Homeಕರ್ನಾಟಕ‘ಕನ್ನಡ ರಾಜ್ಯೋತ್ಸವ’ ಕುರಿತ ಪಾಠವನ್ನೇ ಕಿತ್ತುಬಿಸಾಡಿದ ಚಕ್ರತೀರ್ಥ ಸಮಿತಿ!

‘ಕನ್ನಡ ರಾಜ್ಯೋತ್ಸವ’ ಕುರಿತ ಪಾಠವನ್ನೇ ಕಿತ್ತುಬಿಸಾಡಿದ ಚಕ್ರತೀರ್ಥ ಸಮಿತಿ!

ಕನ್ನಡ ಭಾವುಟದ ಬದಲು ಕೇಸರಿ ಭಾವುಟ ಹಾರಾಡುತ್ತಿರುವ ಚಿತ್ರವನ್ನು ಬದಲಿ ಪಠ್ಯದಲ್ಲಿ ಕಾಣಬಹುದು. ಭಾಷೆ v/s ಧರ್ಮ ಸಂಘರ್ಷವನ್ನು ಹುಟ್ಟುಹಾಕಲು ಹೊರಟಿದೆಯೇ ಸರ್ಕಾರ?

- Advertisement -
- Advertisement -

ಕನ್ನಡ ರಾಜ್ಯೋತ್ಸವದ ಕುರಿತು ಆರನೇ ತರಗತಿಯಲ್ಲಿ ಅಳವಡಿಸಲಾಗಿದ್ದ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕೈಬಿಟ್ಟುರುವುದು ಬೆಳಕಿಗೆ ಬಂದಿದೆ. ತಾಯಿ ಭುವನೇಶ್ವರಿಯ ‘ಮೆರವಣಿಗೆ’ ಕುರಿತ ಈ ಪಾಠವನ್ನು ತೆಗೆದದ್ದು ಏತಕ್ಕೆ ಎಂಬ ಪ್ರಶ್ನೆ ಎದ್ದಿದೆ.

ಆರನೇ ತರಗತಿಯ ‘ಸಿರಿಗನ್ನಡ’ ಪ್ರಥಮಭಾಷಾ ಪಠ್ಯಪುಸ್ತಕದಲ್ಲಿ ಆರನೇ ಗದ್ಯವಾಗಿ ‘ಮೆರವಣಿಗೆ’ ಇತ್ತು. ಈ ಪಠ್ಯವನ್ನು ಸಮಿತಿಯೇ ರೂಪಿಸಿತ್ತು. ಕನ್ನಡ ರಾಜ್ಯೋತ್ಸವಕ್ಕಾಗಿ ಶಾಲೆಯೊಂದರಲ್ಲಿ ನಡೆದ ಸಿದ್ಧತೆ ಕುರಿತು ಮಾತನಾಡುವ ಈ ಪಾಠ, ನವೆಂಬರ್‌ 1ರ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯನ್ನು ತಿಳಿಸುತ್ತದೆ. ವಿವಿಧ ಧರ್ಮಗಳ ಹಿನ್ನೆಲೆಯ ಮಕ್ಕಳಲ್ಲಿ ಕನ್ನಡ ಪ್ರೇಮವನ್ನು ಉದ್ದೀಪಿಸುವ ಕೆಲಸವನ್ನು ಈ ಗದ್ಯಭಾಗ ಮಾಡುತ್ತದೆ. ಇಲ್ಲಿನ ಪಾಠದ ಉದ್ದೇಶ ಮುಖ್ಯವಾಗಿ ತಾಯಿ ಭುವನೇಶ್ವರಿಯ ಆರಾಧನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲ ಸಿದ್ಧತೆಗಳು ನಡೆದು ನವೆಂಬರ್‌ 1ರಂದು ಹೇಗೆ ಸಂಭ್ರಮಾಚರಣೆ ಮಾಡಲಾಯಿತು, ಮೆರವಣಿಗೆಯನ್ನು ಹೇಗೆ ನಡೆಸಲಾಯಿತು ಎಂಬುದನ್ನು ಪಾಠದ ಕೊನೆಯ ಪ್ಯಾರಾಗಳಲ್ಲಿ ಕಾಣಬಹುದು.

