Homeಕರ್ನಾಟಕ’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಮಾಡಲಾಗಿರುವ ಪಠ್ಯ ಪುಸ್ತಕ ಮರು ಪರಿಷ್ಕರಣೆಯನ್ನು ವಿರೋಧಿಸಿ ಪಠ್ಯ ವಾಪಾಸಾತಿ ಚಳವಳಿ ಮುಂದುವರೆಯುತ್ತಿದೆ. ಡಾ.ಆರ್.ವಿ. ಭಂಡಾರಿಯವರು ಬರೆದ ‘ಹಾರಿಹೋದ ಹಕ್ಕಿಗಳು’ ಕವನವನ್ನು ಪರಿಷ್ಕೃತ ಪಠ್ಯದಲ್ಲಿ ಅಳವಡಿಸಿಕೊಳ್ಳಲು ನೀಡಿರುವ ಪರವಾನಗಿಯನ್ನು ಹಿಂಪಡೆದಿರುವುದಾಗಿ ಅವರ ಕುಟುಂಬಿಕರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಶುಕ್ರವಾರದಂದು ಪತ್ರ ಬರೆದಿದ್ದಾರೆ.

ಆರ್‌.ವಿ. ಭಂಡಾರಿ ಅವರ ಸೊಸೆ, ಹೋರಾಟಗಾರ್ತಿ ಯಮುನಾ ಗಾಂವ್ಕರ್ ಅವರು ಕುಟುಂಬಸ್ಥರ ಪರವಾಗಿ ಬರೆದಿರುವ ಪತ್ರದಲ್ಲಿ,“ಸಧ್ಯದ ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಅವರ ಬರಹವನ್ನು ಬಳಸಿಕೊಳ್ಳು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಮುನಾ ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ನಾಡಿನ ಜನತೆಯ ಸಾಕ್ಷಿ ಪ್ರಜ್ಞೆಯಂತಿದ್ದ ಡಾ. ಆರ್. ವಿ. ಭಂಡಾರಿಯವರು ಅರವತ್ತರ ದಶಕದಲ್ಲಿಯೇ ಎರಡು ಸ್ನಾತಕೋತ್ತರ ಉನ್ನತ ಪದವಿಗಳನ್ನು ನಂತರ ಸಂಶೋಧನಾ ಪ್ರಬಂಧವನ್ನು ಸಲ್ಲಿಸಿ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಕೊನೆಯವರೆಗೂ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ತೀರಾ ಗ್ರಾಮೀಣ ಪ್ರದೇಶಗಳಲ್ಲಿ ಸೇವೆಸಲ್ಲಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

“ಮೂವತ್ತೈದು ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದವರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರ ಮನಸ್ಸನ್ನು ಅರಳಿಸುವ ಪರಿಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಂಡವರು. ನೂರಾರು ಪುಸ್ತಕ ಬರೆದು ಮಕ್ಕಳ ಸಾಹಿತ್ಯ, ವಿಮರ್ಶೆ, ಕತೆ, ಕಾದಂಬರಿ, ವೈಚಾರಿಕ, ಮಾನವಿಕ ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾದವರು. ಪ್ರಸಿದ್ಧ ತಾಳಮದ್ದಲೆ ಅರ್ಥಧಾರಿಗಳೂ ಆಗಿದ್ದರು”

“ಸಾಕ್ಷರತಾ ಆಂದೋಲನವನ್ನು ಒಳಗೊಂಡು ಶೈಕ್ಷಣಿಕ ಎಲ್ಲಾ ಕೆಲಸಗಳಲ್ಲಿ ಇದ್ದವರು. ಅಂದು ಸಾಹಿತ್ಯ ಅಕಾಡೆಮಿ, ಕನ್ನಡ ಜಾಗೃತಿ ಸಮಿತಿ, ಗ್ರಂಥಾಲಯ ಸಮಿತಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಲವತ್ತು ದಶಕಗಳ ಕಾಲ ವಿವಿಧ ಸರ್ಕಾರಗಳ ಅವಧಿಯಲ್ಲಿ ಪಠ್ಯ ಪುಸ್ತಕ ರಚನೆಗೆ ತನ್ನ ಪ್ರಬುದ್ಧ ಸಲಹೆಗಳನ್ನು, ಅಗತ್ಯವಿದ್ದಲ್ಲಿ ಸೂಕ್ತ ಮಾರ್ಪಾಡುಗಳನ್ನು ಸೂಚಿಸುವಲ್ಲಿ ತೊಡಗಿಸಿಕೊಂಡಿದ್ದರು” ಎಂದು ಯಮುನಾ ಹೇಳಿದ್ದಾರೆ.

“ಕಳೆದ ಅವಧಿಯಲ್ಲಿ ತಿಳಿ ಕನ್ನಡ, ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ, ಪರಿಷ್ಕೃತ, (ಎರಡನೇ ಭಾಷೆ, ಕನ್ನಡ ಪಠ್ಯಪುಸ್ತಕ) ಎಂಟನೆಯ ತರಗತಿಯ ಪರಿವಿಡಿಯ ಪದ್ಯಭಾಗದ 2 ನೇ ಕವನ ಪುಟ ಸಂಖ್ಯೆ 69-71ರಲ್ಲಿರುವ ಆರ್.ವಿ. ಭಂಡಾರಿಯವರು ಬರೆದ ‘ಹಾರಿದ ಹಕ್ಕಿಗಳು’ ಕವನವನ್ನು ಪಠ್ಯದಲ್ಲಿ ಬಳಸಲು ನೀಡಿದ ಪರವಾನಗಿಯನ್ನು ಡಾ. ಆರ್. ವಿ. ಭಂಡಾರಿಯವರ ಕುಟುಂಬದ ಪರವಾಗಿ ನೀಡಲಾಗಿತ್ತು” ಎಂದು ಯಮುನಾ ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಶಿಕ್ಷಣ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಅವರು, “ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ-ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ, ಅವರ ಕುಟುಂಬ ವರ್ಗ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಉಳಿಸಿಕೊಳ್ಳಲು ಅನುಮತಿಯನ್ನು ಹಿಂತೆದುಕೊಂಡಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಿಯ ಯಮುನಾ,
    ಆರ್ವಿ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಅಳವಡಿಸಿಕೊಳ್ಳಲು ಕೊಟ್ಟ ಅನುಮತಿಯನ್ನು ಹಿಂತೆಗೆದುಕೊಂಡ ನಿಮ್ಮ ಕುಟುಂಬದ ತೀರ್ಮಾನ ಸಮಯೋಚಿತ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...