ರದಲ್ಲಿ “ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಶಿಕ್ಷಣ ಕ್ಷೇತ್ರದ ಮೇಲಿನ ಸಾಂಸ್ಕೃತಿಕ ಹಲ್ಲೆ ಮಿತಿ ಮೀರುತ್ತಿದೆ. ಅದೀಗ ಪಠ್ಯಕ್ರಮದ ಮೇಲೂ ತನ್ನ ಕರಿನೆರಳು ಚಾಚುತ್ತಿದೆ. ಅಸಾಂವಿಧಾನಿಕ ನಿರ್ಧಾರಗಳಿಂದ ಇಡೀ ಶೈಕ್ಷಣಿಕ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಅನೈತಿಕ ನಡೆ ನನ್ನಂಥ ಲೇಖಕನನ್ನು ಅಧೀರನನ್ನಾಗಿ ಮಾಡುತ್ತದೆ. ಇದು ಕನ್ನಡ ಪರಂಪರೆಯನ್ನು ಕುಬ್ಜಗೊಳಿಸುವ ಅಕ್ರಮ ನಡೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪಠ್ಯ ಪರಿಷ್ಕರಣೆಯ ನೆಪದಲ್ಲಿ ನಡೆಯುತ್ತಿರುವ ಈ ಸಂಸ್ಕ್ರತಿ ತಿರುಚೀಕರಣ ನಮ್ಮ ಪರಂಪರಾಗತ ಸಂಸ್ಕೃತಿಯನ್ನೇ ವಿರೂಪಗೊಳಿಸವಂತಿಹುದು. ಇದನ್ನು ತಾವು ಗಮನಿಸಬೇಕು ಎನ್ನುವುದು ನನ್ನ ಆಗ್ರಹ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನೂ ನಾಡಿನ ಸಾಹಿತಿಗಳು ಈ ಮರುಪರೀಕ್ಷೆಗೆ ಅಭಿಪ್ರಾಯ ಮಂಡಿಸಬೇಕು… ಮುಖ್ಯವಾಗಿ ನಮ್ಮ ಚೆಡ್ಡಿ ಸಾಹಿತಿ ಎಸ್. ಎಲ್ ಭೈರಪ್ಪ ಅವರ ಅಭಿಪ್ರಾಯ ಏನು ಅಂತಾ ತಿಳಿಯಬೇಕಾಗಿದೆ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...