Homeಅಂಕಣಗಳು"ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ"

“ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

- Advertisement -
- Advertisement -

ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ಮೇಧಾವಿ ಮತ್ತು ಮುಂದಾಲೋಚನೆಯ ಶಿಕ್ಷಣ ಸಚಿವ ಪಠ್ಯಪುಸ್ತಕದ ಗಲಾಟೆ ಹಚ್ಚಿದ ಕೂಡಲೇ ತರಾತುರಿಯಿಂದ ಪಠ್ಯಗಳು ಪ್ರಿಂಟಾಗಿ, ಆಯಾ ಜಿಲ್ಲೆಗೆ ತಲುಪುವ ವ್ಯವಸ್ಥೆ ಮಾಡಿ, ನಿರ್ಮಲಾನಂದ ಸ್ವಾಮಿಯನ್ನು ಭೇಟಿ ಮಾಡಲು ಓಡಿದರಂತಲ್ಲಾ. ಇದಪ್ಪ ರಾಜಕಾರಣ ಅಂದರೆ! ಈಗಾಗಲೇ ಪ್ರಿಂಟಾಗಿರುವ ಪಠ್ಯ ಎಲ್ಲಿಗೆ ತಲುಪಬೇಕೂ ಅಲ್ಲಿಗೆ ತಲುಪುವಂತೆ ಮಾಡಿದ ಮೇಲೆ ಚಕ್ರತೀರ್ಥ ಎಂಬುವನು ಮನೆಗೆ ಹೋದರೇನು ಇನ್ನೆಲ್ಲೋ ಹೋದರೇನು, ಅಂತೂ ತಮ್ಮ ಅಜೆಂಡಾ ಜಾರಿಯಾದಂತಾಯ್ತಲ್ಲಾ. ಅಷ್ಟಕ್ಕೂ ಆತನಿಗೆ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗಲು ಈ ಜನ್ಮದಲ್ಲಿ ಸಾಧ್ಯವಿರಲಿಲ್ಲ. ಏಕೆಂದರೆ ಅಂತಹ ಯೋಗ್ಯತೆ ಪಡೆಯಬೇಕಾದರೆ ಕನ್ನಡ ನಾಡಿಗೆ, ಕನ್ನಡ ಸಾಹಿತ್ಯ-ಚಿಂತನೆಗೆ ಮೌಲಿಕ ಕೊಡುಗೆ ಕೊಟ್ಟಿರಬೇಕು. ಶಿಕ್ಷಣ ತಜ್ಞನಾಗಿರಬೇಕು, ಪ್ರೊಫೆಸರ್‌ಗಿರಿಯಲ್ಲಿ ಪಳಗಿರಬೇಕು. ಯಾವುದಾದರೂ ವಿವಿಗೆ ವೈಸ್ ಚಾನ್ಸಲರಾಗುವ ಅರ್ಹತೆ ಪಡೆದಿರಬೇಕು. ಇಂತಹ ಯಾವ ಯೋಗ್ಯತೆಯೂ ಇಲ್ಲದೆ ಲೂಟಿ ಬಹದ್ದೂರನಾಗಿ ಹೆಸರು ಮಾಡಿದವನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗುತ್ತಾನೆಂದರೆ ಅದಕ್ಕೆ ಇದೇ ಸಚಿವರು ಬರಬೇಕಾಯಿತ್ತಂತೆಲ್ಲಾ. ತನ್ನ ಸ್ವಜಾತಿ ಬಾಂಧವರಲ್ಲೇ ದೊಡ್ಡ ವಿದ್ವಾಂಸನನ್ನ ಹುಡುಕಿರಬೇಕಂತಲ್ಲಾ. ಅವನೇ ಈ ಚಕ್ರತೀರ್ಥನಂತಲ್ಲಾ, ಥೂತ್ತೇರಿ.

