Homeಕರ್ನಾಟಕಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ...

ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

- Advertisement -
- Advertisement -

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿದ್ದ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆಯವರಿಗೆ ಸಂಬಂಧಿಸಿದ ವಿವರಣೆಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕಿತ್ತು ಬಿಸಾಕಿದೆ.

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ಪಠ್ಯವನ್ನು ಚಕ್ರತೀರ್ಥ ಸಮಿತಿ ಕಿತ್ತು ಬಿಸಾಡಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ತಾಯಂದಿರ ಮಾಹಿತಿಯನ್ನು ತೆರವು ಮಾಡಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.

ನಾರಾಯಣಗುರುಗಳ ವಿವರಣೆ ಆದ ಮೇಲೆ “ಮಹಿಳಾ ಸಮಾಜ ಸುಧಾರಕಿಯರು” ಉಪಶೀರ್ಷಿಕೆಯಲ್ಲಿ ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್‌ ರಮಾಬಾಯಿ ಅವರ ಪರಿಚಯಗಳನ್ನು ಮಾಡಿಕೊಡಲಾಗಿತ್ತು.

ಹಳೆಯ ಪಠ್ಯದಲ್ಲಿ ಏನಿದೆ?

ಸಾವಿತ್ರಿಬಾಯಿ ಫುಲೆ

ಸಾವಿತ್ರಿಬಾಯಿ ಫುಲೆ ಭಾರತದ ಪ್ರಸಿದ್ಧ ಸಮಾಜ ಸುಧಾರಕರು, ಶೈಕ್ಷಣಿಕ ಸುಧಾರಕರು ಹಾಗೂ ಕವಯಿತ್ರಿ. ತಮ್ಮ ಪತಿ ಜ್ಯೋತಿ ಬಾ ಫುಲೆಯವರೊಡಗೂಡಿ ಪುಣೆಯಲ್ಲಿ ಬಾಲಕಿಯರ ಶಾಲೆಯನ್ನು ಆರಂಭಿಸಿದರಲ್ಲದೆ ತಾವೇ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದರು. ಬಾಲ ವಿಧವೆಯರಿಗಾಗಿ ಪುನರ್‌ ವಸತಿ ಕೇಂದ್ರಗಳನ್ನು ತೆರೆಯುವ ಮೂಲಕ ಶಿಶುಹತ್ಯೆ ಪ್ರಕರಣಗಳನ್ನು ಕೊನೆಗಾಣಿಸಲು ಪ್ರಯತ್ನ ಮಾಡಿದರು. ಜಾತಿ ಪದ್ಧತಿ ಮತ್ತು ಲಿಂಗ ಅಸಮಾನತೆಯ ವಿರುದ್ಧ ಹೋರಾಡಿದರು. ಅದಕ್ಕಾಗಿ ಅವರು ಸಮಾಜದ ವಿರೋಧವನ್ನು ಎದುರಿಸಬೇಕಾಯಿತು.

ಪತಿ ಜ್ಯೋತಿ ಬಾ ಫುಲೆಯ ಸಾಮಾಜಿಕ ಹೋರಾಟಗಳಲ್ಲಿ  ಹೆಗಲಿಗೆ ಹೆಗಲುಕೊಟ್ಟು ದುಡಿದರು. ಅವರ ಸಾವಿನ ನಂತರ ‘ಸತ್ಯ ಶೋಧಕ ಸಮಾಜ’ವನ್ನು ಮುನ್ನಡೆಸಿದರು. ಪ್ಲೇಗ್‌ ಮಹಾಮಾರಿಯ ರೋಗಕ್ಕೆ ತುತ್ತಾದವರ ಸೇವೆಯನ್ನು ತಮ್ಮ ಮಗನೊಡನೆ ಸೇರಿ ಮಾಡುತ್ತಿರುವಾಗಲೇ ಪ್ಲೇಗ್ ರೋಗಕ್ಕೆ ತುತ್ತಾದರು.

