Homeಮುಖಪುಟಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸ್ತ್ರೀವಿರೋಧಿ ಧೋರಣೆಯ ಫ್ಯಾಸಿಸ್ಟ್‌ ಸಂಸದನನ್ನು ಆಸ್ಟ್ರೇಲಿಯಾಕ್ಕೆ ಆಹ್ವಾನಿಸಬಾರದು ಎಂಬ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ವಿವಾದಗಳ ಮೂಲಕ ಹೆಸರಾಗಿರುವ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಆಸ್ಟ್ರೇಲಿಯಾದಲ್ಲಿ ಕಹಿ ಅನುಭವವಾಗಿದೆ. ಅಲ್ಲಿ ಆಯೋಜಿಸಲಾಗಿದ್ದ ಭಾಷಣವನ್ನು ರದ್ದುಗೊಳಿಸಲಾಗಿದೆ.

ತೇಜಸ್ವಿ ಸೂರ್ಯ ಅವರು ಸೋಮವಾರ ಸಿಡ್ನಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಪ್ರತಿಭಟನೆಯ ಸೂಚನೆಗಳ ನಂತರ ಸಂಘಟಕರು ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.

ಆಸ್ಟ್ರೇಲಿಯಾ-ಭಾರತ ಯುವ ಸಂವಾದ (ಎಐವೈಡಿ) ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ತೇಜಸ್ವಿ ಸೂರ್ಯ ಅವರು ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಭಾರತ ಮತ್ತು ಆಸ್ಟ್ರೇಲಿಯಾದ ಯುವಕರ ನಡುವಿನ ಸಂವಾದದ ವೇದಿಕೆಯಾಗಿದೆ. ಪ್ರತಿ ವರ್ಷ ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ಎರಡೂ ದೇಶಗಳಿಂದ ಆಯ್ದ 15 ಯುವಕರು ಪಾಲ್ಗೊಳ್ಳುತ್ತಾರೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಯುವಕರು ಪರಸ್ಪರ ಸಂವಾದ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ” ಎಂದು ಎಐವೈಡಿ ವೆಬ್‌ಸೈಟ್ ಹೇಳುತ್ತದೆ.

ಇದನ್ನೂ ಓದಿರಿ: ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

ಈ ವರ್ಷ ಮೇ 31ರಿಂದ ಜೂನ್ 3 ರವರೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಭಾರತದಿಂದ ಆಯ್ಕೆಯಾದ 15 ಜನರಲ್ಲಿ ತೇಜಸ್ವಿ ಸೂರ್ಯ ಕೂಡ ಇದ್ದರು. ಅವರು ಸೋಮವಾರ ಸಿಡ್ನಿಯ ಸ್ವಿನ್‌ಬರ್ನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದರು ಎಂದು ‘The Newz India’ ವೆಬ್‌ಸೈಟ್‌ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯರ ಕಾರ್ಯಕ್ರಮ ರದ್ದು

ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮಕ್ಕೆ ಬರಬಾರದೆಂದು ಆಗ್ರಹಿಸಿ ಹಲವು ಸಂಘಟನೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ತಜ್ಞರು  ವಿಶ್ವವಿದ್ಯಾಲಯಕ್ಕೆ ಪತ್ರ ಬರೆದು ಪ್ರತಿಭಟನೆ ನಡೆಸಿದ್ದರು. ಕೆಲವು ಸಂಘಟನೆಗಳು ವಿಶ್ವವಿದ್ಯಾನಿಲಯಕ್ಕೆ ಪ್ರತಿಭಟನೆಯ ನೋಟಿಸ್ ಸಹ ಕಳುಹಿಸಿದ್ದವು. ಈ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರತಿಭಟನಾಕಾರರಿಗೆ ಇಮೇಲ್ ಮೂಲಕ ತಿಳಿಸಿದೆ.

