Homeಅಂಕಣಗಳುಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

- Advertisement -
- Advertisement -

ಭಾರತ ದೇಶವು ಬ್ರಿಟಿಷರಿಂದ ಸ್ವಾತಂತ್ರ್ಯಗೊಳ್ಳುವ ಹತ್ತು ತಿಂಗಳ ಮುಂಚೆ 1946ರಲ್ಲಿ ಕರ್ನಾಟಕದಲ್ಲಿ ಒಂದು ಭೀಕರ ದಲಿತರ ಹತ್ಯಾಕಾಂಡವಾಗುತ್ತದೆ. ಈ ಹತ್ಯಾಕಾಂಡ ನಡೆದ ವಲಯದ ಪೊಲೀಸ್ ಸ್ಟೇಷನ್ನಿಗೆ ಡಾ. ಬಿ. ಆರ್. ಅಂಬೇಡ್ಕರ್ ಅವರು ಖುದ್ದು ಭೇಟಿಕೊಟ್ಟು ಪ್ರಕರಣದ ಬಗ್ಗೆ ವಿಚಾರಿಸಿಕೊಂಡು ಹೋಗಿದ್ದಾರೆ. ಅಂತಹ ಭೀಕರ ಘಟನೆಯನ್ನು ಕರ್ನಾಟಕದ ದಲಿತರೂ ಸಹ ಮರೆತುಬಿಟ್ಟಿದ್ದಾರೆ. ಸಂವಿಧಾನ ಸಭೆಯಲ್ಲಿ ದಲಿತರಿಗೆ ರಕ್ಷಣೆ ಹಾಗೂ ಘನತೆ ಕೊಡುತ್ತೇವೆ ಎಂದು ಆಶ್ವಾಸನೆ ನೀಡಿದ ದಲಿತೇತರರೂ ಸಹ ತಮ್ಮ ಮಾತನ್ನು ಮರೆತುಬಿಟ್ಟಿದ್ದಾರೆ. ಈ ಸಾಸನೂರು ಘಟನೆಯನ್ನು ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ಅವರು ’ದಲಿತರ ಬದುಕು-ಮೆಲುಕು’ ಕೃತಿಯಲ್ಲಿ ನಮೂದಿಸಿದ್ದಾರೆ.

ವಿಜಾಪುರ ಜಿಲ್ಲೆಯಲ್ಲಿನ ಬಸವನ ಬಾಗೇವಾಡಿ ತಾಲ್ಲೂಕಿನ ಸಾಸನೂರ ಗ್ರಾಮವು ವಿಜಾಪುರದಿಂದ ಸುಮಾರು 65 ಕಿ.ಮೀ. ಅಂತರದಲ್ಲಿದೆ. ಈ ಗ್ರಾಮದಲ್ಲಿ ದಲಿತರ ಒಂದು ಜಾತಿಯ ಮೇಲೆ ನಡೆಸಿದ ದೌರ್ಜನ್ಯ ಪ್ರಕರಣ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ದೌರ್ಜನ್ಯ ನಡೆಸಿದವರು ರೆಡ್ಡಿ ಜನಾಂಗದವರು. 22ನೇ ಅಕ್ಟೋಬರ್ 1946ರ ಮುಂಜಾನೆಯಂದು ದಲಿತರ ಮೇಲೆ ರೆಡ್ಡಿ ಜನಾಂಗದವರು ದೌರ್ಜನ್ಯವೆಸಗಿದರೆಂದು ದಾಖಲಾಗಿದೆ. ದಲಿತರು ಮೇಲ್ಜಾತಿಯ ರೆಡ್ಡಿಗಳಿಗೆ ಅಣ್ಣಾ, ಅಪ್ಪಾ, ಅವ್ವಾ ಎಂದು ಕರೆಯದೆ ಸ್ವಾಭಿಮಾನದ ಬದುಕು ನಡೆಸುತ್ತಿದ್ದದ್ದೇ ಈ ಘಟನೆ ನಡೆಯಲು ಬಹುಮುಖ್ಯ ಕಾರಣವಾಗಿದೆ. ಇದನ್ನು ಸಹಿಸದ ಮೇಲ್ಜಾತಿಯವರು ದಲಿತರ ಮೇಲೆ ದಬ್ಬಾಳಿಕೆಯನ್ನು ಮಾಡತೊಡಗಿದರು.
ಇದರಿಂದ ಜಗ್ಗದ ದಲಿತರು ದೌರ್ಜನ್ಯಕ್ಕೆ ಎದುರಾಗಿ ತಿರುಗಿಬಿದ್ದರು.

