Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

ಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

- Advertisement -
- Advertisement -

| ಸರೋವರ್ ಬೆಂಕೀಕೆರೆ |

ಜೂನ್ 30 ರಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕೇಸರಿ ಬಣ್ಣದ ಹೊಸ ಉಡುಪನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (BCCI) ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಸಮವಸ್ತ್ರ ಬದಲಾಗಿದ್ದು ಯಾಕೆ ಮತ್ತು ಕೇಸರಿ ಬಣ್ಣವೇ ಏಕೆ ಎಂದು ದೇಶದಾದ್ಯಂತ ಚರ್ಚೆ ಆಗುತ್ತಿದೆ‌. ಅಲ್ಲದೆ ಇದು Indian oil ಪೆಟ್ರೋಲ್ ಬಂಕ್ ನ ಸಮವಸ್ತ್ರದಂತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರಾಲ್ ಕೂಡ ಆಗುತ್ತಿದೆ.

ಒಂದೇ ಬಣ್ಣದ ಜರ್ಸಿ ಅನ್ನು ಹೊಂದಿರುವ ತಂಡಗಳು ಪಂದ್ಯವನ್ನು ಆಡುವಾಗ ಬಣ್ಣದ ಮಧ್ಯೆ ಗೊಂದಲಗಳು ಉಂಟಾದರೆ ಆ ನಿರ್ಧಿಷ್ಟ ಪಂದ್ಯಕ್ಕೆ ಒಂದು ತಂಡ ತನ್ನ ಜರ್ಸಿಯ ಬಣ್ಣವನ್ನು ಬದಲಾಯಿಸಬಹುದು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ‌. ಈ ಟೂರ್ನಿಯಲ್ಲಿ ಸಧ್ಯ ಭಾರತ, ಶ್ರೀಲಂಕ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನೀಲಿ ಬಣ್ಣದ ಜರ್ಸಿಯನ್ನು ಹೊಂದಿದೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ಹಸಿರು ಬಣ್ಣದ ಜರ್ಸಿಯನ್ನು ಹೊಂದಿದೆ. ಈ ತಂಡಗಳ ಮಧ್ಯೆ ಪಂದ್ಯಗಳು ನಡೆದಾಗ ಬೇರೆ ಬಣ್ಣದ ಜರ್ಸಿಯನ್ನು ಬದಲಾಯಿಸಬಹುದಾಗಿದೆ. ICC ಬಣ್ಣದ ಆಯ್ಕೆಯ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ BCCI ಗೆ ನೀಡಿದೆ.

ಕೇಸರಿ ಬಣ್ಣವೇ ಯಾಕೆ?

ICC ನಿಯಾಮವಳಿ ಪ್ರಕಾರ ಒಂದೇ ಬಣ್ಣದ ಸಮವಸ್ತ್ರ ಇರುವ ತಂಡಗಳ ನಡುವೆ ಪಂದ್ಯ ನಡೆದಾಗ ತಂಡದ ಅಭಿಮಾನಿಗಳ ಇಚ್ಛೆಯನ್ನೂ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಪಂದ್ಯಕ್ಲೆ ಜರ್ಸಿಯ ಬಣ್ಣವನ್ನು ಬದಲಾಯಿಸಿಬಹುದಾಗಿದೆ. ಆದರೆ ಇದೀಗ ಕೇಸರಿ ಬಣ್ಣವೇ ಯಾಕೆ ಎನ್ನುವ ಪ್ರಶ್ನೆ ದೇಶದಾದ್ಯಂತ ಬಿಸಿ ಚರ್ಚೆ ಆಗುತ್ತಿದೆ ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವ ಆಪಾದನೆಯೂ ಕೇಳಿ ಬರುತ್ತಿದೆ.

