Homeಕರ್ನಾಟಕರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌, ಶಾಲಾ ಪಠ್ಯ ಪುಸ್ತಕ ಪುನರ್‌ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ‘ಶೈಕ್ಷಣಿಕ ಅರ್ಹತೆ’ ಏನು ಎಂದು ಪ್ರಶ್ನಿಸಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ಅವರನ್ನು ಯಾವ ಮಾನದಂಡಗಳ ಮೇಲೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಕೂಡಾ ಪ್ರಶ್ನಿಸಲಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಪ್ರಾರಂಭವಾದ ನಂತರ ರೋಹಿತ್ ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಕೂಡಾ ಪ್ರಶ್ನೆಗಳೆದ್ದಿದ್ದವು. ಪತ್ರಿಕೆಗಳು ಮತ್ತು ಮಾಧ್ಯಮಗಳಲ್ಲಿ ರೋಹಿತ್ ಚಕ್ರತೀರ್ಥ ಅವರು ಗಣಿತ ಟ್ಯೂಷನ್‌ ನೀಡುವ ಶಿಕ್ಷಕನಾಗಿದ್ದು, ಮೂರು ಕಾಲೇಜುಗಳಲ್ಲಿ ಉಪನ್ಯಾಸಕನಾಗಿ ಪಾಠ ಮಾಡಿದ್ದರು ಎಂದು ವರದಿಯಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಕ್ರತೀರ್ಥ ಅವರ ಅರ್ಹತೆಯ ಬಗ್ಗೆ ಪ್ರಶ್ನಿಸಿದ್ದ ಪತ್ರಕರ್ತರಿಗೆ ಉತ್ತರಿಸಿದ್ದ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು, “ಅವರು ಐಐಟಿ ಮತ್ತು ಸಿಇಟಿ ಪ್ರೊಫೆಸರ್‌’’ ಎಂದು ಹೇಳಿದ್ದರು. ಆದರೆ ಚಕ್ರತೀರ್ಥ ಅವರು ಅದನ್ನು ನಿರಾಕರಿಸಿದ್ದರು. ಅದಾಗಿಯೂ ಅವರು ತಮ್ಮ ಶೈಕ್ಷಣಿಕ ಅರ್ಹತೆಗಳೇನು ಎಂಬ ಬಗ್ಗೆ ಅವರು ಎಲ್ಲೂ ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

‘‘ಸಮಿತಿಗೆ ಆಯ್ಕೆಯಾಗಲು ನಿಮ್ಮ ಅರ್ಹತೆಯೇನು’’ ಎಂಬ ಪ್ರಶ್ನೆಗೆ ಅವರು, “ನನ್ನನ್ನು ಸಮಿತಿ ಅಧ್ಯಕ್ಷರನ್ನಾಗಿ ಮಾಡಲು ಸರ್ಕಾರ ನನ್ನ ಯಾವು ಅರ್ಹತೆ ನೋಡಿತು ಎಂಬ ವಿಚಾರವನ್ನು ಸರ್ಕಾರದ ಜೊತೆಗೆ ಕೇಳಬೇಕು” ಎಂದು ಹೇಳಿಕೊಂಡಿದ್ದರು.

ಇದೀಗ ಮಾಹಿತಿ ಹಕ್ಕು ಕಾಯಿದೆ-2005ರ ಅಡಿಯಲ್ಲಿ ಚಕ್ರತೀರ್ಥ ಅವರ ಅರ್ಹತೆ, ಅವರ ಆಯ್ಕೆಗೆ ಪಾಲಿಸಿರುವ ಮಾನದಂಡಗಳು ಸೇರಿದಂತೆ ಸಮಿತಿಯ ಹಲವು ವಿಚಾಗಳನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

