Homeಚಳವಳಿಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

ಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಅವಾಂತರಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಶಾಲೆ ಶುರುವಾಗಿ 20 ದಿನಗಳಾಗುತ್ತಾ ಬಂದರೂ ಪಠ್ಯ ಪುಸ್ತಕಗಳು ಮಕ್ಕಳ ಕೈ ಸೇರಿಲ್ಲ. ಇನ್ನು ಸರ್ಕಾರದ ವೆಬ್‌ಸೈಟ್‌ನಲ್ಲಿನ ಪಿಡಿಎಫ್‌ಗಳು ಪದೇ ಪದೇ ಬದಲಾಗುತ್ತಾ ಗೊಂದಲ ಮೂಡಿಸಿವೆ. ಇಂತಹ ಸಂದರ್ಭದಲ್ಲಿ ನೂತನ ಪಠ್ಯದಲ್ಲಿ  ಡಾ.ಎಚ್.ಎಸ್ ಅನುಪಮಾ, ಬೊಳುವಾರು ಮಹಮದ್ ಕುಂಞಿ ಸೇರಿದಂತೆ ಇತರ ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವುದು ಬೆಳಕಿಗೆ ಬಂದಿದೆ.

ಯಾವುದೇ ಅರ್ಹತೆಯಿಲ್ಲದ ರೋಹಿತ್‌ ಚಕ್ರತೀರ್ಥರನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷರಾಗಿ ಮಾಡಿರುವುದು, ಸಮಿತಿಯಲ್ಲಿ ಬ್ರಾಹ್ಮಣರೇ ತುಂಬಿರುವುದು, ಭಗತ್ ಸಿಂಗ್, ಕುವೆಂಪು, ನಾರಾಯಣ ಗುರು ಸೇರಿದಂತೆ ಇತರ ಮಹಾನ್ ವ್ಯಕ್ತಿಗಳ ಪಠ್ಯ ಕೈಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಠ್ಯ ಬ್ರಾಹ್ಮಣೀಕರಣ ಮಾಡಲಾಗುತ್ತಿದೆ, ಬಸವಣ್ಣ, ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ವಿಚಾರಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿ ದೇವನೂರ ಮಹಾದೇವರ ಆದಿಯಾಗಿ 10ಕ್ಕೂ ಹೆಚ್ಚು ಲೇಖಕರು ತಮ್ಮ ಪಠ್ಯ ಬಳಸಿಕೊಳ್ಳಲು ನೀಡಿದ್ದ ಅನುಮತಿಯನ್ನು ವಾಪಸ್ ಪಡೆದು ಪತ್ರ ಬರೆದಿದ್ದರು. ಇದು ಸರ್ಕಾರದ ಮೇಲೆ ತೀವ್ರ ಒತ್ತಡ ಉಂಟುಮಾಡಿತ್ತು.

ಈ ಹಿಂದಿನ ಪಠ್ಯದಲ್ಲಿ ಲೇಖಕಿ, ಕವಯತ್ರಿ ಎಚ್.ಎಸ್ ಅನುಪಮಾರವರ 7ನೇ ತರಗತಿಯ ಕನ್ನಡ ಭಾಷಾ (ಪ್ರಥಮ) ಪಠ್ಯ ಪಸ್ತಕದಲ್ಲಿ ನನ್ನ ‘ಸಾವಿತ್ರಿಬಾಯಿ ಫುಲೆ’ (ಗದ್ಯ) ಬರಹ ಮತ್ತು 7ನೇ ತರಗತಿಯ ಕನ್ನಡ ಭಾಷಾ (ತೃತೀಯ) ಪಠ್ಯಪುಸ್ತಕದಲ್ಲಿ ‘ನೆನೆವುದೆನ್ನ ಮನ’ ಪಠ್ಯ ಇತ್ತು. ಆ ಎರಡು ಪಠ್ಯಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಕಿತ್ತು ಹಾಕಿದೆ. ಅದೇ ರೀತಿ 5ನೆಯ ತರಗತಿಯ ಕನ್ನಡ ಭಾಷಾ ಪಠ್ಯ ಪುಸ್ತಕದಿಂದ ಬೊಳುವಾರು ಮಹಮದ್ ಕುಂಞಿಯವರು ಸುಳ್ಳು ಹೇಳಬಾರದು ಎಂಬ ಪಾಠವನ್ನು ಸಹ ತೆಗೆಯಲಾಗಿದೆ. ಇದೇ ರೀತಿಯಾಗಿ ಪಠ್ಯ ವಾಪಸ್ ಪಡೆಯುವುದಾಗಿ ಪತ್ರ ಬರೆದಿದ್ದ ಪ್ರೊ.ಚಂದ್ರಶೇಖರ್ ತಾಳ್ಯ, ದು. ಸರಸ್ವತಿ ಸೇರಿದಂತೆ ಇನ್ನು ಹಲವರ ಪಠ್ಯವನ್ನು ಸದ್ದಿಲ್ಲದೆ ಕೈಬಿಡಲಾಗಿದೆ.

ಲೇಖಕರ ಪಠ್ಯ ಕೈಬಿಡುತ್ತಿದ್ದೇವೆ ಎಂದು ಚಕ್ರತೀರ್ಥ ನೇತೃತ್ವದ ಸಮಿತಿ ತಿಳಿಸಿಲ್ಲ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಹಂಚಿಲ್ಲ. ಸಮರ್ಪಕವಾಗಿ ಪಿಡಿಎಫ್‌ ಸಹ ಬಿಟ್ಟಿಲ್ಲ. ಇಷ್ಟೆಲ್ಲ ಗೊಂದಲಗಳ ನಡುವೆ ತಮ್ಮ ಮೂಲ ಪಠ್ಯ ಪ್ರಕಟಣೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಪತ್ರ ಬರೆದ ಸಾಹಿತಿಗಳಿಗೆ ಪಠ್ಯದಲ್ಲಿ ನಿಮ್ಮ ಪಾಠ ಇಲ್ಲವೇ ಇಲ್ಲ ಎಂದು ದೂಷಿಸಲಾಗುತ್ತಿದೆ.

ಒಟ್ಟಿನಲ್ಲಿ ಪರಿಷ್ಕೃತಗೊಂಡಿರುವ ನೂತನ ಪಠ್ಯಗಳನ್ನು ಜಾರಿ ಮಾಡಿಯೇ ಸಿದ್ದ ಎಂದು ಸರ್ಕಾರ ಹೊರಟಿದೆ. ಮತ್ತೊಂದು ಕಡೆ ಲಿಂಗಾಯತ ಮತ್ತು ಒಕ್ಕಲಿಗ ಮಠಾಧೀಶರು, ಜನಪರ ಹೋರಾಟಗಾರರು, ವಿದ್ಯಾರ್ಥಿ ಮತ್ತು ಪೋಷಕ ಸಂಘಟನೆಗಳು ನೂತನ ಪರಿಷ್ಕರಣೆ ಕೈಬಿಟ್ಟು ಹಳೆಯ ಪಠ್ಯವನ್ನೆ ಬೋಧಿಸುವಂತೆ ಒತ್ತಡ ಹೇರುತ್ತಿವೆ. ಸಾಕಷ್ಟು ಗೊಂದಲ, ಗದ್ದಲಗಳಿಗೆ ಕಾರಣವಾಗಿರುವ ಈ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...