ತಾರಾಬಾಯಿ ಶಿಂದೆ

ತಾರಾಬಾಯಿ ಶಿಂದೆ ಮಹಾರಾಷ್ಟ್ರದ ಮೊದಲ ಮಹಿಳಾ ಹೋರಾಟಗಾರ್ತಿ. ಜ್ಯೋತಿ ಬಾ ಫುಲೆಯವರ ಸತ್ಯಶೋಧಕ ಸಮಾಜದ ಸಕ್ರಿಯ ಸದಸ್ಯರಾಗಿ ಸಾಮಾಜಿಕ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಬಾಲ ವಿಧವೆಯರ ರಕ್ಷಣೆ ಮತ್ತು ವಿಧವಾ ಪುನರ್ವಿವಾಹಕ್ಕೆ ಬೆಂಬಲ ನೀಡಿದರು. ತಮ್ಮ ಕೃತಿ ‘ಸ್ತ್ರೀ- ಪುರುಷ ತುಲನಾ’ದಲ್ಲಿ ಮಹಿಳೆಯ ಶೋಷಣೆಯನ್ನು ಉಗ್ರವಾಗಿ ಪ್ರತಿಭಟಿಸಿದ್ದಾರೆ.

ಪಂಡಿತ್‌ ರಮಾಬಾಯಿ 

ಪಂಡಿತ್ ರಮಾಬಾಯಿ ಅವರು ಭಾರತದ ಪ್ರಸಿದ್ಧ ಕ್ರೈಸ್ತ ಸಮಾಜ ಸುಧಾರಕಿ. ಅನಂತಶಾಸ್ತ್ರಿ ಡೊಂಗ್ಸೆ ಹಾಗೂ ಲಕ್ಷ್ಮೀಬಾಯಿ ದಂಪತಿಗಳ ಪುತ್ರಿಯಾಗಿ ಪಶ್ಚಿಮಘಟ್ಟದ ಗಂಗಾಮೂಲ ಎಂಬಲ್ಲಿ ಜನಿಸಿದರು. ಅಂದಿನ ಸಾಮಾಜಿಕ ಪರಿಸ್ಥಿತಿಗೆ ವಿರುದ್ಧವಾಗಿ ಶಿಕ್ಷಣ ಪಡೆದರು. ಇಂಗ್ಲೇಡಿನಲ್ಲಿ ಓದುವಾಗ ಕ್ರೈಸ್ತಧರ್ಮೀಯರಾದರು. ಭಾರತೀಯ ಮಹಿಳೆಯ ಉದ್ಧಾರಕ್ಕಾಗಿ ಜೀವನವನ್ನೇ ಮುಡುಪಿಟ್ಟು 1889ರಲ್ಲಿ ‘ಮುಕ್ತಿ ಮಿಷನ್‌’ ಸಂಸ್ಥೆಯನ್ನು ಹುಟ್ಟು ಹಾಕಿದರು. ಈ ಸಂಸ್ಥೆಯು ವಿಧವೆಯರು, ಅನಾಥರು ಹಾಗೂ ಕುಡಕರಿಗೆ ಜೀವನೋಪಾಯ ಕಲ್ಪಿಸುತ್ತಾ ಇಂದಿಗೂ ಕಾರ್ಯಶೀಲವಾಗಿದೆ.

ಹೀಗೆ ಮಹಿಳಾ ಸಮಾಜ ಸುಧಾರಕಿಯರ ವಿವರಗಳನ್ನು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ನೀಡಿತ್ತು. ಆದರೆ ಈಗಿನ ಸಮಿತಿಗೆ ಈ ಭಾಗ ಬೇಡವೆನಿಸಿದೆ. ಸಮಾಜ ಸುಧಾರಕರ ವಿಸ್ತೃತ ಪಠ್ಯವನ್ನು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದೆ. ಆದರೆ ನಾರಾಯಣಗುರುಗಳ ಪಾಠವನ್ನು ಕಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...