Homeಅಂಕಣಗಳು"ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ"

“ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

- Advertisement -
- Advertisement -

ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ಮೇಧಾವಿ ಮತ್ತು ಮುಂದಾಲೋಚನೆಯ ಶಿಕ್ಷಣ ಸಚಿವ ಪಠ್ಯಪುಸ್ತಕದ ಗಲಾಟೆ ಹಚ್ಚಿದ ಕೂಡಲೇ ತರಾತುರಿಯಿಂದ ಪಠ್ಯಗಳು ಪ್ರಿಂಟಾಗಿ, ಆಯಾ ಜಿಲ್ಲೆಗೆ ತಲುಪುವ ವ್ಯವಸ್ಥೆ ಮಾಡಿ, ನಿರ್ಮಲಾನಂದ ಸ್ವಾಮಿಯನ್ನು ಭೇಟಿ ಮಾಡಲು ಓಡಿದರಂತಲ್ಲಾ. ಇದಪ್ಪ ರಾಜಕಾರಣ ಅಂದರೆ! ಈಗಾಗಲೇ ಪ್ರಿಂಟಾಗಿರುವ ಪಠ್ಯ ಎಲ್ಲಿಗೆ ತಲುಪಬೇಕೂ ಅಲ್ಲಿಗೆ ತಲುಪುವಂತೆ ಮಾಡಿದ ಮೇಲೆ ಚಕ್ರತೀರ್ಥ ಎಂಬುವನು ಮನೆಗೆ ಹೋದರೇನು ಇನ್ನೆಲ್ಲೋ ಹೋದರೇನು, ಅಂತೂ ತಮ್ಮ ಅಜೆಂಡಾ ಜಾರಿಯಾದಂತಾಯ್ತಲ್ಲಾ. ಅಷ್ಟಕ್ಕೂ ಆತನಿಗೆ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗಲು ಈ ಜನ್ಮದಲ್ಲಿ ಸಾಧ್ಯವಿರಲಿಲ್ಲ. ಏಕೆಂದರೆ ಅಂತಹ ಯೋಗ್ಯತೆ ಪಡೆಯಬೇಕಾದರೆ ಕನ್ನಡ ನಾಡಿಗೆ, ಕನ್ನಡ ಸಾಹಿತ್ಯ-ಚಿಂತನೆಗೆ ಮೌಲಿಕ ಕೊಡುಗೆ ಕೊಟ್ಟಿರಬೇಕು. ಶಿಕ್ಷಣ ತಜ್ಞನಾಗಿರಬೇಕು, ಪ್ರೊಫೆಸರ್‌ಗಿರಿಯಲ್ಲಿ ಪಳಗಿರಬೇಕು. ಯಾವುದಾದರೂ ವಿವಿಗೆ ವೈಸ್ ಚಾನ್ಸಲರಾಗುವ ಅರ್ಹತೆ ಪಡೆದಿರಬೇಕು. ಇಂತಹ ಯಾವ ಯೋಗ್ಯತೆಯೂ ಇಲ್ಲದೆ ಲೂಟಿ ಬಹದ್ದೂರನಾಗಿ ಹೆಸರು ಮಾಡಿದವನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗುತ್ತಾನೆಂದರೆ ಅದಕ್ಕೆ ಇದೇ ಸಚಿವರು ಬರಬೇಕಾಯಿತ್ತಂತೆಲ್ಲಾ. ತನ್ನ ಸ್ವಜಾತಿ ಬಾಂಧವರಲ್ಲೇ ದೊಡ್ಡ ವಿದ್ವಾಂಸನನ್ನ ಹುಡುಕಿರಬೇಕಂತಲ್ಲಾ. ಅವನೇ ಈ ಚಕ್ರತೀರ್ಥನಂತಲ್ಲಾ, ಥೂತ್ತೇರಿ.