ಆದರೆ ಹೀಗೆ ತಿರುಗಿಬಿದ್ದ ದಲಿತರನ್ನು ವಿರುದ್ಧ ಬೀಳುವ ಅಲ್ಲಿನ ಮೇಲ್ಜಾತಿಗಳ ಜನರು, ತಮ್ಮ ಹೊಲದಲ್ಲಿ ಬೆಳೆದ ದವಸಗಳನ್ನು ರಾಶಿ ಮಾಡಿಕೊಂಡು ಬರುತ್ತಿದ್ದಾಗ ಅವರ ಹಾದಿಯಲ್ಲಿಯೇ ಗಾಡಿಯನ್ನು ನಿಲ್ಲಿಸಿ ತಮಗೆ ಬೇಕಾದಷ್ಟು ಆಹಾರ ಧಾನ್ಯವನ್ನು ದಬ್ಬಾಳಿಕೆಯಿಂದ ದಲಿತರು ಕಸಿದುಕೊಂಡು ಹೋಗುತ್ತಿದ್ದರೆಂದು ಆಪಾದಿಸುತ್ತಾರೆ. ಜೊತೆಗೆ ಆಯುಧ ಪೂಜಾ ಸಂದರ್ಭದಲ್ಲಿ ಎತ್ತುಗಳನ್ನು ಶೃಂಗರಿಸಿ ಊರಿನ ಕೇರಿಗಳಲ್ಲಿ ಮೆರವಣಿಗೆ ಮಾಡಲು ದಲಿತರು ಸಿದ್ಧರಾಗಿದ್ದರು. ಆದರೆ ಈ ಎತ್ತುಗಳ ಮೆರವಣಿಗೆಯನ್ನು ತಡೆಗಟ್ಟುವುದು ಮೇಲ್ಜಾತಿಯವರ ಪ್ರತಿಷ್ಠೆಯ ವಿಷಯವಾಗಿತ್ತು.

ಇದರ ಜೊತೆಜೊತೆಗೆ ನಡೆದ ಮತ್ತೊಂದು ಘಟನೆ ಇದು. ಸಾಸನೂರ ಗ್ರಾಮದ ದಲಿತರಾದ ಹೊನ್ನಪ್ಪ ಸಾಸನೂರ ಮತ್ತು ಯಲ್ಲಪ್ಪ ಸಾಸನೂರ ಎಂಬ ಇಬ್ಬರು ಸಹೋದರರು ಕುಸ್ತಿಪಟುಗಳಾಗಿದ್ದರು. ಈ ಇಬ್ಬರು ಪಕ್ಕದ ತುಂಬಗಿ ಗ್ರಾಮಕ್ಕೆ ಕುಸ್ತಿ ಆಡಲು ಹೋಗಿದ್ದರು. ಅಲ್ಲಿಗೆ ಹೋದಾಗ ಮೇಲ್ಜಾತಿಯವರಿಗೆ ಹೊನ್ನಪ್ಪನ ಕಾಲು ತಾಕಿದ್ದನ್ನು ನೆಪ ಮಾಡಲಾಯಿತು. ಹೊಲೆಯನ ಕಾಲು ತಾಕಿತೆಂದು ತುಂಬಗಿಯ ಮೇಲ್ಜಾತಿಯವರು ಹೊನ್ನಪ್ಪನಿಗೆ ಜೀವ ಹೋಗುವ ಹಾಗೆ ಬಡಿದರು. ಇದರಿಂದ ಜೀವಕ್ಕೆ ಹೆದರಿ ಯಲ್ಲಪ್ಪ ಅಲ್ಲಿಂದ ಓಡಿಹೋದ. ತದನಂತರ ಹೊನ್ನಪ್ಪನಿಗೂ ಎಚ್ಚರವಾಯ್ತು; ಇಬ್ಬರೂ ತಮ್ಮ ಊರಾದ ಸಾಸನೂರಿಗೆ ಬಂದರು.