ಪ್ರಸ್ತುತ ಸಲ್ಲಿಸಲಾಗಿರುವ ಅರ್ಜಿಯಲ್ಲಿ, “ಶಾಲಾ ಪಠ್ಯ ಪುಸ್ತಕಗಳ ಪುನರ್‌ ಪರಿಷ್ಕರಣ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಗೆ ಯಾವುದಾದರೂ ಮಾನದಂಡಗಳು ಇವೆಯೆ? ಇದ್ದರೆ ಯಾವುವು?” ಎಂದು ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ‘ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

“ಈ ಹಿಂದೆ ಡಾ.ಜಿ.ಎಸ್. ಮೂಡಂಬಡಿತತಾಯ ಅವರು ಮುಖ್ಯ ಸಂಯೋಜಕರಾಗಿ ಹಾಗೂ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಸರ್ವಾಧ್ಯಕ್ಷರಾಗಿ ರಚಿಸಲಾಗಿದ್ದ ಪಠ್ಯ ಪುಸ್ತಕ ಸಮಿತಿಗಳಿಗೆ ಅವರನ್ನೂ, ಇತರ ಸದಸ್ಯರನ್ನೂ ನೇಮಿಸುವಾಗ ಬಳಸಲಾಗಿದ್ದ ಮಾನದಂಡಗಳು ಯಾವುವು?” ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

“ಇದೀಗ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಈ ಅಧ್ಯಕ್ಷರನ್ನೂ, ಇತರ ಸಮಿತಿ ಸದಸ್ಯರನ್ನೂ ನೇಮಿಸುವಾಗ ಬಳಸಿರುವ ಮಾನದಂಡಗಳು ಯಾವುವು?” ಎಂಬ ಪ್ರಶ್ನೆಯನ್ನೂ ಅರ್ಜಿಯಲ್ಲಿ ಕೇಳಲಾಗಿದೆ.

ಅಷ್ಟೇ ಅಲ್ಲದೆ, ಹೊಸದಾಗಿ ಪರಿಷ್ಕರಿಸಿ ಪ್ರಕಟಿಸಲಾಗಿರುವ ಪುಸ್ತಕಗಳಲ್ಲಿ ರೋಹಿತ್‌ ಚಕ್ರತೀರ್ಥ ಅವರ ಹೆಸರಿನ ಮುಂದೆ ಸದಸ್ಯರು ಕನ್ನಡ ಅಭಿವೃದ್ಧ ಪ್ರಾಧಿಕಾರ ಎಂದಷ್ಟೇ ಹೇಳಲಾಗಿದ್ದು, ಬೇರೆ ವಿವರಗಳು ಲಭ್ಯವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದು, “ರೋಹಿತ್ ಚಕ್ರತೀರ್ಥ ಅವರ ಶೈಕ್ಷಣಿಕ ಅರ್ಹತೆಗಳೇನು? ಅದರು ಯಾವ ಕಾಲೇಜಿನಲ್ಲಿ ಅಥವಾ ವಿಶ್ವವಿದ್ಯಾಲಯದಿಂದ ಯಾವಾಗ, ಯಾವ ಪದವಿ ಪಡೆದಿದ್ದಾರೆ? ಯಾವ ಸಂಸ್ಥೆಗಳಲ್ಲಿ ಶಿಕ್ಷಕರಾಗಿ/ಉಪನ್ಯಾಸಕರಾಗಿ/ಪ್ರಾಧ್ಯಾಪಕರಾಗಿ/ಸಂಶೋಧಕರಾಗಿ ಕೆಲಸ ಮಾಡಿದ್ದಾರೆ?” ಎಂದು ಆರ್‌ಟಿಐಯಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಜೊತೆಗೆ, ರೋಹಿತ್‌ ಚಕ್ರತೀರ್ಥ ಆವರನ್ನು ಅಧ್ಯಕ್ಷರಾಗಿ ನೇಮಕ ಮಾಡಿದ ಸಭೆಯ ನಡಾವಳಿಗಳ ಪ್ರತಿಯನ್ನು ಒದಗಿಸುವಂತೆ ಆರ್‌ಟಿಐ ಅರ್ಜಿಯಲ್ಲಿ ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...