*****

ಬುದ್ಧಿ ಕಡಿಮೆಯಿದ್ದ ಮನುಷ್ಯ ಭಂಡಬಾಳಿನ ಮೊರೆ ಹೋಗುತ್ತಾನೆ. ಅದು ಈ ಬಿಜೆಪಿ ಜನರನ್ನು ನೋಡಿದ ಮೇಲೆ ನಾಡಿನ ಜನಕ್ಕೆ ಅರ್ಥವಾಗತೊಡಗಿದೆಯಂತಲ್ಲಾ. ಮುಖ್ಯವಾಗಿ ಶಿಕ್ಷಣ ಸಚಿವ ತಾನು ಮಾಡಿದ ಎಲ್ಲ ಕೃತ್ಯಗಳನ್ನ ಸಮರ್ಥಿಸಿಕೊಳ್ಳುತ್ತಾ ಹೊರಟಿರುವಾಗ ಅವರನ್ನ ಆ ಕೆಲಸ ಮಾಡಲು ಬಿಟ್ಟವರೂ ಕೂಡ ಇದೇ ದಾರಿ ಹಿಡಿದಿದ್ದಾರಲ್ಲಾ. ಇನ್ನ ವಿರೋಧ ಪಕ್ಷದ ನಾಯಕ ಆರೆಸ್ಸೆಸ್ ಟೀಕಿಸಿದರೆ ಯಾವ ಆರೆಸ್ಸೆಸಿಗಳು ಬಾಯಿಬಿಡದೆ ಬಿಜೆಪಿಯ ಸಿ.ಟಿ ರವಿ ಮತ್ತು ಈಶ್ವರಪ್ಪ ಉತ್ತರ ಕೊಡತೊಡಗಿದ್ದಾರೆ. ಹಾಗೆ ನೋಡಿದರೆ ಸಿ.ಟಿ ರವಿ ಪ್ರತಿನಿಧಿಸುವ ಜಿಲ್ಲೆಯಾದ ಚಿಕ್ಕಮಗಳೂರಿನ ಹಿರೇಕೊಡಿಗೆಯಲ್ಲಿ ವಿಶ್ವಮಾನವ ಸಂದೇಶ ಬೀರಿದ ಕವಿಯಾದ ಕುವೆಂಪು ಜನ್ಮತಾಳಿದವರು. ಇಂತಹ ಕುವೆಂಪುಗೆ ಅವಮಾನ ಮಾಡಿದವರ ವಿರುದ್ದ ಸಿ.ಟಿ ರವಿ ತುಟಿ ಬಿಚ್ಚಿಲ್ಲ.

ಇನ್ನ ಈಶ್ವರಪ್ಪ. ಉಡುಪಿಯ ಕನಕಗೋಪುರ ಕೆಡವಿದಾಗ ದೊಡ್ಡ ಆಕ್ರೋಶ ಬಂತು. ಆಗ ಪೇಜಾವರಸ್ವಾಮಿ ಅಲ್ಲಿದ್ದದ್ದು. ಅದು ಕನಕ ಗೋಪುರವಲ್ಲ ರಾಜಗೋಪುರ ಎಂಬ ಹೇಳಿಕೆಯನ್ನು ಈಶ್ವರಪ್ಪನಿಂದ ಕೊಡಿಸಿದರು. ಆಗ ಈಶ್ವರಪ್ಪ ಪೇಜಾವರರಿಗಿಂತ ಮುಂದೆ ಹೋಗಿ, ಅಲ್ಲಿ ಕನಕಗೋಪುರ ಇತ್ತು ಅಂದಾದರೆ ನಾನು ರಾಜಕಾರಣ ಬಿಟ್ಟು ಅಡಿಕೆ ಪ್ಯಾಕೆಟ್ ಮಾಡುತ್ತೇನೆ ಎಂದುಬಿಟ್ಟರಲ್ಲಾ. ಈಗ ಬಿಜೆಪಿ ಇದೇ ತರಹದ ಛಲವಾದಿ ನಾರಾಯಣಸ್ವಾಮಿಯನ್ನ ತಯಾರು ಮಾಡುತ್ತಿದೆಯಂತಲ್ಲಾ, ಥೂತ್ತೇರಿ.

