Homeಅಂಕಣಗಳುಕುಟುಂಬ ರಾಜಕಾರಣ ಕೊನೆಯಾಗಲಿ

ಕುಟುಂಬ ರಾಜಕಾರಣ ಕೊನೆಯಾಗಲಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ ಕೂಡ ಕುಟುಂಬ ರಾಜಕಾರಣ ನಡೆಯುತ್ತಿದೆ’ ಎಂದಿದ್ದರು. ಆದರೆ ಈಗ ಅದು ಬದಲಾಗಿದೆ. ರಾಹುಲ್ ಗಾಂಧಿಯವರಿಗೆ ‘ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಆದರೆ ರಾಹುಲ್‍ಗಾಂಧಿಯವರು ಕಾಂಗ್ರೆಸ್ಸನ್ನು ಕುಟುಂಬ ರಾಜಕೀಯದಿಂದ ಪಾರು ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಬೇರೆಯವರನ್ನೇ ಆಯ್ಕೆ ಮಾಡಲಾಗುತ್ತದೆ. ಕುಟುಂಬ ರಾಜಕಾರಣ ಕೈಬಿಟ್ಟು ಸಮರ್ಥರಾದ ಒಬ್ಬ ನಾಯಕರನ್ನು ಕಾಂಗ್ರೆಸ್‍ನ ವರಿಷ್ಠರು ಕೂತು ಆಯ್ಕೆ ಮಾಡುತ್ತಾರೆ ಎಂಬ ಸಂತೋಷದ ಸುದ್ದಿಯನ್ನು ರಾಹುಲ್ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು.

ನೆಹ್ರೂ ಕುಟುಂಬದವರು ಕಾಂಗ್ರೆಸ್ಸನ್ನು ಕಬ್ಜಾ ಮಾಡಿದ್ದಾರೆ ಎಂಬ ಆಪಾದನೆ 30-40 ವರ್ಷಗಳಿಂದ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಕುಟುಂಬ ರಾಜಕೀಯಕ್ಕೆ ಮತದಾರರು ಬೇಸತ್ತಿದ್ದರು. ಮೋದಿಯಂತೂ ನೆಹ್ರು ಮನೆತನದವರ ಕುಟುಂಬ ರಾಜಕೀಯವನ್ನು ಬಳಸಿಕೊಂಡು ಜನರಲ್ಲಿ ಕಾಂಗ್ರೆಸ್ ಬಗೆಗೆ ವಿಷ ಬೀಜ ಬಿತ್ತುವ ಕೆಲಸವನ್ನು 5 ವರ್ಷಗಳಿಂದ ಸತತವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡು 2ನೇ ಅವಧಿಗೂ ಅಧಿಕಾರ ಪಡೆದುಕೊಂಡಿದ್ದಾರೆ.

ರಾಹುಲ್‍ಗಾಂಧಿಯವರ ಮನೆತನದ ರಾಜಕೀಯವನ್ನು ತೊರೆಯುವ ನಿರ್ಧಾರದಿಂದ ಮೋದಿಯವರ ಕೈಲಿದ್ದ ಮನೆತನದ ರಾಜಕೀಯದ ಅಸ್ತ್ರ, ತನ್ನ ಮೊನಚನ್ನು ಕಳೆದುಕೊಳ್ಳುತ್ತದೆ. ಮೋದಿಯವರ ಬಾಯನ್ನು ಕಟ್ಟಿಹಾಕುತ್ತದೆ. ಇದು ಕಾಂಗ್ರೆಸ್‍ನ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.

ರಾಹುಲ್‍ಗಾಂಧಿಯವರ ಈ ನಿರ್ಧಾರದಿಂದ ಅವರು ಪ್ರಬುದ್ಧ ರಾಜಕೀಯ ನಾಯಕರು ಎಂಬುದು ಸಾಬೀತಾಗಿದೆ. ಈ ಮೂಲಕ ಕುಟುಂಬ ರಾಜಕೀಯ ನಡೆಸುವ ಇತರ ರಾಜಕೀಯ ಪಕ್ಷಗಳಿಗೂ ರಾಹುಲ್ ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಮನೆತನದವರು ರಾಜಕೀಯವನ್ನು ಕಬ್ಜಾ ಮಾಡುವುದಕ್ಕೆ ಅವಕಾಶವಿಲ್ಲ. ಜನ ನಿಧಾನವಾಗಿಯಾದರೂ ದೇವೇಗೌಡರಿಗೆ ಮತ್ತು ರಾಹುಲ್‍ಗಾಂಧಿಯವರಿಗೆ ಮನೆತನ ರಾಜಕೀಯಕ್ಕೆ ನಾವು ವಿರೋಧಿಗಳು ಎಂಬುದನ್ನು ಚುನಾವಣೆಯಲ್ಲಿ ಅವರಿಬ್ಬರನ್ನೂ ಸೋಲಿಸುವ ಮೂಲಕ ಘೋಷಿಸಿದ್ದಾರೆ.

