Homeಕರ್ನಾಟಕಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ...

ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

- Advertisement -
- Advertisement -

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿದ್ದ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆಯವರಿಗೆ ಸಂಬಂಧಿಸಿದ ವಿವರಣೆಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕಿತ್ತು ಬಿಸಾಕಿದೆ.

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ಪಠ್ಯವನ್ನು ಚಕ್ರತೀರ್ಥ ಸಮಿತಿ ಕಿತ್ತು ಬಿಸಾಡಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ತಾಯಂದಿರ ಮಾಹಿತಿಯನ್ನು ತೆರವು ಮಾಡಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.

ನಾರಾಯಣಗುರುಗಳ ವಿವರಣೆ ಆದ ಮೇಲೆ “ಮಹಿಳಾ ಸಮಾಜ ಸುಧಾರಕಿಯರು” ಉಪಶೀರ್ಷಿಕೆಯಲ್ಲಿ ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್‌ ರಮಾಬಾಯಿ ಅವರ ಪರಿಚಯಗಳನ್ನು ಮಾಡಿಕೊಡಲಾಗಿತ್ತು.

ಹಳೆಯ ಪಠ್ಯದಲ್ಲಿ ಏನಿದೆ?

ಸಾವಿತ್ರಿಬಾಯಿ ಫುಲೆ

ಸಾವಿತ್ರಿಬಾಯಿ ಫುಲೆ ಭಾರತದ ಪ್ರಸಿದ್ಧ ಸಮಾಜ ಸುಧಾರಕರು, ಶೈಕ್ಷಣಿಕ ಸುಧಾರಕರು ಹಾಗೂ ಕವಯಿತ್ರಿ. ತಮ್ಮ ಪತಿ ಜ್ಯೋತಿ ಬಾ ಫುಲೆಯವರೊಡಗೂಡಿ ಪುಣೆಯಲ್ಲಿ ಬಾಲಕಿಯರ ಶಾಲೆಯನ್ನು ಆರಂಭಿಸಿದರಲ್ಲದೆ ತಾವೇ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದರು. ಬಾಲ ವಿಧವೆಯರಿಗಾಗಿ ಪುನರ್‌ ವಸತಿ ಕೇಂದ್ರಗಳನ್ನು ತೆರೆಯುವ ಮೂಲಕ ಶಿಶುಹತ್ಯೆ ಪ್ರಕರಣಗಳನ್ನು ಕೊನೆಗಾಣಿಸಲು ಪ್ರಯತ್ನ ಮಾಡಿದರು. ಜಾತಿ ಪದ್ಧತಿ ಮತ್ತು ಲಿಂಗ ಅಸಮಾನತೆಯ ವಿರುದ್ಧ ಹೋರಾಡಿದರು. ಅದಕ್ಕಾಗಿ ಅವರು ಸಮಾಜದ ವಿರೋಧವನ್ನು ಎದುರಿಸಬೇಕಾಯಿತು.

ಪತಿ ಜ್ಯೋತಿ ಬಾ ಫುಲೆಯ ಸಾಮಾಜಿಕ ಹೋರಾಟಗಳಲ್ಲಿ  ಹೆಗಲಿಗೆ ಹೆಗಲುಕೊಟ್ಟು ದುಡಿದರು. ಅವರ ಸಾವಿನ ನಂತರ ‘ಸತ್ಯ ಶೋಧಕ ಸಮಾಜ’ವನ್ನು ಮುನ್ನಡೆಸಿದರು. ಪ್ಲೇಗ್‌ ಮಹಾಮಾರಿಯ ರೋಗಕ್ಕೆ ತುತ್ತಾದವರ ಸೇವೆಯನ್ನು ತಮ್ಮ ಮಗನೊಡನೆ ಸೇರಿ ಮಾಡುತ್ತಿರುವಾಗಲೇ ಪ್ಲೇಗ್ ರೋಗಕ್ಕೆ ತುತ್ತಾದರು.

