Homeಮುಖಪುಟಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸ್ತ್ರೀವಿರೋಧಿ ಧೋರಣೆಯ ಫ್ಯಾಸಿಸ್ಟ್‌ ಸಂಸದನನ್ನು ಆಸ್ಟ್ರೇಲಿಯಾಕ್ಕೆ ಆಹ್ವಾನಿಸಬಾರದು ಎಂಬ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ವಿವಾದಗಳ ಮೂಲಕ ಹೆಸರಾಗಿರುವ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಆಸ್ಟ್ರೇಲಿಯಾದಲ್ಲಿ ಕಹಿ ಅನುಭವವಾಗಿದೆ. ಅಲ್ಲಿ ಆಯೋಜಿಸಲಾಗಿದ್ದ ಭಾಷಣವನ್ನು ರದ್ದುಗೊಳಿಸಲಾಗಿದೆ.

ತೇಜಸ್ವಿ ಸೂರ್ಯ ಅವರು ಸೋಮವಾರ ಸಿಡ್ನಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಪ್ರತಿಭಟನೆಯ ಸೂಚನೆಗಳ ನಂತರ ಸಂಘಟಕರು ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.

ಆಸ್ಟ್ರೇಲಿಯಾ-ಭಾರತ ಯುವ ಸಂವಾದ (ಎಐವೈಡಿ) ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ತೇಜಸ್ವಿ ಸೂರ್ಯ ಅವರು ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಭಾರತ ಮತ್ತು ಆಸ್ಟ್ರೇಲಿಯಾದ ಯುವಕರ ನಡುವಿನ ಸಂವಾದದ ವೇದಿಕೆಯಾಗಿದೆ. ಪ್ರತಿ ವರ್ಷ ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ಎರಡೂ ದೇಶಗಳಿಂದ ಆಯ್ದ 15 ಯುವಕರು ಪಾಲ್ಗೊಳ್ಳುತ್ತಾರೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಯುವಕರು ಪರಸ್ಪರ ಸಂವಾದ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ” ಎಂದು ಎಐವೈಡಿ ವೆಬ್‌ಸೈಟ್ ಹೇಳುತ್ತದೆ.

ಇದನ್ನೂ ಓದಿರಿ: ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

ಈ ವರ್ಷ ಮೇ 31ರಿಂದ ಜೂನ್ 3 ರವರೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಭಾರತದಿಂದ ಆಯ್ಕೆಯಾದ 15 ಜನರಲ್ಲಿ ತೇಜಸ್ವಿ ಸೂರ್ಯ ಕೂಡ ಇದ್ದರು. ಅವರು ಸೋಮವಾರ ಸಿಡ್ನಿಯ ಸ್ವಿನ್‌ಬರ್ನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದರು ಎಂದು ‘The Newz India’ ವೆಬ್‌ಸೈಟ್‌ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯರ ಕಾರ್ಯಕ್ರಮ ರದ್ದು

ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮಕ್ಕೆ ಬರಬಾರದೆಂದು ಆಗ್ರಹಿಸಿ ಹಲವು ಸಂಘಟನೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ತಜ್ಞರು  ವಿಶ್ವವಿದ್ಯಾಲಯಕ್ಕೆ ಪತ್ರ ಬರೆದು ಪ್ರತಿಭಟನೆ ನಡೆಸಿದ್ದರು. ಕೆಲವು ಸಂಘಟನೆಗಳು ವಿಶ್ವವಿದ್ಯಾನಿಲಯಕ್ಕೆ ಪ್ರತಿಭಟನೆಯ ನೋಟಿಸ್ ಸಹ ಕಳುಹಿಸಿದ್ದವು. ಈ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರತಿಭಟನಾಕಾರರಿಗೆ ಇಮೇಲ್ ಮೂಲಕ ತಿಳಿಸಿದೆ.

