Homeಮುಖಪುಟಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ವಚನ ಕ್ರಾಂತಿ ಮೂಲಕ ಸಮಾನತೆಯ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ.

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಮುಗ್ಧ ಮಕ್ಕಳ ಹಾಗೂ ಪೋಷಕರ ಮನಸ್ಸಿನಲ್ಲಿ ತಪ್ಪು ಅಭಿಪ್ರಾಯ ಬಿತ್ತಿ, ತಪ್ಪು ಭಾವನೆಗಳು ಮೂಡಿಸಿರುವುದು ಖಂಡನೀಯ. ಕೂಡಲೇ ಪಠ್ಯಪುಸ್ತಕ ಬದಲಾವಣೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ ನೀಡಿದ್ದಾರೆ.

ಬೀದರ್‌ನಲ್ಲಿ ಜಿಲ್ಲಾ ಕಸಾಪ ಹಾಗೂ ಬಸವಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಒಂದಲ್ಲ ಎರಡಲ್ಲ ಬಹಳಷ್ಟು ಬದಲಾವಣೆ ಮಾಡಿದ್ದಾರೆ, ಬಸವಣ್ಣನವರ ವಿಚಾರಧಾರೆಯಲ್ಲಿ ಅನೇಕ ತಪ್ಪು ಮಾಡಿದ್ದಾರೆ, ಅದೇ ರಾಷ್ಟ್ರಕವಿ ಕುವೆಂಪು ಅವರಿಗೂ ಅಪಚಾರ ಆಗಿದೆ. ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಕೂಡಲೇ ತಪ್ಪನ್ನು ಸರಿಪಡಿಸಬೇಕು. ತಪ್ಪು ಮಾಡಿರುವುದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡು ತಿದ್ದಿಕೊಳ್ಳಬೇಕು. ಒಂದು ವೇಳೆ ತಿದ್ದಿಕೊಳ್ಳದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಿರಂತರವಾಗಿ ನಡೆಸಲಾಗುವುದು ಎಂದರು.

ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಮಾತನಾಡಿ, ‘ಕನ್ನಡದ ದಿಗ್ಗಜ ಸಾಹಿತಿ ಕುವೆಂಪು ರಚನೆಯ ನಾಡಗೀತೆಗೆ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ಎಂಬುವನನ್ನು ಗಡಿಪಾರು ಮಾಡಬೇಕು. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕ ಪರಿಷ್ಕರಣೆ ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ. ಅವರಿಗೆ ನೈತಿಕತೆ ಇದ್ರೆ ರಾಜಿನಾಮೆ ಕೊಡಬೇಕು, ಇಲ್ಲದಿದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸನಾತನ ಧರ್ಮ, ಶೈವ ಪರಂಪರೆ ಜಾರಿಗೊಳಿಸಿದರೂ ಲಿಂಗಾಯತರು ಏನು ಅನ್ನುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ್ತೆ ಬಿಜೆಪಿಗೆ ಮತ ಹಾಕುತ್ತಾರೆ ಎಂಬ ಭಾವನೆ ಈಗಿನ ರಾಜ್ಯ ಸರ್ಕಾರಕ್ಕಿದೆ. ಲಿಂಗಾಯತರು ಎಚ್ಚರಗೊಂಡು ಮೂಲ ಇತಿಹಾಸ ತಿರುಚಲು ಹೊರಟಿದವರಿಗೆ ಪಾಠ ಕಲಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ ಆನಂದ ದೇವಪ್ಪ ಹೇಳಿದರು.

ಸಾಹಿತಿಗಳು, ಕಲಾವಿದರು ನಾಡಿನ ಅನಭಿಷಿಕ್ತ ಶಾಸಕರು ಇದ್ದಂತೆ, ಅವರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಅಕ್ಷಮ್ಯ ಅಪರಾಧವಾಗುತ್ತದೆ. ಆದರೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿರುವುದು ಮತ್ತು ಅವರ ಚರಿತ್ರೆಯನ್ನು ತಿರುಚಿ ಬರೆಸುವ ಮೂಲಕ ನಾಡಿನಲ್ಲಿ ಅರಾಜಕತೆ ಹುಟ್ಟು ಹಾಕಿದಂತಾಗಿದೆ. ನಾಡಗೀತೆ ತಿರುಚಿ ಬರೆದವರ ವಿರುದ್ಧ ಸರ್ಕಾರ ವಾರದೊಳಗೆ ಕ್ರಮಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ವಿರುಪಾಕ್ಷ ಗಾದಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ವಚನ ಕ್ರಾಂತಿ ಮೂಲಕ ಸಮಾನತೆಯ ಸಮಾಜದ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ. ಪಠ್ಯ ಪುಸ್ತಕ ಸಮಿತಿ ಕಾರ್ಯ ಅಕ್ಷಮ್ಯ ಅಪರಾಧ. ಇದು ರಾಜ್ಯ ಸರ್ಕಾರ ಪೋಷಿತ ಕೆಲಸವೇ ಆಗಿದೆ. ಇದಕ್ಕೆ ದಿಕ್ಕಾರ ಹೇಳಲೇಬೇಕು ಎಂದು ಹುಲಸೂರು ಶ್ರೀಗಳು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ಶ್ರೀಕಾಂತ ಸ್ವಾಮಿ, ಶರಣಪ್ಪಾ ಮಿಠಾರೆ, ವಿಜಯಕುಮಾರ್ ಸೋನಾರೆ, ಎಂ.ಎಸ್.ಮನೋಹರ್, ವಿದ್ಯಾವತಿ ಬಲ್ಲೂರು, ರಜಿಯಾ ಬಳಬಟ್ಟಿ, ರೂಪಾ ಪಾಟೀಲ್, ಸುನೀಲ್ ಭಾವಿಕಟ್ಟಿ, ಮಹೇಶ್ ಗೊರನಾಳಕರ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಸವಪರ ವಿವಿಧ ಸಂಘಟನೆಗಳ ಅನುಯಾಯಿಗಳು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...