Homeಕರ್ನಾಟಕಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ...

ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

- Advertisement -
- Advertisement -

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿದ್ದ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆಯವರಿಗೆ ಸಂಬಂಧಿಸಿದ ವಿವರಣೆಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕಿತ್ತು ಬಿಸಾಕಿದೆ.

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ಪಠ್ಯವನ್ನು ಚಕ್ರತೀರ್ಥ ಸಮಿತಿ ಕಿತ್ತು ಬಿಸಾಡಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ತಾಯಂದಿರ ಮಾಹಿತಿಯನ್ನು ತೆರವು ಮಾಡಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.

ನಾರಾಯಣಗುರುಗಳ ವಿವರಣೆ ಆದ ಮೇಲೆ “ಮಹಿಳಾ ಸಮಾಜ ಸುಧಾರಕಿಯರು” ಉಪಶೀರ್ಷಿಕೆಯಲ್ಲಿ ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್‌ ರಮಾಬಾಯಿ ಅವರ ಪರಿಚಯಗಳನ್ನು ಮಾಡಿಕೊಡಲಾಗಿತ್ತು.

ಹಳೆಯ ಪಠ್ಯದಲ್ಲಿ ಏನಿದೆ?

ಸಾವಿತ್ರಿಬಾಯಿ ಫುಲೆ

ಸಾವಿತ್ರಿಬಾಯಿ ಫುಲೆ ಭಾರತದ ಪ್ರಸಿದ್ಧ ಸಮಾಜ ಸುಧಾರಕರು, ಶೈಕ್ಷಣಿಕ ಸುಧಾರಕರು ಹಾಗೂ ಕವಯಿತ್ರಿ. ತಮ್ಮ ಪತಿ ಜ್ಯೋತಿ ಬಾ ಫುಲೆಯವರೊಡಗೂಡಿ ಪುಣೆಯಲ್ಲಿ ಬಾಲಕಿಯರ ಶಾಲೆಯನ್ನು ಆರಂಭಿಸಿದರಲ್ಲದೆ ತಾವೇ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದರು. ಬಾಲ ವಿಧವೆಯರಿಗಾಗಿ ಪುನರ್‌ ವಸತಿ ಕೇಂದ್ರಗಳನ್ನು ತೆರೆಯುವ ಮೂಲಕ ಶಿಶುಹತ್ಯೆ ಪ್ರಕರಣಗಳನ್ನು ಕೊನೆಗಾಣಿಸಲು ಪ್ರಯತ್ನ ಮಾಡಿದರು. ಜಾತಿ ಪದ್ಧತಿ ಮತ್ತು ಲಿಂಗ ಅಸಮಾನತೆಯ ವಿರುದ್ಧ ಹೋರಾಡಿದರು. ಅದಕ್ಕಾಗಿ ಅವರು ಸಮಾಜದ ವಿರೋಧವನ್ನು ಎದುರಿಸಬೇಕಾಯಿತು.

ಪತಿ ಜ್ಯೋತಿ ಬಾ ಫುಲೆಯ ಸಾಮಾಜಿಕ ಹೋರಾಟಗಳಲ್ಲಿ  ಹೆಗಲಿಗೆ ಹೆಗಲುಕೊಟ್ಟು ದುಡಿದರು. ಅವರ ಸಾವಿನ ನಂತರ ‘ಸತ್ಯ ಶೋಧಕ ಸಮಾಜ’ವನ್ನು ಮುನ್ನಡೆಸಿದರು. ಪ್ಲೇಗ್‌ ಮಹಾಮಾರಿಯ ರೋಗಕ್ಕೆ ತುತ್ತಾದವರ ಸೇವೆಯನ್ನು ತಮ್ಮ ಮಗನೊಡನೆ ಸೇರಿ ಮಾಡುತ್ತಿರುವಾಗಲೇ ಪ್ಲೇಗ್ ರೋಗಕ್ಕೆ ತುತ್ತಾದರು.