ತನ್ನ ಪ್ರತಿಕ್ರಿಯೆಯಲ್ಲಿ ವಿವಿಯು, “ಈ ಕಾರ್ಯಕ್ರಮವನ್ನು ಸ್ವಿನ್‌ಬರ್ನ್ ವಿಶ್ವವಿದ್ಯಾಲಯದಿಂದ ಆಯೋಜಿಸಲಾಗಿಲ್ಲ. ಆದರೆ ವಿಶ್ವವಿದ್ಯಾಲಯದ ಕ್ಯಾಂಪಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತೊಂದು ಖಾಸಗಿ ಸಂಸ್ಥೆಯಾದ ಎಜುಕೇಶನ್ ಸೆಂಟರ್ ಆಫ್ ಆಸ್ಟ್ರೇಲಿಯಾ (ECA) ಕಾರ್ಯಕ್ರಮ ಹಮ್ಮಿಕೊಂಡಿದೆ. ಇಸಿಎ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಫ್ಯಾಸಿಸ್ಟ್‌, ಹಿಂದುತ್ವವಾದಿ, ಸ್ತ್ರೀವಿರೋಧಿ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಆಸ್ಟ್ರೇಲಿಯಾಕ್ಕೆ ಆಗಮಿಸಬಾರದೆಂದು ಪ್ರತಿಭಟನೆಗಳು ಆರಂಭವಾಗಿದ್ದವು. ಆತ ಎಐವಿಡಿ ಸಮ್ಮೇಳನದಲ್ಲಿ ಭಾಗವಹಿಸುವ ಮಾಹಿತಿಯು ಬಹಿರಂಗವಾದಾಗ, ಅವರ ವೀಸಾವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಆನ್‌ಲೈನ್ ಮೂಲಕ ಸಹಿ ಸಂಗ್ರಹ ಅಭಿಯಾನ ಶುರುವಾಯಿತು. ಇದುವರೆಗೆ 4,000ಕ್ಕೂ ಹೆಚ್ಚು ಜನರು ಇದರಲ್ಲಿ ಸಹಿ ಮಾಡಿದ್ದು, “ಫ್ಯಾಸಿಸ್ಟ್ ಸಂಸದರನ್ನು ಆಸ್ಟ್ರೇಲಿಯಾಕ್ಕೆ ಸರ್ಕಾರಿ ಸಂಸ್ಥೆಗಳ ವೆಚ್ಚದಲ್ಲಿ, ಸರ್ಕಾರಿ ಸಂಸ್ಥೆಗಳ ಹೆಸರಲ್ಲಿ ಕರೆಸುವುದು ಸ್ವೀಕಾರಾರ್ಹವಲ್ಲ” ಎಂದು ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ತೇಜಸ್ವಿ ಸೂರ್ಯ ಅವರಿಗೆ ವೇದಿಕೆ ನೀಡದಂತೆ ಎಐವೈಡಿ ಮತ್ತು ಅದರ ಅಂಗ ಸಂಸ್ಥೆಗಳಿಗೆ ಆಸ್ಟ್ರೇಲಿಯಾದ ಹಲವು ಸಂಘಟನೆಗಳು ಸಹ ಜಂಟಿ ಪತ್ರ ಬರೆದಿವೆ. ಆಸ್ಟ್ರೇಲಿಯನ್ ಸಂಸ್ಥೆಗಳಾದ ದಿ ಹ್ಯುಮಾನಿಸಂ ಪ್ರಾಜೆಕ್ಟ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್, ಆಸ್ಟ್ರೇಲಿಯನ್ ಫೆಡರೇಶನ್ ಆಫ್ ಇಸ್ಲಾಮಿಕ್ ಕೌನ್ಸಿಲ್ಸ್, ವಿ ಆರ್ ದಿ ಮೈನ್‌ಸ್ಟ್ರೀಮ್, ಸೌತ್ ಏಷ್ಯನ್ ಹ್ಯೂಮನಿಸ್ಟ್ ಅಸೋಸಿಯೇಷನ್, ನ್ಯೂಜಿಲೆಂಡ್, ಯುಎಸ್ ಮತ್ತು ಯುಕೆಯ ಮಾನವ ಹಕ್ಕುಗಳ ಸಂಘಟನೆಗಳು ಈ ಜಂಟಿ ಪತ್ರದಲ್ಲಿ ಸಹಿ ಮಾಡಿವೆ.

ದಿ ಹ್ಯುಮಾನಿಸಂ ಪ್ರಾಜೆಕ್ಟ್‌ನ ಡಾ. ಹರೂನ್ ಖಾಸಿಮ್ ಪ್ರತಿಕ್ರಿಯಿಸಿ, “ಎಐವೈಡಿ ವೆಬ್‌ಸೈಟ್‌ ಹೇಳುವಂತೆ ತೇಜಸ್ವಿ ಸೂರ್ಯ ತನ್ನನ್ನು ಆರ್‌‌ಎಸ್‌ಎಸ್‌ ಸ್ವಯಂಸೇವಕ ಎಂದು ಪರಿಚಯಿಸಿಕೊಳ್ಳುತ್ತಾರೆ. ಒಬ್ಬರನ್ನೊಬ್ಬರು ಶತ್ರುವನ್ನಾಗಿ ಮಾಡುತ್ತಾರೆ. ಅವರ ತತ್ತ್ವಚಿಂತನೆಗೆ ವೇದಿಕೆ ಕಲ್ಪಿಸುವುದು ಬುದ್ಧಿವಂತಿಕೆಯಲ್ಲ” ಎಂದಿದ್ದಾರೆ.

