Homeಕರ್ನಾಟಕಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಶುಕ್ರವಾರದಂದು ಪತ್ರಿಕಾ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಸವಣ್ಣನವರ ಬಗ್ಗೆ ಉಲ್ಲೇಖಿಸುತ್ತಾ, “ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ” ಎಂದು ಹೇಳಿದ್ದರು.

ಆದರೆ ಮುಖ್ಯಮಂತ್ರಿಯ ಈ ಹೇಳಿಕೆ ಅರ್ಧ ಸತ್ಯವಾಗಿದ್ದು, ರೋಹಿತ್ ಚಕ್ರತೀರ್ಥ ಸಮಿತಿಯು ಹೊಸ ಪಠ್ಯದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ ಎಂಬುದು ಕಂಡುಬಂದಿದೆ. ಸ್ವತಃ ಬರಗೂರು ರಾಮಚಂದ್ರಪ್ಪನವರು ಸಹ ಈ ಕುರಿತು ಸ್ಪಷ್ಟನೆ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಹೇಳಿದ್ದೇನು? 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಹೇಳಿಕೆಯಲ್ಲಿ ಹಲವು ವಿಚಾಗಳನ್ನು ಮಾತನಾಡುತ್ತಾ, “ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು” ಎಂದು ಮುಖ್ಯಮಂತ್ರಿ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದರು.

ಜೊತೆಗೆ ಆಕ್ಷೇಪಣೆ ಹಾಗೂ ಆರೋಪಕ್ಕೆ ಸರ್ಕಾರದ ಸ್ಪಷ್ಟೀಕರಣ ಎಂಬ ಪಟ್ಟಿಯಲ್ಲಿ, ಬಸವಣ್ಣನವರನ್ನು ಕುರಿತು ನೀಡಿರುವ ವಿಷಯಾಂಶದಲ್ಲಿ ವಿವಾದಾತ್ಮಕ ಅಂಶಗಳಿವೆ ಎನ್ನುವ ಆರೋಪಕ್ಕೆ ಉತ್ತರವಾಗಿ, “ಹಿಂದಿನ ಪಠ್ಯಪುಸ್ತಕದಲ್ಲಿದ್ದ ಬಸವೇಶ್ವರ ಪಾಠ ಹಾಗೂ ಈಗ ಅಳವಡಿಸಿರುವ ಪಾಠ ಎರಡರಲ್ಲಿಯೂ ‘ವೀರಶೈವ ಧರ್ಮ’ ಎಂಬ ಉಲ್ಲೇಖವಿದೆ. ಎರಡೂ ಪಠ್ಯಪುಸ್ತಕದಲ್ಲಿ ಬಸವಣ್ಣನವರು ‘ಲಿಂಗದೀಕ್ಷೆ ಪಡೆದರು’ ಎಂಬ ಉಲ್ಲೇಖವಿದೆ” ಎಂದು ಹೇಳಿದೆ.

ಸರ್ಕಾರ ನೀಡಿರುವ ಲಿಖಿತ ಸ್ಪಷ್ಟೀಕರಣ

ಇದನ್ನೂ ಓದಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಕುರಿತು ಸಾಮಾನ್ಯವಾದ ಅಂಶಗಳಿವೆಯೆ?

  • ಒಂಬತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದ ‘ಬಸವೇಶ್ವರರು’ ಎಂಬ ಪಾಠದಲ್ಲಿ ‘320’ ಪದಗಳಿದ್ದವು. ಆದರೆ ಇದನ್ನು ತಿದ್ದಿರುವ ಚಕ್ರತೀರ್ಥ ಸಮಿತಿ, ಪಾಠವನ್ನು ‘238’ ಪದಗಳಿಗೆ ಪಾಠವನ್ನು ಇಳಿಸಿದೆ.
  • ಸರ್ಕಾರ ಸ್ಪಷ್ಟನೆ ನೀಡಿದಂತೆ  ‘ಶೈವಗುರುಗಳಿಂದ ಲಿಂಗ ದೀಕ್ಷೆ ಪಡೆದರು’ ಎಂಬ ಪದ ಹಳೆಯ ಪಠ್ಯದಲ್ಲಿ ಇದೆಯಾದರೂ, ಅದಕ್ಕಿಂತಲೂ ಮುಂಚೆ ಇದ್ದ, “ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಞೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು” ಎಂಬ ವಾಕ್ಯದ ‘ಯಜ್ಞೋಪವೀತವನ್ನು ಕಿತ್ತೆಸೆದು’ ಎಂಬ ಪದವನ್ನು ತೆಗೆಯಲಾಗಿದೆ.
  • ವೀರಶೈವ ಧರ್ಮವನ್ನು ಹಳೆಯ ಪಠ್ಯವು ವೀರಶೈವ ಸಿದ್ದಾಂತ ಎಂದು ಕರೆದರೆ, ಹೊಸ ಪಠ್ಯವು ವೀರಶೈವ ಮತ ಎಂದು ಕರೆದಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು” ಎಂಬ ಇಡೀ ಭಾಗವನ್ನು ಹೊಸ ಪಠ್ಯದಲ್ಲಿ ಕತ್ತರಿಸಿ ತೆಗೆಯಲಾಗಿದೆ.
  • ಜೊತೆಗೆ, “ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು” ಎಂಬ ವಾಕ್ಯದ ಬದಲಿಗೆ, “ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು” ಎಂಬ ವಾಕ್ಯವನ್ನು ಬಳಸಲಾಗಿದೆ.
  • ಜೊತೆಗೆ, ಸಂಸ್ಕೃತ ಮತ್ತು ಕನ್ನಡಗಳನ್ನು ಕಲಿತು ತಮ್ಮ ಉಪನಯನವಾದ ನಂತರ ಕೂಡಲ ಸಂಗಮಕ್ಕೆ ನಡೆದರು’ ಎಂದು ಹೊಸ ಪಠ್ಯದಲ್ಲಿ ಸೇರಿಸಲಾಗಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ತಮ್ಮ ಇಡೀ ಜೀವಮಾನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ ಧರ್ಮದ ಪುನಶ್ಚೇತನಕ್ಕೆ ಟೊಂಕಕಟ್ಟಿದರು” ಎಂಬ ವಾಕ್ಯವನ್ನು ಕತ್ತರಿಸಲಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ: ಮುಖಾಮುಖಿ ಮಾತುಕತೆಗೆ ಒತ್ತಾಯ