ತಾರಾಬಾಯಿ ಶಿಂದೆ

ತಾರಾಬಾಯಿ ಶಿಂದೆ ಮಹಾರಾಷ್ಟ್ರದ ಮೊದಲ ಮಹಿಳಾ ಹೋರಾಟಗಾರ್ತಿ. ಜ್ಯೋತಿ ಬಾ ಫುಲೆಯವರ ಸತ್ಯಶೋಧಕ ಸಮಾಜದ ಸಕ್ರಿಯ ಸದಸ್ಯರಾಗಿ ಸಾಮಾಜಿಕ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಬಾಲ ವಿಧವೆಯರ ರಕ್ಷಣೆ ಮತ್ತು ವಿಧವಾ ಪುನರ್ವಿವಾಹಕ್ಕೆ ಬೆಂಬಲ ನೀಡಿದರು. ತಮ್ಮ ಕೃತಿ ‘ಸ್ತ್ರೀ- ಪುರುಷ ತುಲನಾ’ದಲ್ಲಿ ಮಹಿಳೆಯ ಶೋಷಣೆಯನ್ನು ಉಗ್ರವಾಗಿ ಪ್ರತಿಭಟಿಸಿದ್ದಾರೆ.

ಪಂಡಿತ್‌ ರಮಾಬಾಯಿ 

ಪಂಡಿತ್ ರಮಾಬಾಯಿ ಅವರು ಭಾರತದ ಪ್ರಸಿದ್ಧ ಕ್ರೈಸ್ತ ಸಮಾಜ ಸುಧಾರಕಿ. ಅನಂತಶಾಸ್ತ್ರಿ ಡೊಂಗ್ಸೆ ಹಾಗೂ ಲಕ್ಷ್ಮೀಬಾಯಿ ದಂಪತಿಗಳ ಪುತ್ರಿಯಾಗಿ ಪಶ್ಚಿಮಘಟ್ಟದ ಗಂಗಾಮೂಲ ಎಂಬಲ್ಲಿ ಜನಿಸಿದರು. ಅಂದಿನ ಸಾಮಾಜಿಕ ಪರಿಸ್ಥಿತಿಗೆ ವಿರುದ್ಧವಾಗಿ ಶಿಕ್ಷಣ ಪಡೆದರು. ಇಂಗ್ಲೇಡಿನಲ್ಲಿ ಓದುವಾಗ ಕ್ರೈಸ್ತಧರ್ಮೀಯರಾದರು. ಭಾರತೀಯ ಮಹಿಳೆಯ ಉದ್ಧಾರಕ್ಕಾಗಿ ಜೀವನವನ್ನೇ ಮುಡುಪಿಟ್ಟು 1889ರಲ್ಲಿ ‘ಮುಕ್ತಿ ಮಿಷನ್‌’ ಸಂಸ್ಥೆಯನ್ನು ಹುಟ್ಟು ಹಾಕಿದರು. ಈ ಸಂಸ್ಥೆಯು ವಿಧವೆಯರು, ಅನಾಥರು ಹಾಗೂ ಕುಡಕರಿಗೆ ಜೀವನೋಪಾಯ ಕಲ್ಪಿಸುತ್ತಾ ಇಂದಿಗೂ ಕಾರ್ಯಶೀಲವಾಗಿದೆ.

ಹೀಗೆ ಮಹಿಳಾ ಸಮಾಜ ಸುಧಾರಕಿಯರ ವಿವರಗಳನ್ನು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ನೀಡಿತ್ತು. ಆದರೆ ಈಗಿನ ಸಮಿತಿಗೆ ಈ ಭಾಗ ಬೇಡವೆನಿಸಿದೆ. ಸಮಾಜ ಸುಧಾರಕರ ವಿಸ್ತೃತ ಪಠ್ಯವನ್ನು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದೆ. ಆದರೆ ನಾರಾಯಣಗುರುಗಳ ಪಾಠವನ್ನು ಕಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...