*****

ಜನಸಾಮಾನ್ಯರ ಜಗಳಗಳು ಜಾತಿ ಆವರಣ ತಲಪುತ್ತವಂತೆ. ಹಾಗೆಯೇ ನೀನು ನಮ್ಮೂರಿನವನಲ್ಲೆಂಬ ದನಿಯೂ ಹೋರಾಡುತ್ತದೆ. ಹೀಗೆ ಮುಸ್ಲಿಮರು ಇಲ್ಲಿ ಉದ್ಭವಿಸಿದವರಲ್ಲಾ, ದಾಳಿ ಮಾಡಿಕೊಂಡು ಬಂದವರು ಎಂದು ಪುರೋಹಿತರು ಜನಗಳನ್ನ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿರುವುದನ್ನು ನೋಡಲಾರದ ಸಿದ್ದರಾಮಯ್ಯ ಅಂತಿಮವಾಗಿ ಆರೆಸ್ಸೆಸ್ಸಿಗಳು ಇಲ್ಲಿಯವರಲ್ಲಾ ಮಧ್ಯ ಏಷ್ಯಾದಿಂದ ಬಂದವರು ಎಂದಕೂಡಲೇ ಎಲ್ಲರ ಕಿವಿಗಳು ನೆಟ್ಟಗಾಗಿವೆಯಂತಲ್ಲಾ. ಈ ಬಗ್ಗೆ ಸಿದ್ದರಾಮಯ್ಯನವರಿಗೇ ಫೋನ್ ಮಾಡಿ ಮಾತನಾಡಿಸಿದರೆ ಹೇಗೆ ಅನ್ನಿಸಿ, ಕಡೆಗೆ ಫೋನ್ ಮಾಡಲಾಗಿ, ರಿಂಗಾಯ್ತು. ರಿಂಗ್‌ಟೋನ್, ’ಕರಿಯ ಕಂಬಳಿ ಗದ್ದಿಗೆ ಮಾಡೀ ವೀರದೊಳ್ಳ
ತಂದಿರಿಸಿದರೋ……….’

“ಹಲೋ ಯಾರು”.

“ನಾನು ಸಾರ್ ಯಾಹೂ, ತಾವ್ಯಾರು ಸಾರ್”.

“ನಾನು ಸೋಷಲಿಸ್ಟ್ ಶಿವಣ್ಣ ಏನಾಗಬೇಕು”.

“ಸಾರಿ ಸಾರ್, ಸಿದ್ದರಾಮಯ್ಯನವರ ಜೊತೆ ಮಾತಾಡಬೇಕಾಗಿತ್ತು”.

“ಪತ್ರಕರ್ತರಾ, ಕೊಟ್ಟೆಯಿರಿ ಒಂದು ನಿಮಿಷ”.

“ಹಲೋ”.

“ನಮಸ್ಕಾರ ಸಾರ್. ನಾನು ಯಾಹೂ”.

“ಏನ್ರಿ ಯಾಹೂ, ಈ ಕಡೆ ಬರಲೇಯಿಲ್ಲ”.

“ನೀವೀಗ ಪವರಲಿಲ್ಲ, ಏನು ಮಾಡಕ್ಕೆ ಬರನ ಸಾರ್”.

“ಇಲ್ದಾಗ್ಲೆ ಬಂದ್ರೆ ವಳ್ಳೆದು, ಮಾತಾಡಬಹುದು ಬನ್ನಿ”.

“ಅಮ್ಯಾಲೆ ಬರ್‌ತಿನಿ, ಈಗೊಂದೆರಡು ಪ್ರಶ್ನೆಗೆ ಉತ್ತರ ಕೊಡಿ ಸಾ”.

“ಅದೇನು ಕೇಳಿ”.

“ಈ ಆರೆಸ್ಸೆಸಿನವರು ಇಲ್ಲಿಯವರಲ್ಲ, ಹೊರಗಿಂದ ಬಂದವುರು ಅಂದಿದ್ದಿರಲ್ಲಾ, ವಸಿ ವಿವರಸ್ತಿರಾ”.

