Homeಕರ್ನಾಟಕಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಸ್ವ ಹಿತಾಸಕ್ತಿಯ ಸಿದ್ಧಾಂತಗಳನ್ನು ಹೇಳಬಾರದೆನ್ನುವ ಚಕ್ರತೀರ್ಥ ಸಮಿತಿ, ತನ್ನದೇ ಚೌಕಟ್ಟನ್ನು ಮೀರಿರುವುದು ನಿಚ್ಚಳವಾಗಿ ಕಾಣುತ್ತಿದೆ.

- Advertisement -
- Advertisement -

ಭಾರತ ಸ್ವಾತಂತ್ರ್ಯ ಪಡೆದು ತನ್ನದೇ ಸಂವಿಧಾನವನ್ನು ರಚಿಸಿಕೊಂಡು ಏಳು ದಶಕಗಳಾಯಿತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸಿದ ಆರ್‌ಎಸ್‌ಎಸ್‌, `ಅಖಂಡ ಭಾರತ’ದ ಕುರಿತು ಆಗಾಗ್ಗೆ ಮಾತನಾಡುತ್ತದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕೂಡ ಕಳೆದ ವರ್ಷ ‘ಅಖಂಡ ಭಾರತ’ದ ಕುರಿತು ಪ್ರಸ್ತಾಪಿಸಿದ್ದರು. ಈ ಪರಿಕಲ್ಪನೆ ಈಗ ಪಠ್ಯಪುಸ್ತಕದಲ್ಲೂ ಕಾಣಿಸಿಕೊಂಡಿದೆ. ಪಠ್ಯಪುಸ್ತಕದಿಂದ ಸಿದ್ಧಾಂತಗಳನ್ನು ತೆಗೆದುಹಾಕಲಾಗಿದೆ ಎನ್ನುವ ಪಠ್ಯಪರಿಶೀಲನಾ ಸಮಿತಿ ತನ್ನದೇ ಮಾತನ್ನು ಉಲ್ಲಂಘಿಸಿದಂತೆ ಕಾಣುತ್ತಿದೆ. ಆರ್‌ಎಸ್‌ಎಸ್‌ ಪ್ರತಿಪಾದಿಸುವ ‘ಅಖಂಡ ಭಾರತ’ ಪರಿಕಲ್ಪನೆಯು ಹೊಸ ಪಠ್ಯದಲ್ಲಿ ತುರುಕಲ್ಪಟ್ಟಿದೆ.

ಎಂಟನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪರಿಷ್ಕೃತ ಪಠ್ಯದಲ್ಲಿ ‘ಭರತವರ್ಷ’ ಎಂಬ ಶೀರ್ಷಿಕೆಯಲ್ಲಿ ಪಾಠವನ್ನು ಇಡಲಾಗಿದೆ. ಚೀನಾ ದೇಶವನ್ನೂ ಅಖಂಡ ಭಾರತ ಪರಿಕಲ್ಪನೆಯೊಳಗೆ ಎಳೆದುಕೊಳ್ಳಲಾಗಿದೆ.

‘ಭರತವರ್ಷ’ ಪಾಠದಲ್ಲಿ ಏನಿದೆ?