ಈ ಹಿಂದೆ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ಸಮವಸ್ತ್ರದ ಬಣ್ಣವನ್ನು ಬದಲಾವಣೆ ಮಾಡಿಕೊಂಡಿತ್ತು. ಹಾಗೂ ಬಾಂಗ್ಲಾದೇಶ ಮತ್ತು ಆಫ್ರಿಕಾ ತಂಡದ ನಡುವೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಹಸಿರು ಬಣ್ಣದ ಅಂಗಿಯ ಬದಲಾಗಿ ಹಳದಿ ಬಣ್ಣದ ಅಂಗಿ ಧರಿಸಿತ್ತು. ಆಫ್ರಿಕಾ ತಂಡ ನಿತ್ಯ ಬಳಸುತ್ತಿದ್ದ ಅಂಗಿಯಲ್ಲಿ ಹಳದಿಯೂ ಇತ್ತಾದ್ದರಿಂದ ಅದರದ್ದೇ ವಿರುದ್ಧ ಬಣ್ಣದ ಅಂಗಿಯನ್ನು ವಿನ್ಯಾಸ ಮಾಡಿಕೊಂಡಿತ್ತು. ಅಂದರೆ ಹಳದಿ ಬಣ್ಣ ಎದ್ದುಕಾಣುವಂತೆ. ಭಾರತ ತಂಡದ T-20 ವಿಶ್ವಕಪ್ ಪಂದ್ಯಕ್ಕೆ ನೀಲಿ ಬಣ್ಣದ ಅಂಗಿಗೆ ಕೇಸರಿ ಗೆರೆಗಳನ್ನು ಹೊಂದಿರುವ ಜರ್ಸಿಯನ್ನು ವಿನ್ಯಾಸಗೊಳಿಸಲಾಗಿತ್ತು. ಈಗಿನ ಪಂದ್ಯಕ್ಕೆ ಅದೇ ಎಳೆಯನ್ನು ಇಟ್ಟುಕೊಂಡು ಕೇಸರಿ ಎದ್ದು ಕಾಣುವಂತೆ ವಿನ್ಯಾಸ ಮಾಡಿದೆ ಹಾಗೂ ಮೂಲ ಬಣ್ಣವಾದ ನೀಲಿಯನ್ನು ಇಟ್ಟುಕೊಂಡಿದೆ ಹಾಗೂ ಹಿಂದಿನ ಕೇಸರಿ ಪಟ್ಟಿಯ ಅಂಗಿಯನ್ನು T-20 ಪಂದ್ಯಕ್ಕೆ ವಿನ್ಯಾಸ ಮಾಡಿದ್ದು ಅಮೇರಿಕಾದ ವಿನ್ಯಾಸಕಾರರು ಎಂದು ICC ನ ಮೂಲಗಳಯ ತಿಳಿಸಿವೆ‌.

ಒಟ್ಟಾರೆ ಹೊಸ ಉಡುಪಿನ ಬಣ್ಣವನ್ನು ಅಭಿಮಾನಿಗಳು ಅಷ್ಟಾಗಿ ಮೆಚ್ಚಿಕೊಂಡಿಲ್ಲ ಎಂಬುದನ್ನು ಸಮಾಜಿಕ ಜಾಲತಾಣದ ಪ್ರತಿಕ್ರಿಯೆಗಳು ತಿಳಿಸುತ್ತಿವೆ. ಅಲ್ಲದೆ ವಿರಾಟ್ ಕೋಹ್ಲಿ ಸಹ ನೀಲಿ ಜರ್ಸಿಯೇ ಚೆನ್ನಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ ಎಂದು ಸುದ್ಧಿಯಾಗಿದೆ. ಅಲ್ಲದೆ ಬಣ್ಣದ ಬದಲಾವಣೆಯಿಂದ ಸೋಲು ಗೆಲುವಿನ ಲೆಕ್ಕಾಚಾರವೂ ಶುರುವಾಗಿದೆ. ಏನೇ ಆದರೂ ಪಂದ್ಯದಲ್ಲಿ ಆಟಗಾರರ ಕಾರ್ಯಕ್ಷಮತೆ ಮುಖ್ಯವೇ ಹೊರತು ಬಣ್ಣವಲ್ಲ ಅನ್ನುವುದು ವಾಸ್ತವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...