Homeಮುಖಪುಟವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

ವ್ಯಕ್ತಿತ್ವ ವಿಕಸನ 2 : ನಿಮ್ಮನ್ನು ನೀವು ಅರಿತುಕೊಳ್ಳಿ

- Advertisement -
- Advertisement -

ಜೀವನ ಕಲೆಗಳು: ಅಂಕಣ-3

| ಜಿ. ಆರ್. ವಿದ್ಯಾರಣ್ಯ |

ತನ್ನ ಸ್ವಂತ ಶಕ್ತಿ/ದೌರ್ಬಲ್ಯವನ್ನು ಅರಿತುಕೊಳ್ಳುವ ಕಲೆಗೆ “ಸ್ವೊಟ್ ಎನಾಲಿಸಿಸ್” (SWOT ANALYSIS) ಎನ್ನುತ್ತಾರೆ. ಇದನ್ನು ವ್ಯಕ್ತಿಗಳು ಮತ್ತು ಸಂಸ್ಥೆಗಳು ಕೂಡ ಬಳಸಬಹುದು. ಇದರಿಂದ ವ್ಯಕ್ತಿಯ/ಸಂಸ್ಥೆಯ ಶಕ್ತಿ (Strength), ದೌರ್ಬಲ್ಯ (Weakness), ಅವಕಾಶ (Opportunity) ಮತ್ತು ಭೀತಿ (Threat) ಗಳನ್ನು ಅರಿತುಕೊಳ್ಳಬಹುದು.ಈ ವಿಶ್ಲೇಷಣೆಯನ್ನು ವ್ಯಕ್ತಿಯ ಪರವಾಗಿ ಬಳಸಿದಲ್ಲಿ ವ್ಯಕ್ತಿಯ ಸಹಜ ಶಕ್ತಿ-ಸಾಮರ್ಥ್ಯಗಳನ್ನು ಅರಿತು ಅದಕ್ಕೆ ತಕ್ಕ ಅವಕಾಶಗಳನ್ನು ಹುಡುಕಲು ನೆರವಾಗುತ್ತದೆ. ಸಂಸ್ಥೆಯ ಪರವಾಗಿ ಉಪಯೋಗಿಸಿದಲ್ಲಿ ಅದರ ಮಾರುಕಟ್ಟೆಯ ಹಿಡಿತ ಬಲಪಡಿಸುವುದಕ್ಕೆ ಅಥವಾ ಹೊಸ ಆವಿಶ್ಕಾರವನ್ನು ಹೊರಬಿಡಲು ಸಹಕಾರಿಯಾಗುತ್ತದೆ.

