Homeಕರ್ನಾಟಕಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

- Advertisement -
- Advertisement -

ಪಠ್ಯಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ರೋಹಿತ್ ಚಕ್ರತೀರ್ಥ ಅವರ ಸಮಿತಿ, ಪಠ್ಯ ಪುಸ್ತಕಗಳ ಕೇಸರೀಕರಣ ಮತ್ತು ಬ್ರಾಹ್ಮಣೀಕರಣವನ್ನು ಸಿಎಂ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಅದನ್ನು ಮತ್ತೇ ಪುನರುಚ್ಛರಿಸಿ, ಸಮಿತಿಯನ್ನು ರದ್ದು ಮಾಡಿಲ್ಲ, ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕವಿ, ಸಂಶೋಧಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಡಾ.ವಡ್ಡಗೆರೆ ನಾಗರಾಜಯ್ಯ ಅವರು ಬರೆದಿರುವ, “ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!” ಎಂಬ ಲೇಖನ ನಾನುಗೌರಿ.ಕಾಂ ಓದುಗರಿಗಾಗಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯ ಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ಸಮಿತಿಯನ್ನು ವಿಸರ್ಜನೆ ಮಾಡಿರುವ ಈ ಗಳಿಗೆಯಲ್ಲಿ ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳು:

  • ಶಾಲಾ-ಕಾಲೇಜುಗಳ ಹಂತದ ಪಠ್ಯ ಪುಸ್ತಕಗಳನ್ನು ರೂಪಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದಿರುವ ವಿಕೃತ ಮನಸ್ಸಿನ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಅರ್ಹತೆ ಅಥವಾ ಮಾನದಂಡಗಳನ್ನು ಅನುಸರಿಸಿ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಲಾಯಿತು?
  • ಪುಸ್ತಕ ರಚನಾ ಸಮಿತಿಯಲ್ಲಾಗಲೀ ಅಥವಾ ಪಠ್ಯಗಳ ಆಯ್ಕೆಯಲ್ಲಾಗಲೀ ಸಂವಿಧಾನದ ಶ್ರೇಷ್ಠ ಆಶಯವಾದ ಸಾಮಾಜಿಕ ನ್ಯಾಯ ಅನುಷ್ಠಾನಗೊಳ್ಳದೇ, ಕೇವಲ ಬ್ರಾಹ್ಮಣರ ಏಕಚಕ್ರಾಧಿಪತ್ಯ ಸ್ಥಾಪಿಸಿಕೊಂಡ ಬಗ್ಗೆ ಕಿಂಚಿತ್ ಸಾರ್ವಜನಿಕ ಲಜ್ಜೆ ಇಲ್ಲದಾಯಿತೇ?
  • ಬ್ರಾಹ್ಮಣಶಾಹಿಯ ಪಾರಮ್ಯವನ್ನು ಹೇರಲು ಅಗತ್ಯವಾದುದೆಲ್ಲವನ್ನೂ ಪಠ್ಯಪುಸ್ತಕಕ್ಕೆ ವ್ಯವಸ್ಥಿತವಾಗಿ ತುರುಕಲಾಗಿದ್ದು, ಅಂತಹ ಹೊಲಸು ಪಠ್ಯಪುಸ್ತಕವನ್ನು ಉಳಿಸಿಕೊಂಡು ಸಮಿತಿಯನ್ನು ಮಾತ್ರ ವಿಸರ್ಜಿಸಿರುವುದರ ಹಿಂದಿನ ಮರ್ಮವೇನು?
  • ಪಠ್ಯಪುಸ್ತಕವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಕ್ತ ಮನಸ್ಸು ಹೊಂದಲಾಗಿದೆ ಎಂಬ ಕಣ್ಣೊರೆಸುವ ನಾಟಕವೇಕೆ?
  • ಬ್ರಾಹ್ಮಣಶಾಹಿಯ ಅರ್ಥಾತ್ ವೈದಿಕ ಧರ್ಮದ ವಿರುದ್ಧ ಬಂಡೆದ್ದು ಜಾತ್ಯತೀತ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ ಬಸವಣ್ಣನವರ ಬದುಕಿನ ಸತ್ಯ ಮತ್ತು ಆಶಯಗಳಿಗೆ ವಿರುದ್ಧವಾಗಿ ತಿರುಚಿ ಜನಿವಾರೀಕರಣ ಮಾಡಿರುವ ಪಾಠಗಳನ್ನು ಕೈಬಿಡುವ ಬಗ್ಗೆ ಪ್ರಸ್ತಾಪಿಸಿಲ್ಲ ಯಾಕೆ?
  • ಪಠ್ಯಪುಸ್ತಕ ರಚನೆ/ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಪ್ರಜಾಸತ್ತಾತ್ಮಕತೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳದೇ ನಿಯಮ ಬಾಹಿರವಾಗಿ ರೂಪಿಸಿರುವ ಪಠ್ಯಪುಸ್ತಕ ಎಷ್ಟರಮಟ್ಟಿಗೆ ಸಂವಿಧಾನಪರವಾಗಿರಲು ಸಾಧ್ಯ?
  • ಪುಸ್ತಕ ವಾಪಸೀ ಪ್ರತಿರೋಧ ಒಡ್ಡುತ್ತಿರುವ ಲೇಖಕರ ಸ್ವಾತಂತ್ರ್ಯವನ್ನು ಪರಿಗಣಿಸದೆಯೇ ಅದೇ ಪರಿಷ್ಕೃತ ಪಠ್ಯವನ್ನು ಉಳಿಸಿಕೊಳ್ಳುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾತ್ರವಲ್ಲದೇ ಸಾಂಸ್ಕೃತಿಕ ದಬ್ಬಾಳಿಕೆಯಲ್ಲವೇ?