ಯೋಜನೆಯಂತೆ ಎಲ್ಲವೂ ನಡೆಯಿತು. ನವೆಂಬರ್‌ -೧ ಬಂದೇ ಬಿಟ್ಟಿತು! ಶಿಕ್ಷಕರ ಸೂಚನೆಯಂತೆ ಎಲ್ಲ ತಂಡದವರೂ ಮೆರವಣಿಗೆಗೆ ಸಿದ್ಧರಾಗಿ ಬಂದರು. ಆದರೆ “ಭುವನೇಶ್ವರಿ ಎಲ್ಲಿ?” ಕರ್ನಾಟಕ ಮಾತೆ ಭುವನೇಶ್ವರಿ ಎಲ್ಲಿ”- ಎಲ್ಲರೂ ಪರಸ್ಪರ ಮಾತನಾಡಿಕೊಂಡರು. ನೋಡುನೋಡುತ್ತಿದಂತೆಯೇ ಮುಚ್ಚಿದ್ದ ಅಧ್ಯಾಪಕರ ಕೊಠಡಿಯ ಬಾಗಿಲು ತೆರೆಯಿತು. ವಿದ್ಯಾರ್ಥಿಗಳ ಹಾಗೂ ಅಧ್ಯಾಪಕರ ಮೆಚ್ಚಿನ ಹಸೀನಾ ಕರ್ನಾಟಕ ಮಾತೆ ಭುವನೇಶ್ವರಿಯಾಗಿ ಕೊಠಡಿಯಿಂದ ಹೊರಬಂದು ರಥವೇರಿ ನಿಂತಳು! ಮೆರವಣಿಗೆ ಹೊರಟಿತು. ಎಲ್ಲರೂ “ಕರ್ನಾಟಕ ಮಾತೆ ಭುವನೇಶ್ವರಿಗೆ ಜಯವಾಗಲಿ” ಎಂದರು. “ಎಂಥ ಅಪೂರ್ವ ದೃಶ್ಯ! ನೋಡಲು ಎರಡು ಕಣ್ಣುಗಳು ಸಾಲವು. ಯಾವ ದಸೆರೆಗೂ ಕಡಿಮೆ ಇಲ್ಲ” ಎಂದು ಜನರು ಮಾತನಾಡುತ್ತಿದ್ದರು. ಕೆಲವರಿಗೆ ಮಾತೇ ಹೊರಡಲಿಲ್ಲ. ಇನ್ನು ಕೆಲವರಿಗೆ ಅಬ್ಬಾಬ್ಬಾ! ಎಂದು ಬೆರಗಾದರು. ಹಂಪಣ್ಣನಿಗೆ ಎಲ್ಲರೂ ತನ್ನನ್ನು ನೋಡಬೇಕೆಂಬ ಆಸೆ. ವಿವಿಧ ಭಂಗಿಯಲ್ಲಿ ಬ್ಯಾಂಡ್ ಬಾರಿಸಿದ. ಬೀಗುತ್ತಾ ಹೆಜ್ಜೆ ಹಾಕಿದ.

ಭವ್ಯ ಮೆರವಣಿಗೆ ವಿಜೃಂಭಣೆಯಿಂದ ಸಾಗಿದೆ. ತಾಯಿ ಭುವನೇಶ್ವರಿಯ ಭವ್ಯತೆಗೆ ಜನರೆಲ್ಲ ಕೈ ಮುಗಿಯುತ್ತಿದ್ದಾರೆ. ಮನಸಾರೆ ನಮಿಸುತ್ತಿದ್ದಾರೆ. ತಾಯಿ ನಗುತ್ತ ಎಲ್ಲರನ್ನೂ ಹರಸುತ್ತಿದ್ದಾಳೆ… ಮೆರವಣಿಗೆ ಸಾಗಿದೆ… ಸಾಗಿದೆ… ಸಾಗುತ್ತಲೇ ಇದೆ…

ಇದನ್ನೂ ಓದಿರಿ: ಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

ಹೀಗೆ ಮಕ್ಕಳಲ್ಲಿ ಕನ್ನಡ ಪ್ರೇಮವನ್ನು ಬಿತ್ತುವ ಕೆಲಸವನ್ನು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮಾಡಿತ್ತು. ಆದರೆ ಈ ಪಾಠವನ್ನು ಕೈಬಿಟ್ಟು `ಕನ್ನಡ v/s ಧರ್ಮ’ ಎಂಬ ವಿವಾದವನ್ನು ಸೃಷ್ಟಿಸುವ ಕೆಲಸಕ್ಕೆ ರೋಹಿತ್‌ ಚಕ್ರತೀರ್ಥ ಸಮಿತಿ ಮಾಡಿರುವುದನ್ನು ಸೂಕ್ಷ್ಮವಾಗಿ ಗಮನಿಸಬಹುದು.

