Homeಮುಖಪುಟಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ವಚನ ಕ್ರಾಂತಿ ಮೂಲಕ ಸಮಾನತೆಯ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ.

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಮುಗ್ಧ ಮಕ್ಕಳ ಹಾಗೂ ಪೋಷಕರ ಮನಸ್ಸಿನಲ್ಲಿ ತಪ್ಪು ಅಭಿಪ್ರಾಯ ಬಿತ್ತಿ, ತಪ್ಪು ಭಾವನೆಗಳು ಮೂಡಿಸಿರುವುದು ಖಂಡನೀಯ. ಕೂಡಲೇ ಪಠ್ಯಪುಸ್ತಕ ಬದಲಾವಣೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ ನೀಡಿದ್ದಾರೆ.

ಬೀದರ್‌ನಲ್ಲಿ ಜಿಲ್ಲಾ ಕಸಾಪ ಹಾಗೂ ಬಸವಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಒಂದಲ್ಲ ಎರಡಲ್ಲ ಬಹಳಷ್ಟು ಬದಲಾವಣೆ ಮಾಡಿದ್ದಾರೆ, ಬಸವಣ್ಣನವರ ವಿಚಾರಧಾರೆಯಲ್ಲಿ ಅನೇಕ ತಪ್ಪು ಮಾಡಿದ್ದಾರೆ, ಅದೇ ರಾಷ್ಟ್ರಕವಿ ಕುವೆಂಪು ಅವರಿಗೂ ಅಪಚಾರ ಆಗಿದೆ. ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಕೂಡಲೇ ತಪ್ಪನ್ನು ಸರಿಪಡಿಸಬೇಕು. ತಪ್ಪು ಮಾಡಿರುವುದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡು ತಿದ್ದಿಕೊಳ್ಳಬೇಕು. ಒಂದು ವೇಳೆ ತಿದ್ದಿಕೊಳ್ಳದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಿರಂತರವಾಗಿ ನಡೆಸಲಾಗುವುದು ಎಂದರು.

ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಮಾತನಾಡಿ, ‘ಕನ್ನಡದ ದಿಗ್ಗಜ ಸಾಹಿತಿ ಕುವೆಂಪು ರಚನೆಯ ನಾಡಗೀತೆಗೆ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ಎಂಬುವನನ್ನು ಗಡಿಪಾರು ಮಾಡಬೇಕು. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕ ಪರಿಷ್ಕರಣೆ ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ. ಅವರಿಗೆ ನೈತಿಕತೆ ಇದ್ರೆ ರಾಜಿನಾಮೆ ಕೊಡಬೇಕು, ಇಲ್ಲದಿದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸನಾತನ ಧರ್ಮ, ಶೈವ ಪರಂಪರೆ ಜಾರಿಗೊಳಿಸಿದರೂ ಲಿಂಗಾಯತರು ಏನು ಅನ್ನುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ್ತೆ ಬಿಜೆಪಿಗೆ ಮತ ಹಾಕುತ್ತಾರೆ ಎಂಬ ಭಾವನೆ ಈಗಿನ ರಾಜ್ಯ ಸರ್ಕಾರಕ್ಕಿದೆ. ಲಿಂಗಾಯತರು ಎಚ್ಚರಗೊಂಡು ಮೂಲ ಇತಿಹಾಸ ತಿರುಚಲು ಹೊರಟಿದವರಿಗೆ ಪಾಠ ಕಲಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ ಆನಂದ ದೇವಪ್ಪ ಹೇಳಿದರು.

ಸಾಹಿತಿಗಳು, ಕಲಾವಿದರು ನಾಡಿನ ಅನಭಿಷಿಕ್ತ ಶಾಸಕರು ಇದ್ದಂತೆ, ಅವರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಅಕ್ಷಮ್ಯ ಅಪರಾಧವಾಗುತ್ತದೆ. ಆದರೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿರುವುದು ಮತ್ತು ಅವರ ಚರಿತ್ರೆಯನ್ನು ತಿರುಚಿ ಬರೆಸುವ ಮೂಲಕ ನಾಡಿನಲ್ಲಿ ಅರಾಜಕತೆ ಹುಟ್ಟು ಹಾಕಿದಂತಾಗಿದೆ. ನಾಡಗೀತೆ ತಿರುಚಿ ಬರೆದವರ ವಿರುದ್ಧ ಸರ್ಕಾರ ವಾರದೊಳಗೆ ಕ್ರಮಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ವಿರುಪಾಕ್ಷ ಗಾದಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ವಚನ ಕ್ರಾಂತಿ ಮೂಲಕ ಸಮಾನತೆಯ ಸಮಾಜದ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ. ಪಠ್ಯ ಪುಸ್ತಕ ಸಮಿತಿ ಕಾರ್ಯ ಅಕ್ಷಮ್ಯ ಅಪರಾಧ. ಇದು ರಾಜ್ಯ ಸರ್ಕಾರ ಪೋಷಿತ ಕೆಲಸವೇ ಆಗಿದೆ. ಇದಕ್ಕೆ ದಿಕ್ಕಾರ ಹೇಳಲೇಬೇಕು ಎಂದು ಹುಲಸೂರು ಶ್ರೀಗಳು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ಶ್ರೀಕಾಂತ ಸ್ವಾಮಿ, ಶರಣಪ್ಪಾ ಮಿಠಾರೆ, ವಿಜಯಕುಮಾರ್ ಸೋನಾರೆ, ಎಂ.ಎಸ್.ಮನೋಹರ್, ವಿದ್ಯಾವತಿ ಬಲ್ಲೂರು, ರಜಿಯಾ ಬಳಬಟ್ಟಿ, ರೂಪಾ ಪಾಟೀಲ್, ಸುನೀಲ್ ಭಾವಿಕಟ್ಟಿ, ಮಹೇಶ್ ಗೊರನಾಳಕರ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಸವಪರ ವಿವಿಧ ಸಂಘಟನೆಗಳ ಅನುಯಾಯಿಗಳು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....