Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...