*****

ಬುದ್ಧಿ ಕಡಿಮೆಯಿದ್ದ ಮನುಷ್ಯ ಭಂಡಬಾಳಿನ ಮೊರೆ ಹೋಗುತ್ತಾನೆ. ಅದು ಈ ಬಿಜೆಪಿ ಜನರನ್ನು ನೋಡಿದ ಮೇಲೆ ನಾಡಿನ ಜನಕ್ಕೆ ಅರ್ಥವಾಗತೊಡಗಿದೆಯಂತಲ್ಲಾ. ಮುಖ್ಯವಾಗಿ ಶಿಕ್ಷಣ ಸಚಿವ ತಾನು ಮಾಡಿದ ಎಲ್ಲ ಕೃತ್ಯಗಳನ್ನ ಸಮರ್ಥಿಸಿಕೊಳ್ಳುತ್ತಾ ಹೊರಟಿರುವಾಗ ಅವರನ್ನ ಆ ಕೆಲಸ ಮಾಡಲು ಬಿಟ್ಟವರೂ ಕೂಡ ಇದೇ ದಾರಿ ಹಿಡಿದಿದ್ದಾರಲ್ಲಾ. ಇನ್ನ ವಿರೋಧ ಪಕ್ಷದ ನಾಯಕ ಆರೆಸ್ಸೆಸ್ ಟೀಕಿಸಿದರೆ ಯಾವ ಆರೆಸ್ಸೆಸಿಗಳು ಬಾಯಿಬಿಡದೆ ಬಿಜೆಪಿಯ ಸಿ.ಟಿ ರವಿ ಮತ್ತು ಈಶ್ವರಪ್ಪ ಉತ್ತರ ಕೊಡತೊಡಗಿದ್ದಾರೆ. ಹಾಗೆ ನೋಡಿದರೆ ಸಿ.ಟಿ ರವಿ ಪ್ರತಿನಿಧಿಸುವ ಜಿಲ್ಲೆಯಾದ ಚಿಕ್ಕಮಗಳೂರಿನ ಹಿರೇಕೊಡಿಗೆಯಲ್ಲಿ ವಿಶ್ವಮಾನವ ಸಂದೇಶ ಬೀರಿದ ಕವಿಯಾದ ಕುವೆಂಪು ಜನ್ಮತಾಳಿದವರು. ಇಂತಹ ಕುವೆಂಪುಗೆ ಅವಮಾನ ಮಾಡಿದವರ ವಿರುದ್ದ ಸಿ.ಟಿ ರವಿ ತುಟಿ ಬಿಚ್ಚಿಲ್ಲ.

ಇನ್ನ ಈಶ್ವರಪ್ಪ. ಉಡುಪಿಯ ಕನಕಗೋಪುರ ಕೆಡವಿದಾಗ ದೊಡ್ಡ ಆಕ್ರೋಶ ಬಂತು. ಆಗ ಪೇಜಾವರಸ್ವಾಮಿ ಅಲ್ಲಿದ್ದದ್ದು. ಅದು ಕನಕ ಗೋಪುರವಲ್ಲ ರಾಜಗೋಪುರ ಎಂಬ ಹೇಳಿಕೆಯನ್ನು ಈಶ್ವರಪ್ಪನಿಂದ ಕೊಡಿಸಿದರು. ಆಗ ಈಶ್ವರಪ್ಪ ಪೇಜಾವರರಿಗಿಂತ ಮುಂದೆ ಹೋಗಿ, ಅಲ್ಲಿ ಕನಕಗೋಪುರ ಇತ್ತು ಅಂದಾದರೆ ನಾನು ರಾಜಕಾರಣ ಬಿಟ್ಟು ಅಡಿಕೆ ಪ್ಯಾಕೆಟ್ ಮಾಡುತ್ತೇನೆ ಎಂದುಬಿಟ್ಟರಲ್ಲಾ. ಈಗ ಬಿಜೆಪಿ ಇದೇ ತರಹದ ಛಲವಾದಿ ನಾರಾಯಣಸ್ವಾಮಿಯನ್ನ ತಯಾರು ಮಾಡುತ್ತಿದೆಯಂತಲ್ಲಾ, ಥೂತ್ತೇರಿ.