ತನ್ನ ಪ್ರತಿಕ್ರಿಯೆಯಲ್ಲಿ ವಿವಿಯು, “ಈ ಕಾರ್ಯಕ್ರಮವನ್ನು ಸ್ವಿನ್‌ಬರ್ನ್ ವಿಶ್ವವಿದ್ಯಾಲಯದಿಂದ ಆಯೋಜಿಸಲಾಗಿಲ್ಲ. ಆದರೆ ವಿಶ್ವವಿದ್ಯಾಲಯದ ಕ್ಯಾಂಪಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತೊಂದು ಖಾಸಗಿ ಸಂಸ್ಥೆಯಾದ ಎಜುಕೇಶನ್ ಸೆಂಟರ್ ಆಫ್ ಆಸ್ಟ್ರೇಲಿಯಾ (ECA) ಕಾರ್ಯಕ್ರಮ ಹಮ್ಮಿಕೊಂಡಿದೆ. ಇಸಿಎ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಫ್ಯಾಸಿಸ್ಟ್‌, ಹಿಂದುತ್ವವಾದಿ, ಸ್ತ್ರೀವಿರೋಧಿ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಆಸ್ಟ್ರೇಲಿಯಾಕ್ಕೆ ಆಗಮಿಸಬಾರದೆಂದು ಪ್ರತಿಭಟನೆಗಳು ಆರಂಭವಾಗಿದ್ದವು. ಆತ ಎಐವಿಡಿ ಸಮ್ಮೇಳನದಲ್ಲಿ ಭಾಗವಹಿಸುವ ಮಾಹಿತಿಯು ಬಹಿರಂಗವಾದಾಗ, ಅವರ ವೀಸಾವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಆನ್‌ಲೈನ್ ಮೂಲಕ ಸಹಿ ಸಂಗ್ರಹ ಅಭಿಯಾನ ಶುರುವಾಯಿತು. ಇದುವರೆಗೆ 4,000ಕ್ಕೂ ಹೆಚ್ಚು ಜನರು ಇದರಲ್ಲಿ ಸಹಿ ಮಾಡಿದ್ದು, “ಫ್ಯಾಸಿಸ್ಟ್ ಸಂಸದರನ್ನು ಆಸ್ಟ್ರೇಲಿಯಾಕ್ಕೆ ಸರ್ಕಾರಿ ಸಂಸ್ಥೆಗಳ ವೆಚ್ಚದಲ್ಲಿ, ಸರ್ಕಾರಿ ಸಂಸ್ಥೆಗಳ ಹೆಸರಲ್ಲಿ ಕರೆಸುವುದು ಸ್ವೀಕಾರಾರ್ಹವಲ್ಲ” ಎಂದು ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ತೇಜಸ್ವಿ ಸೂರ್ಯ ಅವರಿಗೆ ವೇದಿಕೆ ನೀಡದಂತೆ ಎಐವೈಡಿ ಮತ್ತು ಅದರ ಅಂಗ ಸಂಸ್ಥೆಗಳಿಗೆ ಆಸ್ಟ್ರೇಲಿಯಾದ ಹಲವು ಸಂಘಟನೆಗಳು ಸಹ ಜಂಟಿ ಪತ್ರ ಬರೆದಿವೆ. ಆಸ್ಟ್ರೇಲಿಯನ್ ಸಂಸ್ಥೆಗಳಾದ ದಿ ಹ್ಯುಮಾನಿಸಂ ಪ್ರಾಜೆಕ್ಟ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್, ಆಸ್ಟ್ರೇಲಿಯನ್ ಫೆಡರೇಶನ್ ಆಫ್ ಇಸ್ಲಾಮಿಕ್ ಕೌನ್ಸಿಲ್ಸ್, ವಿ ಆರ್ ದಿ ಮೈನ್‌ಸ್ಟ್ರೀಮ್, ಸೌತ್ ಏಷ್ಯನ್ ಹ್ಯೂಮನಿಸ್ಟ್ ಅಸೋಸಿಯೇಷನ್, ನ್ಯೂಜಿಲೆಂಡ್, ಯುಎಸ್ ಮತ್ತು ಯುಕೆಯ ಮಾನವ ಹಕ್ಕುಗಳ ಸಂಘಟನೆಗಳು ಈ ಜಂಟಿ ಪತ್ರದಲ್ಲಿ ಸಹಿ ಮಾಡಿವೆ.

ದಿ ಹ್ಯುಮಾನಿಸಂ ಪ್ರಾಜೆಕ್ಟ್‌ನ ಡಾ. ಹರೂನ್ ಖಾಸಿಮ್ ಪ್ರತಿಕ್ರಿಯಿಸಿ, “ಎಐವೈಡಿ ವೆಬ್‌ಸೈಟ್‌ ಹೇಳುವಂತೆ ತೇಜಸ್ವಿ ಸೂರ್ಯ ತನ್ನನ್ನು ಆರ್‌‌ಎಸ್‌ಎಸ್‌ ಸ್ವಯಂಸೇವಕ ಎಂದು ಪರಿಚಯಿಸಿಕೊಳ್ಳುತ್ತಾರೆ. ಒಬ್ಬರನ್ನೊಬ್ಬರು ಶತ್ರುವನ್ನಾಗಿ ಮಾಡುತ್ತಾರೆ. ಅವರ ತತ್ತ್ವಚಿಂತನೆಗೆ ವೇದಿಕೆ ಕಲ್ಪಿಸುವುದು ಬುದ್ಧಿವಂತಿಕೆಯಲ್ಲ” ಎಂದಿದ್ದಾರೆ.