ತಾರಾಬಾಯಿ ಶಿಂದೆ

ತಾರಾಬಾಯಿ ಶಿಂದೆ ಮಹಾರಾಷ್ಟ್ರದ ಮೊದಲ ಮಹಿಳಾ ಹೋರಾಟಗಾರ್ತಿ. ಜ್ಯೋತಿ ಬಾ ಫುಲೆಯವರ ಸತ್ಯಶೋಧಕ ಸಮಾಜದ ಸಕ್ರಿಯ ಸದಸ್ಯರಾಗಿ ಸಾಮಾಜಿಕ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಬಾಲ ವಿಧವೆಯರ ರಕ್ಷಣೆ ಮತ್ತು ವಿಧವಾ ಪುನರ್ವಿವಾಹಕ್ಕೆ ಬೆಂಬಲ ನೀಡಿದರು. ತಮ್ಮ ಕೃತಿ ‘ಸ್ತ್ರೀ- ಪುರುಷ ತುಲನಾ’ದಲ್ಲಿ ಮಹಿಳೆಯ ಶೋಷಣೆಯನ್ನು ಉಗ್ರವಾಗಿ ಪ್ರತಿಭಟಿಸಿದ್ದಾರೆ.

ಪಂಡಿತ್‌ ರಮಾಬಾಯಿ 

ಪಂಡಿತ್ ರಮಾಬಾಯಿ ಅವರು ಭಾರತದ ಪ್ರಸಿದ್ಧ ಕ್ರೈಸ್ತ ಸಮಾಜ ಸುಧಾರಕಿ. ಅನಂತಶಾಸ್ತ್ರಿ ಡೊಂಗ್ಸೆ ಹಾಗೂ ಲಕ್ಷ್ಮೀಬಾಯಿ ದಂಪತಿಗಳ ಪುತ್ರಿಯಾಗಿ ಪಶ್ಚಿಮಘಟ್ಟದ ಗಂಗಾಮೂಲ ಎಂಬಲ್ಲಿ ಜನಿಸಿದರು. ಅಂದಿನ ಸಾಮಾಜಿಕ ಪರಿಸ್ಥಿತಿಗೆ ವಿರುದ್ಧವಾಗಿ ಶಿಕ್ಷಣ ಪಡೆದರು. ಇಂಗ್ಲೇಡಿನಲ್ಲಿ ಓದುವಾಗ ಕ್ರೈಸ್ತಧರ್ಮೀಯರಾದರು. ಭಾರತೀಯ ಮಹಿಳೆಯ ಉದ್ಧಾರಕ್ಕಾಗಿ ಜೀವನವನ್ನೇ ಮುಡುಪಿಟ್ಟು 1889ರಲ್ಲಿ ‘ಮುಕ್ತಿ ಮಿಷನ್‌’ ಸಂಸ್ಥೆಯನ್ನು ಹುಟ್ಟು ಹಾಕಿದರು. ಈ ಸಂಸ್ಥೆಯು ವಿಧವೆಯರು, ಅನಾಥರು ಹಾಗೂ ಕುಡಕರಿಗೆ ಜೀವನೋಪಾಯ ಕಲ್ಪಿಸುತ್ತಾ ಇಂದಿಗೂ ಕಾರ್ಯಶೀಲವಾಗಿದೆ.

ಹೀಗೆ ಮಹಿಳಾ ಸಮಾಜ ಸುಧಾರಕಿಯರ ವಿವರಗಳನ್ನು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ನೀಡಿತ್ತು. ಆದರೆ ಈಗಿನ ಸಮಿತಿಗೆ ಈ ಭಾಗ ಬೇಡವೆನಿಸಿದೆ. ಸಮಾಜ ಸುಧಾರಕರ ವಿಸ್ತೃತ ಪಠ್ಯವನ್ನು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದೆ. ಆದರೆ ನಾರಾಯಣಗುರುಗಳ ಪಾಠವನ್ನು ಕಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...