Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

ಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

- Advertisement -
- Advertisement -

| ಸರೋವರ್ ಬೆಂಕೀಕೆರೆ |

ಜೂನ್ 30 ರಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕೇಸರಿ ಬಣ್ಣದ ಹೊಸ ಉಡುಪನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (BCCI) ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಸಮವಸ್ತ್ರ ಬದಲಾಗಿದ್ದು ಯಾಕೆ ಮತ್ತು ಕೇಸರಿ ಬಣ್ಣವೇ ಏಕೆ ಎಂದು ದೇಶದಾದ್ಯಂತ ಚರ್ಚೆ ಆಗುತ್ತಿದೆ‌. ಅಲ್ಲದೆ ಇದು Indian oil ಪೆಟ್ರೋಲ್ ಬಂಕ್ ನ ಸಮವಸ್ತ್ರದಂತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರಾಲ್ ಕೂಡ ಆಗುತ್ತಿದೆ.

ಒಂದೇ ಬಣ್ಣದ ಜರ್ಸಿ ಅನ್ನು ಹೊಂದಿರುವ ತಂಡಗಳು ಪಂದ್ಯವನ್ನು ಆಡುವಾಗ ಬಣ್ಣದ ಮಧ್ಯೆ ಗೊಂದಲಗಳು ಉಂಟಾದರೆ ಆ ನಿರ್ಧಿಷ್ಟ ಪಂದ್ಯಕ್ಕೆ ಒಂದು ತಂಡ ತನ್ನ ಜರ್ಸಿಯ ಬಣ್ಣವನ್ನು ಬದಲಾಯಿಸಬಹುದು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ‌. ಈ ಟೂರ್ನಿಯಲ್ಲಿ ಸಧ್ಯ ಭಾರತ, ಶ್ರೀಲಂಕ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನೀಲಿ ಬಣ್ಣದ ಜರ್ಸಿಯನ್ನು ಹೊಂದಿದೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ಹಸಿರು ಬಣ್ಣದ ಜರ್ಸಿಯನ್ನು ಹೊಂದಿದೆ. ಈ ತಂಡಗಳ ಮಧ್ಯೆ ಪಂದ್ಯಗಳು ನಡೆದಾಗ ಬೇರೆ ಬಣ್ಣದ ಜರ್ಸಿಯನ್ನು ಬದಲಾಯಿಸಬಹುದಾಗಿದೆ. ICC ಬಣ್ಣದ ಆಯ್ಕೆಯ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ BCCI ಗೆ ನೀಡಿದೆ.

ಕೇಸರಿ ಬಣ್ಣವೇ ಯಾಕೆ?

ICC ನಿಯಾಮವಳಿ ಪ್ರಕಾರ ಒಂದೇ ಬಣ್ಣದ ಸಮವಸ್ತ್ರ ಇರುವ ತಂಡಗಳ ನಡುವೆ ಪಂದ್ಯ ನಡೆದಾಗ ತಂಡದ ಅಭಿಮಾನಿಗಳ ಇಚ್ಛೆಯನ್ನೂ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಪಂದ್ಯಕ್ಲೆ ಜರ್ಸಿಯ ಬಣ್ಣವನ್ನು ಬದಲಾಯಿಸಿಬಹುದಾಗಿದೆ. ಆದರೆ ಇದೀಗ ಕೇಸರಿ ಬಣ್ಣವೇ ಯಾಕೆ ಎನ್ನುವ ಪ್ರಶ್ನೆ ದೇಶದಾದ್ಯಂತ ಬಿಸಿ ಚರ್ಚೆ ಆಗುತ್ತಿದೆ ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವ ಆಪಾದನೆಯೂ ಕೇಳಿ ಬರುತ್ತಿದೆ.