ಸ್ವೊಟ್ ಎನಾಲಿಸಿಸ್ (SWOT ANALYSIS)ಮಾಡುವುದರಿಂದ ನಮ್ಮ ಶಕ್ತಿ ಏನು ಮತ್ತು ದೌರ್ಬಲ್ಯ ಏನು ಎಂಬುದನ್ನು ತಿಳಿಯಬಹುದು. ಉದಾಹರಣೆಗೆ ನಿಮ್ಮ ಇತ್ತೀಚಿನ ಶಾಲಾ/ಕಾಲೇಜು ತರಗತಿಯ ಅಂಕ ಪಟ್ಟಿ ನೋಡಿದಾಕ್ಷಣ ಯಾವ ವಿಷಯದಲ್ಲಿ ನೀವು ಗಟ್ಟಿಗರು, ಯಾವುದರಲ್ಲಿ ನಿಮಗೆ ಶಕ್ತಿ ಸಾಲದು ಎಂಬುದು ಕೂಡಲೇ ತಿಳಿಯುತ್ತದೆ. ಯಾವ ವಿಷಯದಲ್ಲಿ ನೀವು ಹೆಚ್ಚು ಅಂಕ ಗಳಿಸಿದ್ದೀರೋ, ಅದು ನಿಮ್ಮ ಸಹಜ ಶಕ್ತಿ. ಯಾವ ವಿಷಯ ಎಷ್ಟೇ ಪರಿಶ್ರಮ ಪಟ್ಟರೂ, ನಿಮ್ಮ ತಲೆಗೆ ಹತ್ತುವುದಿಲ್ಲವೋ ಅದು ನಿಮ್ಮ ದೌರ್ಬಲ್ಯ, ಆದರೆ ಎರಡೂ, ಶಕ್ತಿ ಮತ್ತು ದೌರ್ಬಲ್ಯ, ತಾತ್ಕಾಲಿಕ. ಇದಕ್ಕೆ ಕಾರಣ ನೀವು ಕಂಡುಕೊಳ್ಳಬೇಕು. ಬಹುಶಃ ನಿಮ್ಮ ಕಲಿಯುವ ರೀತಿ ಸರಿಯಾಗಿಲ್ಲದಿರಬಹುದು ಅಥವಾ ಶಾಲೆಯಲ್ಲಿ ಕಲಿಸುವ ವಿಧಾನದಲ್ಲಿ ತೊಂದರೆ ಇರಬಹುದು. ಸರಿಯಾದ ಕಾರಣ ತಿಳಿದು ಸಮಸ್ಯೆ ಪರಿಹರಿಸಿದಲ್ಲಿ ದೌರ್ಬಲ್ಯವನ್ನು ಶಕ್ತಿಯಾಗಿ ಬದಲಾಯಿಸಿಕೊಳ್ಳಲು ಸಾಧ್ಯ.

ಅದೇ ರೀತಿಯಲ್ಲಿ ನಿಮ್ಮ ಶಕ್ತಿಯಿಂದ ನಿಮಗೆ ಈಗಿರುವ ಅಥವಾ ಸಿಗಬಹುದಾದ ಅವಕಾಶಗಳನ್ನು ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಯಾವುದೇ ವಿಷಯದಲ್ಲಿ ಅತಿ ಹೆಚ್ಚಿನ ಆಸಕ್ತಿ/ಉತ್ಸಾಹವಿದ್ದಲ್ಲಿ ಅದಕ್ಕೆ ಸಿಗಬಹುದಾದ ಪಾರಿತೋಷಕ, ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಮುಂತಾದವುಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದು. ಕೆಲವೊಮ್ಮೆ ಅದಕ್ಕೆ ಪೂರಕವಾದ ಲೇಖನ ರಚಿಸಿ ಲಗತ್ತಿಸಬೇಕಾಗಬಹುದು. ಅದೇ ವಿಷಯದಲ್ಲಿ ಉನ್ನತ ಅಭ್ಯಾಸಕ್ಕೆ ಇರುವ ಬೇರೆ ಬೇರೆ ಮಾರ್ಗಗಳನ್ನು ನೀವು ಕಂಡುಕೊಳ್ಳಬಹುದು.