*****

ಜನಸಾಮಾನ್ಯರ ಜಗಳಗಳು ಜಾತಿ ಆವರಣ ತಲಪುತ್ತವಂತೆ. ಹಾಗೆಯೇ ನೀನು ನಮ್ಮೂರಿನವನಲ್ಲೆಂಬ ದನಿಯೂ ಹೋರಾಡುತ್ತದೆ. ಹೀಗೆ ಮುಸ್ಲಿಮರು ಇಲ್ಲಿ ಉದ್ಭವಿಸಿದವರಲ್ಲಾ, ದಾಳಿ ಮಾಡಿಕೊಂಡು ಬಂದವರು ಎಂದು ಪುರೋಹಿತರು ಜನಗಳನ್ನ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿರುವುದನ್ನು ನೋಡಲಾರದ ಸಿದ್ದರಾಮಯ್ಯ ಅಂತಿಮವಾಗಿ ಆರೆಸ್ಸೆಸ್ಸಿಗಳು ಇಲ್ಲಿಯವರಲ್ಲಾ ಮಧ್ಯ ಏಷ್ಯಾದಿಂದ ಬಂದವರು ಎಂದಕೂಡಲೇ ಎಲ್ಲರ ಕಿವಿಗಳು ನೆಟ್ಟಗಾಗಿವೆಯಂತಲ್ಲಾ. ಈ ಬಗ್ಗೆ ಸಿದ್ದರಾಮಯ್ಯನವರಿಗೇ ಫೋನ್ ಮಾಡಿ ಮಾತನಾಡಿಸಿದರೆ ಹೇಗೆ ಅನ್ನಿಸಿ, ಕಡೆಗೆ ಫೋನ್ ಮಾಡಲಾಗಿ, ರಿಂಗಾಯ್ತು. ರಿಂಗ್‌ಟೋನ್, ’ಕರಿಯ ಕಂಬಳಿ ಗದ್ದಿಗೆ ಮಾಡೀ ವೀರದೊಳ್ಳ
ತಂದಿರಿಸಿದರೋ……….’

“ಹಲೋ ಯಾರು”.

“ನಾನು ಸಾರ್ ಯಾಹೂ, ತಾವ್ಯಾರು ಸಾರ್”.

“ನಾನು ಸೋಷಲಿಸ್ಟ್ ಶಿವಣ್ಣ ಏನಾಗಬೇಕು”.

“ಸಾರಿ ಸಾರ್, ಸಿದ್ದರಾಮಯ್ಯನವರ ಜೊತೆ ಮಾತಾಡಬೇಕಾಗಿತ್ತು”.

“ಪತ್ರಕರ್ತರಾ, ಕೊಟ್ಟೆಯಿರಿ ಒಂದು ನಿಮಿಷ”.

“ಹಲೋ”.

“ನಮಸ್ಕಾರ ಸಾರ್. ನಾನು ಯಾಹೂ”.

“ಏನ್ರಿ ಯಾಹೂ, ಈ ಕಡೆ ಬರಲೇಯಿಲ್ಲ”.

“ನೀವೀಗ ಪವರಲಿಲ್ಲ, ಏನು ಮಾಡಕ್ಕೆ ಬರನ ಸಾರ್”.

“ಇಲ್ದಾಗ್ಲೆ ಬಂದ್ರೆ ವಳ್ಳೆದು, ಮಾತಾಡಬಹುದು ಬನ್ನಿ”.

“ಅಮ್ಯಾಲೆ ಬರ್‌ತಿನಿ, ಈಗೊಂದೆರಡು ಪ್ರಶ್ನೆಗೆ ಉತ್ತರ ಕೊಡಿ ಸಾ”.

“ಅದೇನು ಕೇಳಿ”.

“ಈ ಆರೆಸ್ಸೆಸಿನವರು ಇಲ್ಲಿಯವರಲ್ಲ, ಹೊರಗಿಂದ ಬಂದವುರು ಅಂದಿದ್ದಿರಲ್ಲಾ, ವಸಿ ವಿವರಸ್ತಿರಾ”.