ಇದನ್ನೂ ಓದಿ: ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷನಾಗುವ ಶೈಕ್ಷಣಿಕ ಅರ್ಹತೆ ಇಲ್ಲದಿರುವ ಕೇವಲ ಒಬ್ಬ ಟ್ಯೂಶನ್ ಮೇಷ್ಟ್ರಾಗಿದ್ದ ರೋಹಿತ್ ಚಕ್ರತೀರ್ಥ, ಕನ್ನಡ ಭಾಷಿಕರ ಮೇಲೆ ಹಿಂದಿ ಮತ್ತು ಸಂಸ್ಕೃತ ಭಾಷೆಯ ಹೇರಿಕೆಯನ್ನು ಪ್ರತಿಪಾದಿಸುತ್ತಿರುವ, ಬಸವಣ್ಣನವರಿಗೆ ಜನಿವಾರ ತೊಡಿಸುವುದಲ್ಲದೆ ಬಸವಣ್ಣನವರ ಚಿಂತನೆಗಳನ್ನು ಜನಿವಾರೀಕರಿಸಿದ, ಅಂಬೇಡ್ಕರ್ ಅವರ ವಿರುದ್ಧ ಕುಹಕವಾಡಿದ, ಹೆಣ್ಣುಮಕ್ಕಳು ಅಶ್ಲೀಲ Porn ವಿಡಿಯೋಗಳನ್ನು ನೋಡಬೇಕೆಂದು ಬಯಸಿದ, ಕನ್ನಡ ಧ್ವಜವನ್ನು ತನ್ನ ಕಾಚಾಕ್ಕೆ ಹೋಲಿಸಿದ ಹಾಗೂ ದಾರ್ಶನಿಕ ಕವಿ ಕುವೆಂಪು ಅವರ ನಾಡಗೀತೆಯ ವಾಕ್ಯಗಳನ್ನು ಚಿಕನ್ ಮಟನ್‌ಗಳ ಸಾಲೇ ಎಂದು ವಿಕೃತಗೊಳಿಸಿ ಬರೆದ ಕುಖ್ಯಾತಿಗೆ ಈಡಾಗಿದ್ದಾನೆ.

  • ಇಂತಹ ಹೀನ ಚಾರಿತ್ರ್ಯದ ವ್ಯಕ್ತಿಯು ರೂಪಿಸಿದ ಪಠ್ಯಗಳನ್ನು ಓದುವುದರಿಂದ ನಮ್ಮ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಇಂತಹ ನಾಡ ದ್ರೋಹಿಯನ್ನು ರಕ್ಷಿಸಿಕೊಳ್ಳು ಅಗತ್ಯವಾದರೂ ಏನು?
  • ಪ್ರೊ.ಬರಗೂರು ರಾಮಚಂದ್ರಪ್ಪನವರು ರೂಪಿಸಿಕೊಟ್ಟಿರುವ ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಹಳೆಯ ಪಠ್ಯಪುಸ್ತಕವೇ ನಮ್ಮ ಮಕ್ಕಳಿಗಿರಲಿ. ಇದರಿಂದ ನಿಮ್ಮ ಸಮಾಜಕ್ಕಾಗುವ ಮತ್ತು ಶಿಕ್ಷಣ ಕ್ಷೇತ್ರಕ್ಕಾಗುವ ನಷ್ಟವಾದರೂ ಏನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮಿತಿಯ ವಿಸರ್ಜನೆ ಮಾತ್ರವಲ್ಲ, ಚಕ್ರತೀರ್ತನ ನೇತೃತ್ವದಲ್ಲಿ ನಡೆದಿರುವ ಎಲ್ಲಾ ಪರಿಷ್ಕರಣೆ ವಾಪಸ್ ಪಡೆಯಬೇಕು. ಇದಕ್ಕಾಗಿ ಈ ನಾಡಿನ ಪ್ರಜ್ಞಾವಂತರು ಒತ್ತಾಯಿಸಬೇಕು.

  2. ಯಾಕೆ ಈ ಧ್ವೇಶ ಬ್ರಾಹ್ಮಣರ ಮೇಲೆ. ಸಮಾಜಕ್ಕೆ ಎಲ್ಲ ಸಮುದಾಯದವರ ಕೊಡುಗೆ ಇದೆ. ಎಲ್ಲದರಲ್ಲೂ ಜಾತಿಯನ್ನು ಯಾಕೆ ತರುತ್ತೀರ.
    ಏನು ತಪ್ಪಿದೆ ಅದನ್ನು‌ ಸರಿಪಡಿಸಲು ಒತ್ತಾಯ ಮಾಡಿ.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....