ವಿಜ್ಞಾನ ಸಂಬಂಧಿ ವಿಷಯಗಳಲ್ಲಿ ನಿಮಗೆ ಹೆಚ್ಚು ಅಂಕಗಳು ಬರುತ್ತಿದ್ದು, ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಕಷ್ಟವಾಗಿದ್ದರೆ ನೀವು ಎಸ್.ಎಸ್.ಎಲ್.ಸಿ. ನಂತರ ಪಿ.ಸಿ.ಎಂ.ಬಿ., ಪಿ.ಸಿ.ಎಂ.ಸಿ. ಅಥವಾ ಪಿ.ಸಿ.ಎಂ.ಇ. ಇತ್ಯಾದಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಅದೇ ರೀತಿ ವಿಜ್ಞಾನ ಸಂಬಂಧಿ ವಿಷಯಗಳುನಿಮಗೆ ಕಷ್ಟಕರ ಎನಿಸುತ್ತಿದ್ದು, ಭಾಷೆ, ಇತಿಹಾಸ, ಭೂಗೋಳ ಮುಂತಾದವು ಸುಲಭವಾಗಿದ್ದರೆ ನೀವು ಹ್ಯುಮಾನಿಟೀಸ್ ಶಾಖೆ ಆಯ್ಕೆ ಮಾಡಿಕೊಳ್ಳಬಹುದು. ಹಾಗೆಯೇ ನೀವು ಲೆಕ್ಕದಲ್ಲಿ ಗಟ್ಟಿಗರು ಮತ್ತು ಭಾಷೆಯೂ ಸುಲಭ ಎನಿಸಿದರೆ ಕಾಮರ್ಸ್ ನಿಮಗೆ ಉತ್ತಮ ಆಯ್ಕೆಯಾಗಿರಬಹುದು. ಎಲ್ಲರೂ ಡಾಕ್ಟರ್ ಅಥವಾ ಇಂಜಿನಿಯರ್ ಆಗಲೇ ಬೇಕೆಂಬ ನಿಯಮವೂ ಇಲ್ಲ, ಅಗತ್ಯವೂ ಇಲ್ಲ. ಯಾವುದೇ ಮಾರ್ಗವನ್ನು ನೀವು ನಿಮ್ಮ ಸಹಜ ಶಕ್ತಿ ಗುಣವನ್ನು ಆಧರಿಸಿ ಆಯ್ಕೆ ಮಾಡಿದ್ದಲ್ಲಿ, ಹೆಚ್ಚು ಪರಿಶ್ರಮವಿಲ್ಲದೇ ಉನ್ನತ ಸಾಧನೆ ಮಾಡಲು ಬಹಳಷ್ಟು ಅವಕಾಶವಿರುತ್ತದೆ.

ಇತ್ತೀಚೆಗೆ ಏಪ್ರಿಲ್/ಮೇ ತಿಂಗಳಲ್ಲಿ ಕಾಲೇಜುಗಳು ಮತ್ತು ಉನ್ನತ ವಿದ್ಯಾಸಂಸ್ಥೆಗಳು ನಗರದಾದ್ಯಂತ ಮಾರಾಟ ಮೇಳಗಳನ್ನು ಆಯೋಜಿಸುತ್ತಾರೆ. ಇದರಲ್ಲಿ, ಶಿಕ್ಷಣ ತಜ್ಞರು ಮಕ್ಕಳನ್ನುದ್ದೇಶಿಸಿ ಮಾತನಾಡಿ, ಅವರಿಗೆ ಇರುವ ಹೊಸ ಹೊಸ ವೃತ್ತಿಪರ ಕೋರ್ಸುಗಳ ಬಗ್ಗೆ ತಿಳಿಸಿಕೊಡುತ್ತಾರೆ. ಇಂತಹ ಮೇಳಗಳಲ್ಲಿ ಮಕ್ಕಳು ಮತ್ತು ಪೋಷಕರು ಭಾಗವಹಿಸಬೇಕು. ಒಳ್ಳೆಯ ವರಮಾನ/ಬಡ್ತಿ ಅವಕಾಶವಿರುವ ಹುದ್ದೆಗಳ ದೃಷ್ಟಿಯಿಂದ ಯಾವ ಯಾವ ಕ್ಷೇತ್ರದಲ್ಲಿ, ಮುಂಬರುವ ಎಷ್ಟು ವರ್ಷದಲ್ಲಿ, ಎಷ್ಟು ಹುದ್ದೆಗಳು ಸೃಷ್ಟಿಯಾಗಲಿವೆ ಎಂಬ ಖಚಿತ ಮಾಹಿತಿ ದುರದೃಷ್ಟವಶಾತ್ ಎಲ್ಲೂ ಸಿಗುವುದಿಲ್ಲ. ಈಗ ಕಂಪ್ಯೂಟರ್ ಕ್ಷೇತ್ರದಲ್ಲಿ ಎ.ಐ. (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ – ಕೃತಕ ಬುದ್ಧಿಶಕ್ತಿ) ಕ್ಷೇತ್ರದಲ್ಲಿ ಸಾಕಷ್ಟು ಅವಕಾಶವಿದೆ ಎಂದು ಕೇಳಿಬಂದರೂ ಸಹ ಮುಂಬರುವ ಐದು ವರ್ಷದಲ್ಲಿ ಏನಾಗಬಹುದು ಎಂದು ಯಾರಿಗೂ ಗೊತ್ತಿಲ್ಲ ಆದ್ದರಿಂದ ಈಗ ಆ ಕೋರ್ಸಿಗೆ ಸೇರುವ ಮಕ್ಕಳಿಗೆ ತಮ್ಮ ಭವಿಷ್ಯ ಹೇಗಿರುತ್ತದೆ ಎಂದು ಖಚಿತಗೊಳಿಸಿಕೊಳ್ಳಲು ಸಾಧ್ಯವಿಲ್ಲ.

ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳು ಆನ್-ಲೈನ್ ಉಚಿತ ಪರೀಕ್ಷೆ ಮಾಡಿಕೊಂಡಲ್ಲಿ ಅವರ ವ್ಯಕ್ತಿತ್ವ ಮಾದರಿ ಯಾವುದು ಎಂಬುದು ತಿಳಿಯುತ್ತದೆ. ಈ ಸ್ವ-ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ, ವ್ಯಕ್ತಿತ್ವದ ಇಂಡಿಕೇಟರ್ ಪ್ರಕಾರ ಯಾವ ಜೀವನೋಪಾಯ/ವೃತ್ತಿ ಅವರಿಗೆ ಸಹಜ ಮತ್ತು ಸರಳ ಎಂಬುದನ್ನು ನಿರ್ಧರಿಸಬಹುದು. ಅದೇ ರೀತಿ ಅವರ ಮುಂದಿನ ಉನ್ನತ ಶೈಕ್ಷಣಿಕ ಆಯ್ಕೆಯನ್ನೂ ಸಹ ಅವರು ಅಥವಾ ಪೋಷಕರು ನಿರ್ಧರಿಸಬಹುದು.

ಅಪಾಯದ ಎಚ್ಚರಿಕೆ: ಎಂಬಿಟಿಐ ಅಥವಾ ಬಿಗ್-ಫೈವ್ ಆಗಲೀ ಸಂಪೂರ್ಣ ವೈಜ್ಞಾನಿಕ ತತ್ವವಾದ ಅಲ್ಲ, ಆದ್ದರಿಂದ ಮಕ್ಕಳ ಭವಿಷ್ಯ ರೂಪಿಸುವ ಮುನ್ನ, ಪರಿಣಿತರ, ವೃತ್ತಿಪರರ ಸಲಹೆ ಪಡೆಯುವುದು ಅತ್ಯಂತ ಅವಶ್ಯಕ. ಕೇವಲ ಅಂತರ್ಜಾಲದ ಮಾಹಿತಿ ನಂಬಿ, ಅಥವಾ ಒಂದು ಲೇಖನ ಓದಿ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಬಹು ದೊಡ್ಡ ನಿರ್ಧಾರಕ್ಕೆ ಬರಬೇಡಿ.

