Homeಚಳವಳಿಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

ಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

- Advertisement -
- Advertisement -

ವಿವಾದಿತ ಶಾಲಾ ಪಠ್ಯವನ್ನು ಹಿಂಪಡೆಯಬೇಕು ಮತ್ತು ರಾಷ್ಟ್ರಕವಿ ಕುವೆಂಪು, ನಾಡಗೀತೆ ಹಾಗೂ ನಾಡಧ್ವಜವನ್ನು ಅವಮಾನಿಸಿರುವ ರೋಹಿತ್‌ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು “ನಾಡಕವಿ ಕುವೆಂಪು ರಾಜ್ಯ ಮಾತ್ರವಲ್ಲ, ಈ ದೇಶದ ಹೆಮ್ಮೆ. ಆದರೆ, ಅವರನ್ನೇ ಅವಮಾನಿಸಿರುವುದು ಈ ನಾಡಿನ ಅಸ್ಮಿತೆಗೆ ಮಾಡಿದೆ ಅವಮಾನ. ಇನ್ನೂ ನಾಡಗೀತೆ ಮತ್ತು ನಾಡಧ್ವಜಕ್ಕೆ ಅಪಹಾಸ್ಯ ಮಾಡಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಲಾ ಮಕ್ಕಳು ಪ್ರತಿನಿತ್ಯ ಹಾಡುವ ನಾಡಗೀತೆಯನ್ನೇ ತಿರುಚಿದ ರೋಹಿತ್ ಚಕ್ರತೀರ್ಥನಂತವರಿಂದ ಮಕ್ಕಳಿಗೆ ಎಂತಹ ಪಠ್ಯ ರಚಿಸಲು ಸಾಧ್ಯ? ಹೀಗಾಗಿ ಕೂಡಲೇ ಆತನನ್ನು ಬಂಧಿಸಬೇಕು, ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

“ರಾಜ್ಯ ಸರ್ಕಾರ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಶಾಲಾ ಪಠ್ಯ ಪುಸ್ತಕಗಳನ್ನು ತರಾತುರಿಯಲ್ಲಿ ಮರು ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರನ್ನು ನೇಮಿಸಿದೆ. ಅವರ ಶಿಫಾರಸಿನ ಅನ್ವಯ ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯಗಳಲ್ಲಿ ಬದಲಾವಣೆ ತಂದಿರುವುದು ಖಂಡನಾರ್ಹ. ವಿವಾದ ಇನ್ನೂ ತಣ್ಣಗಿರುವಾಗಲೇ ಮರು ಪರಿಷ್ಕರಿಸಿದ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ಹಂಚಲು ಸರ್ಕಾರ ಹೊರಟಿದೆ. ಸರ್ಕಾರದ ಈ ಕ್ರಮ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದ್ದು ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ” ಎಂದು ಅಭಿಪ್ರಾಯಪಟ್ಟರು.

“ಮೊದಲನೆಯದಾಗಿ ಪಠ್ಯ ಪುಸ್ತಕಗಳಲ್ಲಿ ಯಾವುದೇ ಬದಲಾವಣೆ ತರುವುದನ್ನು ಯಾವುದೇ ಸರ್ಕಾರ ಮನಸಿಗೆ ಬಂದ ರೀತಿಯಲ್ಲಿ ಮಾಡುವಂತಿಲ್ಲ. ಅದಕ್ಕೆ ತನ್ನದೇ ರೀತಿ ನೀತಿ ಘನತೆಗಳಿರುತ್ತವೆ. ರಾಷ್ಟ್ರೀಯ ಪಠ್ಯ ಚೌಕಟ್ಟುಗಳ ಮಾರ್ಗಸೂಚಿ ಇರುತ್ತದೆ. ಸಂವಿಧಾನದ ತತ್ವಗಳಿಗೆ ಅನುಸಾರವಾಗಿ ಇಂತಹ ಸಮಿತಿಗಳನ್ನು ರಚಿಸಬೇಕಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಮೇಲ್ನೋಟಕ್ಕೆ ಕಾಣುವಂತೆ ಎಲ್ಲಾ ರೀತಿ ನೀತಿಗಳನ್ನು ಗಾಳಿಗೆ ತೂರಿ ಯಾರದೋ ಅಜೆಂಡಾವನ್ನು ಶಿಕ್ಷಣದಲ್ಲಿ ತೂರಿಸಲು ಒಂದೇ ಸಿದ್ದಾಂತ ಸಂಘಟನೆಯ ಬೆಂಬಲಿಗರನ್ನು ಸಮಿತಿಯಲ್ಲಿ ಇರಿಸಿ ದುಂಡಾವರ್ತನೆ ಪ್ರದರ್ಶಿಸಿದೆ” ಎಂದು ಟಿ ಎ ನಾರಾಯಣಗೌಡ ಕಿಡಿಕಾರಿದರು.