ಇನ್ನೊಂದು ದಿನ ತುಂಬಗಿಯ ಮೇಲ್ಜಾತಿಯ ಜನರು ಬೀಗರ ಊರಾದ ಸಾಸನೂರಿಗೆ ಬರುವ ಸುದ್ದಿಯನ್ನು ತಿಳಿದು ಹೊನ್ನಪ್ಪ ಮತ್ತು ಯಲ್ಲಪ್ಪ ತಮ್ಮ ಸೇಡನ್ನು ತೀರಿಸಿಕೊಳ್ಳಲು ಡೋಣಿಯಲ್ಲಿ ಕಾದು ಕುಳಿತುಕೊಂಡಿದ್ದರು. ಈ ಸುದ್ದಿಯು ಮೇಲ್ಜಾತಿಯವರಿಗೆ ಗೊತ್ತಾದಾಗ ಎರಡೂ ಗುಂಪುಗಳ ಮಧ್ಯೆ ವೈರತ್ವ ಮತ್ತಷ್ಟು ಉಲ್ಬಣಗೊಂಡಿತು. ಉರಿಯುವ ಬೆಂಕಿಗೆ ತುಪ್ಪ ಹಾಕಿದ ಹಾಗಾಯಿತು ಎಂಬಂತೆ ಮತ್ತಷ್ಟು ವಿಕೋಪಕ್ಕೇರಿತು.

ಇದೇ ಸಮಯದಲ್ಲಿ ಒಬ್ಬ ಮೇಲ್ಜಾತಿಯ ಹೆಣ್ಣುಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಳು. ಈ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅಲ್ಲಿನ ಜನರು ಹೇಳುವುದೇನೆಂದರೆ, ಅವಳಿಗೆ ದಲಿತ ವ್ಯಕ್ತಿಯೊಬ್ಬನೊಂದಿಗೆ ಅನೈತಿಕ ಸಂಬಂಧವಿತ್ತು ಮತ್ತು ಆ ಅನೈತಿಕ ವಿಷಯ ಎಲ್ಲ ಮೇಲ್ಜಾತಿಯವರಿಗೆ ಗೊತ್ತಾಗಿದ್ದರಿಂದ ಅವಳು ಆತ್ಮಹತ್ಯೆ ಮಾಡಿಕೊಂಡಳೆಂದು. ಆದರೆ ಇನ್ನೊಂದು ಕಡೆ ಮೇಲ್ಜಾತಿಯವರು ಈ ಸಂಬಂಧಕ್ಕೆ ಬಣ್ಣ ಕೊಟ್ಟು ದಲಿತರು ಮೇಲ್ಜಾತಿಯ ಹೆಣ್ಣುಮಕ್ಕಳನ್ನು ಪೀಡಿಸುವುದು, ಅತ್ಯಾಚಾರವೆಸಗುವುದು, ಅನೈತಿಕ ಚಟುವಟಿಕೆ
ಗಳಿಗೆ ಒತ್ತಾಯ ಮಾಡುವುದು ಮುಂತಾದ ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆಂದು ಹಬ್ಬಿಸಿದರು. ಹಾಗೆಯೇ ಈ ಹೆಣ್ಣುಮಗಳೊಂದಿಗೂ ನಡೆದುಕೊಂಡಿರುವ ಕಾರಣ ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಳು ಎಂದು ಕತೆಕಟ್ಟಿದರು. ಈ ಮೇಲ್ವರ್ಗದವರ ಮಾತನ್ನು ಅಂದಿನ ಘಟನೆಯನ್ನು ನೋಡಿರುವ ಸಂಗಪ್ಪನವರು ತಳ್ಳಿಹಾಕುತ್ತಾರೆ.

