Homeಕರ್ನಾಟಕಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಶುಕ್ರವಾರದಂದು ಪತ್ರಿಕಾ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಸವಣ್ಣನವರ ಬಗ್ಗೆ ಉಲ್ಲೇಖಿಸುತ್ತಾ, “ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ” ಎಂದು ಹೇಳಿದ್ದರು.

ಆದರೆ ಮುಖ್ಯಮಂತ್ರಿಯ ಈ ಹೇಳಿಕೆ ಅರ್ಧ ಸತ್ಯವಾಗಿದ್ದು, ರೋಹಿತ್ ಚಕ್ರತೀರ್ಥ ಸಮಿತಿಯು ಹೊಸ ಪಠ್ಯದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ ಎಂಬುದು ಕಂಡುಬಂದಿದೆ. ಸ್ವತಃ ಬರಗೂರು ರಾಮಚಂದ್ರಪ್ಪನವರು ಸಹ ಈ ಕುರಿತು ಸ್ಪಷ್ಟನೆ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಹೇಳಿದ್ದೇನು? 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಹೇಳಿಕೆಯಲ್ಲಿ ಹಲವು ವಿಚಾಗಳನ್ನು ಮಾತನಾಡುತ್ತಾ, “ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು” ಎಂದು ಮುಖ್ಯಮಂತ್ರಿ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದರು.

ಜೊತೆಗೆ ಆಕ್ಷೇಪಣೆ ಹಾಗೂ ಆರೋಪಕ್ಕೆ ಸರ್ಕಾರದ ಸ್ಪಷ್ಟೀಕರಣ ಎಂಬ ಪಟ್ಟಿಯಲ್ಲಿ, ಬಸವಣ್ಣನವರನ್ನು ಕುರಿತು ನೀಡಿರುವ ವಿಷಯಾಂಶದಲ್ಲಿ ವಿವಾದಾತ್ಮಕ ಅಂಶಗಳಿವೆ ಎನ್ನುವ ಆರೋಪಕ್ಕೆ ಉತ್ತರವಾಗಿ, “ಹಿಂದಿನ ಪಠ್ಯಪುಸ್ತಕದಲ್ಲಿದ್ದ ಬಸವೇಶ್ವರ ಪಾಠ ಹಾಗೂ ಈಗ ಅಳವಡಿಸಿರುವ ಪಾಠ ಎರಡರಲ್ಲಿಯೂ ‘ವೀರಶೈವ ಧರ್ಮ’ ಎಂಬ ಉಲ್ಲೇಖವಿದೆ. ಎರಡೂ ಪಠ್ಯಪುಸ್ತಕದಲ್ಲಿ ಬಸವಣ್ಣನವರು ‘ಲಿಂಗದೀಕ್ಷೆ ಪಡೆದರು’ ಎಂಬ ಉಲ್ಲೇಖವಿದೆ” ಎಂದು ಹೇಳಿದೆ.

ಸರ್ಕಾರ ನೀಡಿರುವ ಲಿಖಿತ ಸ್ಪಷ್ಟೀಕರಣ

ಇದನ್ನೂ ಓದಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಕುರಿತು ಸಾಮಾನ್ಯವಾದ ಅಂಶಗಳಿವೆಯೆ?

  • ಒಂಬತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದ ‘ಬಸವೇಶ್ವರರು’ ಎಂಬ ಪಾಠದಲ್ಲಿ ‘320’ ಪದಗಳಿದ್ದವು. ಆದರೆ ಇದನ್ನು ತಿದ್ದಿರುವ ಚಕ್ರತೀರ್ಥ ಸಮಿತಿ, ಪಾಠವನ್ನು ‘238’ ಪದಗಳಿಗೆ ಪಾಠವನ್ನು ಇಳಿಸಿದೆ.
  • ಸರ್ಕಾರ ಸ್ಪಷ್ಟನೆ ನೀಡಿದಂತೆ  ‘ಶೈವಗುರುಗಳಿಂದ ಲಿಂಗ ದೀಕ್ಷೆ ಪಡೆದರು’ ಎಂಬ ಪದ ಹಳೆಯ ಪಠ್ಯದಲ್ಲಿ ಇದೆಯಾದರೂ, ಅದಕ್ಕಿಂತಲೂ ಮುಂಚೆ ಇದ್ದ, “ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಞೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು” ಎಂಬ ವಾಕ್ಯದ ‘ಯಜ್ಞೋಪವೀತವನ್ನು ಕಿತ್ತೆಸೆದು’ ಎಂಬ ಪದವನ್ನು ತೆಗೆಯಲಾಗಿದೆ.
  • ವೀರಶೈವ ಧರ್ಮವನ್ನು ಹಳೆಯ ಪಠ್ಯವು ವೀರಶೈವ ಸಿದ್ದಾಂತ ಎಂದು ಕರೆದರೆ, ಹೊಸ ಪಠ್ಯವು ವೀರಶೈವ ಮತ ಎಂದು ಕರೆದಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು” ಎಂಬ ಇಡೀ ಭಾಗವನ್ನು ಹೊಸ ಪಠ್ಯದಲ್ಲಿ ಕತ್ತರಿಸಿ ತೆಗೆಯಲಾಗಿದೆ.
  • ಜೊತೆಗೆ, “ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು” ಎಂಬ ವಾಕ್ಯದ ಬದಲಿಗೆ, “ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು” ಎಂಬ ವಾಕ್ಯವನ್ನು ಬಳಸಲಾಗಿದೆ.
  • ಜೊತೆಗೆ, ಸಂಸ್ಕೃತ ಮತ್ತು ಕನ್ನಡಗಳನ್ನು ಕಲಿತು ತಮ್ಮ ಉಪನಯನವಾದ ನಂತರ ಕೂಡಲ ಸಂಗಮಕ್ಕೆ ನಡೆದರು’ ಎಂದು ಹೊಸ ಪಠ್ಯದಲ್ಲಿ ಸೇರಿಸಲಾಗಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ತಮ್ಮ ಇಡೀ ಜೀವಮಾನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ ಧರ್ಮದ ಪುನಶ್ಚೇತನಕ್ಕೆ ಟೊಂಕಕಟ್ಟಿದರು” ಎಂಬ ವಾಕ್ಯವನ್ನು ಕತ್ತರಿಸಲಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ: ಮುಖಾಮುಖಿ ಮಾತುಕತೆಗೆ ಒತ್ತಾಯ