  • ಹಳೆಯ ಪಠ್ಯದಲ್ಲಿ ಇದ್ದ, “‘ದೇಹವೇ ದೇಗುಲ’ ಎಂದು ಸಾರಿದ ಬಸವಣ್ಣನವರು ಈ ತತ್ವವನ್ನು ಅನುಷ್ಠಾನಕ್ಕೆ  ತರಲು ಪ್ರಯತ್ನಿಸಿದರು. ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ” ಎಂಬ ವಾಕ್ಯವನ್ನು ಕತ್ತರಿಸಲಾಗಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ಧಾರ್ಮಿಕ ಅಂಕುಡೊಂಕುಗಳನ್ನು ಚರ್ಚಿಸುತ್ತಿದ್ದರು ಹಾಗೂ ಅವುಗಳಿಗೆ ಚಿಕಿತ್ಸಕ ಸಂದೇಶಗಳ ಮೂಲಕ ಪರಿಹಾರವನ್ನು ಸೂಚಿಸುತ್ತಿದ್ದರು” ಎಂಬ ವಾಕ್ಯವನ್ನು ಕತ್ತರಿಸಿ, “ಅನೇಕ ವಚನಗಳ ಮೂಲಕ ವಚನಕಾರರು ಅಂದಿನ ಸಮಾಜದಲ್ಲಿ ಆಚರಣೆಯಲ್ಲಿದ್ದ ಲೋಪ ದೋಷಗಳನ್ನು ಎತ್ತಿತೋರಿಸಿ ಅರಿವು ಮೂಡಿಸಲು ಪ್ರಯತ್ನಿಸಿದರು” ಎಂದಯ ಬರೆಯಲಾಗಿದೆ. ಇದರಲ್ಲಿ ಧಾರ್ಮಿಕ ಅಂಕುಡೊಂಕು ಎಂಬ ಪದನ್ನು ಕತ್ತರಿಸಲಾಗಿದೆ.

  • ಹಳೆಯ ಪಠ್ಯದಲ್ಲಿ ಇದ್ದ, ‘‘ಶರಣರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು” ಎಂಬ ಪದವನ್ನು ಕತ್ತರಿಸಲಾಗಿದೆ.
  • ರೋಹಿತ್ ಚಕ್ರತೀರ್ಥ ಸಮಿತಿಯು, “ಮುಂದಿನ ಶತಮಾನಗಳಲ್ಲಿ ತಲೆ ಎತ್ತಿದ ಮಠಗಳು ಸಾಮಾಜಿಕ ಸುಧಾರಣೆ ಮತ್ತು ಶಿಕ್ಷಣಕ್ಕೂ ಬೆಂಬಲ ನೀಡುತ್ತಾ ಬಂದಿವೆ” ಎಂಬ ಹೊಸ ಪದಗಳನ್ನು ಸೇರಿಸಲಾಗಿದೆ.
  • ಹಳೆಯ ಪಠ್ಯದಕಲ್ಲಿ ಇದ್ದ, “ಒಟ್ಟಾರೆ ಸಮಾನತೆಯ ಆಶಯವನ್ನು ಸಿದ್ಧಾಂತವಾಗಿಸಿಕೊಂಡಿದ್ದ ಬಸವೇಶ್ವರರು ಮತ್ತು ವಚನಕಾರರು ಸಮಾಜ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ” ಎಂಬ ಪದವನ್ನು ಚಕ್ರತೀರ್ಥ ಸಮಿತಿ ಕತ್ತರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...