Homeಕರ್ನಾಟಕರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

ರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

- Advertisement -
- Advertisement -

ನೂತನ ಪಠ್ಯ ಪರಿಷ್ಕರಣೆ ರಗಳೆಗಳು ಸದ್ಯಕ್ಕೆ ನಿಲ್ಲುವ ಸೂಚನೆ ಕಂಡುಬರುತ್ತಿಲ್ಲ. ತರಾತುರಿಯಲ್ಲಿ ಪರಿಷ್ಕರಣೆ ಮಾಡಲಾಗಿದ್ದು ಹಲವಾರು ತಪ್ಪುಗಳು ಎದ್ದು ಕಾಣುತ್ತಿವೆ. ಇದೀಗ ರೋಹಿತ್ ಚಕ್ರತೀರ್ಥ ಸಮಿತಿಯು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು 3 ಮತ್ತು 4ನೇ ತರಗತಿಗಳೆರಡಲ್ಲಿಯೂ ಸೇರಿಸಿ ಎಡವಟ್ಟು ಮಾಡಿಕೊಂಡಿದೆ.

ಬಿ.ಎಂ ಶರ್ಮಾರವರು ಬರೆದ ‘ಬಾವಿಯಲ್ಲಿ ಚಂದ್ರ’ ಪ್ರಸಿದ್ದ ಮಕ್ಕಳ ಪದ್ಯ. ಅದನ್ನು ಹಿಂದಿನ ಬರಗೂರು ರಾಮಚಂದ್ರಪ್ಪನವರ ಸಮಿತಿಯು 3 ನೇ ತರಗತಿ ನಲಿಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ನೂತನ ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಅದನ್ನು ಹಾಗೆ ಉಳಿಸಿಕೊಂಡಿದ್ದಲ್ಲದೆ 4ನೇ ತರಗತಿಯ ಸವಿಕನ್ನಡ ಪುಸ್ತಕದಲ್ಲಿಯೂ ಅದೇ ಪದ್ಯವನ್ನು ಸೇರಿಸಿದೆ. ಆ ಮೂಲಕ ಮಕ್ಕಳು 3 ಮತ್ತು 4 ನೇ ಎರಡೂ ತರಗತಿಗಳಲ್ಲಿಯೂ ಒಂದೇ ಪದ್ಯ ಕಲಿಯಬೇಕಾದ ದುಸ್ಥಿತಿ ಒದಗಿದೆ!

ಪಠ್ಯ ಪರಿಷ್ಕರಣೆ ಎಂಬುದು ಮಹತ್ವದ ಕೆಲಸ. ಒಂದೀಡಿ ಪೀಳಿಕೆಯನ್ನು ತಯಾರಿಸುವ ಕೆಲಸ. ಅದನ್ನು ತಜ್ಞರು, ಅನುಭವಿಗಳು ನಿರ್ವಹಿಸಬೇಕು. ಆದರೆ ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದ ರೋಹಿತ್ ಚಕ್ರತೀರ್ಥನಂತವರು ಅದನ್ನು ನಿಭಾಯಿಸಲು ಹೋಗಿ ಭಾರೀ ಅನಾಹುತ ಸೃಷ್ಟಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅದಕ್ಕೆ ಇಂಬುಕೊಡುವಂತೆ ಎಡವಟ್ಟುಗಳು ಕಾಣಸಿಗುತ್ತಿವೆ.

ಇದನ್ನೂ ಓದಿ: ‘ಸಂಸ್ಕೃತಿ ಇಲ್ಲದವರು ಕಾಡುಜನರಂತೆ ಇರುವರು’: ಪರಿಷ್ಕೃತ ಪಠ್ಯದಲ್ಲಿ ಸ್ವಾಮಿ ವಿವೇಕಾನಂದರ ಪಾಠ ಸಂಪೂರ್ಣ ಬದಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲ್ಕನೇ ತರಗತಿಯ ಪಠ್ಯದಲ್ಲಿರುವ ಈ ಪದ್ಯದಲ್ಲಿ ಮೊದಲನೇ ಶಬ್ದ ತಪ್ಪಾಗಿದೆ: ತಿಂಗಳು ಬೆಳಕಿನ ಎಂದಿದೆ, ಇದು ತಿಂಗಳ ಬೆಳಕಿನ ಎಂದಿರಬೇಕಿತ್ತು. ನಾನು ನಾಲ್ಕನೇ ತರಗತಿ ಕಲಿತಾಗಲೂ ಈ ಪದ್ಯ ಇತ್ತು. ಆಗಲೂ ತಿಂಗಳ ಅಂತಲೇ ಇತ್ತು, ಈಗಿನ 3ನೇ ತರಗತಿ ಪಠ್ಯದಲ್ಲಿ ಸರಿಯಾಗಿದೆ.

  2. ಇಂಥಾ ಎಡವಟ್ಟುಗಳು ಹೊಸದೇನಲ್ಲ.
    ನಾವು ನಾಲ್ಕನೇ ತರಗತಿಯಲ್ಲಿದ್ದಾಗ ಇದ್ದ “ಮೂಡುವನು ರವಿ ಮೂಡುವನು” ಪದ್ಯ ಮತ್ತೆ ಆರನೇ ತರಗತಿಗೆ ಬಂದಾಗಲೂ ಇತ್ತು.
    ಹಿಂದಿಯಲ್ಲೂ ಇಂಥಹ ಒಂದು ಎಡವಟ್ಟು ನಡೆದಿದ್ದು ನಾವು ಸಾಮಾನ್ಯ ಎಂದೇ ಭಾವಿಸಿ ಎರಡೆರಡು ಸಲ ಓದಿ ಬರೆದು ಮಾಡಿದ್ದೆವು.

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...