“ಅದ್‌ಹಳೇ ವಿಷಯ ಕಂಡ್ರಿ. ನಮಿಗೆ ಮಿಡ್ಲಿಸ್ಕೂಲಲ್ಲೇ ಪಾಠ ಇತ್ತು. ಆರ್ಯರು ಆಕಡಿಂದ ಬಂದ್ರು, ಅವುರು ಚೆನ್ನಾಗಿ ಎತ್ತರಕ್ಕೆ ಕೆಂಪುಗಿದ್ರು ಬ್ಯಳ್ಳಗಿದ್ರು ನಾಗರಿಕರು ಅಂತ”.

“ನಾಗರಿಕರು ಅಂತ ಇತ್ತ”.

“ಊ”.

“ಅಂಗಾದ್ರೆ ಆರೆಸ್ಸೆಸಿಗರು, ಬಿಜೆಪಿಗಳು ಆರ್ಯರಲ್ಲ ಬುಡಿ”.

“ಆರ್ಯರೆ ಕಂಡ್ರಿ, ಆಗ ಪಠ್ಯಪುಸ್ತಕ ಬರಿಯೋರು ಅವುರೇ ಆಗಿದ್ರು. ಅದ್ಕೆ ನಾಗರಿಕರು ಅಂತ ಬರ್‌ಕಂಡವುರೆ”.

“ಅದೇನೋ ನಿಜ, ದೇಶದ್ರೋಹಿಗಳನ್ನ ದೇಶಭಕ್ತರು ಅಂತ ಬರಕಳದು. ಹುಟ್ಟು ಪುಕ್ಕಲಗಳನ್ನು ವೀರ ಉತ್ತರಕುಮಾರ ಅಂತ ಬರಕಳದ್ರಲ್ಲಿ ಅವುರು ನಿಸ್ಸೀಮರು”.

“ಸುಳ್ಳು ಹೇಳದ್ರಲ್ಲೂ ನಿಸ್ಸೀಮರು. ನನ್ನ ಮಾತಿಗೆ ಆರೆಸ್ಸೆಸಿನವುರು ಉಸರೆತ್ತಿಲ್ಲ. ಆ ಬಸವರಾಜ ನೀವು ದ್ರಾವಿಡ್ರ ಅಂತ ಕೇಳ್ಯವುನೆ”.

“ನಿಜ ಸಾರ್, ಮುಖ್ಯಮಂತ್ರಿ ದ್ರಾವಿಡರೊ ಆರ್ಯರೊ ಸಾರ್”.

“ಅವುನ್ಯಾವಾರ್ಯ, ದ್ರಾವಿಡ ಅವುನು. ಬಸವಣ್ಣ ಬರದ್ಕು ಮದ್ಲು ಅವುರಜ್ಜಾರಜ್ಜಾರಜ್ಜ ಯಾವು ಜಾತಿಯಾಗಿದ್ನೊ ಏನೊ, ಈಗಿವುನು ಸಾದರ ಲಿಂಗಾಯತ ಅಂತನೆ”.

“ನಿಜ ಸಾರ್, ಬಸವಣ್ಣ ಕರದೇಟಿಗೆ ಹತ್ರುಕೋದೋರ್‌ಯೆಲ್ಲ ದ್ರಾವಿಡರೇ ಸಾರ್, ನೋ ಡವುಟು”.

“ಈ ಆರ್ಯರು ಯಂಗೆ ಬಂದ್ರು ಅಂತ ವಸಿ ಹೇಳ್ತಿರಾ”.

