Homeಮುಖಪುಟಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ: ಇಂದೋರ್ ಬಿಜೆಪಿ ಶಾಸಕನ ಬಂಧನ. ವಿಡಿಯೊ ನೋಡಿ

ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ: ಇಂದೋರ್ ಬಿಜೆಪಿ ಶಾಸಕನ ಬಂಧನ. ವಿಡಿಯೊ ನೋಡಿ

- Advertisement -
- Advertisement -

ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯರವರ ಮಗ ಹಾಲಿ ಇಂದೋರ್ ಶಾಸಕ ಆಕಾಶ್ ವಿಜಯವರ್ಗಿಯ ನಗರಸಭೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಿಂದ ಬಂಧನಕ್ಕೊಳಗಾಗಿದ್ದಾರೆ. ಕ್ರಿಕೆಟ್ ಬ್ಯಾಟ್‍ನಿಂದ ತೀವ್ರವಾಗಿ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಕ್ಯಾಮರದಲ್ಲಿ ಸೆರೆಯಾಗಿದ್ದು ಅದನ್ನವರು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಶಾಸಕ ಮತ್ತು ಆತನ 10 ಬೆಂಬಲಿಗರ ಮೇಲೆ ದೂರು ದಾಖಲಾಗಿದೆ.
ವಿಡಿಯೋ ನೋಡಿ

ಗಂಜಿ ಕಾಂಪೌಂಡ್ ಏರಿಯಾದ ಕಟ್ಟಡ ಧ್ವಂಸ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಪ್ರತ್ಯಕ್ಷ ಸಾಕ್ಷಿಗಳ ಪ್ರಕಾರ ಕೆಲವು ಮನೆಗಳು ತುಂಬಾ ಹಳೆಯವಾಗಿದ್ದು ಕುಸಿತದ ಹಂತದಲ್ಲಿವೆ. ಆದ್ದರಿಂದ ಅಲ್ಲಿನ ಮನೆಯ ಮಾಲೀಕರು ಅವುಗಳನ್ನು ಧ್ವಂಸಗೊಳಿಸಲು ನಗರಸಭೆಗೆ ಮನವಿ ಮಾಡಿದ್ದರು. ಅದರನುಸಾರ ನಗರಸಭೆಯ ಅಧಿಕಾರಿಗಳು ಧ್ವಂಸ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಇದನ್ನು ಅಲ್ಲಿ ವಾಸಿಸುತ್ತಿರುವ ಕೆಲ ಬಾಡಿಗೆ ನಿವಾಸಿಗಳು ಇಂದೋರ್3ರ ಶಾಸಕರ ಗಮನಕ್ಕೆ ತಂದು ಕಟ್ಟಡ ಧ್ವಂಸದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನಾಕಾರರನ್ನು ಜೊತೆಗೂಡಿದ ಶಾಸಕ ಆಕಾಶ್ ವಿಜಯವರ್ಗಿಯ, ಧ್ವಂಸ ನಿಲ್ಲಿಸಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಶಾಸಕರ ವಿರೋಧದ ನಡುವೆಯು ಧ್ವಂಸ ಕೆಲಸ ಮುಂದುವರೆಸಿದಾಗ ಆಕಾಸ್ ವಿಜಯವರ್ಗಿಯ ಮತ್ತು ಆತನ ಬೆಂಬಲಿಗರು ಅಧಿಕಾರಿಗಳ ಮೇಲೆ ಬ್ಯಾಟ್‍ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಮತ್ತು ಜೆಸಿಬಿ ಸೇರಿದಂತೆ ಇತರ ವಾಹನಗಳ ಕೀ ಕಿತ್ತುಕೊಂಡಿದ್ದಾರೆ. ಪೊಲೀಸರು ಬಂದು ಗಲಾಟೆಯನ್ನು ನಿಲ್ಲಿಸಿದ್ದಾರೆ.

ಘಟನೆಯ ನಂತರ ಆಕಾಸ್ ವಿಜಯವರ್ಗಿಯ ಎಂಜಿ ರಸ್ತೆಯ ಪೊಲೀಸ್ ಠಾಣೆಗೆ ತೆರಳಿದರೆ ನಗರಸಭೆಯ ಅಧಿಕಾರಿಗಳು ಕೆಲಸ ನಿಲ್ಲಿಸಿ ಪ್ರತಿಭಟನೆ ಸೂಚಿಸಿದ್ದಾರೆ.

ಉತ್ತಮವಾಗಿರುವ ಮನೆಗಳನ್ನು ಸಹ ನಗರಸಭೆಯವರು ಕೆಡವುತ್ತಿದ್ದಾರೆ. ನಗರಸಭೆಯ ಅಧಿಕಾರಿಗಳು ಮನೆಯ ಮಾಲೀಕರಿಂದ ಲಂಚ ಪಡೆದು ಈ ಪಿತೂರಿ ನಡೆಸುತ್ತಿದ್ದಾರೆ. ಇದರಿಂದ ನನ್ನ ಕ್ಷೇತ್ರದ ಬಾಡಿಗೆ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ನಾನು ಬೆಳಿಗ್ಗೆಯಿಂದ 10 ಬಾರಿ ಕರೆ ಮಾಡಿದರೂ ಅಧಿಕಾರಿಗಳು ಉತ್ತರಿಸಿಲ್ಲ. ಹಾಗಾಗಿ ಅವರ ಮೇಲೆ ಹಲ್ಲೆ ನಡೆಸಬೇಕಾಯ್ತು ಎಂದು ಹಲ್ಲೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಧಿಕಾರಿಗಳ ಜೊತೆ ಕಾಂಗ್ರೆಸ್‍ನವರು ಕೈಜೋಡಿಸಿದ್ದಾರೆ ಎಂದೂ ಆರೋಪಿಸಿದ್ದಾರೆ.

ಇದು ಆರಂಭ ಮಾತ್ರ. ನಮ್ಮ ಮನವಿಯವನ್ನು ಕೇಳದಿದ್ದರೆ ಮುಂದೆಯೂ ಇದೇ ರೀತಿ ವರ್ತಿಸಬೇಕಾಗುತ್ತದೆ ಎಂದೂ ಆಕಾಶ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...