  • ಹಳೆಯ ಪಠ್ಯದಲ್ಲಿ ಇದ್ದ, “‘ದೇಹವೇ ದೇಗುಲ’ ಎಂದು ಸಾರಿದ ಬಸವಣ್ಣನವರು ಈ ತತ್ವವನ್ನು ಅನುಷ್ಠಾನಕ್ಕೆ  ತರಲು ಪ್ರಯತ್ನಿಸಿದರು. ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ” ಎಂಬ ವಾಕ್ಯವನ್ನು ಕತ್ತರಿಸಲಾಗಿದೆ.
  • ಹಳೆಯ ಪಠ್ಯದಲ್ಲಿ ಇದ್ದ, “ಧಾರ್ಮಿಕ ಅಂಕುಡೊಂಕುಗಳನ್ನು ಚರ್ಚಿಸುತ್ತಿದ್ದರು ಹಾಗೂ ಅವುಗಳಿಗೆ ಚಿಕಿತ್ಸಕ ಸಂದೇಶಗಳ ಮೂಲಕ ಪರಿಹಾರವನ್ನು ಸೂಚಿಸುತ್ತಿದ್ದರು” ಎಂಬ ವಾಕ್ಯವನ್ನು ಕತ್ತರಿಸಿ, “ಅನೇಕ ವಚನಗಳ ಮೂಲಕ ವಚನಕಾರರು ಅಂದಿನ ಸಮಾಜದಲ್ಲಿ ಆಚರಣೆಯಲ್ಲಿದ್ದ ಲೋಪ ದೋಷಗಳನ್ನು ಎತ್ತಿತೋರಿಸಿ ಅರಿವು ಮೂಡಿಸಲು ಪ್ರಯತ್ನಿಸಿದರು” ಎಂದಯ ಬರೆಯಲಾಗಿದೆ. ಇದರಲ್ಲಿ ಧಾರ್ಮಿಕ ಅಂಕುಡೊಂಕು ಎಂಬ ಪದನ್ನು ಕತ್ತರಿಸಲಾಗಿದೆ.

  • ಹಳೆಯ ಪಠ್ಯದಲ್ಲಿ ಇದ್ದ, ‘‘ಶರಣರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು” ಎಂಬ ಪದವನ್ನು ಕತ್ತರಿಸಲಾಗಿದೆ.
  • ರೋಹಿತ್ ಚಕ್ರತೀರ್ಥ ಸಮಿತಿಯು, “ಮುಂದಿನ ಶತಮಾನಗಳಲ್ಲಿ ತಲೆ ಎತ್ತಿದ ಮಠಗಳು ಸಾಮಾಜಿಕ ಸುಧಾರಣೆ ಮತ್ತು ಶಿಕ್ಷಣಕ್ಕೂ ಬೆಂಬಲ ನೀಡುತ್ತಾ ಬಂದಿವೆ” ಎಂಬ ಹೊಸ ಪದಗಳನ್ನು ಸೇರಿಸಲಾಗಿದೆ.
  • ಹಳೆಯ ಪಠ್ಯದಕಲ್ಲಿ ಇದ್ದ, “ಒಟ್ಟಾರೆ ಸಮಾನತೆಯ ಆಶಯವನ್ನು ಸಿದ್ಧಾಂತವಾಗಿಸಿಕೊಂಡಿದ್ದ ಬಸವೇಶ್ವರರು ಮತ್ತು ವಚನಕಾರರು ಸಮಾಜ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ” ಎಂಬ ಪದವನ್ನು ಚಕ್ರತೀರ್ಥ ಸಮಿತಿ ಕತ್ತರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...