ಭಾರತೀಯ-ಆಸ್ಟ್ರೇಲಿಯನ್ ಲೇಖಕ ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾನಿಲಯದ ಉಪನ್ಯಾಸಕ ರೊನ್ನಾ ಗೊನ್ಸಾಲ್ವೆಸ್ ಪ್ರತಿಕ್ರಿಯಿಸಿ, “ವಿಶ್ವವಿದ್ಯಾನಿಲಯಗಳು ಮಹಿಳೆಯರನ್ನು ದ್ವೇಷಿಸುವ ಇಂತಹ ಹಿಂದುತ್ವ ಫ್ಯಾಸಿಸ್ಟ್‌ಗಳನ್ನು ಬೆಂಬಲಿಸಬಾರದು” ಎಂದು ಒತ್ತಾಯಿಸಿದ್ದಾರೆ.

“ಉನ್ನತ ಶಿಕ್ಷಣದೊಳಗೆ ಮಹಿಳಾ ವಿರೋಧಿ, ಮಿಲಿಟರಿ ಸಿದ್ಧಾಂತಕ್ಕೆ ವೇದಿಕೆಯನ್ನು ಒದಗಿಸುವುದು ಸರಿಯಲ್ಲ” ಎಂದು ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾಲಯದ ಡಾ.ಸುಖಮಣಿ ಖುರಾನಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ತೇಜಸ್ವಿಸೂರ್ಯ ಉಗ್ರ ಹಿಂದುತ್ವವಾದಿ ಮತ್ತು ಇಸ್ಲಾಂ ವಿರೋಧಿ ಎಂಬುದಕ್ಕೆ ಆತನ ಹಲವು ಹೇಳಿಕೆಗಳನ್ನು ಪ್ರತಿಭಟನಾಕಾರರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ ಅರಬ್ ಮಹಿಳೆಯರನ್ನು ಉಲ್ಲೇಖಿಸಿ ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್‌ ಒಂದನ್ನು ಆಧಾರವಾಗಿ ನೀಡಿದ್ದಾರೆ. “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಸೂರ್ಯ ಹೇಳಿದ್ದರು. ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. “ಯುಎಇ ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು” ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ಒದಗಿತು.

“ತೇಜಸ್ವಿ ಸೂರ್ಯರ ಧಾರ್ಮಿಕ ಮತಾಂಧತೆ ಎಲ್ಲರಿಗೂ ತಿಳಿದಿದೆ. ಆತನ ಧರ್ಮಾಂಧತೆ, ಮಹಿಳೆಯರ ಮೇಲಿನ ದ್ವೇಷ, ಅನಾಗರಿಕತೆಯ ವರ್ತನೆಗಳಿಗೆ ದಾಖಲೆಗಳಿವೆ. ಆದರೂ ಎಐವೈಡಿ ತನ್ನ ಕಾರ್ಯಕ್ರಮಕ್ಕೆ ಆತನನ್ನ ಆಹ್ವಾನಿಸಿದೆ. ಈ ಸಮ್ಮೇಳನವು ಆಸ್ಟ್ರೇಲಿಯಾದ ಅತ್ಯುತ್ತಮ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳನ್ನು ತನ್ನ ಪಾಲುದಾರರನ್ನಾಗಿ ಹೆಸರಿಸಿದೆ. ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಈ ಸಂಸ್ಥೆಗಳಿಗೆ ಸೂರ್ಯರ ವಿವಾದಿತ ಇತಿಹಾಸದ ಅರಿವಿದೆಯೇ? ಆಸ್ಟ್ರೇಲಿಯಾದ ಬಹುಸಂಸ್ಕೃತಿ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಮೌಲ್ಯಗಳಿಗೆ ಎಐವೈಡಿ ಬದ್ಧವಾಗಿದೆಯೆ?” ಎಂದು ಡಾ.ಖಾಸಿಂ ಪ್ರಶ್ನಿಸಿದ್ದಾರೆ.

ಎಐವೈಡಿ ಈ ಬಗ್ಗೆ ಪ್ರತಿಕ್ರಿಯಿಸದಿದ್ದರೂ ವಿವಾದ ಭುಗಿಲೆದ್ದ ನಂತರ ಹಲವಾರು ಪಾಲುದಾರ ಸಂಸ್ಥೆಗಳು ತಮ್ಮ ಹೆಸರುಗಳನ್ನು ವಾಪಸ್ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೊಂದು ಒಳ್ಳೆಯ ಬೆಳವಣಿಗೆ. ಮನುವಾದಿಗಳಿಗೆ ವಿದೇಶಗಳಲ್ಲಿ ಈ ರೀತಿಯಲ್ಲಿ ಮಂಗಳಾರತಿ ಕಾರ್ಯಕ್ರಮ ಮುಂದುವರೆಯಲಿ.

  2. ಇಂತಾ ಸಾಮಾಜಿಕ ವಿಷಜಂತುಗಳ ಕಾರ್ಯಕ್ರಮ ರದ್ದುಗೊಳಿಸಿ ಒಳ್ಳೆ ಕೆಲಸಮಾಡಿದೆ ಆಸ್ಟ್ರೇಲಿಯ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...