“ಜಗತ್ತಿನ ಪ್ರತಿಯೊಂದು ರಾಷ್ಟ್ರ ಹಾಗೂ ಜನಸಮುದಾಯಗಳ ಮೇಲೆ ಭೌಗೋಳಿಕ ಪರಿಸರವು ಪ್ರಭಾವ ಬೀರಿವೆ. ಮಾನವನ ಜೀವನಕ್ಕೂ ಅವನ ಪರಿಸರಕ್ಕೂ ನಿಕಟ ಸಂಬಂಧವಿದೆ. ಆದ್ದರಿಂದ ಮನುಷ್ಯನ ಚರಿತ್ರೆ ತಿಳಿಯಲು ಭೌಗೋಳಿಕ ಪರಿಸರದ ಅರಿವು ಅತ್ಯವಶ್ಯಕವಾಗಿದೆ. ಏಷ್ಯಾ ಖಂಡದ ದಕ್ಷಿಣ ಭಾಗದಲ್ಲಿ ವಿಶಾಲ ಪ್ರದೇಶವನ್ನು ಹೊಂದಿರುವ ಭಾರತವು ಒಂದು ಉಪಖಂಡ. ಮೂರು ಕಡೆ ನೀರಿನಿಂದಲೂ ಮತ್ತು ಒಂದು ಕಡೆ ಭೂಭಾಗದಿಂದಲೂ ಆವೃತ್ತವಾಗಿರುವುದರಿಂದ ಇದೊಂದು ಪರ್ಯಾಯ ದ್ವೀಪವಾಗಿದೆ. ಭಾರತ ಇಂದು ಪಾಕಿಸ್ತಾನ, ಅಫಘಾನಿಸ್ಥಾನ, ಚೀನಾ, ನೇಪಾಳ, ಭೂತಾನ್‌, ಬಾಂಗ್ಲಾ ಮತ್ತು ಮಯನ್ಮಾರ್‌ಗಳೊಂದಿಗೆ ತನ್ನ ಭೂಗಡಿಯನ್ನು ಹೊಂದಿದೆ. ಈ ಎಲ್ಲ ಪ್ರದೇಶಗಳು ಒಟ್ಟಾಗಿ ಭರತವರ್ಷ ಎಂದು ಕರೆಯಲ್ಪಟ್ಟಿತ್ತು. ಇದನ್ನು ಭರತ ಖಂಡ, ಸಿಂಧೂ ದ್ವೀಪ, ಬೃಹತ ಭಾರತ, ಅಖಂಡ ಭಾರತ ಎಂದೂ ಕರೆಯಲಾಗುತ್ತಿತ್ತು. 28 ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂದು ರಾಷ್ಟ್ರ ರಾಜಧಾನಿ (ದೆಹಲಿ) ಪ್ರದೇಶ ಇದರ ವ್ಯಾಪ್ತಿಯಲ್ಲಿವೆ.

– ಹೀಗೆ ಆರಂಭವಾಗುತ್ತದೆ ಪಾಠ.

ಅಖಂಡ ಭಾರತ ಪರಿಕಲ್ಪನೆ

‘ವಿಶ್ವದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತವನ್ನು ಮತ್ತೊಮ್ಮೆ ಒಗ್ಗೂಡಿಸುವ ಅಗತ್ಯವಿದೆ. ಇದಕ್ಕಾಗಿ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಅವಶ್ಯಕತೆ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಕಳೆದ ವರ್ಷ ಹೇಳಿದ್ದರು.

‘ಅಖಂಡ ಭಾರತ’ದ ಒಗ್ಗೂಡುವಿಕೆಯು ಬಲ ಪ್ರಯೋಗದಿಂದ ಆಗುವುದಿಲ್ಲ, ಆದರೆ, ಅದು ಮಾನವೀಯತೆ ಸಾರುವ ಹಿಂದೂಧರ್ಮದಿಂದ ಮಾತ್ರ ಸಾಧ್ಯವಾಗಲಿದೆ. ದೇಶದಿಂದ ವಿಭಜನೆಗೊಂಡು ದೀರ್ಘ ಸಮಯದಿಂದ ಹೊರಗುಳಿದಿರುವ ಪಾಕಿಸ್ತಾನದಂತಹ ದೇಶಗಳು ಇಂದು ಸಂಕಷ್ಟದಲ್ಲಿವೆ. ಈ ಎಲ್ಲ ದೇಶಗಳಿಗೂ ಇನ್ನು ಮುಂದೆ ಅಖಂಡ ಭಾರತದ ಅಗತ್ಯ ಹೆಚ್ಚಿರಲಿದೆ’ ಎಂದು ಪ್ರತಿಪಾದಿಸಿದ್ದರು.