‘ಮೆರವಣಿಗೆ’ ಬದಲಿಗೆ ‘ಸಿದ್ಧಾರೂಢರ ಜಾತ್ರೆ’

ಸಿರಿಗನ್ನಡ ಆರನೇ ತರಗತಿ ಪಠ್ಯದಲ್ಲಿದ್ದ ಕನ್ನಡ ರಾಜ್ಯೋತ್ಸವ ಕುರಿತ ಪಠ್ಯದ ಬದಲಿಗೆ ‘ಸಿದ್ಧಾರೂಢರ ಜಾತ್ರೆ’ ಪಾಠವನ್ನು ಇಟ್ಟಿರುವುದಾಗಿ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಹೇಳಿದೆ. ‘ಸಿದ್ಧಾರೂಢರ ಜಾತ್ರೆ’ ಪಾಠವನ್ನು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ. ಮಠಮಾನ್ಯಗಳ ಪರಿಚಯವನ್ನು ಮಾಡಿಕೊಡುವುದನ್ನು ಇಲ್ಲಿ ಕಾಣಬಹುದು.

ಹುಬ್ಬಳ್ಳಿಯ ಸಿದ್ಧಾರೂಢಸ್ವಾಮಿ ಮಠದಿಂದ ನಡೆಯುವ ಪ್ರತಿವರ್ಷದ ಜಾತ್ರೆಯ ಕುರಿತು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ. ರುಸ್ತುಮ್‌ ಎಂಬ ಹುಡುಗ, ಸಿದ್ಧಾರೂಢರ ಕುರಿತು ಕೇಳುತ್ತಾನೆ. ಗುರುಗಳು ಪರಿಚಯ ಮಾಡಿಕೊಡುತ್ತಾರೆ. ನಂತರ ಹಸೀನಾ ಎಂಬ ವಿದ್ಯಾರ್ಥಿನಿ ಮಠದ ಬಗ್ಗೆ ಕೇಳುತ್ತಾಳೆ. ಯಾವ ವಿದ್ಯಾರ್ಥಿ, ಯಾವುದರ ಕುರಿತು ಕೇಳುತ್ತಿದ್ದಾಳೆಂಬುದನ್ನು ಇಲ್ಲಿ ಗಮನಿಸಬಹುದು. ಇಲ್ಲಿ ಹಸೀನಾಳಿಗೆ ಗುರುಗಳು ಕೊಡುವ ಉತ್ತರವನ್ನು ಸೂಕ್ಷ್ಮವಾಗಿ ನೋಡಿದರೆ, ಮಕ್ಕಳಲ್ಲಿ ಹಿಂದೂ ಮುಸ್ಲಿಂ ಬೇಧವನ್ನು ಶಿಕ್ಷಕರೇ ಬೋಧಿಸಲು ಅವಕಾಶ ಮಾಡಿಕೊಟ್ಟಂತೆ ಕಾಣುತ್ತಿದೆ.

