Homeಕರ್ನಾಟಕತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

ತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

- Advertisement -
- Advertisement -

ಕನ್ನಡದ ಖ್ಯಾತ ಕಥೆಗಾರ, ಕಾದಂಬರಿಕಾರ, ವಿಮರ್ಶಕ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರನ್ನು ಅಣಿಕಿಸಿ ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಮಾಡಿರುವ ಕಮೆಂಟ್‌ನ ಸ್ಕ್ರೀನ್‌ಶಾಟ್ ಈಗ ಹರಿದಾಡುತ್ತಿದೆ.

ತೇಜಸ್ವಿಯವರ ಏಕೈಕ ಕವನ ಸಂಕಲನ ‘ಬೃಹನ್ನಳೆ ಸೋಮುವಿನ ಸ್ವಗತ ಲಹರಿ’. ಈ ಕೃತಿಯು 1962ರಲ್ಲಿ ಪ್ರಕಟವಾಯಿತು. ರಾಜಕೀಯ ವಿಡಂಬನೆ, ಹತಾಶೆ, ಅಸಹಾಯಕತೆ, ಸಿಟ್ಟು ಅಪ್ರಕಟಿತ ಪ್ರೇಮವನ್ನು ಇಲ್ಲಿನ ಕವನಗಳಲ್ಲಿ ಕಾಣಬಹುದು ಎಂದು ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲಿನ ಕವಿತೆಯೊಂದರ ಕುರಿತು ಕಮೆಂಟ್ ಮಾಡಿರುವ ಚಕ್ರತೀರ್ಥ, ‘ನೈಂಟಿ ಎಮ್ಮೆಲ್‌ ಕವಿತೆ’ ಎಂದು ಅಣಕಿಸಿದ್ದಾರೆ.

‘#ನವಇತಿಹಾಸನಿರ್ಮಾಣಗಳು’ ಹ್ಯಾಷ್‌ಟ್ಯಾಗ್‌ ಬಳಸಿ ಮಾಡಿರುವ ಪೋಸ್ಟ್‌ನಲ್ಲಿ “ಪೂರ್ಣಚಂದ್ರ ತೇಜಸ್ವಿಯವರು ತಮ್ಮ ಪ್ರತಿ ಕವನದಲ್ಲಿ ನಮ್ಮ ದೇಶದ Inequality of wealth ಬಗ್ಗೆ ಹೇಳಿದ್ದಾರೆ” ಎಂದು ಚಕ್ರತೀರ್ಥ ಬರೆದಿದ್ದಾರೆ.

ಭಾಗ್ಯ ಸುಭಾಷ್‌ ಎಂಬವರು ‘ಅವರು ಕವಿತೆ ಬರೆದಿದ್ದಾರಾ?’ ಎಂದು ಕಮೆಂಟ್ ಮಾಡಿದ್ದಾರೆ. ಅದಕ್ಕೆ ಸುಮಾ ಆರಾಧ್ಯ ಅವರು ಕವಿತೆಯನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ರೋಹಿತ್‌ ಚಕ್ರತೀರ್ಥ ಕಮೆಂಟ್ ಮಾಡಿ, “ನೈಂಟಿಎಮ್ಮೆಲ್‌” ಕವಿತೆ ಎಂದಿದ್ದಾರೆ.

‘ಬ್ರಾಹ್ಮಣ ಯುವಕರಿಗೆ’ ಎಂಬ ಕವಿತೆಯನ್ನು ಸುಮಾ ಆರಾಧ್ಯ ಹಂಚಿಕೊಂಡಿರುವುದನ್ನು ಕಾಣಬಹುದು.

ಕನ್ನಡ ಸಾಹಿತಿಗಳು, ಬರಹಗಾರರ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಾ ಬಂದಿರುವ ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ, ಆ ಸಮಿತಿ ನೀಡಿರುವ ಪಠ್ಯವನ್ನು ಅಳವಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನೂತನ ಪಠ್ಯಪುಸ್ತಕಗಳನ್ನು ಕೂಡಲೇ ವಾಪಸ್‌ ಪಡೆಯಬೇಕೆಂಬ ಆಗ್ರಹ ಹೆಚ್ಚಾಗುತ್ತಿದೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಎದುರಿಸುತ್ತಿರುವ ರೋಹಿತ್‌ ಚಕ್ರತೀರ್ಥ ಅವರು ಈ ಹಿಂದೆ ಮಾಡಿರುವ ಪೋಸ್ಟ್‌ಗಳು, ಕಮೆಂಟ್‌ಗಳು ಹೊರಬೀಳತೊಡಗಿವೆ. ಅಶ್ಲೀಲವಾಗಿ ಮಾಡಿದ್ದ ಪೋಸ್ಟ್‌ಗಳೆಲ್ಲ ಚರ್ಚೆಗೆ ಬಂದ ಬಳಿಕ ರೋಹಿತ್‌ ಚಕ್ರತೀರ್ಥ ಅವರು ತಮ್ಮ ಎಫ್‌ಬಿ ಪ್ರೊಫೈಲ್‌ ಲಾಕ್ ಮಾಡಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. “ವೈಚಾರಿಕತೆಯನ್ನು ತುಳಿದುಹಾಕದಿದ್ದರೆ ತಟ್ಟೆ ಕಾಸಿಗೆ ಕುತ್ತು ಬರುತ್ತದೆ” ಎಂಬುದು ಮನುವಾದಿಗಳ ಆತಂಕ. ಅದಕ್ಕಾಗಿ ಅವರು ಚಕ್ರತೀರ್ತನಂತಹ ಹೀನಕ್ರಿಮಿಯನ್ನು ಉನ್ನತ ಸ್ಥಾನದಲ್ಲಿ ಕೂರಿಸಿದ್ದಾರೆ. ಈ ನಾಡಿನ ಪ್ರಜ್ಞಾವಂತರು ಇದಕ್ಕೆ ಪ್ರತಿಬಟಿಸದಿದ್ದರೆ, ದೇವನೂರು ಮಹಾದೇವ ಅವರು ಹೇಳಿರುವಂತೆ ಈ ನಾಡಿಗೆ ಕೇಡುಗಾಲ ಕಟ್ಟಿಟ್ಟ ಬುತ್ತಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...