ಅಖಂಡ ಭಾರತ ಎಂದು ಗೂಗಲ್ ಮಾಡಿದರೆ, “ಕೇಸರಿ ವರ್ಣ”ದ ಭೂಪಟಗಳು ತೆರೆದುಕೊಳ್ಳುತ್ತವೆ. ಬ್ರಿಟಿಷರಿಗೆ ಸರಣಿ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದ ವಿ.ಡಿ.ಸಾವರ್ಕರ್‌ ಅವರೂ ಅಖಂಡ ಭಾರತ ಪರಿಕಲ್ಪನೆಯನ್ನು ಪ್ರತಿಪಾದಿಸಿದ ವಿವರಗಳಿವೆ.

ತನ್ನದೇ ಚೌಕಟ್ಟು ಮೀರಿದ ಸಮಿತಿ 

ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯಲ್ಲಿ ಕೆಲವು ಚೌಕಟ್ಟುಗಳನ್ನು ಹಾಕಿಕೊಂಡಿರುವುದಾಗಿ ಬರೆದುಕೊಂಡಿದೆ. 1. ಯಾವುದೇ ಜಾತಿ, ಧರ್ಮ, ಪಂಥ ಸಮುದಾಯಗಳಿಗೆ ಅಥವಾ ವ್ಯಕ್ತಿಗಳಿಗೆ ಅಪಮಾನವಾಗುವ ಆಕ್ಷೇಪಾರ್ಹ ಅಂಶಗಳಿರದಂತೆ ಎಚ್ಚರ ವಹಿಸಬೇಕು. 2. ವಿಷಯಗಳನ್ನು ಕ್ರಮಬದ್ಧವಾಗಿ, ಕಾಲಪಟ್ಟಿಗನುಗುಣವಾಗಿ ಕೊಡಬೇಕು. 3. ಅನಗತ್ಯ ವಿಷಯಗಳು ತುಂಬಿತುಳುಕಾಡುವ ಮಾಹಿತಿಕೋಶವಾಗಿಸದೆ ಜ್ಞಾನಕೋಶಗಳಾಗಿ ಮಾಡಬೇಕು. 4. ಸ್ವ ಹಿತಾಸಕ್ತಿಯ ಯಾವ ಸಿದ್ಧಾಂತಗಳಿಗೂ ಜಾಗ ಕೊಡಕೂಡದು. 5. ಅರ್ಧಸತ್ಯ, ಅಸತ್ಯ, ಉತ್ಪ್ರೇಕ್ಷೆ, ನಿರ್ಣಯ ಮುಂತಾದವನ್ನು ಕೈಬಿಟ್ಟು ಅಧಿಕೃತ ಆಧಾರಗಳಿರುವ ಸಂಗತಿಗಳನ್ನಷ್ಟೇ ಮುಂದಿಡಬೇಕು. 6. ಎಲ್ಲ ವಿಷಯಗಳಿಗೆ ತಕ್ಕ ಪ್ರಾತಿನಿಧ್ಯ ಕೊಡಬೇಕು. 7. ಐತಿಹಾಸಿಕ ಉಪೇಕ್ಷಿತ ಸಂಗತಿಗಳನ್ನು, ಅವುಗಳ ಪ್ರಾಮುಖ್ಯಕ್ಕನುಗುಣವಾಗಿ ಪಠ್ಯಗಳಲ್ಲಿ ತರಬೇಕು. 8. ಎಲ್ಲ ಬಗೆಯ ತಪ್ಪುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ತಗ್ಗಿಸಬೇಕು. – ಹೀಗೆ ಚೌಕಟ್ಟುಗಳನ್ನು ಸಮಿತಿ ಹಾಕಿಕೊಂಡಿದೆ. ಆದರೆ ಎಂಟನೇ ತರಗತಿಯ ಇತಿಹಾಸ ಪಠ್ಯವನ್ನು ನೋಡುತ್ತಾ ಹೋದರೆ ವೈದಿಕತೆಯ ವೈಭವೀಕರಣ ಎದ್ದು ಕಾಣುತ್ತದೆ. (ಎಂಟನೇ ತರಗತಿಯಲ್ಲಿ ಮಾಡಲಾಗಿರುವ ಬದಲಾವಣೆಗಳ ಕುರಿತು ಸರಣಿ ಲೇಖನ ಬರಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...