Homeಕರ್ನಾಟಕಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

ಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ನಡೆದಿರುವ ಪಠ್ಯಪುಸ್ತಕ ಪರಿಶೀಲನೆಯಲ್ಲಿ ಹಲವಾರು ತಪ್ಪುಗಳು ಕಂಡು ಬರುತ್ತಿವೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ಪಠ್ಯಗಳ ವಿಚಾರದಲ್ಲಿ ಸಮಿತಿ ಅಸಡ್ಡೆಯ ತೋರಿರುವುದು ಸ್ಪಷ್ಟವಾಗುತ್ತಿದೆ.

ಚೆನ್ನಣ್ಣ ವಾಲೀಕಾರ ಅವರು ಬರೆದಿರುವ ‘ನೀ ಹೋದ ಮರುದಿನ’ ಎಂಬ ಪದ್ಯವನ್ನು ಆರನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಅಳವಡಿಸಿತ್ತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತ ಈ ಪದ್ಯವನ್ನು ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ತೆಗೆದುಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಶೋಷಿತ ಸಮುದಾಯಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಆದರೆ ಶೋಷಿತ ಸಮುದಾಯ ಎದುರಿಸುತ್ತಿರುವ ಅವಮಾನ, ಅನ್ಯಾಯ, ಅಸ್ಪಶ್ಯತೆಯೇನೂ ಬಾಬಾ ಸಾಹೇಬರು ತೀರಿಕೊಂಡ ಬಳಿಕ ಕಡಿಮೆಯಾಗಿಲ್ಲ. ಅದು ಮುಂದುವರಿಯುತ್ತಲೇ ಇದೆ. ಸಂವಿಧಾನದ ವಿಧಿ 17ರ ಪ್ರಕಾರ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಿದ್ದರೂ ಅದು ಇನ್ನೂ ಸಮಾಜದಲ್ಲಿ ಜೀವಂತವಿದೆ. ಇಳೆಯ ಮಕ್ಕಳಲ್ಲಿ ಆರಂಭದಲ್ಲೇ ಈ ಜಾತಿ ವ್ಯವಸ್ಥೆಯ ನೋವು, ಅಸಮಾನತೆ, ಸಾಮಾಜಿಕ ನ್ಯಾಯದ ಅರಿವುಗಳನ್ನು ತುಂಬುತ್ತಾ ಹೋದರೆ ಶೋಷಿತ ಸಮುದಾಯ ಈ ಕಷ್ಟಗಳಿಂದ ಹೊರಬರಬಹುದು” ಎಂಬುದು ಎಂಥವರಿಗೂ ಅರ್ಥವಾಗುವ ಸಂಗತಿ. ಆದರೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಬಾಬಾ ಸಾಹೇಬರ ಕುರಿತ ಈ ಕಾವ್ಯವನ್ನೇ ತೆಗೆದುಹಾಕಿ ಅಸ್ಪಶ್ಯತೆಯನ್ನು ಆಚರಿಸಿದಂತೆ ಕಾಣುತ್ತಿದೆ!

ಬಾಬಾ ಸಾಹೇಬರ ವಿಷಯದಲ್ಲಿ ಹಲವು ತಿರುಚುವಿಕೆ

‘ಡಾ.ಬಿ.ಆರ್‌.ಅಂಬೇಡ್ಕರ್’ ಅವರಿಗೆ ಸಂವಿಧಾನ ಶಿಲ್ಪಿ ಎಂಬ ಬಿರುದು ಇರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ ಅದನ್ನು ಚಕ್ರತೀರ್ಥ ಸಮಿತಿ ಮರೆಮಾಚಿದೆ.

‘ಕರಡು ರಚನಾ ಸಮಿತಿ’ ಉಪಶೀರ್ಷಿಕೆಯಲ್ಲಿ ನೀಡಲಾಗಿದ್ದ ಹಳೆಯ ಪಠ್ಯದಲ್ಲಿ ಹೀಗಿತ್ತು: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು, 5 ಉಪಸಮಿತಿಗಳನ್ನು ಹೊಂದಿತ್ತು. ಇವುಗಳಲ್ಲಿ ಪ್ರಮುಖವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ರವರು ಇದರ ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ. ಈ ಕರಡು ಸಮಿತಿಯಲ್ಲಿ ಎನ್.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರು ಸದಸ್ಯರಾಗಿದ್ದರು.”

ಇದನ್ನೂ ಓದಿರಿ: ‘ಕನ್ನಡ ರಾಜ್ಯೋತ್ಸವ’ ಕುರಿತ ಪಾಠವನ್ನೇ ಕಿತ್ತುಬಿಸಾಡಿದ ಚಕ್ರತೀರ್ಥ ಸಮಿತಿ!

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯು ‘ಕರಡು ಸಮಿತಿ’ ಉಪಶೀರ್ಷಿಕೆಯಲ್ಲಿದ ವಿಷಯಗಳನ್ನು ಹೀಗೆ ಪರಿಷ್ಕರಣೆ ಮಾಡಿದೆ: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು ಅನೇಕ ಸಮಿತಿಗಳನ್ನು ರಚಿಸಿತು. ಅವುಗಳಲ್ಲಿ ಮುಖ್ಯವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ ಅದರ ಅಧ್ಯಕ್ಷರಾಗಿದ್ದರು. ಈ ಸಮಿತಿಯಲ್ಲಿ ಎನ್‌.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾದಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ ಮುಂತಾದ ಮುಸ್ಸದ್ಧಿಗಳು ಸದಸ್ಯರುಗಳಾಗಿದ್ದರು”- ಇಷ್ಟು ಮಾತ್ರ ಉಳಿಸಿಕೊಂಡು “ಇವರು (ಅಂಬೇಡ್ಕರ್‌) ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ಸಾಲನ್ನು ಕಿತ್ತುಹಾಕಲಾಗಿದೆ. ಇಲ್ಲಿ ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರ ಹೆಸರನ್ನು ಚಕ್ರತೀರ್ಥ ನಮೂದಿಸದೇ ಇರುವುದು ಏತಕ್ಕೆ ಎಂಬುದೂ ಚರ್ಚೆಯಾಗುತ್ತಿದೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹಿಂದೂ ಧರ್ಮದಲ್ಲಿನ ಜಾತಿ ವ್ಯವಸ್ಥೆಯಿಂದ ನೊಂದು, ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಬೌದ್ಧಧರ್ಮಕ್ಕೆ ಮರುಳುತ್ತಾರೆ. ಈ ವಿಷಯವನ್ನು ಹಳೆಯ ಪಠ್ಯದಲ್ಲಿ ಸೇರಿಸಲಾಗಿತ್ತು. ಆದರೆ ಹೊಸ ಪಠ್ಯದಲ್ಲಿ ಈ ವಿಷಯವನ್ನು ತೆರವು ಮಾಡಲಾಗಿದೆ. ಹೀಗೆ ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ವಿಷಯಗಳನ್ನು ತಿರುಚುವ ಅಥವಾ ಪಠ್ಯದಿಂದಲೇ ಕೈಬಿಡುವ ಕೆಲಸವನ್ನು ಚಕ್ರತೀರ್ಥ ಸಮಿತಿ ಮಾಡಿದೆ. ಹುಡುಕಿದಷ್ಟೂ ಹುಳುಕುಗಳು ಕಣ್ಣಿಗೆ ರಾಚತೊಡಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...