ಎಸ್.ಎಸ್.ಎಲ್.ಸಿ. ನಂತರ ದ್ವಿತೀಯ ಪಿಯುಸಿ ಸಾಕು (ಅಥವಾ ಯಾವುದೋ ಒಂದು ಪದವಿ ಗಿಟ್ಟಿಸಿದರೆ ಸಾಕು) ಎಂದು ಓದನ್ನು ಅಲ್ಲಿಗೇ ನಿಲ್ಲಿಸಿ, ಯಾವ ಕೆಲಸಕ್ಕೆ ಸೇರಬೇಕು ಎಂಬುದನ್ನು ನಿರ್ಧರಿಸಲಾಗದೇ ಇರುವ ಯುವಕ/ಯುವತಿಯರಿಗೆ ಇಲ್ಲಿದೆ ಒಂದು ಸರಳ ದಾರಿ. ಮೊದಲು ಮೇಲೆ ತಿಳಿಸಿದಂತೆ, ನಿಮ್ಮ ಸ್ವೊಟ್ ಎನಾಲಿಸಿಸ್ ನೀವೇ ಮಾಡಿಕೊಳ್ಳಿ. ನೀವು ಎಂತಹ ವ್ಯಕ್ತಿ ಎಂದು ನೀವೇ ನಿರ್ಧರಿಸಿಕೊಳ್ಳಿ. ನಂತರ ಶಾಲೆ/ಕಾಲೇಜಿನಲ್ಲಿ ನೀವು ಸುಲಭವಾಗಿ ಕಲಿತ ವಿಷಯ, ನೀವು ಸ್ವ-ಇಚ್ಛೆಯಿಂದ, ಸ್ವಯಂಸೇವಕರಾಗಿ, ಇಷ್ಟ ಪಟ್ಟು ಮಾಡಿದ ಕೆಲಸಗಳು (ಸ್ಕೌಟ್/ಗೈಡ್, ಎನ್.ಎಸ್.ಎಸ್., ಗ್ರಾಹಕ ಕ್ಲಬ್, ವಿಜ್ಞಾನ ಕ್ಲಬ್, ಬರವಣಿಗೆ/ಚಿತ್ರಕಲೆ, ಸಾಮಾಜಿಕ/ಧಾರ್ಮಿಕ ಚಟುವಟಿಕೆ, ಅಥವಾ ಧನಸಂಗ್ರಹ ಇತ್ಯಾದಿ), ಇಷ್ಟವಾದ/ಭಾಗವಹಿಸಿದ ಕ್ರೀಡೆಗಳು ಯಾವುದು ಎಂದು ಒಂದನ್ನೂ ಬಿಡದೆ, ಹಾಳೆಯಲ್ಲಿ ಗುರುತು ಹಾಕಿಕೊಳ್ಳಿ. ಇವನ್ನೆಲ್ಲಾ ಒಂದೊಂದು ಮಣಿಗಳು ಎಂದು ಭಾವಿಸಿ, ಅವನ್ನು ಪೋಣಿಸಿ ಹಾರವನ್ನಾಗಿ ಮಾಡಬಹುದೇ ಯೋಚಿಸಿ. ಹಾರಕ್ಕೆ ಒಂದೆರಡು ಮಣಿಗಳು ಕಡಿಮೆ ಎಂದೆನಿಸಿದರೆ ಅವನ್ನು ಪಡೆಯಲು ನಿಮ್ಮ ಪ್ರಯತ್ನ ಹೇಗಿರಬೇಕು ಎಂದು ಯೋಚಿಸಿ. ನಿಮ್ಮ ಮುಂದಿನ ದಾರಿ ತಾನಾಗಿಯೇ ಗೋಚರಿಸುತ್ತದೆ.

ಇದನ್ನೂ ಒದಿ: ನಮ್ಮ ಬದುಕನ್ನು ಸುಂದರ ಮತ್ತು ಅರ್ಥಪೂರ್ಣಗೊಳಿಸಿಕೊಳ್ಳಲು ಬೇಕಿರುವ ಜೀವನಾವಶ್ಯಕ ಕಲೆಗಳು

ಇದನ್ನೂ ಓದಿ: ನಿಮ್ಮನ್ನು ನೀವೇ ಅರಿತುಕೊಳ್ಳಿ: ವ್ಯಕ್ತಿತ್ವ ವಿಕಸನ 1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...