ಭಾರತೀಯ-ಆಸ್ಟ್ರೇಲಿಯನ್ ಲೇಖಕ ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾನಿಲಯದ ಉಪನ್ಯಾಸಕ ರೊನ್ನಾ ಗೊನ್ಸಾಲ್ವೆಸ್ ಪ್ರತಿಕ್ರಿಯಿಸಿ, “ವಿಶ್ವವಿದ್ಯಾನಿಲಯಗಳು ಮಹಿಳೆಯರನ್ನು ದ್ವೇಷಿಸುವ ಇಂತಹ ಹಿಂದುತ್ವ ಫ್ಯಾಸಿಸ್ಟ್‌ಗಳನ್ನು ಬೆಂಬಲಿಸಬಾರದು” ಎಂದು ಒತ್ತಾಯಿಸಿದ್ದಾರೆ.

“ಉನ್ನತ ಶಿಕ್ಷಣದೊಳಗೆ ಮಹಿಳಾ ವಿರೋಧಿ, ಮಿಲಿಟರಿ ಸಿದ್ಧಾಂತಕ್ಕೆ ವೇದಿಕೆಯನ್ನು ಒದಗಿಸುವುದು ಸರಿಯಲ್ಲ” ಎಂದು ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾಲಯದ ಡಾ.ಸುಖಮಣಿ ಖುರಾನಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ತೇಜಸ್ವಿಸೂರ್ಯ ಉಗ್ರ ಹಿಂದುತ್ವವಾದಿ ಮತ್ತು ಇಸ್ಲಾಂ ವಿರೋಧಿ ಎಂಬುದಕ್ಕೆ ಆತನ ಹಲವು ಹೇಳಿಕೆಗಳನ್ನು ಪ್ರತಿಭಟನಾಕಾರರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ ಅರಬ್ ಮಹಿಳೆಯರನ್ನು ಉಲ್ಲೇಖಿಸಿ ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್‌ ಒಂದನ್ನು ಆಧಾರವಾಗಿ ನೀಡಿದ್ದಾರೆ. “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಸೂರ್ಯ ಹೇಳಿದ್ದರು. ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. “ಯುಎಇ ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು” ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ಒದಗಿತು.

“ತೇಜಸ್ವಿ ಸೂರ್ಯರ ಧಾರ್ಮಿಕ ಮತಾಂಧತೆ ಎಲ್ಲರಿಗೂ ತಿಳಿದಿದೆ. ಆತನ ಧರ್ಮಾಂಧತೆ, ಮಹಿಳೆಯರ ಮೇಲಿನ ದ್ವೇಷ, ಅನಾಗರಿಕತೆಯ ವರ್ತನೆಗಳಿಗೆ ದಾಖಲೆಗಳಿವೆ. ಆದರೂ ಎಐವೈಡಿ ತನ್ನ ಕಾರ್ಯಕ್ರಮಕ್ಕೆ ಆತನನ್ನ ಆಹ್ವಾನಿಸಿದೆ. ಈ ಸಮ್ಮೇಳನವು ಆಸ್ಟ್ರೇಲಿಯಾದ ಅತ್ಯುತ್ತಮ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳನ್ನು ತನ್ನ ಪಾಲುದಾರರನ್ನಾಗಿ ಹೆಸರಿಸಿದೆ. ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಈ ಸಂಸ್ಥೆಗಳಿಗೆ ಸೂರ್ಯರ ವಿವಾದಿತ ಇತಿಹಾಸದ ಅರಿವಿದೆಯೇ? ಆಸ್ಟ್ರೇಲಿಯಾದ ಬಹುಸಂಸ್ಕೃತಿ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಮೌಲ್ಯಗಳಿಗೆ ಎಐವೈಡಿ ಬದ್ಧವಾಗಿದೆಯೆ?” ಎಂದು ಡಾ.ಖಾಸಿಂ ಪ್ರಶ್ನಿಸಿದ್ದಾರೆ.

ಎಐವೈಡಿ ಈ ಬಗ್ಗೆ ಪ್ರತಿಕ್ರಿಯಿಸದಿದ್ದರೂ ವಿವಾದ ಭುಗಿಲೆದ್ದ ನಂತರ ಹಲವಾರು ಪಾಲುದಾರ ಸಂಸ್ಥೆಗಳು ತಮ್ಮ ಹೆಸರುಗಳನ್ನು ವಾಪಸ್ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೊಂದು ಒಳ್ಳೆಯ ಬೆಳವಣಿಗೆ. ಮನುವಾದಿಗಳಿಗೆ ವಿದೇಶಗಳಲ್ಲಿ ಈ ರೀತಿಯಲ್ಲಿ ಮಂಗಳಾರತಿ ಕಾರ್ಯಕ್ರಮ ಮುಂದುವರೆಯಲಿ.

  2. ಇಂತಾ ಸಾಮಾಜಿಕ ವಿಷಜಂತುಗಳ ಕಾರ್ಯಕ್ರಮ ರದ್ದುಗೊಳಿಸಿ ಒಳ್ಳೆ ಕೆಲಸಮಾಡಿದೆ ಆಸ್ಟ್ರೇಲಿಯ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...