ಈ ಹಿಂದೆ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ಸಮವಸ್ತ್ರದ ಬಣ್ಣವನ್ನು ಬದಲಾವಣೆ ಮಾಡಿಕೊಂಡಿತ್ತು. ಹಾಗೂ ಬಾಂಗ್ಲಾದೇಶ ಮತ್ತು ಆಫ್ರಿಕಾ ತಂಡದ ನಡುವೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಹಸಿರು ಬಣ್ಣದ ಅಂಗಿಯ ಬದಲಾಗಿ ಹಳದಿ ಬಣ್ಣದ ಅಂಗಿ ಧರಿಸಿತ್ತು. ಆಫ್ರಿಕಾ ತಂಡ ನಿತ್ಯ ಬಳಸುತ್ತಿದ್ದ ಅಂಗಿಯಲ್ಲಿ ಹಳದಿಯೂ ಇತ್ತಾದ್ದರಿಂದ ಅದರದ್ದೇ ವಿರುದ್ಧ ಬಣ್ಣದ ಅಂಗಿಯನ್ನು ವಿನ್ಯಾಸ ಮಾಡಿಕೊಂಡಿತ್ತು. ಅಂದರೆ ಹಳದಿ ಬಣ್ಣ ಎದ್ದುಕಾಣುವಂತೆ. ಭಾರತ ತಂಡದ T-20 ವಿಶ್ವಕಪ್ ಪಂದ್ಯಕ್ಕೆ ನೀಲಿ ಬಣ್ಣದ ಅಂಗಿಗೆ ಕೇಸರಿ ಗೆರೆಗಳನ್ನು ಹೊಂದಿರುವ ಜರ್ಸಿಯನ್ನು ವಿನ್ಯಾಸಗೊಳಿಸಲಾಗಿತ್ತು. ಈಗಿನ ಪಂದ್ಯಕ್ಕೆ ಅದೇ ಎಳೆಯನ್ನು ಇಟ್ಟುಕೊಂಡು ಕೇಸರಿ ಎದ್ದು ಕಾಣುವಂತೆ ವಿನ್ಯಾಸ ಮಾಡಿದೆ ಹಾಗೂ ಮೂಲ ಬಣ್ಣವಾದ ನೀಲಿಯನ್ನು ಇಟ್ಟುಕೊಂಡಿದೆ ಹಾಗೂ ಹಿಂದಿನ ಕೇಸರಿ ಪಟ್ಟಿಯ ಅಂಗಿಯನ್ನು T-20 ಪಂದ್ಯಕ್ಕೆ ವಿನ್ಯಾಸ ಮಾಡಿದ್ದು ಅಮೇರಿಕಾದ ವಿನ್ಯಾಸಕಾರರು ಎಂದು ICC ನ ಮೂಲಗಳಯ ತಿಳಿಸಿವೆ‌.

ಒಟ್ಟಾರೆ ಹೊಸ ಉಡುಪಿನ ಬಣ್ಣವನ್ನು ಅಭಿಮಾನಿಗಳು ಅಷ್ಟಾಗಿ ಮೆಚ್ಚಿಕೊಂಡಿಲ್ಲ ಎಂಬುದನ್ನು ಸಮಾಜಿಕ ಜಾಲತಾಣದ ಪ್ರತಿಕ್ರಿಯೆಗಳು ತಿಳಿಸುತ್ತಿವೆ. ಅಲ್ಲದೆ ವಿರಾಟ್ ಕೋಹ್ಲಿ ಸಹ ನೀಲಿ ಜರ್ಸಿಯೇ ಚೆನ್ನಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ ಎಂದು ಸುದ್ಧಿಯಾಗಿದೆ. ಅಲ್ಲದೆ ಬಣ್ಣದ ಬದಲಾವಣೆಯಿಂದ ಸೋಲು ಗೆಲುವಿನ ಲೆಕ್ಕಾಚಾರವೂ ಶುರುವಾಗಿದೆ. ಏನೇ ಆದರೂ ಪಂದ್ಯದಲ್ಲಿ ಆಟಗಾರರ ಕಾರ್ಯಕ್ಷಮತೆ ಮುಖ್ಯವೇ ಹೊರತು ಬಣ್ಣವಲ್ಲ ಅನ್ನುವುದು ವಾಸ್ತವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...