Homeಕರ್ನಾಟಕಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ...

ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

- Advertisement -
- Advertisement -

ಪಠ್ಯ ಮರು ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಮಾಡಿರುವ ಹಲವು ಅಶ್ಲೀಲ, ಸ್ತ್ರೀದ್ವೇಷಿ ಮತ್ತು ಹತ್ಯೆ ಹಾಗೂ ರೇಪ್‌ ಸಮರ್ಥನೆ ಮಾಡುವ ಪೋಸ್ಟ್‌ಗಳು ವೈರಲ್‌ ಆಗಿದ್ದು, ಇದರ ನಂತರ ಅವರು ತಮ್ಮ ಫೇಸ್‌‌ಬುಕ್ ಮತ್ತು ಟ್ವಿಟರ್‌ ಅಕೌಂಟ್‌ ಅನ್ನು ಗುರುವಾರ ಲಾಕ್‌ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬಲಪಂಥೀಯರ ಪರವಾಗಿ ಮತ್ತು ಬಿಜೆಪಿಯ ಪರವಾಗಿ ತೀರಾ ಕೀಳು ಮಟ್ಟದಲ್ಲಿ ಟ್ರೋಲ್ ಮಾಡುತ್ತಾ ಕುಖ್ಯಾತಿ ಪಡೆದಿದ್ದ ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯ ಮರು ಪರಿಷ್ಕರಣೆ ಸಮಿತಿಯ ಅಧ್ಯಕ್ಷನ್ನಾಗಿ ಬಿಜೆಪಿ ಸರ್ಕಾರ ಆಯ್ಕೆ ಮಾಡಿತ್ತು. ಬಿಜೆಪಿ ಸರ್ಕಾರದ ಈ ನಿಲುವನ್ನು ಹಲವು ಸಾಮಾಜಿಕ ಕಾರ್ಯಕರ್ತರು ಮತ್ತು ಸಾಹಿತ್ಯಿಕ ವಲಯದ ಗಣ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ನಂತರ ಅವರ ಸಮಿತಿ ಪರಿಷ್ಕರಣೆ ಮಾಡಿರುವ ಹಲವು ಪಠ್ಯಗಳು ಮತ್ತು ಕೈಬಿಟ್ಟಿರುವ ಹಲವು ಪಠ್ಯಗಳ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದನ್ನು ವಿರೋಧಿಸಿ ನಾಡಿನ ಗಣ್ಯ ಸಾಹಿತಿಗಳು ತಮ್ಮ ಬರಹಗಳನ್ನು ಪಠ್ಯ ಪುಸ್ತಕದಲ್ಲಿ ಸೇರಿಸಬಾರದು ಎಂದು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ನಡುವೆ ರೋಹಿತ್ ಚಕ್ರತೀರ್ಥ ಅವರು ಈ ಹಿಂದೆ ನಾಡಗೀತೆ, ನಾಡಧ್ವಜ ಮತ್ತು ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದ ಹಲವು ಬರಹಗಳ ‘ಸ್ಕ್ರೀನ್ ಶಾರ್ಟ್‌ಗಳು’ ಹರಿದಾಡಿದ್ದವು. ಹೀಗಾಗಿ ಸಾಹಿತಿಗಳು ಮತ್ತು ಸ್ವಾಮೀಜಿಗಳು ಅವರ ವಿರುದ್ಧ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಈ ನಡುವೆ ಅವರು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಬರೆದಿದ್ದು, ಕೊಲೆ ಮತ್ತು ರೇಪ್ ಅನ್ನು ಸಮರ್ಥಿಸಿ ಬರೆದಿರುವ ಹಳೆಯ ಪೋಸ್ಟ್‌ಗಳು ವೈರಲ್ ಆಗಿವೆ. ಅವುಗಳಲ್ಲಿ ಕೆಲವು ತೀರಾ ಕೊಳಕುಮಟ್ಟದ್ದಾಗಿತ್ತು. ಅವುಗಳನ್ನು ಕೆಳಗೆ ನೋಡಬಹುದು.

ತನ್ನ ವಿವಾದಾತ್ಮಕ ಟ್ವೀಟ್‌ಗಳು ಮತ್ತು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್‌ ಆಗಿ ಜನಾಕ್ರೋಶ ಹೆಚ್ಚುತ್ತಿದ್ದಂತೆ ರೋಹಿತ್ ಚಕ್ರತೀರ್ಥ ತನ್ನ ಟ್ವೀಟರ್‌ ಮತ್ತು ಫೇಸ್‌ಬುಕ್ ಖಾತೆಗೆ ಲಾಕ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೋಹಿತ್ ಚಕ್ರತೀರ್ತನಂತಹ ವಿಕೃತ ಮನಸ್ಸಿನ ವ್ಯಕ್ತಿ ನಮ್ಮ ಮಕ್ಕಳು ಓದಬೇಕಾದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅದ್ಯಕ್ಷ ಆಗಿರುವುದು ಕನ್ನಡಿಗರಿಗೆ ನಾಚಿಕೆಗೇಡಿನ ಸಂಗತಿ.

  2. ಪಠ್ಯ ಪಸ್ತಕ ಸಮಿತಿಗೆ ಇವರು ಹೆಸರು ಸೇರಿಸಿದ ಮೂಲ ಶಕ್ತಿ ಅಥವಾ ವ್ಯಕ್ತಿ ಯಾವುದು -ಎಂಬುದು ತಿಳಿಯಬೇಕಿದೆ.

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...