“ಅದ್‌ಹಳೇ ವಿಷಯ ಕಂಡ್ರಿ. ನಮಿಗೆ ಮಿಡ್ಲಿಸ್ಕೂಲಲ್ಲೇ ಪಾಠ ಇತ್ತು. ಆರ್ಯರು ಆಕಡಿಂದ ಬಂದ್ರು, ಅವುರು ಚೆನ್ನಾಗಿ ಎತ್ತರಕ್ಕೆ ಕೆಂಪುಗಿದ್ರು ಬ್ಯಳ್ಳಗಿದ್ರು ನಾಗರಿಕರು ಅಂತ”.

“ನಾಗರಿಕರು ಅಂತ ಇತ್ತ”.

“ಊ”.

“ಅಂಗಾದ್ರೆ ಆರೆಸ್ಸೆಸಿಗರು, ಬಿಜೆಪಿಗಳು ಆರ್ಯರಲ್ಲ ಬುಡಿ”.

“ಆರ್ಯರೆ ಕಂಡ್ರಿ, ಆಗ ಪಠ್ಯಪುಸ್ತಕ ಬರಿಯೋರು ಅವುರೇ ಆಗಿದ್ರು. ಅದ್ಕೆ ನಾಗರಿಕರು ಅಂತ ಬರ್‌ಕಂಡವುರೆ”.

“ಅದೇನೋ ನಿಜ, ದೇಶದ್ರೋಹಿಗಳನ್ನ ದೇಶಭಕ್ತರು ಅಂತ ಬರಕಳದು. ಹುಟ್ಟು ಪುಕ್ಕಲಗಳನ್ನು ವೀರ ಉತ್ತರಕುಮಾರ ಅಂತ ಬರಕಳದ್ರಲ್ಲಿ ಅವುರು ನಿಸ್ಸೀಮರು”.

“ಸುಳ್ಳು ಹೇಳದ್ರಲ್ಲೂ ನಿಸ್ಸೀಮರು. ನನ್ನ ಮಾತಿಗೆ ಆರೆಸ್ಸೆಸಿನವುರು ಉಸರೆತ್ತಿಲ್ಲ. ಆ ಬಸವರಾಜ ನೀವು ದ್ರಾವಿಡ್ರ ಅಂತ ಕೇಳ್ಯವುನೆ”.

“ನಿಜ ಸಾರ್, ಮುಖ್ಯಮಂತ್ರಿ ದ್ರಾವಿಡರೊ ಆರ್ಯರೊ ಸಾರ್”.

“ಅವುನ್ಯಾವಾರ್ಯ, ದ್ರಾವಿಡ ಅವುನು. ಬಸವಣ್ಣ ಬರದ್ಕು ಮದ್ಲು ಅವುರಜ್ಜಾರಜ್ಜಾರಜ್ಜ ಯಾವು ಜಾತಿಯಾಗಿದ್ನೊ ಏನೊ, ಈಗಿವುನು ಸಾದರ ಲಿಂಗಾಯತ ಅಂತನೆ”.

“ನಿಜ ಸಾರ್, ಬಸವಣ್ಣ ಕರದೇಟಿಗೆ ಹತ್ರುಕೋದೋರ್‌ಯೆಲ್ಲ ದ್ರಾವಿಡರೇ ಸಾರ್, ನೋ ಡವುಟು”.

“ಈ ಆರ್ಯರು ಯಂಗೆ ಬಂದ್ರು ಅಂತ ವಸಿ ಹೇಳ್ತಿರಾ”.