ದಲಿತರು ಹೀಗೆ ತಿರುಗಿಬಿದ್ದದ್ದರಿಂದಾಗಿ ಮೇಲ್ಜಾತಿಯ ರೆಡ್ಡಿಗಳು ದಲಿತರ ಮೇಲೆ ಮಾಟ-ಮಂತ್ರಗಳನ್ನು ಮಾಡಿಸಲು ಒಬ್ಬ ಮಾಂತ್ರಿಕನ ಬಳಿ ಹೋದರಂತೆ. ಮಾಟಗಾರನು ದೀಪಾವಳಿ ಬಲಿಪಾಡ್ಯದ ದಿನದಂದು ದಲಿತರನ್ನು ಬಲಿ ತೆಗೆದುಕೊಂಡರೆ ಯಾವ ಸಮಸ್ಯೆಯೂ ನಿಮಗೆ ಬರುವುದಿಲ್ಲ ಎಂದು ಹೇಳಿದನಂತೆ. ಅದರ ಪ್ರಕಾರ ಮೇಲ್ಜಾತಿಯವರು ದಲಿತರನ್ನು ಹೊಡೆಯಲು ತಯಾರಿ ಮಾಡಿಕೊಂಡು ದಾಸಪ್ಪನೆಂಬ ಸವರ್ಣೀಯನನ್ನು ಹೊಲಗೇರಿಯಲ್ಲಿ ಹಾಯ್ದು ಕಸ ಚೆಲ್ಲಲು ಕಳುಹಿಸಿಕೊಟ್ಟರು. ಆಗ ಅಲ್ಲಿನ ದಲಿತರು ದಾಸಪ್ಪನನ್ನು ವಿಚಾರಿಸಲಾಗಿ ಅವನು ಕಸ ಚೆಲ್ಲಲು ಬಂದಿರುವುದಾಗಿ ತಿಳಿಸಿದನು. ’ಹಿಡಕೋರಲೆ ಅವನನ್ನು’ ಅಂದ ತಕ್ಷಣ ಅವನು ಸಾರ್ವಜನಿಕವಾಗಿ ಕೂಗುತ್ತಾ, ’ನನ್ನನ್ನು ಹೊಲೆಯರು ಹೊಡೆದರೆಂದು’ ಹೇಳಿದಾಗ ಮನೆಯ ಮೇಲೆ ನಿಂತ ಸವರ್ಣೀಯರು ಹೊಲೆಯರತ್ತ ಕಲ್ಲುಗಳನ್ನು ಬಿಸಾಡಿದರು. ಅದಕ್ಕೆ ಪ್ರತಿಯಾಗಿ ಹೊಲೆಯರು ಸವರ್ಣೀಯರನ್ನು ಹೊಡೆದು ಊರೊಳಕ್ಕೆ ಓಡಿಸಿದರು. ತದನಂತರ ಹೊಲೆಯರೆಲ್ಲ ಒಟ್ಟಾಗಿ ಒಂದು ಮನೆಯಲ್ಲಿ ಸೇಂದಿಯನ್ನು ಕುಡಿಯುತ್ತಾ ಈ ಜಗಳದ ಕುರಿತು ಮಾತನಾಡುತ್ತಿದ್ದರು. ಇದನ್ನು ಸಾಸನೂರಿನ ವ್ಯಕ್ತಿಯು ನೋಡಿ ರೆಡ್ಡಿ ಜನಾಂಗಕ್ಕೆ ಈ ವಿಷಯವನ್ನು ತಿಳಿಸಿದನು. ಇದನ್ನು ತಿಳಿದ ಊರಿನ ಜನರು ಹೊಲೆಯರ ಕೇರಿಗೆ ಬಂದು, ಅಮಲಿನಲ್ಲಿ ಒಟ್ಟಿಗೆ ಸೇರಿದ್ದ ಹೊಲೆಯರ ಕೋಣೆಯ ಬಾಗಿಲನ್ನು ಹೊರಗಿನಿಂದಲೇ ಮುಚ್ಚಿದರು ಮತ್ತು ಕಿಟಕಿ ಮುಖಾಂತರ ಬೆಂಕಿಯಲ್ಲಿ ಮೆಣಸಿನಕಾಯಿಯನ್ನು ಎಸೆದು ಘಾಟು ಎಬ್ಬಿಸಿ ಆ ಮನೆಗೆ ಬೆಂಕಿಯನ್ನು ಹಚ್ಚಿದರು.