ಗುರುಗಳು ಹೀಗೆ ಹೇಳುತ್ತಾರೆ: “ಹಸೀನಾ, ಮಠ ಎಂಬುದು ಹಿಂದೂ ಧರ್ಮದಲ್ಲಿರುವ ಒಂದು ಸಾಮಾಜಿಕ ವ್ಯವಸ್ಥೆ. ಸಮಾಜದ ಮಂದಿಗೆ ಕಷ್ಟಕಾಲದಲ್ಲಿ ಒಂದು ಭರವಸೆ ಬೇಕಾಗುತ್ತದೆ. ತಮ್ಮ ಗೊಂದಲಗಳಿಗೆ ಪರಿಹಾರ ಕೊಡುವ ಒಬ್ಬರು ಹಿರಿಯ ವ್ಯಕ್ತಿ ಬೇಕಾಗುತ್ತಾರೆ. ಅಥವಾ ಕಷ್ಟಕಾರ್ಪಣ್ಯಗಳು ಏನೂ ಇಲ್ಲದಿದ್ದರೂ ಒಟ್ಟಾರೆಯಾಗಿ ಮಾನಸಿಕ ನೆಮ್ಮದಿಗಾಗಿ ಮನುಷ್ಯ ಒಂದಿಲ್ಲೊಂದು ವ್ಯವಸ್ಥೆಯನ್ನು ಹುಡುಕುತ್ತಲೇ ಇರುತ್ತಾನೆ ಅಲ್ಲವೇ? ಜನರಿಗೆ ಅಂಥದೊಂದು ಭದ್ರತೆ, ಭರವಸೆ ಮೂಡಿಸುವ ಕೆಲಸ ಮಾಡುವುದೇ ಮಠಗಳು. ಸಮಾಜದಲ್ಲಿರುವ ಮಠಗಳೆಲ್ಲವೂ ಒಂದಿಲ್ಲೊಂದು ರೀತಿಯಲ್ಲಿ ಸಮಾಜಮುಖಿ ಕೆಲಸವನ್ನು ಮಾಡುತ್ತವೆ. ಅವು ಬಡಬಗ್ಗರಿಗೆ ಧನಸಹಾಯ ಮಾಡಬಹುದು, ವಿದ್ಯಾರ್ಥಿಗಳಿಗೆ ಊಟ ವಸತಿ ನೀಡಬಹುದು. ದಿಕ್ಕು ತೋಚದವರಿಗೆ ಮಾನಸಿಕ ನೆಮ್ಮದಿ ನೀಡುವ ಉಪದೇಶ ಮಾಡಬಹುದು, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬಹುದು, ಧರ್ಮದೊಳಗಿನ ಅನೇಕ ತತ್ತ್ವಶಾಸ್ತ್ರದ ವಿಚಾರಗಳನ್ನು ಪಂಡಿತರ ಪ್ರಚನಗಳ ಮೂಲಕ ಜನರಿಗೆ ತಲುಪಿಸಬಹುದು. ಒಟ್ಟಾರೆಯಾಗಿ ಮಠವೆಂದರೆ ಸಮಾಜವೆಂಬ ಸಮುದ್ರದ ಕಿನಾರೆಯಲ್ಲಿ ನಿಂತ ದೀಪಸ್ತಂಭ” ಉತ್ತರಿಸಿದರು ಗುರುಗಳು.

ಪಾಠದ ಕೊನೆಯಲ್ಲಿ ಹೀಗೆ ಹೇಳಲಾಗುತ್ತದೆ:

“ಸಿದ್ಧಾರೂಢರ ಮಹಿಮೆ ಎಂಥದು! ದೇಶದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಕ್ರಿಯವಾಗಿದ್ದ ಮಠವಿದು. ಗಾಂಧೀಜಿ, ತಿಲಕರಂಥ ರಾಷ್ಟ್ರನಾಯಕರಿಗೆ ಸ್ಪೂರ್ತಿ ಕೊಟ್ಟ ಮಠವಿದು” ಎನ್ನುತ್ತ ಗುರುಗಳು ಮಠದ ಪ್ರಸಾದವನ್ನು ಕಣ್ಣಿಗೊತ್ತಿಕೊಂಡರು. “ಸಿದ್ಧಾರೂಢರ ಅಂಗಾರ, ದೇಶಕ್ಕೆಲ್ಲ ಬಂಗಾರ…”, “ಸಿದ್ಧಾರೂಢರ ಜೋಳಿಗೆ, ನಾಡಿಗೆಲ್ಲ ಹೋಳಿಗೆ…” ಮುಂತಾದ ಜಯಘೋಷಗಳು ಜನಸ್ತೋಮದಿಂದ ಕೇಳಿಬರುತ್ತಿದ್ದವು…

ಧರ್ಮರಾಜಕಾರಣಕ್ಕೆ ಪಠ್ಯವನ್ನು ಬಳಸಿರುವುದನ್ನು ಇಲ್ಲಿ ಕಾಣಬಹುದು. ಕನ್ನಡ ಮಾತೆಯ ಕುರಿತ ಪಾಠವನ್ನು ಯಾಕೆ ತೆಗೆದಿದ್ದೀರಿ ಎಂದು ಯಾರಾದರೂ ಕೇಳಿದರೆ, “ಸಿದ್ಧಾರೂಢ ಮಠದ ವಿರೋಧಿಗಳು ನೀವು, ಹಿಂದೂ ವಿರೋಧಿಗಳು ನೀವು” ಎಂದು ವಿವಾದವನ್ನೂ ಸೃಷ್ಟಿಸಲು ಇಲ್ಲಿ ಅವಕಾಶವಿದೆ.

