Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...