ಇದರಿಂದ ವಿಚಲಿತಗೊಂಡ ದಲಿತರು ಮನೆಯೊಳಗೆ ಚೀರಾಡತೊಡಗಿದ್ದರು. ಜಾಗ ಮಾಡಿಕೊಂಡು ಹೊರಬಂದ ದಲಿತರನ್ನು ಒಬ್ಬೊಬ್ಬರಾಗಿ ಕೊಂದರು. ಹೀಗೆ ಒಟ್ಟು 14 ಜನರಲ್ಲಿ 13 ಜನರನ್ನು ಕಡಿದು ಕೊಂದಿರುವ ಪ್ರಕರಣ ಬಸವನ ಬಾಗೇವಾಡಿ ತಾಲ್ಲೂಕಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಆದರೆ ಮೇಲ್ಜಾತಿಯ ರೆಡ್ಡಿಗಳಿಗೆ ಹೆದರಿ ಶಾಮೀಲಾದ ದಲಿತರ ಮತ್ತೊಂದು ಜಾತಿಯವರು ಆಸೆ ಆಮಿಷಗಳಿಗೆ ಬಲಿಯಾದರು. ಅವರ ಕುಟುಂಬಗಳ ಸಂಪೂರ್ಣ ಜವಾಬ್ದಾರಿಯನ್ನು ನೋಡಿಕೊಳ್ಳುವುದಾಗಿ ಸವರ್ಣೀಯರು ತಿಳಿಸಿದಾಗ ಆ ಕೊಲೆಯನ್ನು ತಾವೇ ಮಾಡಿದ್ದೇವೆಂದು ಮತ್ತೊಂದು ದಲಿತ ಜಾತಿಯವರು ತಮ್ಮ ಮೇಲೆ ಹಾಕಿಕೊಂಡರು. ಭಯಗೊಂಡ ಕೊಲೆ ಬೆದರಿಕೆಗೊಳಗಾದ ದಲಿತರು ಊರು ಬಿಟ್ಟು ಬೇರೆಬೇರೆ ಊರುಗಳಿಗೆ ಹೋಗಿ ನೆಲೆಸಿದರು. ಇದರಿಂದಾಗಿ ದೌರ್ಜನ್ಯ ಮಾಡಿದ ಸವರ್ಣೀಯರು ಕುತಂತ್ರದಿಂದ ಪಾರಾದರಲ್ಲದೆ ಈ ಪ್ರಕರಣ ಸಂಬಂಧ ಮತ್ತೊಂದು ದಲಿತ ಜಾತಿಯವರಿಗೆ ಶಿಕ್ಷೆಯಾಯಿತು. ದಲಿತರನ್ನು ಕೊಂದದ್ದಕ್ಕೆ ದಲಿತರೇ ಶಿಕ್ಷೆ ಅನುಭವಿಸುವಂತಾಯಿತು. ಈ ದೌರ್ಜನ್ಯ ಘಟನೆಯ ಸಲುವಾಗಿ ಡಾ. ಅಂಬೇಡ್ಕರ್ ಅವರು ಬಸವನಬಾಗೇವಾಡಿ ಪೊಲೀಸ್ ಠಾಣೆಗೆ ಭೇಟಿ ನೀಡಿದರು ಎಂದು 1946ರ ಬೀಟ್ ಡೈರಿಯಲ್ಲಿ ದಾಖಲಾಗಿದೆ.

ಇದೇ ಸಾಸನೂರಿಗೆ ಸಂಬಂಧಿಸಿದಂತೆ ಇಂತಹ ಹಲವು ಘಟನೆಗಳ ರಹಸ್ಯಗಳೇ ತುಂಬಿಹೋಗಿವೆ. ಸಾಸನೂರಿನಿಂದ ಬೇರೆಡೆಗೆ ಬಂದು ನೆಲೆಸಿರುವ ದಲಿತರು 1930ರ ದಶಕದಲ್ಲಿ ಅಂಬೇಡ್ಕರ್ ಅವರ ಮಹಾಡ್ ಸತ್ಯಾಗ್ರಹದ ಪ್ರಭಾವಕ್ಕೆ ಒಳಗಾಗಿ ಸಾಸನೂರಿನ ದಲಿತರನ್ನೂ ಕೆರೆನೀರು ಮುಟ್ಟುವ ಸಾಹಸಕ್ಕೆ ಕೈ ಹಾಕಿದ್ದರೆಂಬ ಕತೆಯೂ ಇದೆ. ಆ ಘಟನೆಯಲ್ಲಿಯೂ ಮರಗದಮ್ಮ ಜಾತ್ರೆಯಲ್ಲಿ ಮರಗದಮ್ಮನಿಗೆ ಸತ್ಯಾಗ್ರಹ ಮಾಡಿದ ದಲಿತರನ್ನೇ ಬಲಿ ನೀಡಲಾಯಿತೆಂದೂ ಹೇಳಲಾಗುತ್ತದೆ. ಇದರ ಸತ್ಯಾಸತ್ಯತೆಯನ್ನು ಸಂಶೋಧನೆಗಳೇ ಬಯಲುಗೊಳಿಸಬೇಕಿದೆ.

ಅದೇನೇ ಇರಲಿ ಬ್ರಿಟಿಷರಿಂದ ಭಾರತೀಯರಿಗೆ ಸ್ವತಂತ್ರ ಬಂದಿದೆಯಾದರೂ ದಲಿತೇತರ ಮೇಲ್ಜಾತಿಗಳಿಂದ ದಲಿತರಿಗೆ ಸ್ವಾತಂತ್ರ್ಯ ದೊರಕಿಲ್ಲ. ಇದಕ್ಕೆ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮವೇ ಆಗಬೇಕಿದೆ ಎನಿಸುತ್ತದೆ.


ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...