Homeಚಳವಳಿಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

ಕನ್ನಡ ವಿರೋಧಿ ರೋಹಿತ್ ಚಕ್ರತೀರ್ಥನನ್ನು ಗಡಿಪಾರು ಮಾಡಿ: ಟಿ ಎ ನಾರಾಯಣಗೌಡ ಆಗ್ರಹ

- Advertisement -
- Advertisement -

ವಿವಾದಿತ ಶಾಲಾ ಪಠ್ಯವನ್ನು ಹಿಂಪಡೆಯಬೇಕು ಮತ್ತು ರಾಷ್ಟ್ರಕವಿ ಕುವೆಂಪು, ನಾಡಗೀತೆ ಹಾಗೂ ನಾಡಧ್ವಜವನ್ನು ಅವಮಾನಿಸಿರುವ ರೋಹಿತ್‌ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು “ನಾಡಕವಿ ಕುವೆಂಪು ರಾಜ್ಯ ಮಾತ್ರವಲ್ಲ, ಈ ದೇಶದ ಹೆಮ್ಮೆ. ಆದರೆ, ಅವರನ್ನೇ ಅವಮಾನಿಸಿರುವುದು ಈ ನಾಡಿನ ಅಸ್ಮಿತೆಗೆ ಮಾಡಿದೆ ಅವಮಾನ. ಇನ್ನೂ ನಾಡಗೀತೆ ಮತ್ತು ನಾಡಧ್ವಜಕ್ಕೆ ಅಪಹಾಸ್ಯ ಮಾಡಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಲಾ ಮಕ್ಕಳು ಪ್ರತಿನಿತ್ಯ ಹಾಡುವ ನಾಡಗೀತೆಯನ್ನೇ ತಿರುಚಿದ ರೋಹಿತ್ ಚಕ್ರತೀರ್ಥನಂತವರಿಂದ ಮಕ್ಕಳಿಗೆ ಎಂತಹ ಪಠ್ಯ ರಚಿಸಲು ಸಾಧ್ಯ? ಹೀಗಾಗಿ ಕೂಡಲೇ ಆತನನ್ನು ಬಂಧಿಸಬೇಕು, ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

“ರಾಜ್ಯ ಸರ್ಕಾರ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಸಿದ್ಧಪಡಿಸಿದ್ದ ಶಾಲಾ ಪಠ್ಯ ಪುಸ್ತಕಗಳನ್ನು ತರಾತುರಿಯಲ್ಲಿ ಮರು ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರನ್ನು ನೇಮಿಸಿದೆ. ಅವರ ಶಿಫಾರಸಿನ ಅನ್ವಯ ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯಗಳಲ್ಲಿ ಬದಲಾವಣೆ ತಂದಿರುವುದು ಖಂಡನಾರ್ಹ. ವಿವಾದ ಇನ್ನೂ ತಣ್ಣಗಿರುವಾಗಲೇ ಮರು ಪರಿಷ್ಕರಿಸಿದ ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ಹಂಚಲು ಸರ್ಕಾರ ಹೊರಟಿದೆ. ಸರ್ಕಾರದ ಈ ಕ್ರಮ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದ್ದು ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ” ಎಂದು ಅಭಿಪ್ರಾಯಪಟ್ಟರು.

“ಮೊದಲನೆಯದಾಗಿ ಪಠ್ಯ ಪುಸ್ತಕಗಳಲ್ಲಿ ಯಾವುದೇ ಬದಲಾವಣೆ ತರುವುದನ್ನು ಯಾವುದೇ ಸರ್ಕಾರ ಮನಸಿಗೆ ಬಂದ ರೀತಿಯಲ್ಲಿ ಮಾಡುವಂತಿಲ್ಲ. ಅದಕ್ಕೆ ತನ್ನದೇ ರೀತಿ ನೀತಿ ಘನತೆಗಳಿರುತ್ತವೆ. ರಾಷ್ಟ್ರೀಯ ಪಠ್ಯ ಚೌಕಟ್ಟುಗಳ ಮಾರ್ಗಸೂಚಿ ಇರುತ್ತದೆ. ಸಂವಿಧಾನದ ತತ್ವಗಳಿಗೆ ಅನುಸಾರವಾಗಿ ಇಂತಹ ಸಮಿತಿಗಳನ್ನು ರಚಿಸಬೇಕಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಮೇಲ್ನೋಟಕ್ಕೆ ಕಾಣುವಂತೆ ಎಲ್ಲಾ ರೀತಿ ನೀತಿಗಳನ್ನು ಗಾಳಿಗೆ ತೂರಿ ಯಾರದೋ ಅಜೆಂಡಾವನ್ನು ಶಿಕ್ಷಣದಲ್ಲಿ ತೂರಿಸಲು ಒಂದೇ ಸಿದ್ದಾಂತ ಸಂಘಟನೆಯ ಬೆಂಬಲಿಗರನ್ನು ಸಮಿತಿಯಲ್ಲಿ ಇರಿಸಿ ದುಂಡಾವರ್ತನೆ ಪ್ರದರ್ಶಿಸಿದೆ” ಎಂದು ಟಿ ಎ ನಾರಾಯಣಗೌಡ ಕಿಡಿಕಾರಿದರು.

