Homeಚಳವಳಿಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ: ಮುಖಾಮುಖಿ ಮಾತುಕತೆಗೆ ಒತ್ತಾಯ

ಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ: ಮುಖಾಮುಖಿ ಮಾತುಕತೆಗೆ ಒತ್ತಾಯ

ಕೆಂಪೇಗೌಡರ ಬಗ್ಗೆ ಮುಖ್ಯಮಂತ್ರಿಯವರು ತಿಳಿಸಿರುವ ಹೊಸಪಾಠವನ್ನು ಎಲ್ಲಿ ಸೇರಿಸಿದ್ದಾರೆಂದು ಸ್ಪಷ್ಟವಿಲ್ಲ- ಬರಗೂರು

- Advertisement -
- Advertisement -

ಪಠ್ಯ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದರು ಪತ್ರಿಕಾ ಹೇಳಿಕೆಗೆ ಪ್ರೊ. ಬರಗೂರು ರಾಮಚಂದ್ರಪ್ಪನವರು ಸ್ಪಷ್ಟನೆ ನೀಡಿದ್ದು, ಮುಖಾಮುಖಿ ಚರ್ಚೆಗೆ ಒತ್ತಾಯಿಸಿದ್ದಾರೆ.

ಈ ಕುರಿತು 4 ಅಂಶಗಳ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಬಸವಣ್ಣನವರ ಕುರಿತು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಹಲವು ಅಂಶಗಳನ್ನು ಕೈಬಿಟ್ಟಿದೆ ಎಂದು ಪ್ರತಿಪಾದಿಸಿದ್ದಾರೆ.

ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರು ಮತ್ತು ನಾಡಿನ ಇತರೆ ಸ್ವಾಮೀಜಿಯವರು ಬಸವಣ್ಣನವರ ವಿಷಯದಲ್ಲಿ ಎತ್ತಿದ ಪ್ರಶ್ನೆಗೆ ‘ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯ ಅಂಶಗಳಿವೆ’ ಎಂದು ಸಿಎಂ ಹೇಳಿದ್ದಾರೆ. ಆದರೆ ವಾಸ್ತವ ಹೀಗಿದೆ : 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ನಾವು ಅಳವಡಿಸಿದ್ದ ವಿವರಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿ ಮರುಪರಿಷ್ಕರಣೆಯಲ್ಲಿ ಉಳಿಸಿಕೊಂಡಿದ್ದರೂ 9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರಲ್ಲಿದ್ದ ಬಸವಣ್ಣನವರ ವಿವರಗಳಲ್ಲಿ ಕೆಲವು ಮುಖ್ಯ ಸಂಗತಿಗಳನ್ನು ಬಿಡಲಾಗಿದೆ. ಮರುಪರಿಷ್ಕರಣೆಯ ಪಠ್ಯದಲ್ಲಿ ಬಸವಣ್ಣನವರು ವೈದಿಕ ಮೂಲ ಮೌಲ್ಯಾಚರಣೆಗಳನ್ನು ವಿರೋಧಿಸಿದ್ದು, ಯಜ್ಞೋಪವೀತವನ್ನು ಕಿತ್ತೆಸೆದದ್ದು, ಉನ್ನತಾಧಿಕಾರದಲ್ಲಿದ್ದರೂ ಚಳವಳಿ ಕಟ್ಟಿದ್ದು, ‘ದೇಹವೇ ದೇಗುಲ’ ಎಂಬ ಹೊಚ್ಚ ಹೊಸ ಪರಿಕಲ್ಪನೆ ನೀಡಿದ್ದು, ಜನಸಾಮಾನ್ಯರಿಗೆ ತಲುಪುವ ಸರಳ ಕನ್ನಡದಲ್ಲಿ ವಚನಕಾರರು ಬರೆದದ್ದು-ಮುಂತಾದ ವಿಷಯಗಳನ್ನು ಮರುಪರಿಷ್ಕರಣೆಯಲ್ಲಿ ಬಿಡಲಾಗಿದೆ. ನಾವು ಪರಿಷ್ಕರಣೆ ಮಾಡಿದಾಗ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕಕ್ಕೆ ‘ಬಸವಣ್ಣನವರ ಜೀವನ ದರ್ಶನ’ ಕುರಿತ ಹೊಸ ಪಾಠವನ್ನು ಸೇರಿಸಿದ್ದೆವು ಎಂಬ ವಿಷಯವನ್ನು ಇಲ್ಲಿ ತಿಳಿಸಬಯಸುತ್ತೇನೆ ಎಂದು ಬರಗೂರು ಹೇಳಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಹತ್ತು ರಚನೆಗಳು ಮರುಪರಿಷ್ಕರಣೆಯ ಒಟ್ಟು ಕನ್ನಡ ಭಾಷಾ ಪಠ್ಯಗಳಲ್ಲಿ ಇರುವುದು ನಿಜ, ನಾವು ಪರಿಷ್ಕರಣೆ ಮಾಡಿದಾಗ ಮೂಲ ಪಠ್ಯಪುಸ್ತಕದಲ್ಲಿ ಇಲ್ಲದ ಕೆಲವು ಮುಖ್ಯ ಸಾಹಿತಿಗಳ ಪಾಠ ಸೇರಿಸುವುದಕ್ಕಾಗಿ ಸಾಮಾನ್ಯ ಮಾನದಂಡವನ್ನು ರೂಪಿಸಿಕೊಂಡೆವು. ರಾಷ್ಟ್ರಕವಿ ಕುವೆಂಪು ಅವರ ಅಪೂರ್ವ ಸಾಧನೆಗೆ ಚ್ಯುತಿಯುಂಟು ಮಾಡದೆ, ಮೂಲ ಪಠ್ಯಪುಸ್ತಕಗಳಲ್ಲಿ ಇಲ್ಲದೆ ಇದ್ದ, ಕಲ್ಯಾಣ ಕರ್ನಾಟಕದ ಸಿಂಪಿ ಲಿಂಗಣ್ಣ, ಶಾಂತರಸ, ಚೆನ್ನಣ್ಣ ವಾಲೀಕಾರ ಅವರಲ್ಲದೆ ಮಾಸ್ತಿ ವೆಂಕಟೇಶ ಅಯ್ಯಂಗಾರ್, ಗೋಪಾಲಕೃಷ್ಣ ಅಡಿಗ, ಗೊರೂರು ರಾಮಸ್ವಾಮಿ ಅಯ್ಯಂಗಾರ್ ಮತ್ತು ಕೆಲವು ಲೇಖಕಿಯರ ಪಾಠಗಳನ್ನು ಸೇರಿಸಿದೆವು. ಈ ನಮ್ಮ ನಡೆಯು ಕುವೆಂಪು ಅವರ ಅಖಂಡ ಕರ್ನಾಟಕ ಪರಿಕಲ್ಪನೆ ಮತ್ತು ಸಾಮಾಜಿಕ ನ್ಯಾಯ ಕಲ್ಪನೆಗೆ ಅನುಗುಣವಾಗಿತ್ತು ಎಂದು ಬರಗೂರು ಹೇಳಿದ್ದಾರೆ.

