Homeಕರ್ನಾಟಕಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!

- Advertisement -
- Advertisement -

ಪಠ್ಯಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ರೋಹಿತ್ ಚಕ್ರತೀರ್ಥ ಅವರ ಸಮಿತಿ, ಪಠ್ಯ ಪುಸ್ತಕಗಳ ಕೇಸರೀಕರಣ ಮತ್ತು ಬ್ರಾಹ್ಮಣೀಕರಣವನ್ನು ಸಿಎಂ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಅದನ್ನು ಮತ್ತೇ ಪುನರುಚ್ಛರಿಸಿ, ಸಮಿತಿಯನ್ನು ರದ್ದು ಮಾಡಿಲ್ಲ, ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕವಿ, ಸಂಶೋಧಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಡಾ.ವಡ್ಡಗೆರೆ ನಾಗರಾಜಯ್ಯ ಅವರು ಬರೆದಿರುವ, “ಪಠ್ಯಪುಸ್ತಕ ಮರು ಪರಿಷ್ಕರಣ ಸಮಿತಿ ವಿಸರ್ಜನೆ; ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳಿವು!” ಎಂಬ ಲೇಖನ ನಾನುಗೌರಿ.ಕಾಂ ಓದುಗರಿಗಾಗಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯ ಪುಸ್ತಕ ಮರು ಪರಿಷ್ಕರಣಾ ಕಾರ್ಯ ಮುಗಿದಿರುವುದರಿಂದ ಸಮಿತಿಯನ್ನು ವಿಸರ್ಜನೆ ಮಾಡಿರುವ ಈ ಗಳಿಗೆಯಲ್ಲಿ ಬಗೆ ಹರಿಯಬೇಕಾಗಿರುವ ಮುಖ್ಯ ಪ್ರಶ್ನೆಗಳು:

  • ಶಾಲಾ-ಕಾಲೇಜುಗಳ ಹಂತದ ಪಠ್ಯ ಪುಸ್ತಕಗಳನ್ನು ರೂಪಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇಲ್ಲದಿರುವ ವಿಕೃತ ಮನಸ್ಸಿನ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಅರ್ಹತೆ ಅಥವಾ ಮಾನದಂಡಗಳನ್ನು ಅನುಸರಿಸಿ ಪುಸ್ತಕ ರಚನಾ ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಲಾಯಿತು?
  • ಪುಸ್ತಕ ರಚನಾ ಸಮಿತಿಯಲ್ಲಾಗಲೀ ಅಥವಾ ಪಠ್ಯಗಳ ಆಯ್ಕೆಯಲ್ಲಾಗಲೀ ಸಂವಿಧಾನದ ಶ್ರೇಷ್ಠ ಆಶಯವಾದ ಸಾಮಾಜಿಕ ನ್ಯಾಯ ಅನುಷ್ಠಾನಗೊಳ್ಳದೇ, ಕೇವಲ ಬ್ರಾಹ್ಮಣರ ಏಕಚಕ್ರಾಧಿಪತ್ಯ ಸ್ಥಾಪಿಸಿಕೊಂಡ ಬಗ್ಗೆ ಕಿಂಚಿತ್ ಸಾರ್ವಜನಿಕ ಲಜ್ಜೆ ಇಲ್ಲದಾಯಿತೇ?
  • ಬ್ರಾಹ್ಮಣಶಾಹಿಯ ಪಾರಮ್ಯವನ್ನು ಹೇರಲು ಅಗತ್ಯವಾದುದೆಲ್ಲವನ್ನೂ ಪಠ್ಯಪುಸ್ತಕಕ್ಕೆ ವ್ಯವಸ್ಥಿತವಾಗಿ ತುರುಕಲಾಗಿದ್ದು, ಅಂತಹ ಹೊಲಸು ಪಠ್ಯಪುಸ್ತಕವನ್ನು ಉಳಿಸಿಕೊಂಡು ಸಮಿತಿಯನ್ನು ಮಾತ್ರ ವಿಸರ್ಜಿಸಿರುವುದರ ಹಿಂದಿನ ಮರ್ಮವೇನು?
  • ಪಠ್ಯಪುಸ್ತಕವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಕ್ತ ಮನಸ್ಸು ಹೊಂದಲಾಗಿದೆ ಎಂಬ ಕಣ್ಣೊರೆಸುವ ನಾಟಕವೇಕೆ?
  • ಬ್ರಾಹ್ಮಣಶಾಹಿಯ ಅರ್ಥಾತ್ ವೈದಿಕ ಧರ್ಮದ ವಿರುದ್ಧ ಬಂಡೆದ್ದು ಜಾತ್ಯತೀತ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ ಬಸವಣ್ಣನವರ ಬದುಕಿನ ಸತ್ಯ ಮತ್ತು ಆಶಯಗಳಿಗೆ ವಿರುದ್ಧವಾಗಿ ತಿರುಚಿ ಜನಿವಾರೀಕರಣ ಮಾಡಿರುವ ಪಾಠಗಳನ್ನು ಕೈಬಿಡುವ ಬಗ್ಗೆ ಪ್ರಸ್ತಾಪಿಸಿಲ್ಲ ಯಾಕೆ?
  • ಪಠ್ಯಪುಸ್ತಕ ರಚನೆ/ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಪ್ರಜಾಸತ್ತಾತ್ಮಕತೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳದೇ ನಿಯಮ ಬಾಹಿರವಾಗಿ ರೂಪಿಸಿರುವ ಪಠ್ಯಪುಸ್ತಕ ಎಷ್ಟರಮಟ್ಟಿಗೆ ಸಂವಿಧಾನಪರವಾಗಿರಲು ಸಾಧ್ಯ?
  • ಪುಸ್ತಕ ವಾಪಸೀ ಪ್ರತಿರೋಧ ಒಡ್ಡುತ್ತಿರುವ ಲೇಖಕರ ಸ್ವಾತಂತ್ರ್ಯವನ್ನು ಪರಿಗಣಿಸದೆಯೇ ಅದೇ ಪರಿಷ್ಕೃತ ಪಠ್ಯವನ್ನು ಉಳಿಸಿಕೊಳ್ಳುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾತ್ರವಲ್ಲದೇ ಸಾಂಸ್ಕೃತಿಕ ದಬ್ಬಾಳಿಕೆಯಲ್ಲವೇ?