“ಕನ್ನಡದ ಸಂಸ್ಕೃತಿ ಪರಂಪರೆಗೆ ತಕ್ಕುದಾಗಿ ಇದ್ದಂತಹ ಹಲವಾರು ಪಠ್ಯಗಳನ್ನು ಯಾವುದೇ ಕಾರಣ ನೀಡದೇ ತೆಗದು ಹಾಕಲಾಗಿದೆ. ಕನ್ನಡದ ಹೆಮ್ಮೆಯ ಸಾಹಿತಿ ಲೇಖಕರಾದ ಪಿ ಲಂಕೇಶ್, ಸಾರಾ ಅಬೂಬಕರ್, ಗೋರೂರು ರಾಮಸ್ವಾಮಿ ಅಯ್ಯಂಗಾರ್, ಅರವಿಂದ ಮಾಲಗತ್ತಿ, ಬಿ ಟಿ ಲಲಿತಾನಾಯಕ್ ಮೊದಲಾದವರ ಮೌಲಿಕ ಪಠ್ಯಗಳನ್ನೂ ಕಿತ್ತುಹಾಕಿ ಕನ್ನಡ ಚಿಂತನೆಯನ್ನೇ ಅಪಮಾನಿಸಲಾಗಿದೆ” ಎಂದು ಆಕ್ರೋಶ ಹೊರಹಾಕಿದರು.

“ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಿಂದ ಪೆರಿಯಾರ್ ಹಾಗೂ ನಾರಾಯಣಗುರುಗಳ ಪಾಠ ತೆಗೆದು ಹಾಕಲಾಗಿದೆ. ಇವುಗಳ ಬದಲಿಗೆ ಸಂಘಪರಿವಾರದ ಸಿದ್ದಾಂತ ಆರ್‌ಎಸ್‌ಎಸ್‌ ಸಂಘಟನೆಯ ಪರವಾದ ಪಠ್ಯಗಳನ್ನು ತುರುಕಲಾಗಿದೆ. ಆ ಪಾಠಗಳು ಕುವೆಂಪು ಹೇಳಿದ ವಿಶ್ವಮಾನವತೆ ವಿರುದ್ಧ ದಿಕ್ಕಿನಲ್ಲಿವೆ. ಇನ್ನು ರಾಜ್ಯ ಸರ್ಕಾರ ನೇಮಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞರಿರುವುದಿಲ್ಲ” ಎಂದರು.

ಸ್ವತಃ ರೋಹಿತ್ ಚಕ್ರತೀರ್ಥ ಒಬ್ಬ ಕನ್ನಡ ವಿರೋಧಿ ಕಿಡಿಗೇಡಿ ಎಂಬುದನ್ನು ಹಲವಾರು ಸಲ ತೋರಿಸಿಕೊಂಡ ವ್ಯಕ್ತಿ. ಇವರನ್ನು ಸಮರ್ಥನೆ ಮಾಡಿಕೊಳ್ಳಲು ಶಿಕ್ಷಣ ಸಚಿವರು ಆತ ಸಿಇಟಿ ಐಐಟಿ ಪ್ರೊಫೆಸರ್‌ ಎಂದು ಹಸಿ ಹಸಿ ಸುಳ್ಳು ಹೇಳಿ ಪೇಚಿಗೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಈ ಪಠ್ಯವನ್ನು ಹಿಂಪಡೆದು, ಹಳೆ ಪಠ್ಯವನ್ನೇ ಮಕ್ಕಳಿಗೆ ಪೂರೈಸಬೇಕು” ಎಂದು ಟಿ ಎ ನಾರಾಯಣಗೌಡ ಒತ್ತಾಯಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೂ ಮುನ್ನ ಕರವೇ ಕಾರ್ಯಕರ್ತರು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ರಾಜ್ಯ ಸರ್ಕಾರ ಮತ್ತು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮತ್ತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕರವೇ ಸಾಮಾಜಿಕ ಜಾಲತಾಣದ ಮುಖ್ಯಸ್ಥ ದಿನೇಶ್ ಕುಮಾರ್ ಜೊತೆಗಿದ್ದರು.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜಾತಂತ್ರಕ್ಕೆ ಕೊಟ್ಡ ಓಟಿನಿಂದ ಗೆದ್ದ ಪ್ರಜಾ ದ್ರೋಹಿಗಳಾದ ಶಾಸಕರನ್ನು ಖರೀದಿಸಿ ಸೆಕ್ಯುಲರ್ ಸರಕಾರವನ್ನು ಉರುಳಿಸಿ ಸರಕಾರ ಮಾಡಿಕೊಂಡ ಧರ್ಮಾಂಧ ಕೋಮುವಾದಿಗಳು ಪಾಠ ಪುಸ್ತಕವನ್ನೇ ಬುಡಮೇಲು‌ ಮಾಡಹೊರಟಿರುವುದು ದೇಶಕ್ಕೇ ಮಾಡಿದ ಅವಮಾನ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...