Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...