ರಾಹುಲ್‍ಗಾಂಧಿಯವರು ಜನತೆಯ ಆಕ್ರೋಶವನ್ನು ಅರ್ಥಮಾಡಿಕೊಂಡು ತಮ್ಮ ಕುಟುಂಬ ರಾಜಕೀಯದ ತತ್ವವನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ದೇವೇಗೌಡರು ಮನೆತನದ ರಾಜಕೀಯ ಮಾಡಿ ಸೋಲನ್ನು ಅನುಭವಿಸಿದ್ದರೂ ಅವರು ಕುಟುಂಬ ರಾಜಕೀಯದಿಂದ ಮುಕ್ತರಾಗುವ ಸೂಚನೆಗಳು ಕಾಣುತ್ತಿಲ್ಲ.

ಒಕ್ಕಲಿಗರ ಭಾಗ್ಯದಾತ ಎಂದು ಕುಟುಂಬ ರಾಜಕೀಯ ಮಾಡುತ್ತಿರುವ ದೇವೇಗೌಡರ ಕವಚ ಈ ಸಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಕಳಚಿಬಿತ್ತು. 7 ಸೀಟು ನೀಡಿದರೆ 3 ಸೀಟನ್ನು ಮನೆಗೆ ತೆಗೆದುಕೊಂಡು ಹೋಗಿದ್ದು ಒಕ್ಕಲಿಗ ಸಮುದಾಯದ ಭ್ರಮನಿರಸನಕ್ಕೆ ಕಾರಣವಾಯಿತು. ಗೌಡರು ಚುನಾವಣೆಗೆ ನಿಲ್ಲಿಸಿದ ಕುಟುಂಬದ ಮೂವರಲ್ಲಿ ಇಬ್ಬರು ಸೋತರು. ಸೋತವರಲ್ಲಿ ದೇವೇಗೌಡರೂ ಒಬ್ಬರು.

ದೇವೇಗೌಡರು ಇತ್ತೀಚಿನ ಸಾರ್ವಜನಿಕ ಸಭೆಯೊಂದರಲ್ಲಿ ಸೋಲು ನನಗೆ ಹೊಸದೇನಲ್ಲ ಎಂದಿದ್ದಾರೆ. ಈ ಸಾರಿ ಸೋತದ್ದಕ್ಕೆ ವಿಶೇಷ ಕಾರಣವಿದೆ. ಈ ಸಾರಿ ಅವರು ಸೋತದ್ದು ಅವರು ಕುಟುಂಬ ರಾಜಕಾರಣವನ್ನು ಖೇಚರಕ್ಕೆ ತೆಗೆದುಕೊಂಡು ಹೋದ ಕಾರಣಕ್ಕೆ. ಒಕ್ಕಲಿಗ ಮತದಾರರಿಗೆ ಇವರ ಕುಟುಂಬ ರಾಜಕಾರಣ ಮೊದಲ ಸಾರಿಗೆ ಅರಿವಿಗೆ ಬಂತು. ಆಕ್ರೋಶದಿಂದ ತಮ್ಮ ಮತಗಳನ್ನು ಕುಟುಂಬ ರಾಜಕಾರಣದ ವಿರುದ್ಧವಾಗಿ ಹಾಕಿದರು.

ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯ ದಿಟ್ಟ ನಿಲುವನ್ನು ಅರ್ಥಮಾಡಿಕೊಳ್ಳಬೇಕು. ಅದು ರಾಜಕೀಯ ಮುತ್ಸದ್ದಿತನ. ಕಾಂಗ್ರೆಸ್ ಮೊದಲುಗೊಂಡು ಎಲ್ಲಾ ರಾಜಕೀಯ ಪಕ್ಷಗಳು ಶಾಸಕರನ್ನು, ಪಾರ್ಲಿಮೆಂಟ್ ಸದಸ್ಯರನ್ನು ಆಯ್ಕೆಮಾಡುವಾಗ ಕ್ರಿಮಿನಲ್‍ಗಳನ್ನು, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರನ್ನು, ಭ್ರಷ್ಟರನ್ನು, ಭೂಗಳ್ಳರನ್ನು, ಪಾಳೆಗಾರಿಕೆ ಮನೆತನದವರನ್ನು ದೂರವಿಡಬೇಕು. ಸೋನಿಯಾಗಾಂಧಿಯವರ ಸುತ್ತಲೂ ಸಮಯ ಸಾಧಕರು, ವಂದಿಮಾಗಧರು, ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಸ್ವಾರ್ಥಸಾಧಿಸುವವರು ಸುತ್ತುಗಟ್ಟಿರುವುದು. ಇಂತಹದರಿಂದ ಅವರು ದೂರ ಉಳಿಯಬೇಕಾದ್ದರ ಅಗತ್ಯತೆ ಇದೆ. ಈ ಕೆಲಸವನ್ನು ರಾಹುಲ್ ಈ ಕೂಡಲೆ ಕೈಗೆತ್ತಿಕೊಳ್ಳಬೇಕು.

ಇಂದಿನ ಇಂದಿರಾ ಕಾಂಗ್ರೆಸ್ ಹಳೇ ಚಾಳಿಯನ್ನು ಬಿಟ್ಟು ಹೊಸ ರೀತಿಯ ಮೌಲ್ಯಾಧಾರಿತ ರಾಜಕೀಯವನ್ನು ಆರಂಭಿಸಲಿ ಎಂದು ಆಶಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...