“ಕನ್ನಡದ ಸಂಸ್ಕೃತಿ ಪರಂಪರೆಗೆ ತಕ್ಕುದಾಗಿ ಇದ್ದಂತಹ ಹಲವಾರು ಪಠ್ಯಗಳನ್ನು ಯಾವುದೇ ಕಾರಣ ನೀಡದೇ ತೆಗದು ಹಾಕಲಾಗಿದೆ. ಕನ್ನಡದ ಹೆಮ್ಮೆಯ ಸಾಹಿತಿ ಲೇಖಕರಾದ ಪಿ ಲಂಕೇಶ್, ಸಾರಾ ಅಬೂಬಕರ್, ಗೋರೂರು ರಾಮಸ್ವಾಮಿ ಅಯ್ಯಂಗಾರ್, ಅರವಿಂದ ಮಾಲಗತ್ತಿ, ಬಿ ಟಿ ಲಲಿತಾನಾಯಕ್ ಮೊದಲಾದವರ ಮೌಲಿಕ ಪಠ್ಯಗಳನ್ನೂ ಕಿತ್ತುಹಾಕಿ ಕನ್ನಡ ಚಿಂತನೆಯನ್ನೇ ಅಪಮಾನಿಸಲಾಗಿದೆ” ಎಂದು ಆಕ್ರೋಶ ಹೊರಹಾಕಿದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಿಂದ ಪೆರಿಯಾರ್ ಹಾಗೂ ನಾರಾಯಣಗುರುಗಳ ಪಾಠ ತೆಗೆದು ಹಾಕಲಾಗಿದೆ. ಇವುಗಳ ಬದಲಿಗೆ ಸಂಘಪರಿವಾರದ ಸಿದ್ದಾಂತ ಆರ್‌ಎಸ್‌ಎಸ್‌ ಸಂಘಟನೆಯ ಪರವಾದ ಪಠ್ಯಗಳನ್ನು ತುರುಕಲಾಗಿದೆ. ಆ ಪಾಠಗಳು ಕುವೆಂಪು ಹೇಳಿದ ವಿಶ್ವಮಾನವತೆ ವಿರುದ್ಧ ದಿಕ್ಕಿನಲ್ಲಿವೆ. ಇನ್ನು ರಾಜ್ಯ ಸರ್ಕಾರ ನೇಮಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞರಿರುವುದಿಲ್ಲ” ಎಂದರು.

ಸ್ವತಃ ರೋಹಿತ್ ಚಕ್ರತೀರ್ಥ ಒಬ್ಬ ಕನ್ನಡ ವಿರೋಧಿ ಕಿಡಿಗೇಡಿ ಎಂಬುದನ್ನು ಹಲವಾರು ಸಲ ತೋರಿಸಿಕೊಂಡ ವ್ಯಕ್ತಿ. ಇವರನ್ನು ಸಮರ್ಥನೆ ಮಾಡಿಕೊಳ್ಳಲು ಶಿಕ್ಷಣ ಸಚಿವರು ಆತ ಸಿಇಟಿ ಐಐಟಿ ಪ್ರೊಫೆಸರ್‌ ಎಂದು ಹಸಿ ಹಸಿ ಸುಳ್ಳು ಹೇಳಿ ಪೇಚಿಗೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಈ ಪಠ್ಯವನ್ನು ಹಿಂಪಡೆದು, ಹಳೆ ಪಠ್ಯವನ್ನೇ ಮಕ್ಕಳಿಗೆ ಪೂರೈಸಬೇಕು” ಎಂದು ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೂ ಮುನ್ನ ಕರವೇ ಕಾರ್ಯಕರ್ತರು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ರಾಜ್ಯ ಸರ್ಕಾರ ಮತ್ತು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮತ್ತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕರವೇ ಸಾಮಾಜಿಕ ಜಾಲತಾಣದ ಮುಖ್ಯಸ್ಥ ದಿನೇಶ್ ಕುಮಾರ್ ಜೊತೆಗಿದ್ದರು.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜಾತಂತ್ರಕ್ಕೆ ಕೊಟ್ಡ ಓಟಿನಿಂದ ಗೆದ್ದ ಪ್ರಜಾ ದ್ರೋಹಿಗಳಾದ ಶಾಸಕರನ್ನು ಖರೀದಿಸಿ ಸೆಕ್ಯುಲರ್ ಸರಕಾರವನ್ನು ಉರುಳಿಸಿ ಸರಕಾರ ಮಾಡಿಕೊಂಡ ಧರ್ಮಾಂಧ ಕೋಮುವಾದಿಗಳು ಪಾಠ ಪುಸ್ತಕವನ್ನೇ ಬುಡಮೇಲು‌ ಮಾಡಹೊರಟಿರುವುದು ದೇಶಕ್ಕೇ ಮಾಡಿದ ಅವಮಾನ.

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...