Homeಕರ್ನಾಟಕರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

ರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

- Advertisement -
- Advertisement -

ನೂತನ ಪಠ್ಯ ಪರಿಷ್ಕರಣೆ ರಗಳೆಗಳು ಸದ್ಯಕ್ಕೆ ನಿಲ್ಲುವ ಸೂಚನೆ ಕಂಡುಬರುತ್ತಿಲ್ಲ. ತರಾತುರಿಯಲ್ಲಿ ಪರಿಷ್ಕರಣೆ ಮಾಡಲಾಗಿದ್ದು ಹಲವಾರು ತಪ್ಪುಗಳು ಎದ್ದು ಕಾಣುತ್ತಿವೆ. ಇದೀಗ ರೋಹಿತ್ ಚಕ್ರತೀರ್ಥ ಸಮಿತಿಯು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು 3 ಮತ್ತು 4ನೇ ತರಗತಿಗಳೆರಡಲ್ಲಿಯೂ ಸೇರಿಸಿ ಎಡವಟ್ಟು ಮಾಡಿಕೊಂಡಿದೆ.

ಬಿ.ಎಂ ಶರ್ಮಾರವರು ಬರೆದ ‘ಬಾವಿಯಲ್ಲಿ ಚಂದ್ರ’ ಪ್ರಸಿದ್ದ ಮಕ್ಕಳ ಪದ್ಯ. ಅದನ್ನು ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿಯು 3 ನೇ ತರಗತಿ ನಲಿಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ನೂತನ ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಅದನ್ನು ಹಾಗೆ ಉಳಿಸಿಕೊಂಡಿದ್ದಲ್ಲದೆ 4ನೇ ತರಗತಿಯ ಸವಿಕನ್ನಡ ಪುಸ್ತಕದಲ್ಲಿಯೂ ಅದೇ ಪದ್ಯವನ್ನು ಸೇರಿಸಿದೆ. ಆ ಮೂಲಕ ಮಕ್ಕಳು 3 ಮತ್ತು 4 ನೇ ಎರಡೂ ತರಗತಿಗಳಲ್ಲಿಯೂ ಒಂದೇ ಪದ್ಯ ಕಲಿಯಬೇಕಾದ ದುಸ್ಥಿತಿ ಒದಗಿದೆ!

ಪಠ್ಯ ಪರಿಷ್ಕರಣೆ ಎಂಬುದು ಮಹತ್ವದ ಕೆಲಸ. ಒಂದೀಡಿ ಪೀಳಿಕೆಯನ್ನು ತಯಾರಿಸುವ ಕೆಲಸ. ಅದನ್ನು ತಜ್ಞರು, ಅನುಭವಿಗಳು ನಿರ್ವಹಿಸಬೇಕು. ಆದರೆ ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದ ರೋಹಿತ್ ಚಕ್ರತೀರ್ಥನಂತವರು ಅದನ್ನು ನಿಭಾಯಿಸಲು ಹೋಗಿ ಭಾರೀ ಅನಾಹುತ ಸೃಷ್ಟಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅದಕ್ಕೆ ಇಂಬುಕೊಡುವಂತೆ ಎಡವಟ್ಟುಗಳು ಕಾಣಸಿಗುತ್ತಿವೆ.

ಇದನ್ನೂ ಓದಿ: ‘ಸಂಸ್ಕೃತಿ ಇಲ್ಲದವರು ಕಾಡುಜನರಂತೆ ಇರುವರು’: ಪರಿಷ್ಕೃತ ಪಠ್ಯದಲ್ಲಿ ಸ್ವಾಮಿ ವಿವೇಕಾನಂದರ ಪಾಠ ಸಂಪೂರ್ಣ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲ್ಕನೇ ತರಗತಿಯ ಪಠ್ಯದಲ್ಲಿರುವ ಈ ಪದ್ಯದಲ್ಲಿ ಮೊದಲನೇ ಶಬ್ದ ತಪ್ಪಾಗಿದೆ: ತಿಂಗಳು ಬೆಳಕಿನ ಎಂದಿದೆ, ಇದು ತಿಂಗಳ ಬೆಳಕಿನ ಎಂದಿರಬೇಕಿತ್ತು. ನಾನು ನಾಲ್ಕನೇ ತರಗತಿ ಕಲಿತಾಗಲೂ ಈ ಪದ್ಯ ಇತ್ತು. ಆಗಲೂ ತಿಂಗಳ ಅಂತಲೇ ಇತ್ತು, ಈಗಿನ 3ನೇ ತರಗತಿ ಪಠ್ಯದಲ್ಲಿ ಸರಿಯಾಗಿದೆ.

  2. ಇಂಥಾ ಎಡವಟ್ಟುಗಳು ಹೊಸದೇನಲ್ಲ.
    ನಾವು ನಾಲ್ಕನೇ ತರಗತಿಯಲ್ಲಿದ್ದಾಗ ಇದ್ದ “ಮೂಡುವನು ರವಿ ಮೂಡುವನು” ಪದ್ಯ ಮತ್ತೆ ಆರನೇ ತರಗತಿಗೆ ಬಂದಾಗಲೂ ಇತ್ತು.
    ಹಿಂದಿಯಲ್ಲೂ ಇಂಥಹ ಒಂದು ಎಡವಟ್ಟು ನಡೆದಿದ್ದು ನಾವು ಸಾಮಾನ್ಯ ಎಂದೇ ಭಾವಿಸಿ ಎರಡೆರಡು ಸಲ ಓದಿ ಬರೆದು ಮಾಡಿದ್ದೆವು.

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...