Homeಮುಖಪುಟಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ವಚನ ಕ್ರಾಂತಿ ಮೂಲಕ ಸಮಾನತೆಯ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ.

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಮುಗ್ಧ ಮಕ್ಕಳ ಹಾಗೂ ಪೋಷಕರ ಮನಸ್ಸಿನಲ್ಲಿ ತಪ್ಪು ಅಭಿಪ್ರಾಯ ಬಿತ್ತಿ, ತಪ್ಪು ಭಾವನೆಗಳು ಮೂಡಿಸಿರುವುದು ಖಂಡನೀಯ. ಕೂಡಲೇ ಪಠ್ಯಪುಸ್ತಕ ಬದಲಾವಣೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ ನೀಡಿದ್ದಾರೆ.

ಬೀದರ್‌ನಲ್ಲಿ ಜಿಲ್ಲಾ ಕಸಾಪ ಹಾಗೂ ಬಸವಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಒಂದಲ್ಲ ಎರಡಲ್ಲ ಬಹಳಷ್ಟು ಬದಲಾವಣೆ ಮಾಡಿದ್ದಾರೆ, ಬಸವಣ್ಣನವರ ವಿಚಾರಧಾರೆಯಲ್ಲಿ ಅನೇಕ ತಪ್ಪು ಮಾಡಿದ್ದಾರೆ, ಅದೇ ರಾಷ್ಟ್ರಕವಿ ಕುವೆಂಪು ಅವರಿಗೂ ಅಪಚಾರ ಆಗಿದೆ. ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಕೂಡಲೇ ತಪ್ಪನ್ನು ಸರಿಪಡಿಸಬೇಕು. ತಪ್ಪು ಮಾಡಿರುವುದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡು ತಿದ್ದಿಕೊಳ್ಳಬೇಕು. ಒಂದು ವೇಳೆ ತಿದ್ದಿಕೊಳ್ಳದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಿರಂತರವಾಗಿ ನಡೆಸಲಾಗುವುದು ಎಂದರು.

ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಮಾತನಾಡಿ, ‘ಕನ್ನಡದ ದಿಗ್ಗಜ ಸಾಹಿತಿ ಕುವೆಂಪು ರಚನೆಯ ನಾಡಗೀತೆಗೆ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ಎಂಬುವನನ್ನು ಗಡಿಪಾರು ಮಾಡಬೇಕು. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕ ಪರಿಷ್ಕರಣೆ ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ. ಅವರಿಗೆ ನೈತಿಕತೆ ಇದ್ರೆ ರಾಜಿನಾಮೆ ಕೊಡಬೇಕು, ಇಲ್ಲದಿದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸನಾತನ ಧರ್ಮ, ಶೈವ ಪರಂಪರೆ ಜಾರಿಗೊಳಿಸಿದರೂ ಲಿಂಗಾಯತರು ಏನು ಅನ್ನುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ್ತೆ ಬಿಜೆಪಿಗೆ ಮತ ಹಾಕುತ್ತಾರೆ ಎಂಬ ಭಾವನೆ ಈಗಿನ ರಾಜ್ಯ ಸರ್ಕಾರಕ್ಕಿದೆ. ಲಿಂಗಾಯತರು ಎಚ್ಚರಗೊಂಡು ಮೂಲ ಇತಿಹಾಸ ತಿರುಚಲು ಹೊರಟಿದವರಿಗೆ ಪಾಠ ಕಲಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ ಆನಂದ ದೇವಪ್ಪ ಹೇಳಿದರು.

ಸಾಹಿತಿಗಳು, ಕಲಾವಿದರು ನಾಡಿನ ಅನಭಿಷಿಕ್ತ ಶಾಸಕರು ಇದ್ದಂತೆ, ಅವರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಅಕ್ಷಮ್ಯ ಅಪರಾಧವಾಗುತ್ತದೆ. ಆದರೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿರುವುದು ಮತ್ತು ಅವರ ಚರಿತ್ರೆಯನ್ನು ತಿರುಚಿ ಬರೆಸುವ ಮೂಲಕ ನಾಡಿನಲ್ಲಿ ಅರಾಜಕತೆ ಹುಟ್ಟು ಹಾಕಿದಂತಾಗಿದೆ. ನಾಡಗೀತೆ ತಿರುಚಿ ಬರೆದವರ ವಿರುದ್ಧ ಸರ್ಕಾರ ವಾರದೊಳಗೆ ಕ್ರಮಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ವಿರುಪಾಕ್ಷ ಗಾದಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ವಚನ ಕ್ರಾಂತಿ ಮೂಲಕ ಸಮಾನತೆಯ ಸಮಾಜದ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ. ಪಠ್ಯ ಪುಸ್ತಕ ಸಮಿತಿ ಕಾರ್ಯ ಅಕ್ಷಮ್ಯ ಅಪರಾಧ. ಇದು ರಾಜ್ಯ ಸರ್ಕಾರ ಪೋಷಿತ ಕೆಲಸವೇ ಆಗಿದೆ. ಇದಕ್ಕೆ ದಿಕ್ಕಾರ ಹೇಳಲೇಬೇಕು ಎಂದು ಹುಲಸೂರು ಶ್ರೀಗಳು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ಶ್ರೀಕಾಂತ ಸ್ವಾಮಿ, ಶರಣಪ್ಪಾ ಮಿಠಾರೆ, ವಿಜಯಕುಮಾರ್ ಸೋನಾರೆ, ಎಂ.ಎಸ್.ಮನೋಹರ್, ವಿದ್ಯಾವತಿ ಬಲ್ಲೂರು, ರಜಿಯಾ ಬಳಬಟ್ಟಿ, ರೂಪಾ ಪಾಟೀಲ್, ಸುನೀಲ್ ಭಾವಿಕಟ್ಟಿ, ಮಹೇಶ್ ಗೊರನಾಳಕರ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಸವಪರ ವಿವಿಧ ಸಂಘಟನೆಗಳ ಅನುಯಾಯಿಗಳು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...