ಮುಂದುವರೆದು ಕುವೆಂಪು ಅವರ ಪಠ್ಯ ಹೆಚ್ಚು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರು ನೀಡಿದ ಸಂಖ್ಯಾ ಮಾಹಿತಿಯಿಂದ, ನಾಡಗೀತೆ, ನಾಡಧ್ವಜ, ಕನ್ನಡ ಭಾಷೆಗಳಿಗೆ ಮಾಡಿದ ಅವಮಾನಕ್ಕೆ ಖಂಡಿತ ರಿಯಾಯಿತಿ ಸಿಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರು ಹೊಸದಾಗಿ ಪಾಠ ಸೇರಿಸಿರುವುದಾಗಿ ಹೇಳಿದ್ದಾರೆ. ವಾಸ್ತವವೆಂದರೆ, 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರಲ್ಲಿ ‘ಯಲಹಂಕ ನಾಡಪ್ರಭುಗಳು’ ಎಂಬ ಪಾಠವನ್ನು ನಮ್ಮ ಪರಿಷ್ಕರಣೆಯ ಕಾಲದಲ್ಲೇ ಸೇರಿಸಿದ್ದೇವೆ, ಕೆಂಪೇಗೌಡರ ವಂಶಾವಳಿ ಮತ್ತು ಆಳ್ವಿಕೆಯ ವಿವರಗಳನ್ನು ನೀಡಿದ್ದೇವೆ ಆದರೆ ಮರುಪರಿಷ್ಕರಣೆಯಲ್ಲಿ ನಾವು ಕೊಟ್ಟಿದ್ದ ವಿವರಗಳನ್ನು ಕಡಿತ ಮಾಡಲಾಗಿದೆ. ಜೊತೆಗೆ ಯಲಹಂಕ ನಾಡಪ್ರಭುಗಳ ಆಳ್ವಿಕೆಯ ವಿಸ್ತೀರ್ಣವನ್ನು ಬೆಂಗಳೂರು ಜಿಲ್ಲೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ನಮ್ಮ ಪರಿಷ್ಕರಣೆ ಪಠ್ಯದಲ್ಲಿ ಬೆಂಗಳೂರು, ರಾಮನಗರ, ತುಮಕೂರು, ಅವಿಭಜಿತ ಕೋಲಾರ ಜಿಲ್ಲೆಗಳು ಕೂಡ ನಾಡಪ್ರಭು ಕೆಂಪೇಗೌಡರ ಆಳ್ವಿಕೆಗೆ ಒಳಪಟ್ಟಿದ್ದನ್ನು ವಿವರಿಸಲಾಗಿತ್ತು. ಇದನ್ನು ಮರುಪರಿಷ್ಕರಣೆಯಲ್ಲಿ ಬಿಟ್ಟಿದ್ದಾರೆ. ಮಾನ್ಯ ಮುಖ್ಯಮಂತ್ರಿಯವರು ತಿಳಿಸಿರುವ ಹೊಸಪಾಠವನ್ನು ಎಲ್ಲಿ ಸೇರಿಸಿದ್ದಾರೆಂದು ಸ್ಪಷ್ಟವಿಲ್ಲ ಎಂದು ಬರಗೂರು ಹೇಳಿದ್ದಾರೆ.

ಇದನ್ನೂ ಓದಿ; ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಕಾಂಗ್ರೆಸ್ ಬಿಡುವುದಿಲ್ಲ: ರಾಹುಲ್ ಗಾಂಧಿ