“ಅದೇ ಕಂಡ್ರಿ, ಆಗ ಈಗಿನ ಪಾಕೀಸ್ತಾನದ ಬಾರ್ಡರಿಂದ ಮಧ್ಯ ಪ್ರಾಚ್ಯದವರಿಗೂ ದಾರಿನೆ ಇತ್ತು. ಅಲ್ಲಿದ್ದ ಜನ ಫಲವತ್ತಾದ ಜಾಗ ಹುಡುಕ್ತ ಕತ್ತೆ ದನ ಯೆಮ್ಮೆ ಜೊತೆ ಬಂದ್ರು. ಇಲ್ಲಿದ್ದ ಆದಿವಾಸಿ ದ್ರಾವಿಡರ್ನ ಹೆದರಿಸಿದ್ರು. ಅವುರ್ ಯೆಲ್ಲ ದಕ್ಷಿಣಕ್ಕೆ ಓಡಿ ಬಂದ್ರು. ಕೆಲುವುರು ಅಲ್ಲೇ ಉಳಕಂಡ್ರು”.

“ಗೊತ್ತಾಯ್ತು ಬುಡಿ ಸಾರ್, ಈ ಬಿಜೆಪಿಗಳು ಮದ್ಲು, ಉತ್ತರಭಾರತದಲ್ಲಿ ನೆಲೆಗೊಂಡು, ಆಮೇಲೆ ಈ ದಕ್ಷಿಣಕ್ಕೆ ಬಂದ್ರಲ್ಲ ಅಂಗೆ.”

“ಅದಕ್ಕಿಂತ್ಲೂ ಆರ್ಯರು ಯಾವಾಗ್ಲೂ ಫಲವತ್ತಾದ ಜಾಗ ಹುಡುಕ್ತಾರೆ. ಅಂಗೆ ನಮ್ಮ ದೇಶದ ಫಲವತ್ತಾದ ನ್ಯಲ ಹಿಡದ್ರು. ದ್ರಾವಿಡರ ಕೈಲಿ ಸೇವೆ ಮಾಡಿಸಿಗಂಡು ಜಾತಿ ಮಾಡಿದ್ರು. ನಮ್ಮ ತೇಜಸ್ವಿ ಹೇಳತಿದ್ರಲ್ಲ ಅಂಗೇ. ಇಡೀ ದೇಶನೆ ಬಾಳೆಎಲೆ ಮಾಡಿಕಂಡು ಉಂಡ್ರು. ನಾವು ಪಾಲು ಕೇಳಿದ ಮ್ಯಾಲೆ ಇಲ್ಲದ ಜಾತಿ ಜಗಳ ತಗದವೆ, ದ್ರಾವಿಡರನ್ನೆ ಆರೆಸ್ಸೆಸ್ ಮಾಡಿಕಂಡವೆ”.

“ಈಗೇನು ಮಾಡದು ಸಾರ್”.

“ಭಾಳ ಕಷ್ಟ. ನನ್ನ ವಿರುದ್ಧ ಈಶ್ವರಪ್ಪನ ಛೂ ಬುಟ್ಟವೆ. ನಮ್ಮ ಡಿ.ಕೆ ಶಿವಕುಮಾರನ ವಿರುದ್ಧ ಅಶ್ವತ್ಥ ನಾರಾಯಣ ಸಿ.ಟಿ ರವಿನ ಬುಟ್ಟವೆ. ಮಾದೇವಪ್ಪನ ವಿರುದ್ಧ ನಾರಾಯಣಸ್ವಾಮಿ, ಶ್ರೀನಿವಾಸ್ ಪ್ರಸಾದನ್ನ ಎತ್ತಿಕಟ್ಟವುರೆ. ನಮ್ಮೆದುರಿಗೆ ನಮ್ಮವುರೇ ನಿಂತವುರೆ. ನಿಜವಾದ ಶತ್ರುಗಳು ಗರ್ಭಗುಡಿಲಿ ಅವುತಗಂಡವುರೆ. ಜನಸಾಮಾನ್ಯರು ಹಣ್ಣು ಕಾಯಿ ತಗಂಡೋಗಿ ಮಡಗಿ ಪ್ರಸಾದ ಕೇಳ್ತ ಅವೆ. ಏನು ಮಾಡನಾ”.

“ಥೂತ್ತೇರಿ”.


ಇದನ್ನೂ ಓದಿ: ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...