ಕೇಸರಿ ಭಾವುಟ v/s ಕನ್ನಡ ಭಾವುಟ

ಕನ್ನಡ ಬಾವುಟವನ್ನು ಹೊತ್ತ ತಾಯಿ ಭುವನೇಶ್ವರಿ ಚಿತ್ರವನ್ನು ಹಳೆಯ ಪಠ್ಯದಲ್ಲಿ ಕಾಣಹುದಿತ್ತು. ಆದರೆ ಹೊಸ ಪಠ್ಯದಲ್ಲಿ ತೇರಿನ ಮುಂದೆ ಕೇಸರಿ ಭಾವುಟಗಳು ಹಾರಾಡುತ್ತಿರುವ ಚಿತ್ರವನ್ನು ಕಾಣಬಹುದು. ‘ಕನ್ನಡ ಭಾವುಟ v/s ಕೇಸರಿ ಬಾವುಟ’ ಎಂಬ ವಾದವನ್ನು ಸಮಿತಿ ಮಂಡಿಸುತ್ತಿದೆಯೇ? ರೋಹಿತ್ ಚಕ್ರತೀರ್ಥ ಅವರು ಹಿಂದೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಕನ್ನಡ ಬಾವುಟದ ಕುರಿತು ಅಶ್ಲೀಲವಾಗಿ ಬರೆದದ್ದು ಇಲ್ಲಿಯೂ ಅನಾವರಣವಾಗಿದೆಯೇ?

‘ಮೆರವಣಿಗೆ’ ಪಾಠ ಉಳಿಸಿಕೊಳ್ಳಬಹುದಿತ್ತು!

ಪಠ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿರುವ ಸಮಿತಿಯು, ‘ಮೆರವಣಿಗೆ’ ಪಾಠವನ್ನು ಉಳಿಸಿಕೊಂಡು, ಬೇರೆ ಯಾವುದಾದರೂ ಪಠ್ಯದಲ್ಲಿ ‘ಸಿದ್ಧಾರೂಢರ ಜಾತ್ರೆ’ಯ ಪಾಠವನ್ನು ಇಡಬಹುದಿತ್ತು ಎಂಬುದು ಎಂಥವರಿಗೂ ಅರ್ಥವಾಗುವ ಸರಳ ಸಂಗತಿ. ಆದರೆ ಕನ್ನಡ ತಾಯಿಯ ಪಾಠವನ್ನು ಕಿತ್ತು ಹಾಕಿ, ಜಾತ್ರೆಯ ಪಾಠವನ್ನು ಇಟ್ಟುದ್ದು ಏತಕ್ಕೆ? ಭಾಷೆ v/s ಧರ್ಮ ಎಂಬ ಬೆಂಕಿ ಹಚ್ಚಲು ಸಮಿತಿ ಬಯಸಿದೆಯೇ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಈಗ ದೊಡ್ಡ ರಾಷ್ಟ್ರಪ್ರೇಮಿಗಳಂತೆ ಬಿಂಬಿಸಿಕೊಳ್ಳುತ್ತಿರುವ ಸಂಘಟನೆಗಳ ಕೂಗಾಟ ಹೆಚ್ಚಾಗುತ್ತಿರುವ ಈ ಹೊತ್ತಿನಲ್ಲಿ, ಸಿದ್ಧಾರೂಢರ ಮಠದ ಕುರಿತು ವಿಶೇಷ ಪಾಠವನ್ನೇ ಬೇರೆಡೆ ಇಡಬಹುದಿತ್ತಲ್ಲ. ಗಾಂಧೀಜಿ ಹಾಗೂ ತಿಲಕರಿಗೆ ಸಿದ್ಧಾರೂಢ ಮಠ ಹೇಗೆ ಸ್ಫೂರ್ತಿಯಾಯಿತು ಎಂದೂ, ಉಳಿದ ನಕಲಿ ದೇಶಭಕ್ತ ಸಂಘಟನೆಗಳು ಕಲಿಯಬೇಕಾದದ್ದು ಏನೆಂಬುದನ್ನೂ ವಿಸ್ತೃತವಾಗಿ ಬೇರೊಂದು ಪಾಠವಾಗಿಯೇ ಮಕ್ಕಳಿಗೆ ಕಲಿಸಬಹುದಿತ್ತಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...