“ಅದೇ ಕಂಡ್ರಿ, ಆಗ ಈಗಿನ ಪಾಕೀಸ್ತಾನದ ಬಾರ್ಡರಿಂದ ಮಧ್ಯ ಪ್ರಾಚ್ಯದವರಿಗೂ ದಾರಿನೆ ಇತ್ತು. ಅಲ್ಲಿದ್ದ ಜನ ಫಲವತ್ತಾದ ಜಾಗ ಹುಡುಕ್ತ ಕತ್ತೆ ದನ ಯೆಮ್ಮೆ ಜೊತೆ ಬಂದ್ರು. ಇಲ್ಲಿದ್ದ ಆದಿವಾಸಿ ದ್ರಾವಿಡರ್ನ ಹೆದರಿಸಿದ್ರು. ಅವುರ್ ಯೆಲ್ಲ ದಕ್ಷಿಣಕ್ಕೆ ಓಡಿ ಬಂದ್ರು. ಕೆಲುವುರು ಅಲ್ಲೇ ಉಳಕಂಡ್ರು”.

“ಗೊತ್ತಾಯ್ತು ಬುಡಿ ಸಾರ್, ಈ ಬಿಜೆಪಿಗಳು ಮದ್ಲು, ಉತ್ತರಭಾರತದಲ್ಲಿ ನೆಲೆಗೊಂಡು, ಆಮೇಲೆ ಈ ದಕ್ಷಿಣಕ್ಕೆ ಬಂದ್ರಲ್ಲ ಅಂಗೆ.”

“ಅದಕ್ಕಿಂತ್ಲೂ ಆರ್ಯರು ಯಾವಾಗ್ಲೂ ಫಲವತ್ತಾದ ಜಾಗ ಹುಡುಕ್ತಾರೆ. ಅಂಗೆ ನಮ್ಮ ದೇಶದ ಫಲವತ್ತಾದ ನ್ಯಲ ಹಿಡದ್ರು. ದ್ರಾವಿಡರ ಕೈಲಿ ಸೇವೆ ಮಾಡಿಸಿಗಂಡು ಜಾತಿ ಮಾಡಿದ್ರು. ನಮ್ಮ ತೇಜಸ್ವಿ ಹೇಳತಿದ್ರಲ್ಲ ಅಂಗೇ. ಇಡೀ ದೇಶನೆ ಬಾಳೆಎಲೆ ಮಾಡಿಕಂಡು ಉಂಡ್ರು. ನಾವು ಪಾಲು ಕೇಳಿದ ಮ್ಯಾಲೆ ಇಲ್ಲದ ಜಾತಿ ಜಗಳ ತಗದವೆ, ದ್ರಾವಿಡರನ್ನೆ ಆರೆಸ್ಸೆಸ್ ಮಾಡಿಕಂಡವೆ”.

“ಈಗೇನು ಮಾಡದು ಸಾರ್”.

“ಭಾಳ ಕಷ್ಟ. ನನ್ನ ವಿರುದ್ಧ ಈಶ್ವರಪ್ಪನ ಛೂ ಬುಟ್ಟವೆ. ನಮ್ಮ ಡಿ.ಕೆ ಶಿವಕುಮಾರನ ವಿರುದ್ಧ ಅಶ್ವತ್ಥ ನಾರಾಯಣ ಸಿ.ಟಿ ರವಿನ ಬುಟ್ಟವೆ. ಮಾದೇವಪ್ಪನ ವಿರುದ್ಧ ನಾರಾಯಣಸ್ವಾಮಿ, ಶ್ರೀನಿವಾಸ್ ಪ್ರಸಾದನ್ನ ಎತ್ತಿಕಟ್ಟವುರೆ. ನಮ್ಮೆದುರಿಗೆ ನಮ್ಮವುರೇ ನಿಂತವುರೆ. ನಿಜವಾದ ಶತ್ರುಗಳು ಗರ್ಭಗುಡಿಲಿ ಅವುತಗಂಡವುರೆ. ಜನಸಾಮಾನ್ಯರು ಹಣ್ಣು ಕಾಯಿ ತಗಂಡೋಗಿ ಮಡಗಿ ಪ್ರಸಾದ ಕೇಳ್ತ ಅವೆ. ಏನು ಮಾಡನಾ”.

“ಥೂತ್ತೇರಿ”.


ಇದನ್ನೂ ಓದಿ: ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...