ಪರಿಷ್ಕರಣೆ ಎಂದಾಗ ಕೆಲವನ್ನು ಬಿಡುವುದು ಮತ್ತು ಸೇರಿಸುವುದು ಇರುತ್ತದೆ. ಆದರೆ ಈ ಕ್ರಿಯೆಗೆ ನ್ಯಾಯಸಮ್ಮತ ಮಾನದಂಡವನ್ನು ರೂಪಿಸಿಕೊಳ್ಳಬೇಕಾಗುತ್ತದೆ. ಇಂಥದೊಂದು ನ್ಯಾಯಸಮ್ಮತ ಮಾನದಂಡವು ಮರುಪರಿಷ್ಕರಣೆಯಲ್ಲಿ ಕಾಣಿಸುವುದಿಲ್ಲ. ಕನ್ನಡ ಭಾಷಾ ಪಠ್ಯಗಳಲ್ಲಿ ದೇವನೂರರನ್ನು ಹೊರತುಪಡಿಸಿ ಎಲ್ಲಾ ದಲಿತ ಮೂಲದ ಸಾಹಿತಿಗಳ ರಚನೆಗಳನ್ನು ತೆಗೆಯಲಾಗಿದೆ. ಬಹುಪಾಲು ಮಹಿಳಾ ಸಾಹಿತಿಗಳ ರಚನೆಗಳನ್ನು ಬಿಡಲಾಗಿದೆ. ಬುದ್ಧ, ಅಂಬೇಡ್ಕರ್ ಅಂಥವರ ವಸ್ತುವುಳ್ಳ ಕವನಗಳನ್ನು ಕೈಬಿಡಲಾಗಿದೆ. 6ನೇ ತರಗತಿಯ ಸಮಾಜ ವಿಜ್ಞಾನದಿಂದ ಬೌದ್ಧಧರ್ಮ ಮತ್ತು ಜೈನಧರ್ಮದ ವಿವರಗಳನ್ನು ತೆಗೆಯಲಾಗಿದೆ. ನಾವು ಹೊಸದಾಗಿ ಸೇರಿಸಿದ್ದ ಸಾವಿತ್ರಿಬಾಯಿ ಫುಲೆ ಮುಂತಾದ ಸುಧಾರಕಿಯರ ಪಾಠಕ್ಕೆ ಕೊಕ್ ಕೊಡಲಾಗಿದೆ. ಅಂಬೇಡ್ಕರ್ ಅವರ ಮಹಾಡ್ ಸತ್ಯಾಗ್ರಹ, ನಾಸಿಕ್ ದೇವಾಲಯ ಪ್ರವೇಶದಂತಹ ಅನೇಕ ಸಾಲುಗಳು ಮರುಪರಿಷ್ಕರಣೆಯಲ್ಲಿ ಇಲ್ಲವಾಗಿವೆ. ನಾವು ಸೇರಿಸಿದ್ದ ನಾರಾಯಣ ಗುರು ಕುರಿತ ಪಾಠವನ್ನು ಬಿಟ್ಟಿದ್ದು ಮತ್ತೆ ಸೇರಿಸುವುದಾಗಿ ಹೇಳುತ್ತಿದ್ದಾರೆ. ಇಲ್ಲಿ ತೆಗೆದದ್ದು, ಸೇರಿಸಿದ್ದು ಯಾರನ್ನು ಮತ್ತು ಎಂಥ ಪಾಠವನ್ನು ಎಂಬುದನ್ನು ಪರಿಶೀಲಿಸಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ದಲಿತ ವಿರೋಧಿ, ಮಹಿಳಾ ವಿರೋಧಿ ಮತ್ತು ಸಂವಿಧಾನಾತ್ಮಕ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರೋಧಿ ಕ್ರಮವಾಗಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಗೌಣವಾಗಿದೆ. ಅಷ್ಟೇ ಅಲ್ಲ, ಬಸವಣ್ಣ, ಕುವೆಂಪು ಅವರ ಆದರ್ಶಕ್ಕೂ ವಿರುದ್ಧವಾಗಿದೆ. ಮಾನ್ಯ ಮುಖ್ಯಮಂತ್ರಿಯವರು ಪ್ರತಿರೋಧಿಸುತ್ತಿರುವ ಸಂಸ್ಥೆ ಹಾಗೂ ವ್ಯಕ್ತಿಗಳನ್ನು ಕರೆದು ಮಾತಾಡಿ ತೀರ್ಮಾನಕ್ಕೆ ಬರುವುದು ಪ್ರಜಾಸತ್ತಾತ್ಮಕ ಸರ್ಕಾರದ ಜವಾಬ್ದಾರಿ. ಇಲ್ಲದಿದ್ದರೆ ಏಕಪಕ್ಷೀಯವಾಗುತ್ತದೆ ಎಂದು ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸುಳ್ಳು ಹೇಳುವುದು ಹೇಗೆ ಎಂಬುದನ್ನು ಮನುವಾದಿಗಳು ಮುಖ್ಯ ಮಂತ್ರಿ ಬೊಮ್ಮಾಯಿಯವರಿಗೆ ಬಹಳ ಚೆನ್ನಾಗಿ ಹೇಳಿಕೊಟ್ಟಿರುವಂತಿದೆ.

  2. ಎಲ್ಲಾ ಕಡೆಗಳಿಂದಲೂ ವಿರೋಧ ಬಂದಿದ್ದರೂ, ಬೊಮ್ಮಾಯಿ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ ಯಂತೆ ಸ್ಪಷ್ಟನೆ ನೀಡದೆ ಜಾರಿಕೆ,ಬೇಜಾವ್ದಾರಿ ಹಾರಿಕೆ ಉತ್ತರ ಕೊಟ್ಟಿರುವುದು ನೋಡಿದರೆ ,ಇವರೆಲ್ಲಾ ವೈದಿಕ ಸಮುದಾಯದ ಗುಲಾಮರಷ್ಟೇ.

  3. ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲಾ ಅಂತ ಅಂದುಕೊಂಡಂನಂತೆ, ಆದರೆ ಮುಖವೆಲ್ಲಾ ಮಣ್ಣಾಆಗಿತ್ತಂತೆ, ಹಾಗಾಗಿದೆ ಸರ್ಕಾರದ ಸ್ಥಿತಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...