ಇದನ್ನೂ ಓದಿ: ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷನಾಗುವ ಶೈಕ್ಷಣಿಕ ಅರ್ಹತೆ ಇಲ್ಲದಿರುವ ಕೇವಲ ಒಬ್ಬ ಟ್ಯೂಶನ್ ಮೇಷ್ಟ್ರಾಗಿದ್ದ ರೋಹಿತ್ ಚಕ್ರತೀರ್ಥ, ಕನ್ನಡ ಭಾಷಿಕರ ಮೇಲೆ ಹಿಂದಿ ಮತ್ತು ಸಂಸ್ಕೃತ ಭಾಷೆಯ ಹೇರಿಕೆಯನ್ನು ಪ್ರತಿಪಾದಿಸುತ್ತಿರುವ, ಬಸವಣ್ಣನವರಿಗೆ ಜನಿವಾರ ತೊಡಿಸುವುದಲ್ಲದೆ ಬಸವಣ್ಣನವರ ಚಿಂತನೆಗಳನ್ನು ಜನಿವಾರೀಕರಿಸಿದ, ಅಂಬೇಡ್ಕರ್ ಅವರ ವಿರುದ್ಧ ಕುಹಕವಾಡಿದ, ಹೆಣ್ಣುಮಕ್ಕಳು ಅಶ್ಲೀಲ Porn ವಿಡಿಯೋಗಳನ್ನು ನೋಡಬೇಕೆಂದು ಬಯಸಿದ, ಕನ್ನಡ ಧ್ವಜವನ್ನು ತನ್ನ ಕಾಚಾಕ್ಕೆ ಹೋಲಿಸಿದ ಹಾಗೂ ದಾರ್ಶನಿಕ ಕವಿ ಕುವೆಂಪು ಅವರ ನಾಡಗೀತೆಯ ವಾಕ್ಯಗಳನ್ನು ಚಿಕನ್ ಮಟನ್‌ಗಳ ಸಾಲೇ ಎಂದು ವಿಕೃತಗೊಳಿಸಿ ಬರೆದ ಕುಖ್ಯಾತಿಗೆ ಈಡಾಗಿದ್ದಾನೆ.

  • ಇಂತಹ ಹೀನ ಚಾರಿತ್ರ್ಯದ ವ್ಯಕ್ತಿಯು ರೂಪಿಸಿದ ಪಠ್ಯಗಳನ್ನು ಓದುವುದರಿಂದ ನಮ್ಮ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಇಂತಹ ನಾಡ ದ್ರೋಹಿಯನ್ನು ರಕ್ಷಿಸಿಕೊಳ್ಳು ಅಗತ್ಯವಾದರೂ ಏನು?
  • ಪ್ರೊ.ಬರಗೂರು ರಾಮಚಂದ್ರಪ್ಪನವರು ರೂಪಿಸಿಕೊಟ್ಟಿರುವ ಸಂವಿಧಾನದ ಆಶಯಗಳಿಗೆ ಪೂರಕವಾಗಿರುವ ಹಳೆಯ ಪಠ್ಯಪುಸ್ತಕವೇ ನಮ್ಮ ಮಕ್ಕಳಿಗಿರಲಿ. ಇದರಿಂದ ನಿಮ್ಮ ಸಮಾಜಕ್ಕಾಗುವ ಮತ್ತು ಶಿಕ್ಷಣ ಕ್ಷೇತ್ರಕ್ಕಾಗುವ ನಷ್ಟವಾದರೂ ಏನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸಮಿತಿಯ ವಿಸರ್ಜನೆ ಮಾತ್ರವಲ್ಲ, ಚಕ್ರತೀರ್ತನ ನೇತೃತ್ವದಲ್ಲಿ ನಡೆದಿರುವ ಎಲ್ಲಾ ಪರಿಷ್ಕರಣೆ ವಾಪಸ್ ಪಡೆಯಬೇಕು. ಇದಕ್ಕಾಗಿ ಈ ನಾಡಿನ ಪ್ರಜ್ಞಾವಂತರು ಒತ್ತಾಯಿಸಬೇಕು.

  2. ಯಾಕೆ ಈ ಧ್ವೇಶ ಬ್ರಾಹ್ಮಣರ ಮೇಲೆ. ಸಮಾಜಕ್ಕೆ ಎಲ್ಲ ಸಮುದಾಯದವರ ಕೊಡುಗೆ ಇದೆ. ಎಲ್ಲದರಲ್ಲೂ ಜಾತಿಯನ್ನು ಯಾಕೆ ತರುತ್ತೀರ.
    ಏನು ತಪ್ಪಿದೆ ಅದನ್ನು‌ ಸರಿಪಡಿಸಲು ಒತ್ತಾಯ ಮಾಡಿ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...