Homeಮುಖಪುಟಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಆರೋಪಿಗಳೆಲ್ಲರು ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಈ ದುಷ್ಕೃತ್ಯದಲ್ಲಿ ಶಾಸಕನ ಮಗನೂ ಭಾಗಿಯಾದ ಬಗ್ಗೆ ಶಂಕಿಸಲಾಗಿದೆ

- Advertisement -
- Advertisement -

ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿರುವ ಆತಂಕಕಾರಿ ಘಟನೆ ಜರುಗಿದೆ.

ಶನಿವಾರ ಸಂಜೆ ಈ ಅಮಾನವೀಯ ಕೃತ್ಯ ಜರುಗಿದ್ದು, ಆರೋಪಿಗಳೆಲ್ಲರು ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಬಾಲಕಿಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ದಾರಿ ಮಧ್ಯೆ ಬೇಕರಿಗೂ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿದೆ. ಸಂಪೂರ್ಣ ವಿಚಾರಣೆಯ ಬಳಿಕವಷ್ಟೇ ಸತ್ಯ ಹೊರಬೀಳಲಿದೆ.

ಇದನ್ನೂ ಓದಿ: ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಬಾಲಕಿಯ ತಂದೆಯ ದೂರಿನ ಮೇಲೆ ಮೊದಲು ಪೊಲೀಸರು ‘ಘನತೆಗೆ ಕುಂದು’ ಪ್ರಕರಣ ದಾಖಲಿಸಿದ್ದರು. ಆದರೆ ಬಾಲಕಿಯು ಮಹಿಳಾ ಪೊಲೀಸರ ಬಳಿ ಸಾಮೂಹಿಕ ಅತ್ಯಾಚಾರ ನಡೆದುದರ ಕುರಿತು ಮಾಹಿತಿ ನೀಡಿದ ನಂತರ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿ ಸದ್ಯ ಶಾಕ್‌ನಲ್ಲಿದ್ದಾಳೆ. ಪೂರ್ತಿ ವಿವರ ನೀಡುವ ಪರಿಸ್ಥಿತಿಯಲ್ಲಿಲ್ಲ. ಸದ್ಯಕ್ಕೆ ಸಿಕ್ಕಿರುವ ಮಾಹಿತಿಯ ಆಧಾರದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳು ಸೇರಿ ಇನ್ನಿತರ ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಸುತ್ತಿದ್ದೇವೆ. ಅಪ್ರಾಪ್ತರಿಗೆ ಕ್ಲಬ್‌ನಲ್ಲಿ ಹೇಗೆ ಪ್ರವೇಶ ನೀಡಲಾಯಿತು ಎನ್ನುವುದರ ಕುರಿತೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಜೋಲ್ ಡೇವಿಸ್ ತಿಳಿಸಿದ್ದಾರೆ.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...